Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...