Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...