Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...