Homeಕರ್ನಾಟಕಯಾದಗಿರಿ - ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

ಯಾದಗಿರಿ – ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 4 ಮಂದಿ ಬಂಧನ

- Advertisement -
- Advertisement -

ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿ ಅವರೊಂದಿಗೆ ಮೃಗೀಯವಾಗಿ ವರ್ತಿಸಿರುವ ಘಟನೆ ರಾಜ್ಯದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯು ಹಲವು ತಿಂಗಳ ಹಿಂದೆ ನಡೆದಿದೆ ಎಂದು ವರದಿಯಾಗಿದ್ದು, ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸುವ ಮತ್ತು ಲೈಂಗಿಕ ಕಿರುಕುಳ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆಯು ಮೊದಲಿಗೆ ಥಳಿತ ಮತ್ತು ಲೈಂಗಿಕ ಕಿರುಕುಳ ಎಂದು ನಂಬಲಾಗಿತ್ತು. ಆದರೆ ಶಹಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಪೊಲೀಸರು ಈ ಬಗ್ಗೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೂಡಾ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆ ಇನ್ನೂ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್ ಠಾಣೆಗಳು

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದ ದಲಿತ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿ, ಅವರನ್ನು ಶಹಾಪುರದ ಜಮೀನಿಗೆ ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಮಾತನಾಡಿ, “ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಕುರಿತು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಶಹಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಮಹಿಳೆ ಯಾರೂ ಎಂದು ಪತ್ತೆಯಾಗಿಲ್ಲ. ಪತ್ತೆಯಾದರೆ ಅವರ ಕಡೆಯಿಂದ ದೂರು ಪಡೆಯಲಾಗುವುದು. ಇಲ್ಲದಿದ್ದರೂ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು. ತನಿಖೆ ನಡೆಸಲು ಮೂರು ತಂಡಗಳನ್ನು ರಚೆನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ದುಷ್ಕರ್ಮಿಗಳು, ಮಹಿಳೆಯನ್ನು ವಿವಸ್ತ್ರಗೊಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸುತ್ತಾ, ಅವರ ಅಂಗಾಗಳನ್ನು ಮುಟ್ಟುತ್ತಾ ಮೃಗೀಯವಾಗಿ ವರ್ತಿಸುತ್ತಿದ್ದರೆ, ಸಂತ್ರಸ್ತೆ ಮಹಿಳೆಯು ತನ್ನನ್ನು ಸುಮ್ಮನೆ ಬಿಡುವಂತೆ ಕಾಲಿಗೆ ಬಿದ್ದು ಅಂಗಲಾಚುವುದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಭೀಕರ ಅತ್ಯಾಚಾರಕ್ಕೆ ತುತ್ತಾಗಿದ್ದ ಮಹಿಳೆ ಸಾವು: ಆರೋಪಿ ಬಂಧನ

ಘಟನೆಯ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ನಡೆದ ಘಟನೆ ನಾಚಿಕೆಗೇಡಿನದ್ದು ಎಂದು ಹೇಳಿದ್ದಾರೆ. “ಇದು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿರುವುದರ ಸಂಕೇತವಾಗಿದೆ. ಮಾತ್ರವಲ್ಲ, ‘ಯಾವುದರಿಂದಲೂ ತಪ್ಪಿಸಿಕೊಳ್ಳಬಹುದು’ ಎಂಬ ವರ್ತನೆ ಕೂಡ ರಾಜ್ಯದಲ್ಲಿ ಕುಸಿಯುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯನ್ನು ನೆನಪಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ವಿರೋಧಿಸಿ ಮತ್ತು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲು ಸೋಮವಾರ(ಇಂದು) ಸಂಜೆ 4.30ಕ್ಕೆ ಬೆಂಗಳೂರಿನ ಮೈಸೂರು ವೃತ್ತದಲ್ಲಿ ‘ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ’ಯಿಂದ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕಿ ಕೆ. ನೀಲಾ ಅವರು, “ಯಾದಗಿರಿ ಜಿಲ್ಲೆಯಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಅಮಾನವೀಯ ಪ್ರಕರಣವು ಬೆಚ್ಚಿ ಬೀಳಿಸುವಂತಹದ್ದು. ಅಪರಾಧಿ ಸಮಾಜ ನಿರ್ಮಾಣದಲ್ಲಿ ಅಧಿಕಾರಸ್ಥರ, ಪಟ್ಟಭದ್ರರ ಹೇಯ ಪಾತ್ರವನ್ನು ಖಂಡಿಸಲೇಬೇಕಿದೆ. ನಾಗರೀಕ ಮನಸುಗಳು ಎಚ್ಚೆತ್ತುಕೊಳ್ಳದಿದ್ದರೆ ಕ್ರೌರ್ಯದ ಕೃತ್ಯಗಳು ಹೆಚ್ಚುತ್ತಲೇ ಹೋಗುವವು.. ಯಾದಗಿರಿ ಜಿಲ್ಲೆಯ ಆಡಳಿತ ಯಂತ್ರ ಏನು ಮಾಡುತ್ತಿದೆ? ಚುನಾಯಿತ ಮಂದಿ ಎಲ್ಲಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಯತ್ನ, ಹಲ್ಲೆ ಪ್ರಕರಣ: ಸುಳ್ಯ ಬಿಜೆಪಿ ಅಧ್ಯಕ್ಷ ಸೇರಿ 15 ಮಂದಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...