Homeಕರ್ನಾಟಕನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

ನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

- Advertisement -
- Advertisement -

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ.

ಇವ್ಯಾವುವೂ ಅನಿರೀಕ್ಷಿತವಲ್ಲ. ಅನರ್ಹ ಶಾಸಕರು ಗೆಲ್ಲದಿದ್ದರೆ ಒಂಥರಾ ಕಷ್ಟ; ಗೆದ್ದರೆ ಇನ್ನೊಂಥರಾ ಕಷ್ಟ ಎಂಬುದು ಬಿಜೆಪಿಯೊಳಗೆ ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿತ್ತು. ಆದರೆ, ಕೆಲವೇ ತಿಂಗಳ ಕೆಳಗೆ ಫಟಾಫಟ್ ತೀರ್ಮಾನಗಳನ್ನು ನಿಷ್ಠುರವಾಗಿ ಮಾಡುತ್ತಿದ್ದ ಬಿಜೆಪಿ ಹೈಕಮಾಂಡ್ ಇದೀಗ ಎಲ್ಲವನ್ನೂ ಎಳೆಯುತ್ತಿರುವುದಕ್ಕೆ ಮಾತ್ರ ವಿಶೇಷ ಕಾರಣಗಳಿವೆ. ಮೋದಿ – ಷಾ ಜೋಡಿಯನ್ನು ಮಣಿಸಲು ಯಡಿಯೂರಪ್ಪನವರ ಥರದ ಸೀಸನ್ಡ್ ರಾಜಕಾರಣಿಗಳು ಅವರದ್ದೇ ಪಟ್ಟುಗಳನ್ನು ಹಾಕಲು ಶುರು ಮಾಡಿದ್ದಾರೆ. ಪ್ರಧಾನಮಂತ್ರಿ ಮೋದಿಯ ಎದುರೇ ಯಡಿಯೂರಪ್ಪನವರು ಸಾರ್ವಜನಿಕ ಸಭೆಯಲ್ಲಿ ಕೇಂದ್ರದಿಂದ ಅನುದಾನ ಸರಿಯಾಗಿ ಬಂದಿಲ್ಲ ಎಂಬಂತೆ ಮಾತಾಡಿದ್ದು, ಎರಡು ಬಿಜೆಪಿ ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಲೀಡ್ ನ್ಯೂಸ್ ಬರುವಂತೆ ನೋಡಿಕೊಂಡಿದ್ದು ಅಕಸ್ಮಾತ್ತಾಗಿ ನಡೆದ ಘಟನೆಗಳಲ್ಲ. ಹಾಗೆಯೇ ತಾನಿಷ್ಟು ಕಷ್ಟಪಟ್ಟು ಕರ್ನಾಟಕದೊಳಗೆ ಬಿಜೆಪಿ ಸರ್ಕಾರ ತಂದಿದ್ದೇನೆ; ಇದರ ಚುಕ್ಕಾಣಿ ಹಿಡಿದಿರುವ ತನ್ನ ಮಾತು ನಡೆಯದಿದ್ದರೆ ಪಟ್ಟು ಸಡಿಲಿಸುವವನಲ್ಲ ಎಂಬ ಸೂಚನೆಯನ್ನೂ ಕೊಟ್ಟಾಗಿದೆ.

ಇಷ್ಟು ಗಡುಸಾಗಿ ಯಡಿಯೂರಪ್ಪನವರ ಸಂಪುಟ ರಚನೆಯ ಸಂದರ್ಭದಲ್ಲಿ ಇರಲಿಲ್ಲ. ಹಾಗಾಗಿಯೇ ಮೂವರು ಡಿಸಿಎಂಗಳನ್ನು ಹೇರಿಸಿಕೊಳ್ಳಬೇಕಾಗಿ ಬಂದಿತ್ತು. ಉಪಮುಖ್ಯಮಂತ್ರಿ ನೇಮಕಕ್ಕೆ ಮುಂಚೆಯೇ ಸಂಪುಟ ಸಚಿವರ ಪಟ್ಟಿ ಹೊರಬಿದ್ದಾಗಲೇ ಸೀನಿಯರ್‍ಗಳಲ್ಲದ ಮೂವರು ಹೆಸರು ಮುಖ್ಯಮಂತ್ರಿ ನಂತರ ಇರುವಂತೆ ನೋಡಿಕೊಳ್ಳಲಾಗಿತ್ತು. ಅಂದರೆ, ಪಟ್ಟಿಯ ಅನುಕ್ರಮಣಿಕೆಯನ್ನೂ ಹೈಕಮಾಂಡ್‍ನ ಸಂತೋಷಕ್ಕೆ ತಕ್ಕಂತೆ ಮಾಡಿ ಕಳಿಸುವ ಮಟ್ಟಕ್ಕೆ ಯಡಿಯೂರಪ್ಪನವರ ಮೇಲೆ ನಿಯಂತ್ರಣ ಸಾಧಿಸಲಾಗಿತ್ತು.

ಆದರೆ ಈಗಿನ ಯಡಿಯೂರಪ್ಪನವರು ಬೇರೆ. ಕಾಂಗ್ರೆಸ್, ಜೆಡಿಎಸ್‍ಗಳಿಂದ ಎತ್ತಾಕಿಕೊಂಡು ಬಂದವರ ಪೈಕಿ ಬಹುತೇಕರನ್ನು ಅವರು ಗೆಲ್ಲಿಸಿಕೊಂಡಿದ್ದಾರೆ. ಮಂಡ್ಯ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಬಿಜೆಪಿ ಪ್ರಥಮ ಬಾರಿಗೆ ಖಾತೆ ತೆರೆದಿದೆ. ಮಹಾರಾಷ್ಟ್ರ ಮುಖಭಂಗದ ನಂತರ ದೆಹಲಿ ಚಾಣಕ್ಯರ ಸಾಮಥ್ರ್ಯದ ಮಿತಿಯೂ ಬಯಲಿಗೆ ಬಂದಿದೆ. ಹಾಗಾಗಿ ಯಡಿಯೂರಪ್ಪನವರೂ ಪಟ್ಟು ಹಾಕತೊಡಗಿದ್ದಾರೆ. ಇದನ್ನು ಈಗಿಂದೀಗಲೇ ಮಣಿಸಲಾಗದು ಎಂಬುದರ ಅರಿವು ಇರುವ ಬಿಜೆಪಿಯ ದೆಹಲಿ ತ್ರೈಕಮಾಂಡ್ ಸಚಿವ ಸಂಪುಟ ವಿಸ್ತರಣೆಯನ್ನೇ ಎಳೆಯುತ್ತಿದ್ದಾರೆ.

ಹಳೇ ಡಿಸಿಎಂಗಳಾದ ಆರ್.ಅಶೋಕ್ ಮತ್ತು ಕೆ.ಎಸ್.ಈಶ್ವರಪ್ಪರಿಗೆ ಏನೇ ಅಸಮಾಧಾನವಿದ್ದರೂ ತಮ್ಮನ್ನೂ ಡಿಸಿಎಂ ಮಾಡಿ ಎಂದು ಕೇಳುವ ಸ್ಥಿತಿಯಲ್ಲೇನೂ ಇಲ್ಲ. ಆದರೆ, ಸವದಿ, ಅಶ್ವತ್ಥನಾರಾಯಣ ಮತ್ತು ಕಾರಜೋಳ ಡಿಸಿಎಂ ಪದವಿಯಿಂದ ಇಳಿದರೆ ಅವರಿಗೆ ಸಂತೋಷವೇ. ಹೊಸ ಡಿಸಿಎಂಗಳಾಗಲು ತುದಿಗಾಲಲ್ಲಿ ನಿಂತಿರುವವರೆಂದರೆ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ. ಇಬ್ಬರಲ್ಲಿ ಯಾರೊಬ್ಬರಿಗೆ ಕೊಟ್ಟರೂ ಇನ್ನೊಬ್ಬರು ಮುನಿಸಿಕೊಳ್ಳುತ್ತಾರೆ. ಆದರೆ ಅವರಿಬ್ಬರೂ ಡಿಸಿಎಂಗೆ ಪಟ್ಟು ಹಾಕಿದಷ್ಟೂ ಯಡಿಯೂರಪ್ಪನವರಿಗೆ ಒಳ್ಳೆಯದೇ. ಈ ರೀತಿ ನಾಲ್ಕೈದು ಡಿಸಿಎಂಗಳಿರುವ ಹಾಸ್ಯಾಸ್ಪದ ಸನ್ನಿವೇಶಕ್ಕಿಂತ ಇರುವ ಡಿಸಿಎಂಗಳನ್ನೂ ತೆಗೆಯಿರಿ ಎಂದು ವಾದ ಮಂಡಿಸಲು ಅನುಕೂಲವಾಗುತ್ತದೆ. ಆದರೆ, ಕೆಲವೇ ತಿಂಗಳ ಹಿಂದಷ್ಟೇ ಮೇಲಿನಿಂದ ಹೇರಲಾದ ಡಿಸಿಎಂಗಳನ್ನು ಇಷ್ಟು ಬೇಗ ತೆಗೆದುಬಿಡಲು ಹೈಕಮಾಂಡ್ ಒಪ್ಪುವುದೂ ಕಷ್ಟ.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ. ಇದಕ್ಕೆ ಕಾರಣವೆಂದು ಹೇಳಲಾಗುತ್ತಿರುವ ಸಂಗತಿಗಳು ಆಶ್ಚರ್ಯಕರವಾಗಿದೆ. ಇಬ್ಬರೂ ವೀರಶೈವ ಮಹಾಸಭಾ ಲಾಬಿಯೊಳಗೆ ತಮ್ಮನ್ನು ವೀರಶೈವ ಸಮಾಜದಲ್ಲಿ ಯಡಿಯೂರಪ್ಪನವರ ನಂತರದ ನಂ.2 ಸ್ಥಾನದಲ್ಲಿ ಕಲ್ಪಿಸಿಕೊಂಡು ಆ ರೀತಿ ಪ್ರೊಜೆಕ್ಟ್ ಮಾಡಿಕೊಳ್ಳುತ್ತಿದ್ದಾರೆಂದು ಸಿಎಂ ಬಳಗಕ್ಕೆ ಅನಿಸಿದೆ. ಆ ಜಾಗದಲ್ಲಿ ತಮ್ಮ ಎರಡನೆಯ ಪುತ್ರನನ್ನು ಈಗಾಗಲೇ ಕಲ್ಪಿಸಿಕೊಂಡಿರುವ ಯಡಿಯೂರಪ್ಪನವರಿಗೆ ಈಗಲೇ ಮುನ್ನೆಚ್ಚರಿಕೆ ವಹಿಸಬೇಕೆನಿಸಿದ್ದರೆ ಆಶ್ಚರ್ಯವಿಲ್ಲ.

ಕನಕವೃತ್ತದ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದಲ್ಲದೇ ವಿಜಯೇಂದ್ರ ಜೊತೆ ಸಹಾ ಸಂಬಂಧ ಕೆಡಿಸಿಕೊಂಡಿರುವುದು ಮಾಧುಸ್ವಾಮಿಯವರಿಗೆ ತೊಡಕು ಎನ್ನಲಾಗುತ್ತಿದೆ. ಹಾವೇರಿ ಜಿಲ್ಲೆಯ ಸಾದರ ಲಿಂಗಾಯಿತ ಬಿ.ಸಿ.ಪಾಟೀಲ್ ಅರ್ಹರಾಗಿ ಸಂಪುಟಕ್ಕೆ ಸೇರುವಾಗ, ಅದೇ ಜಿಲ್ಲೆಯ ಇನ್ನೊಬ್ಬ ಸಾದರ ಲಿಂಗಾಯಿತ ಬೊಮ್ಮಾಯಿಯವರೂ ಇರುವುದು ಅಸಮತೋಲನವಾಗುತ್ತದೆ ಎಂಬ ವಾದವೂ ಇದೆ. ಅಂತಿಮವಾಗಿ ಒಬ್ಬ ಲಿಂಗಾಯಿತರನ್ನು ಕೈಬಿಡುವುದಂತೂ ಖಚಿತವಾಗಿದೆ. ಉಮೇಶ್ ಕತ್ತಿಯನ್ನೂ ತೆಗೆದುಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಯಡಿಯೂರಪ್ಪನವರು ಇದ್ದಾರೆ. ಹೀಗಾಗಿ ಲಿಂಗಾಯಿತರ ಭಾರದಿಂದ ಸಂಪುಟ ನೆಲಕಚ್ಚದಿರಬೇಕಾದರೆ ಯಾವುದೋ ರೀತಿಯ ಬ್ಯಾಲೆನ್ಸಿಂಗ್ ಕೆಲಸ ಆಗುತ್ತದೆ.

ಹಿಂದಿನ ಸಾರಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಬ್ಬರನ್ನೂ ತೆಗೆದುಕೊಂಡಿರಲಿಲ್ಲ; ಜೊತೆಗೆ ದಲಿತ ಬಲಗೈ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡಲು ಹಿರಿಯ ಶಾಸಕ ಸುಳ್ಯದ ಅಂಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ತಮ್ಮ ನೀಲಿ ಕಣ್ಣಿನ ಹುಡುಗ ಲಿಂಬಾವಳಿಯನ್ನೂ ಬೋವಿ ಕೋಟಾದಲ್ಲಿ ತೆಗೆದುಕೊಳ್ಳಬೇಕೆಂದು ನಿಶ್ಚಯಿಸಿದ್ದಾರೆ. ಆದರೆ, ಅದಕ್ಕೆ ಸಿಡಿಗಳು ಹೊರಬೀಳುವ ಗುಮ್ಮ ತೋರಿಸಿ ಅಡ್ಡಿ ಮಾಡಬಹುದು ಎಂಬ ಸಂತೋಷವೂ ಕೆಲವರಲ್ಲಿ ಮನೆ ಮಾಡಿದೆ.

ಏನೇ ಇದ್ದರೂ ಅಂತಿಮವಾಗಿ 2-3 ಸೀಟುಗಳನ್ನು ಖಾಲಿ ಇಟ್ಟುಕೊಳ್ಳುವುದಂತೂ ಕಾಯಂ. ಒಂದೆಡೆ ಅತೃಪ್ತರಿಗೆ ಕ್ಯಾರೆಟ್ ತೋರಿಸಲು ಅನುಕೂಲ; ಇನ್ನೊಂದೆಡೆ ‘ಈ ಸರ್ಕಾರ ಬರಲು ಕಾರಣರಾದ ಯಾರನ್ನೂ ಯಡಿಯೂರಪ್ಪನವರು ಕೈಬಿಡಲಿಲ್ಲ’ವೆಂಬ ಖ್ಯಾತಿ ಉಳಿದುಕೊಳ್ಳಬೇಕು. ಹಾಗಾಗಿ ಎಂ.ಟಿ.ಬಿ.ನಾಗರಾಜ್ ಮತ್ತು ಆರ್.ಶಂಕರ್ ಇಬ್ಬರಿಗೂ ಸಚಿವ ಸ್ಥಾನ ಕಲ್ಪಿಸುವ ಅಗತ್ಯವಿದೆ. ರಿಜ್ವಾನ್ ಅರ್ಷದ್‍ರ ಎಂಎಲ್‍ಸಿ ಸೀಟು ಖಾಲಿಯಾದಾಗ ಅಲ್ಲಿ ಇಬ್ಬರಲ್ಲೊಬ್ಬರನ್ನು ಕೂರಿಸಿ ಮಂತ್ರಿ ಮಾಡಬಹುದು. ಆದರೆ, ಆಗಲೂ ಇರುವುದು ಒಂದೇ ಸೀಟು ಎಂಬ ಚಿಂತೆ ಈ ಎಲ್ಲರಲ್ಲೂ ಇದೆ. ಶರತ್ ಬಚ್ಚೇಗೌಡರ ಮೇಲೆ ಯಡಿಯೂರಪ್ಪನವರ ಸಿಟ್ಟು ಇನ್ನೂ ಮುಂದುವರೆದಿರುವುದನ್ನು ಶಾಸಕರ ಪ್ರಮಾಣ ಸ್ವೀಕಾರ ಸಂದರ್ಭದಲ್ಲಿ ವ್ಯಕ್ತವಾದುದನ್ನು ನೋಡಿದರೆ ಎಂ.ಟಿ.ಬಿ ಪರವಾಗಿ ಯಡ್ಡಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದ್ದೇ ಇದೆ.

ಆದರೆ, ಅದೇ ಎಂ.ಎಲ್.ಸಿ ಸ್ಥಾನದ ಮೇಲೆ ಕಣ್ಣಿಟ್ಟ ಇನ್ನೂ ಇಬ್ಬರಿದ್ದಾರೆ. ಒಬ್ಬರು ಡಿಸಿಎಂ ಸವದಿ. ಅವರ ಡಿಸಿಎಂ ಪಟ್ಟ ಮುಂದುವರೆಯಲು ಈಗ ಬೇರೆ ಯಾವ ದಾರಿಯೂ ಇಲ್ಲ. ಹಾಗೆಯೇ ತನ್ನಂತಹ ‘ಮುತ್ಸದ್ದಿ’ಗೆ ಸ್ಥಾನ ಕಲ್ಪಿಸದಿದ್ದರೆ ಹೇಗೆ ಎಂಬ ವಾದ ಎಚ್.ವಿಶ್ವನಾಥ್‍ರದ್ದೂ ಇರುತ್ತದೆ. ಅಂತಿಮವಾಗಿ ಸಂಪುಟ ರಚನೆಯಲ್ಲಿ ಯಡಿಯೂರಪ್ಪನವರಿಗೆ ಒಂದಷ್ಟು ಬಿಟ್ಟುಕೊಟ್ಟು ಎಂಎಲ್‍ಸಿ ಸೀಟು ಸವದಿ ಪಾಲಾಗಿ ಉಳಿದವರಿಗೆ ಫಲವತ್ತಾದ ನಿಗಮ ಮಂಡಳಿಗಳ ತುಪ್ಪ ಸವರುವ ಸಾಧ್ಯತೆಯೇ ಎದ್ದು ಕಾಣುತ್ತಿದೆ.
ಅದೇನೇ ಇದ್ದರೂ ಬಿಜೆಪಿಯೊಳಗೆ ಇನ್ನೊಂದು ಸುತ್ತು ಯಡಿಯೂರಪ್ಪ ವರ್ಸಸ್ ತ್ರೈಕಮಾಂಡ್‍ನ ಮುಸುಕಿನ ಗುದ್ದಾಟ ನಡೆಯುವುದಂತೂ ಖಾಯಂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...