Homeಕರ್ನಾಟಕನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

ನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

- Advertisement -
- Advertisement -

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ.

ಇವ್ಯಾವುವೂ ಅನಿರೀಕ್ಷಿತವಲ್ಲ. ಅನರ್ಹ ಶಾಸಕರು ಗೆಲ್ಲದಿದ್ದರೆ ಒಂಥರಾ ಕಷ್ಟ; ಗೆದ್ದರೆ ಇನ್ನೊಂಥರಾ ಕಷ್ಟ ಎಂಬುದು ಬಿಜೆಪಿಯೊಳಗೆ ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿತ್ತು. ಆದರೆ, ಕೆಲವೇ ತಿಂಗಳ ಕೆಳಗೆ ಫಟಾಫಟ್ ತೀರ್ಮಾನಗಳನ್ನು ನಿಷ್ಠುರವಾಗಿ ಮಾಡುತ್ತಿದ್ದ ಬಿಜೆಪಿ ಹೈಕಮಾಂಡ್ ಇದೀಗ ಎಲ್ಲವನ್ನೂ ಎಳೆಯುತ್ತಿರುವುದಕ್ಕೆ ಮಾತ್ರ ವಿಶೇಷ ಕಾರಣಗಳಿವೆ. ಮೋದಿ – ಷಾ ಜೋಡಿಯನ್ನು ಮಣಿಸಲು ಯಡಿಯೂರಪ್ಪನವರ ಥರದ ಸೀಸನ್ಡ್ ರಾಜಕಾರಣಿಗಳು ಅವರದ್ದೇ ಪಟ್ಟುಗಳನ್ನು ಹಾಕಲು ಶುರು ಮಾಡಿದ್ದಾರೆ. ಪ್ರಧಾನಮಂತ್ರಿ ಮೋದಿಯ ಎದುರೇ ಯಡಿಯೂರಪ್ಪನವರು ಸಾರ್ವಜನಿಕ ಸಭೆಯಲ್ಲಿ ಕೇಂದ್ರದಿಂದ ಅನುದಾನ ಸರಿಯಾಗಿ ಬಂದಿಲ್ಲ ಎಂಬಂತೆ ಮಾತಾಡಿದ್ದು, ಎರಡು ಬಿಜೆಪಿ ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಲೀಡ್ ನ್ಯೂಸ್ ಬರುವಂತೆ ನೋಡಿಕೊಂಡಿದ್ದು ಅಕಸ್ಮಾತ್ತಾಗಿ ನಡೆದ ಘಟನೆಗಳಲ್ಲ. ಹಾಗೆಯೇ ತಾನಿಷ್ಟು ಕಷ್ಟಪಟ್ಟು ಕರ್ನಾಟಕದೊಳಗೆ ಬಿಜೆಪಿ ಸರ್ಕಾರ ತಂದಿದ್ದೇನೆ; ಇದರ ಚುಕ್ಕಾಣಿ ಹಿಡಿದಿರುವ ತನ್ನ ಮಾತು ನಡೆಯದಿದ್ದರೆ ಪಟ್ಟು ಸಡಿಲಿಸುವವನಲ್ಲ ಎಂಬ ಸೂಚನೆಯನ್ನೂ ಕೊಟ್ಟಾಗಿದೆ.

ಇಷ್ಟು ಗಡುಸಾಗಿ ಯಡಿಯೂರಪ್ಪನವರ ಸಂಪುಟ ರಚನೆಯ ಸಂದರ್ಭದಲ್ಲಿ ಇರಲಿಲ್ಲ. ಹಾಗಾಗಿಯೇ ಮೂವರು ಡಿಸಿಎಂಗಳನ್ನು ಹೇರಿಸಿಕೊಳ್ಳಬೇಕಾಗಿ ಬಂದಿತ್ತು. ಉಪಮುಖ್ಯಮಂತ್ರಿ ನೇಮಕಕ್ಕೆ ಮುಂಚೆಯೇ ಸಂಪುಟ ಸಚಿವರ ಪಟ್ಟಿ ಹೊರಬಿದ್ದಾಗಲೇ ಸೀನಿಯರ್‍ಗಳಲ್ಲದ ಮೂವರು ಹೆಸರು ಮುಖ್ಯಮಂತ್ರಿ ನಂತರ ಇರುವಂತೆ ನೋಡಿಕೊಳ್ಳಲಾಗಿತ್ತು. ಅಂದರೆ, ಪಟ್ಟಿಯ ಅನುಕ್ರಮಣಿಕೆಯನ್ನೂ ಹೈಕಮಾಂಡ್‍ನ ಸಂತೋಷಕ್ಕೆ ತಕ್ಕಂತೆ ಮಾಡಿ ಕಳಿಸುವ ಮಟ್ಟಕ್ಕೆ ಯಡಿಯೂರಪ್ಪನವರ ಮೇಲೆ ನಿಯಂತ್ರಣ ಸಾಧಿಸಲಾಗಿತ್ತು.

ಆದರೆ ಈಗಿನ ಯಡಿಯೂರಪ್ಪನವರು ಬೇರೆ. ಕಾಂಗ್ರೆಸ್, ಜೆಡಿಎಸ್‍ಗಳಿಂದ ಎತ್ತಾಕಿಕೊಂಡು ಬಂದವರ ಪೈಕಿ ಬಹುತೇಕರನ್ನು ಅವರು ಗೆಲ್ಲಿಸಿಕೊಂಡಿದ್ದಾರೆ. ಮಂಡ್ಯ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಬಿಜೆಪಿ ಪ್ರಥಮ ಬಾರಿಗೆ ಖಾತೆ ತೆರೆದಿದೆ. ಮಹಾರಾಷ್ಟ್ರ ಮುಖಭಂಗದ ನಂತರ ದೆಹಲಿ ಚಾಣಕ್ಯರ ಸಾಮಥ್ರ್ಯದ ಮಿತಿಯೂ ಬಯಲಿಗೆ ಬಂದಿದೆ. ಹಾಗಾಗಿ ಯಡಿಯೂರಪ್ಪನವರೂ ಪಟ್ಟು ಹಾಕತೊಡಗಿದ್ದಾರೆ. ಇದನ್ನು ಈಗಿಂದೀಗಲೇ ಮಣಿಸಲಾಗದು ಎಂಬುದರ ಅರಿವು ಇರುವ ಬಿಜೆಪಿಯ ದೆಹಲಿ ತ್ರೈಕಮಾಂಡ್ ಸಚಿವ ಸಂಪುಟ ವಿಸ್ತರಣೆಯನ್ನೇ ಎಳೆಯುತ್ತಿದ್ದಾರೆ.

ಹಳೇ ಡಿಸಿಎಂಗಳಾದ ಆರ್.ಅಶೋಕ್ ಮತ್ತು ಕೆ.ಎಸ್.ಈಶ್ವರಪ್ಪರಿಗೆ ಏನೇ ಅಸಮಾಧಾನವಿದ್ದರೂ ತಮ್ಮನ್ನೂ ಡಿಸಿಎಂ ಮಾಡಿ ಎಂದು ಕೇಳುವ ಸ್ಥಿತಿಯಲ್ಲೇನೂ ಇಲ್ಲ. ಆದರೆ, ಸವದಿ, ಅಶ್ವತ್ಥನಾರಾಯಣ ಮತ್ತು ಕಾರಜೋಳ ಡಿಸಿಎಂ ಪದವಿಯಿಂದ ಇಳಿದರೆ ಅವರಿಗೆ ಸಂತೋಷವೇ. ಹೊಸ ಡಿಸಿಎಂಗಳಾಗಲು ತುದಿಗಾಲಲ್ಲಿ ನಿಂತಿರುವವರೆಂದರೆ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ. ಇಬ್ಬರಲ್ಲಿ ಯಾರೊಬ್ಬರಿಗೆ ಕೊಟ್ಟರೂ ಇನ್ನೊಬ್ಬರು ಮುನಿಸಿಕೊಳ್ಳುತ್ತಾರೆ. ಆದರೆ ಅವರಿಬ್ಬರೂ ಡಿಸಿಎಂಗೆ ಪಟ್ಟು ಹಾಕಿದಷ್ಟೂ ಯಡಿಯೂರಪ್ಪನವರಿಗೆ ಒಳ್ಳೆಯದೇ. ಈ ರೀತಿ ನಾಲ್ಕೈದು ಡಿಸಿಎಂಗಳಿರುವ ಹಾಸ್ಯಾಸ್ಪದ ಸನ್ನಿವೇಶಕ್ಕಿಂತ ಇರುವ ಡಿಸಿಎಂಗಳನ್ನೂ ತೆಗೆಯಿರಿ ಎಂದು ವಾದ ಮಂಡಿಸಲು ಅನುಕೂಲವಾಗುತ್ತದೆ. ಆದರೆ, ಕೆಲವೇ ತಿಂಗಳ ಹಿಂದಷ್ಟೇ ಮೇಲಿನಿಂದ ಹೇರಲಾದ ಡಿಸಿಎಂಗಳನ್ನು ಇಷ್ಟು ಬೇಗ ತೆಗೆದುಬಿಡಲು ಹೈಕಮಾಂಡ್ ಒಪ್ಪುವುದೂ ಕಷ್ಟ.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ. ಇದಕ್ಕೆ ಕಾರಣವೆಂದು ಹೇಳಲಾಗುತ್ತಿರುವ ಸಂಗತಿಗಳು ಆಶ್ಚರ್ಯಕರವಾಗಿದೆ. ಇಬ್ಬರೂ ವೀರಶೈವ ಮಹಾಸಭಾ ಲಾಬಿಯೊಳಗೆ ತಮ್ಮನ್ನು ವೀರಶೈವ ಸಮಾಜದಲ್ಲಿ ಯಡಿಯೂರಪ್ಪನವರ ನಂತರದ ನಂ.2 ಸ್ಥಾನದಲ್ಲಿ ಕಲ್ಪಿಸಿಕೊಂಡು ಆ ರೀತಿ ಪ್ರೊಜೆಕ್ಟ್ ಮಾಡಿಕೊಳ್ಳುತ್ತಿದ್ದಾರೆಂದು ಸಿಎಂ ಬಳಗಕ್ಕೆ ಅನಿಸಿದೆ. ಆ ಜಾಗದಲ್ಲಿ ತಮ್ಮ ಎರಡನೆಯ ಪುತ್ರನನ್ನು ಈಗಾಗಲೇ ಕಲ್ಪಿಸಿಕೊಂಡಿರುವ ಯಡಿಯೂರಪ್ಪನವರಿಗೆ ಈಗಲೇ ಮುನ್ನೆಚ್ಚರಿಕೆ ವಹಿಸಬೇಕೆನಿಸಿದ್ದರೆ ಆಶ್ಚರ್ಯವಿಲ್ಲ.

ಕನಕವೃತ್ತದ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದಲ್ಲದೇ ವಿಜಯೇಂದ್ರ ಜೊತೆ ಸಹಾ ಸಂಬಂಧ ಕೆಡಿಸಿಕೊಂಡಿರುವುದು ಮಾಧುಸ್ವಾಮಿಯವರಿಗೆ ತೊಡಕು ಎನ್ನಲಾಗುತ್ತಿದೆ. ಹಾವೇರಿ ಜಿಲ್ಲೆಯ ಸಾದರ ಲಿಂಗಾಯಿತ ಬಿ.ಸಿ.ಪಾಟೀಲ್ ಅರ್ಹರಾಗಿ ಸಂಪುಟಕ್ಕೆ ಸೇರುವಾಗ, ಅದೇ ಜಿಲ್ಲೆಯ ಇನ್ನೊಬ್ಬ ಸಾದರ ಲಿಂಗಾಯಿತ ಬೊಮ್ಮಾಯಿಯವರೂ ಇರುವುದು ಅಸಮತೋಲನವಾಗುತ್ತದೆ ಎಂಬ ವಾದವೂ ಇದೆ. ಅಂತಿಮವಾಗಿ ಒಬ್ಬ ಲಿಂಗಾಯಿತರನ್ನು ಕೈಬಿಡುವುದಂತೂ ಖಚಿತವಾಗಿದೆ. ಉಮೇಶ್ ಕತ್ತಿಯನ್ನೂ ತೆಗೆದುಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಯಡಿಯೂರಪ್ಪನವರು ಇದ್ದಾರೆ. ಹೀಗಾಗಿ ಲಿಂಗಾಯಿತರ ಭಾರದಿಂದ ಸಂಪುಟ ನೆಲಕಚ್ಚದಿರಬೇಕಾದರೆ ಯಾವುದೋ ರೀತಿಯ ಬ್ಯಾಲೆನ್ಸಿಂಗ್ ಕೆಲಸ ಆಗುತ್ತದೆ.

ಹಿಂದಿನ ಸಾರಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಬ್ಬರನ್ನೂ ತೆಗೆದುಕೊಂಡಿರಲಿಲ್ಲ; ಜೊತೆಗೆ ದಲಿತ ಬಲಗೈ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡಲು ಹಿರಿಯ ಶಾಸಕ ಸುಳ್ಯದ ಅಂಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ತಮ್ಮ ನೀಲಿ ಕಣ್ಣಿನ ಹುಡುಗ ಲಿಂಬಾವಳಿಯನ್ನೂ ಬೋವಿ ಕೋಟಾದಲ್ಲಿ ತೆಗೆದುಕೊಳ್ಳಬೇಕೆಂದು ನಿಶ್ಚಯಿಸಿದ್ದಾರೆ. ಆದರೆ, ಅದಕ್ಕೆ ಸಿಡಿಗಳು ಹೊರಬೀಳುವ ಗುಮ್ಮ ತೋರಿಸಿ ಅಡ್ಡಿ ಮಾಡಬಹುದು ಎಂಬ ಸಂತೋಷವೂ ಕೆಲವರಲ್ಲಿ ಮನೆ ಮಾಡಿದೆ.

ಏನೇ ಇದ್ದರೂ ಅಂತಿಮವಾಗಿ 2-3 ಸೀಟುಗಳನ್ನು ಖಾಲಿ ಇಟ್ಟುಕೊಳ್ಳುವುದಂತೂ ಕಾಯಂ. ಒಂದೆಡೆ ಅತೃಪ್ತರಿಗೆ ಕ್ಯಾರೆಟ್ ತೋರಿಸಲು ಅನುಕೂಲ; ಇನ್ನೊಂದೆಡೆ ‘ಈ ಸರ್ಕಾರ ಬರಲು ಕಾರಣರಾದ ಯಾರನ್ನೂ ಯಡಿಯೂರಪ್ಪನವರು ಕೈಬಿಡಲಿಲ್ಲ’ವೆಂಬ ಖ್ಯಾತಿ ಉಳಿದುಕೊಳ್ಳಬೇಕು. ಹಾಗಾಗಿ ಎಂ.ಟಿ.ಬಿ.ನಾಗರಾಜ್ ಮತ್ತು ಆರ್.ಶಂಕರ್ ಇಬ್ಬರಿಗೂ ಸಚಿವ ಸ್ಥಾನ ಕಲ್ಪಿಸುವ ಅಗತ್ಯವಿದೆ. ರಿಜ್ವಾನ್ ಅರ್ಷದ್‍ರ ಎಂಎಲ್‍ಸಿ ಸೀಟು ಖಾಲಿಯಾದಾಗ ಅಲ್ಲಿ ಇಬ್ಬರಲ್ಲೊಬ್ಬರನ್ನು ಕೂರಿಸಿ ಮಂತ್ರಿ ಮಾಡಬಹುದು. ಆದರೆ, ಆಗಲೂ ಇರುವುದು ಒಂದೇ ಸೀಟು ಎಂಬ ಚಿಂತೆ ಈ ಎಲ್ಲರಲ್ಲೂ ಇದೆ. ಶರತ್ ಬಚ್ಚೇಗೌಡರ ಮೇಲೆ ಯಡಿಯೂರಪ್ಪನವರ ಸಿಟ್ಟು ಇನ್ನೂ ಮುಂದುವರೆದಿರುವುದನ್ನು ಶಾಸಕರ ಪ್ರಮಾಣ ಸ್ವೀಕಾರ ಸಂದರ್ಭದಲ್ಲಿ ವ್ಯಕ್ತವಾದುದನ್ನು ನೋಡಿದರೆ ಎಂ.ಟಿ.ಬಿ ಪರವಾಗಿ ಯಡ್ಡಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದ್ದೇ ಇದೆ.

ಆದರೆ, ಅದೇ ಎಂ.ಎಲ್.ಸಿ ಸ್ಥಾನದ ಮೇಲೆ ಕಣ್ಣಿಟ್ಟ ಇನ್ನೂ ಇಬ್ಬರಿದ್ದಾರೆ. ಒಬ್ಬರು ಡಿಸಿಎಂ ಸವದಿ. ಅವರ ಡಿಸಿಎಂ ಪಟ್ಟ ಮುಂದುವರೆಯಲು ಈಗ ಬೇರೆ ಯಾವ ದಾರಿಯೂ ಇಲ್ಲ. ಹಾಗೆಯೇ ತನ್ನಂತಹ ‘ಮುತ್ಸದ್ದಿ’ಗೆ ಸ್ಥಾನ ಕಲ್ಪಿಸದಿದ್ದರೆ ಹೇಗೆ ಎಂಬ ವಾದ ಎಚ್.ವಿಶ್ವನಾಥ್‍ರದ್ದೂ ಇರುತ್ತದೆ. ಅಂತಿಮವಾಗಿ ಸಂಪುಟ ರಚನೆಯಲ್ಲಿ ಯಡಿಯೂರಪ್ಪನವರಿಗೆ ಒಂದಷ್ಟು ಬಿಟ್ಟುಕೊಟ್ಟು ಎಂಎಲ್‍ಸಿ ಸೀಟು ಸವದಿ ಪಾಲಾಗಿ ಉಳಿದವರಿಗೆ ಫಲವತ್ತಾದ ನಿಗಮ ಮಂಡಳಿಗಳ ತುಪ್ಪ ಸವರುವ ಸಾಧ್ಯತೆಯೇ ಎದ್ದು ಕಾಣುತ್ತಿದೆ.
ಅದೇನೇ ಇದ್ದರೂ ಬಿಜೆಪಿಯೊಳಗೆ ಇನ್ನೊಂದು ಸುತ್ತು ಯಡಿಯೂರಪ್ಪ ವರ್ಸಸ್ ತ್ರೈಕಮಾಂಡ್‍ನ ಮುಸುಕಿನ ಗುದ್ದಾಟ ನಡೆಯುವುದಂತೂ ಖಾಯಂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...