Homeಕರ್ನಾಟಕನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

ನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

- Advertisement -
- Advertisement -

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ.

ಇವ್ಯಾವುವೂ ಅನಿರೀಕ್ಷಿತವಲ್ಲ. ಅನರ್ಹ ಶಾಸಕರು ಗೆಲ್ಲದಿದ್ದರೆ ಒಂಥರಾ ಕಷ್ಟ; ಗೆದ್ದರೆ ಇನ್ನೊಂಥರಾ ಕಷ್ಟ ಎಂಬುದು ಬಿಜೆಪಿಯೊಳಗೆ ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿತ್ತು. ಆದರೆ, ಕೆಲವೇ ತಿಂಗಳ ಕೆಳಗೆ ಫಟಾಫಟ್ ತೀರ್ಮಾನಗಳನ್ನು ನಿಷ್ಠುರವಾಗಿ ಮಾಡುತ್ತಿದ್ದ ಬಿಜೆಪಿ ಹೈಕಮಾಂಡ್ ಇದೀಗ ಎಲ್ಲವನ್ನೂ ಎಳೆಯುತ್ತಿರುವುದಕ್ಕೆ ಮಾತ್ರ ವಿಶೇಷ ಕಾರಣಗಳಿವೆ. ಮೋದಿ – ಷಾ ಜೋಡಿಯನ್ನು ಮಣಿಸಲು ಯಡಿಯೂರಪ್ಪನವರ ಥರದ ಸೀಸನ್ಡ್ ರಾಜಕಾರಣಿಗಳು ಅವರದ್ದೇ ಪಟ್ಟುಗಳನ್ನು ಹಾಕಲು ಶುರು ಮಾಡಿದ್ದಾರೆ. ಪ್ರಧಾನಮಂತ್ರಿ ಮೋದಿಯ ಎದುರೇ ಯಡಿಯೂರಪ್ಪನವರು ಸಾರ್ವಜನಿಕ ಸಭೆಯಲ್ಲಿ ಕೇಂದ್ರದಿಂದ ಅನುದಾನ ಸರಿಯಾಗಿ ಬಂದಿಲ್ಲ ಎಂಬಂತೆ ಮಾತಾಡಿದ್ದು, ಎರಡು ಬಿಜೆಪಿ ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಲೀಡ್ ನ್ಯೂಸ್ ಬರುವಂತೆ ನೋಡಿಕೊಂಡಿದ್ದು ಅಕಸ್ಮಾತ್ತಾಗಿ ನಡೆದ ಘಟನೆಗಳಲ್ಲ. ಹಾಗೆಯೇ ತಾನಿಷ್ಟು ಕಷ್ಟಪಟ್ಟು ಕರ್ನಾಟಕದೊಳಗೆ ಬಿಜೆಪಿ ಸರ್ಕಾರ ತಂದಿದ್ದೇನೆ; ಇದರ ಚುಕ್ಕಾಣಿ ಹಿಡಿದಿರುವ ತನ್ನ ಮಾತು ನಡೆಯದಿದ್ದರೆ ಪಟ್ಟು ಸಡಿಲಿಸುವವನಲ್ಲ ಎಂಬ ಸೂಚನೆಯನ್ನೂ ಕೊಟ್ಟಾಗಿದೆ.

ಇಷ್ಟು ಗಡುಸಾಗಿ ಯಡಿಯೂರಪ್ಪನವರ ಸಂಪುಟ ರಚನೆಯ ಸಂದರ್ಭದಲ್ಲಿ ಇರಲಿಲ್ಲ. ಹಾಗಾಗಿಯೇ ಮೂವರು ಡಿಸಿಎಂಗಳನ್ನು ಹೇರಿಸಿಕೊಳ್ಳಬೇಕಾಗಿ ಬಂದಿತ್ತು. ಉಪಮುಖ್ಯಮಂತ್ರಿ ನೇಮಕಕ್ಕೆ ಮುಂಚೆಯೇ ಸಂಪುಟ ಸಚಿವರ ಪಟ್ಟಿ ಹೊರಬಿದ್ದಾಗಲೇ ಸೀನಿಯರ್‍ಗಳಲ್ಲದ ಮೂವರು ಹೆಸರು ಮುಖ್ಯಮಂತ್ರಿ ನಂತರ ಇರುವಂತೆ ನೋಡಿಕೊಳ್ಳಲಾಗಿತ್ತು. ಅಂದರೆ, ಪಟ್ಟಿಯ ಅನುಕ್ರಮಣಿಕೆಯನ್ನೂ ಹೈಕಮಾಂಡ್‍ನ ಸಂತೋಷಕ್ಕೆ ತಕ್ಕಂತೆ ಮಾಡಿ ಕಳಿಸುವ ಮಟ್ಟಕ್ಕೆ ಯಡಿಯೂರಪ್ಪನವರ ಮೇಲೆ ನಿಯಂತ್ರಣ ಸಾಧಿಸಲಾಗಿತ್ತು.

ಆದರೆ ಈಗಿನ ಯಡಿಯೂರಪ್ಪನವರು ಬೇರೆ. ಕಾಂಗ್ರೆಸ್, ಜೆಡಿಎಸ್‍ಗಳಿಂದ ಎತ್ತಾಕಿಕೊಂಡು ಬಂದವರ ಪೈಕಿ ಬಹುತೇಕರನ್ನು ಅವರು ಗೆಲ್ಲಿಸಿಕೊಂಡಿದ್ದಾರೆ. ಮಂಡ್ಯ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಬಿಜೆಪಿ ಪ್ರಥಮ ಬಾರಿಗೆ ಖಾತೆ ತೆರೆದಿದೆ. ಮಹಾರಾಷ್ಟ್ರ ಮುಖಭಂಗದ ನಂತರ ದೆಹಲಿ ಚಾಣಕ್ಯರ ಸಾಮಥ್ರ್ಯದ ಮಿತಿಯೂ ಬಯಲಿಗೆ ಬಂದಿದೆ. ಹಾಗಾಗಿ ಯಡಿಯೂರಪ್ಪನವರೂ ಪಟ್ಟು ಹಾಕತೊಡಗಿದ್ದಾರೆ. ಇದನ್ನು ಈಗಿಂದೀಗಲೇ ಮಣಿಸಲಾಗದು ಎಂಬುದರ ಅರಿವು ಇರುವ ಬಿಜೆಪಿಯ ದೆಹಲಿ ತ್ರೈಕಮಾಂಡ್ ಸಚಿವ ಸಂಪುಟ ವಿಸ್ತರಣೆಯನ್ನೇ ಎಳೆಯುತ್ತಿದ್ದಾರೆ.

ಹಳೇ ಡಿಸಿಎಂಗಳಾದ ಆರ್.ಅಶೋಕ್ ಮತ್ತು ಕೆ.ಎಸ್.ಈಶ್ವರಪ್ಪರಿಗೆ ಏನೇ ಅಸಮಾಧಾನವಿದ್ದರೂ ತಮ್ಮನ್ನೂ ಡಿಸಿಎಂ ಮಾಡಿ ಎಂದು ಕೇಳುವ ಸ್ಥಿತಿಯಲ್ಲೇನೂ ಇಲ್ಲ. ಆದರೆ, ಸವದಿ, ಅಶ್ವತ್ಥನಾರಾಯಣ ಮತ್ತು ಕಾರಜೋಳ ಡಿಸಿಎಂ ಪದವಿಯಿಂದ ಇಳಿದರೆ ಅವರಿಗೆ ಸಂತೋಷವೇ. ಹೊಸ ಡಿಸಿಎಂಗಳಾಗಲು ತುದಿಗಾಲಲ್ಲಿ ನಿಂತಿರುವವರೆಂದರೆ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ. ಇಬ್ಬರಲ್ಲಿ ಯಾರೊಬ್ಬರಿಗೆ ಕೊಟ್ಟರೂ ಇನ್ನೊಬ್ಬರು ಮುನಿಸಿಕೊಳ್ಳುತ್ತಾರೆ. ಆದರೆ ಅವರಿಬ್ಬರೂ ಡಿಸಿಎಂಗೆ ಪಟ್ಟು ಹಾಕಿದಷ್ಟೂ ಯಡಿಯೂರಪ್ಪನವರಿಗೆ ಒಳ್ಳೆಯದೇ. ಈ ರೀತಿ ನಾಲ್ಕೈದು ಡಿಸಿಎಂಗಳಿರುವ ಹಾಸ್ಯಾಸ್ಪದ ಸನ್ನಿವೇಶಕ್ಕಿಂತ ಇರುವ ಡಿಸಿಎಂಗಳನ್ನೂ ತೆಗೆಯಿರಿ ಎಂದು ವಾದ ಮಂಡಿಸಲು ಅನುಕೂಲವಾಗುತ್ತದೆ. ಆದರೆ, ಕೆಲವೇ ತಿಂಗಳ ಹಿಂದಷ್ಟೇ ಮೇಲಿನಿಂದ ಹೇರಲಾದ ಡಿಸಿಎಂಗಳನ್ನು ಇಷ್ಟು ಬೇಗ ತೆಗೆದುಬಿಡಲು ಹೈಕಮಾಂಡ್ ಒಪ್ಪುವುದೂ ಕಷ್ಟ.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ. ಇದಕ್ಕೆ ಕಾರಣವೆಂದು ಹೇಳಲಾಗುತ್ತಿರುವ ಸಂಗತಿಗಳು ಆಶ್ಚರ್ಯಕರವಾಗಿದೆ. ಇಬ್ಬರೂ ವೀರಶೈವ ಮಹಾಸಭಾ ಲಾಬಿಯೊಳಗೆ ತಮ್ಮನ್ನು ವೀರಶೈವ ಸಮಾಜದಲ್ಲಿ ಯಡಿಯೂರಪ್ಪನವರ ನಂತರದ ನಂ.2 ಸ್ಥಾನದಲ್ಲಿ ಕಲ್ಪಿಸಿಕೊಂಡು ಆ ರೀತಿ ಪ್ರೊಜೆಕ್ಟ್ ಮಾಡಿಕೊಳ್ಳುತ್ತಿದ್ದಾರೆಂದು ಸಿಎಂ ಬಳಗಕ್ಕೆ ಅನಿಸಿದೆ. ಆ ಜಾಗದಲ್ಲಿ ತಮ್ಮ ಎರಡನೆಯ ಪುತ್ರನನ್ನು ಈಗಾಗಲೇ ಕಲ್ಪಿಸಿಕೊಂಡಿರುವ ಯಡಿಯೂರಪ್ಪನವರಿಗೆ ಈಗಲೇ ಮುನ್ನೆಚ್ಚರಿಕೆ ವಹಿಸಬೇಕೆನಿಸಿದ್ದರೆ ಆಶ್ಚರ್ಯವಿಲ್ಲ.

ಕನಕವೃತ್ತದ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದಲ್ಲದೇ ವಿಜಯೇಂದ್ರ ಜೊತೆ ಸಹಾ ಸಂಬಂಧ ಕೆಡಿಸಿಕೊಂಡಿರುವುದು ಮಾಧುಸ್ವಾಮಿಯವರಿಗೆ ತೊಡಕು ಎನ್ನಲಾಗುತ್ತಿದೆ. ಹಾವೇರಿ ಜಿಲ್ಲೆಯ ಸಾದರ ಲಿಂಗಾಯಿತ ಬಿ.ಸಿ.ಪಾಟೀಲ್ ಅರ್ಹರಾಗಿ ಸಂಪುಟಕ್ಕೆ ಸೇರುವಾಗ, ಅದೇ ಜಿಲ್ಲೆಯ ಇನ್ನೊಬ್ಬ ಸಾದರ ಲಿಂಗಾಯಿತ ಬೊಮ್ಮಾಯಿಯವರೂ ಇರುವುದು ಅಸಮತೋಲನವಾಗುತ್ತದೆ ಎಂಬ ವಾದವೂ ಇದೆ. ಅಂತಿಮವಾಗಿ ಒಬ್ಬ ಲಿಂಗಾಯಿತರನ್ನು ಕೈಬಿಡುವುದಂತೂ ಖಚಿತವಾಗಿದೆ. ಉಮೇಶ್ ಕತ್ತಿಯನ್ನೂ ತೆಗೆದುಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಯಡಿಯೂರಪ್ಪನವರು ಇದ್ದಾರೆ. ಹೀಗಾಗಿ ಲಿಂಗಾಯಿತರ ಭಾರದಿಂದ ಸಂಪುಟ ನೆಲಕಚ್ಚದಿರಬೇಕಾದರೆ ಯಾವುದೋ ರೀತಿಯ ಬ್ಯಾಲೆನ್ಸಿಂಗ್ ಕೆಲಸ ಆಗುತ್ತದೆ.

ಹಿಂದಿನ ಸಾರಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಬ್ಬರನ್ನೂ ತೆಗೆದುಕೊಂಡಿರಲಿಲ್ಲ; ಜೊತೆಗೆ ದಲಿತ ಬಲಗೈ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡಲು ಹಿರಿಯ ಶಾಸಕ ಸುಳ್ಯದ ಅಂಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ತಮ್ಮ ನೀಲಿ ಕಣ್ಣಿನ ಹುಡುಗ ಲಿಂಬಾವಳಿಯನ್ನೂ ಬೋವಿ ಕೋಟಾದಲ್ಲಿ ತೆಗೆದುಕೊಳ್ಳಬೇಕೆಂದು ನಿಶ್ಚಯಿಸಿದ್ದಾರೆ. ಆದರೆ, ಅದಕ್ಕೆ ಸಿಡಿಗಳು ಹೊರಬೀಳುವ ಗುಮ್ಮ ತೋರಿಸಿ ಅಡ್ಡಿ ಮಾಡಬಹುದು ಎಂಬ ಸಂತೋಷವೂ ಕೆಲವರಲ್ಲಿ ಮನೆ ಮಾಡಿದೆ.

ಏನೇ ಇದ್ದರೂ ಅಂತಿಮವಾಗಿ 2-3 ಸೀಟುಗಳನ್ನು ಖಾಲಿ ಇಟ್ಟುಕೊಳ್ಳುವುದಂತೂ ಕಾಯಂ. ಒಂದೆಡೆ ಅತೃಪ್ತರಿಗೆ ಕ್ಯಾರೆಟ್ ತೋರಿಸಲು ಅನುಕೂಲ; ಇನ್ನೊಂದೆಡೆ ‘ಈ ಸರ್ಕಾರ ಬರಲು ಕಾರಣರಾದ ಯಾರನ್ನೂ ಯಡಿಯೂರಪ್ಪನವರು ಕೈಬಿಡಲಿಲ್ಲ’ವೆಂಬ ಖ್ಯಾತಿ ಉಳಿದುಕೊಳ್ಳಬೇಕು. ಹಾಗಾಗಿ ಎಂ.ಟಿ.ಬಿ.ನಾಗರಾಜ್ ಮತ್ತು ಆರ್.ಶಂಕರ್ ಇಬ್ಬರಿಗೂ ಸಚಿವ ಸ್ಥಾನ ಕಲ್ಪಿಸುವ ಅಗತ್ಯವಿದೆ. ರಿಜ್ವಾನ್ ಅರ್ಷದ್‍ರ ಎಂಎಲ್‍ಸಿ ಸೀಟು ಖಾಲಿಯಾದಾಗ ಅಲ್ಲಿ ಇಬ್ಬರಲ್ಲೊಬ್ಬರನ್ನು ಕೂರಿಸಿ ಮಂತ್ರಿ ಮಾಡಬಹುದು. ಆದರೆ, ಆಗಲೂ ಇರುವುದು ಒಂದೇ ಸೀಟು ಎಂಬ ಚಿಂತೆ ಈ ಎಲ್ಲರಲ್ಲೂ ಇದೆ. ಶರತ್ ಬಚ್ಚೇಗೌಡರ ಮೇಲೆ ಯಡಿಯೂರಪ್ಪನವರ ಸಿಟ್ಟು ಇನ್ನೂ ಮುಂದುವರೆದಿರುವುದನ್ನು ಶಾಸಕರ ಪ್ರಮಾಣ ಸ್ವೀಕಾರ ಸಂದರ್ಭದಲ್ಲಿ ವ್ಯಕ್ತವಾದುದನ್ನು ನೋಡಿದರೆ ಎಂ.ಟಿ.ಬಿ ಪರವಾಗಿ ಯಡ್ಡಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದ್ದೇ ಇದೆ.

ಆದರೆ, ಅದೇ ಎಂ.ಎಲ್.ಸಿ ಸ್ಥಾನದ ಮೇಲೆ ಕಣ್ಣಿಟ್ಟ ಇನ್ನೂ ಇಬ್ಬರಿದ್ದಾರೆ. ಒಬ್ಬರು ಡಿಸಿಎಂ ಸವದಿ. ಅವರ ಡಿಸಿಎಂ ಪಟ್ಟ ಮುಂದುವರೆಯಲು ಈಗ ಬೇರೆ ಯಾವ ದಾರಿಯೂ ಇಲ್ಲ. ಹಾಗೆಯೇ ತನ್ನಂತಹ ‘ಮುತ್ಸದ್ದಿ’ಗೆ ಸ್ಥಾನ ಕಲ್ಪಿಸದಿದ್ದರೆ ಹೇಗೆ ಎಂಬ ವಾದ ಎಚ್.ವಿಶ್ವನಾಥ್‍ರದ್ದೂ ಇರುತ್ತದೆ. ಅಂತಿಮವಾಗಿ ಸಂಪುಟ ರಚನೆಯಲ್ಲಿ ಯಡಿಯೂರಪ್ಪನವರಿಗೆ ಒಂದಷ್ಟು ಬಿಟ್ಟುಕೊಟ್ಟು ಎಂಎಲ್‍ಸಿ ಸೀಟು ಸವದಿ ಪಾಲಾಗಿ ಉಳಿದವರಿಗೆ ಫಲವತ್ತಾದ ನಿಗಮ ಮಂಡಳಿಗಳ ತುಪ್ಪ ಸವರುವ ಸಾಧ್ಯತೆಯೇ ಎದ್ದು ಕಾಣುತ್ತಿದೆ.
ಅದೇನೇ ಇದ್ದರೂ ಬಿಜೆಪಿಯೊಳಗೆ ಇನ್ನೊಂದು ಸುತ್ತು ಯಡಿಯೂರಪ್ಪ ವರ್ಸಸ್ ತ್ರೈಕಮಾಂಡ್‍ನ ಮುಸುಕಿನ ಗುದ್ದಾಟ ನಡೆಯುವುದಂತೂ ಖಾಯಂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...