Homeಕರ್ನಾಟಕನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

ನೋ ಡಿಸಿಎಂ, ನಿಷ್ಠರೇ ಡ್ರಾಪ್,ಮುಸುಕಿನ ಗುದ್ದಾಟಕ್ಕೆ ಕೊನೆಯಿಲ್ಲ ಯಡಿಯೂರಪ್ಪನವರ ಸಂಪುಟ ಸಂಕಟ ಏನು?

- Advertisement -
- Advertisement -

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ.

ಇವ್ಯಾವುವೂ ಅನಿರೀಕ್ಷಿತವಲ್ಲ. ಅನರ್ಹ ಶಾಸಕರು ಗೆಲ್ಲದಿದ್ದರೆ ಒಂಥರಾ ಕಷ್ಟ; ಗೆದ್ದರೆ ಇನ್ನೊಂಥರಾ ಕಷ್ಟ ಎಂಬುದು ಬಿಜೆಪಿಯೊಳಗೆ ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿತ್ತು. ಆದರೆ, ಕೆಲವೇ ತಿಂಗಳ ಕೆಳಗೆ ಫಟಾಫಟ್ ತೀರ್ಮಾನಗಳನ್ನು ನಿಷ್ಠುರವಾಗಿ ಮಾಡುತ್ತಿದ್ದ ಬಿಜೆಪಿ ಹೈಕಮಾಂಡ್ ಇದೀಗ ಎಲ್ಲವನ್ನೂ ಎಳೆಯುತ್ತಿರುವುದಕ್ಕೆ ಮಾತ್ರ ವಿಶೇಷ ಕಾರಣಗಳಿವೆ. ಮೋದಿ – ಷಾ ಜೋಡಿಯನ್ನು ಮಣಿಸಲು ಯಡಿಯೂರಪ್ಪನವರ ಥರದ ಸೀಸನ್ಡ್ ರಾಜಕಾರಣಿಗಳು ಅವರದ್ದೇ ಪಟ್ಟುಗಳನ್ನು ಹಾಕಲು ಶುರು ಮಾಡಿದ್ದಾರೆ. ಪ್ರಧಾನಮಂತ್ರಿ ಮೋದಿಯ ಎದುರೇ ಯಡಿಯೂರಪ್ಪನವರು ಸಾರ್ವಜನಿಕ ಸಭೆಯಲ್ಲಿ ಕೇಂದ್ರದಿಂದ ಅನುದಾನ ಸರಿಯಾಗಿ ಬಂದಿಲ್ಲ ಎಂಬಂತೆ ಮಾತಾಡಿದ್ದು, ಎರಡು ಬಿಜೆಪಿ ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಲೀಡ್ ನ್ಯೂಸ್ ಬರುವಂತೆ ನೋಡಿಕೊಂಡಿದ್ದು ಅಕಸ್ಮಾತ್ತಾಗಿ ನಡೆದ ಘಟನೆಗಳಲ್ಲ. ಹಾಗೆಯೇ ತಾನಿಷ್ಟು ಕಷ್ಟಪಟ್ಟು ಕರ್ನಾಟಕದೊಳಗೆ ಬಿಜೆಪಿ ಸರ್ಕಾರ ತಂದಿದ್ದೇನೆ; ಇದರ ಚುಕ್ಕಾಣಿ ಹಿಡಿದಿರುವ ತನ್ನ ಮಾತು ನಡೆಯದಿದ್ದರೆ ಪಟ್ಟು ಸಡಿಲಿಸುವವನಲ್ಲ ಎಂಬ ಸೂಚನೆಯನ್ನೂ ಕೊಟ್ಟಾಗಿದೆ.

ಇಷ್ಟು ಗಡುಸಾಗಿ ಯಡಿಯೂರಪ್ಪನವರ ಸಂಪುಟ ರಚನೆಯ ಸಂದರ್ಭದಲ್ಲಿ ಇರಲಿಲ್ಲ. ಹಾಗಾಗಿಯೇ ಮೂವರು ಡಿಸಿಎಂಗಳನ್ನು ಹೇರಿಸಿಕೊಳ್ಳಬೇಕಾಗಿ ಬಂದಿತ್ತು. ಉಪಮುಖ್ಯಮಂತ್ರಿ ನೇಮಕಕ್ಕೆ ಮುಂಚೆಯೇ ಸಂಪುಟ ಸಚಿವರ ಪಟ್ಟಿ ಹೊರಬಿದ್ದಾಗಲೇ ಸೀನಿಯರ್‍ಗಳಲ್ಲದ ಮೂವರು ಹೆಸರು ಮುಖ್ಯಮಂತ್ರಿ ನಂತರ ಇರುವಂತೆ ನೋಡಿಕೊಳ್ಳಲಾಗಿತ್ತು. ಅಂದರೆ, ಪಟ್ಟಿಯ ಅನುಕ್ರಮಣಿಕೆಯನ್ನೂ ಹೈಕಮಾಂಡ್‍ನ ಸಂತೋಷಕ್ಕೆ ತಕ್ಕಂತೆ ಮಾಡಿ ಕಳಿಸುವ ಮಟ್ಟಕ್ಕೆ ಯಡಿಯೂರಪ್ಪನವರ ಮೇಲೆ ನಿಯಂತ್ರಣ ಸಾಧಿಸಲಾಗಿತ್ತು.

ಆದರೆ ಈಗಿನ ಯಡಿಯೂರಪ್ಪನವರು ಬೇರೆ. ಕಾಂಗ್ರೆಸ್, ಜೆಡಿಎಸ್‍ಗಳಿಂದ ಎತ್ತಾಕಿಕೊಂಡು ಬಂದವರ ಪೈಕಿ ಬಹುತೇಕರನ್ನು ಅವರು ಗೆಲ್ಲಿಸಿಕೊಂಡಿದ್ದಾರೆ. ಮಂಡ್ಯ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಬಿಜೆಪಿ ಪ್ರಥಮ ಬಾರಿಗೆ ಖಾತೆ ತೆರೆದಿದೆ. ಮಹಾರಾಷ್ಟ್ರ ಮುಖಭಂಗದ ನಂತರ ದೆಹಲಿ ಚಾಣಕ್ಯರ ಸಾಮಥ್ರ್ಯದ ಮಿತಿಯೂ ಬಯಲಿಗೆ ಬಂದಿದೆ. ಹಾಗಾಗಿ ಯಡಿಯೂರಪ್ಪನವರೂ ಪಟ್ಟು ಹಾಕತೊಡಗಿದ್ದಾರೆ. ಇದನ್ನು ಈಗಿಂದೀಗಲೇ ಮಣಿಸಲಾಗದು ಎಂಬುದರ ಅರಿವು ಇರುವ ಬಿಜೆಪಿಯ ದೆಹಲಿ ತ್ರೈಕಮಾಂಡ್ ಸಚಿವ ಸಂಪುಟ ವಿಸ್ತರಣೆಯನ್ನೇ ಎಳೆಯುತ್ತಿದ್ದಾರೆ.

ಹಳೇ ಡಿಸಿಎಂಗಳಾದ ಆರ್.ಅಶೋಕ್ ಮತ್ತು ಕೆ.ಎಸ್.ಈಶ್ವರಪ್ಪರಿಗೆ ಏನೇ ಅಸಮಾಧಾನವಿದ್ದರೂ ತಮ್ಮನ್ನೂ ಡಿಸಿಎಂ ಮಾಡಿ ಎಂದು ಕೇಳುವ ಸ್ಥಿತಿಯಲ್ಲೇನೂ ಇಲ್ಲ. ಆದರೆ, ಸವದಿ, ಅಶ್ವತ್ಥನಾರಾಯಣ ಮತ್ತು ಕಾರಜೋಳ ಡಿಸಿಎಂ ಪದವಿಯಿಂದ ಇಳಿದರೆ ಅವರಿಗೆ ಸಂತೋಷವೇ. ಹೊಸ ಡಿಸಿಎಂಗಳಾಗಲು ತುದಿಗಾಲಲ್ಲಿ ನಿಂತಿರುವವರೆಂದರೆ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ. ಇಬ್ಬರಲ್ಲಿ ಯಾರೊಬ್ಬರಿಗೆ ಕೊಟ್ಟರೂ ಇನ್ನೊಬ್ಬರು ಮುನಿಸಿಕೊಳ್ಳುತ್ತಾರೆ. ಆದರೆ ಅವರಿಬ್ಬರೂ ಡಿಸಿಎಂಗೆ ಪಟ್ಟು ಹಾಕಿದಷ್ಟೂ ಯಡಿಯೂರಪ್ಪನವರಿಗೆ ಒಳ್ಳೆಯದೇ. ಈ ರೀತಿ ನಾಲ್ಕೈದು ಡಿಸಿಎಂಗಳಿರುವ ಹಾಸ್ಯಾಸ್ಪದ ಸನ್ನಿವೇಶಕ್ಕಿಂತ ಇರುವ ಡಿಸಿಎಂಗಳನ್ನೂ ತೆಗೆಯಿರಿ ಎಂದು ವಾದ ಮಂಡಿಸಲು ಅನುಕೂಲವಾಗುತ್ತದೆ. ಆದರೆ, ಕೆಲವೇ ತಿಂಗಳ ಹಿಂದಷ್ಟೇ ಮೇಲಿನಿಂದ ಹೇರಲಾದ ಡಿಸಿಎಂಗಳನ್ನು ಇಷ್ಟು ಬೇಗ ತೆಗೆದುಬಿಡಲು ಹೈಕಮಾಂಡ್ ಒಪ್ಪುವುದೂ ಕಷ್ಟ.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪನವರ ಆಲೋಚನೆ ಹೀಗಿದೆ. ಬೇರೆ ಬೇರೆ ಕಾರಣಗಳಿಂದ ಯಡಿಯೂರಪ್ಪನವರು 2-3 ಲಿಂಗಾಯಿತ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ. ಸಿ.ಸಿ.ಪಾಟೀಲ್ ಡ್ರಾಪ್ ಆಗುವುದು ಬಹುತೇಕ ಖಚಿತ. ಅದಲ್ಲದೇ ಯಡಿಯೂರಪ್ಪನವರ ಆಪ್ತರಾಗಿರುವ ಬೊಮ್ಮಾಯಿ ಮತ್ತು ಮಾಧುಸ್ವಾಮಿಯವರ ಬಗ್ಗೆಯೂ ಸಿಎಂ ಒಲವು ಕಡಿಮೆ ಇದೆ. ಇದಕ್ಕೆ ಕಾರಣವೆಂದು ಹೇಳಲಾಗುತ್ತಿರುವ ಸಂಗತಿಗಳು ಆಶ್ಚರ್ಯಕರವಾಗಿದೆ. ಇಬ್ಬರೂ ವೀರಶೈವ ಮಹಾಸಭಾ ಲಾಬಿಯೊಳಗೆ ತಮ್ಮನ್ನು ವೀರಶೈವ ಸಮಾಜದಲ್ಲಿ ಯಡಿಯೂರಪ್ಪನವರ ನಂತರದ ನಂ.2 ಸ್ಥಾನದಲ್ಲಿ ಕಲ್ಪಿಸಿಕೊಂಡು ಆ ರೀತಿ ಪ್ರೊಜೆಕ್ಟ್ ಮಾಡಿಕೊಳ್ಳುತ್ತಿದ್ದಾರೆಂದು ಸಿಎಂ ಬಳಗಕ್ಕೆ ಅನಿಸಿದೆ. ಆ ಜಾಗದಲ್ಲಿ ತಮ್ಮ ಎರಡನೆಯ ಪುತ್ರನನ್ನು ಈಗಾಗಲೇ ಕಲ್ಪಿಸಿಕೊಂಡಿರುವ ಯಡಿಯೂರಪ್ಪನವರಿಗೆ ಈಗಲೇ ಮುನ್ನೆಚ್ಚರಿಕೆ ವಹಿಸಬೇಕೆನಿಸಿದ್ದರೆ ಆಶ್ಚರ್ಯವಿಲ್ಲ.

ಕನಕವೃತ್ತದ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದಲ್ಲದೇ ವಿಜಯೇಂದ್ರ ಜೊತೆ ಸಹಾ ಸಂಬಂಧ ಕೆಡಿಸಿಕೊಂಡಿರುವುದು ಮಾಧುಸ್ವಾಮಿಯವರಿಗೆ ತೊಡಕು ಎನ್ನಲಾಗುತ್ತಿದೆ. ಹಾವೇರಿ ಜಿಲ್ಲೆಯ ಸಾದರ ಲಿಂಗಾಯಿತ ಬಿ.ಸಿ.ಪಾಟೀಲ್ ಅರ್ಹರಾಗಿ ಸಂಪುಟಕ್ಕೆ ಸೇರುವಾಗ, ಅದೇ ಜಿಲ್ಲೆಯ ಇನ್ನೊಬ್ಬ ಸಾದರ ಲಿಂಗಾಯಿತ ಬೊಮ್ಮಾಯಿಯವರೂ ಇರುವುದು ಅಸಮತೋಲನವಾಗುತ್ತದೆ ಎಂಬ ವಾದವೂ ಇದೆ. ಅಂತಿಮವಾಗಿ ಒಬ್ಬ ಲಿಂಗಾಯಿತರನ್ನು ಕೈಬಿಡುವುದಂತೂ ಖಚಿತವಾಗಿದೆ. ಉಮೇಶ್ ಕತ್ತಿಯನ್ನೂ ತೆಗೆದುಕೊಳ್ಳಲೇಬೇಕಾದ ಸ್ಥಿತಿಯಲ್ಲಿ ಯಡಿಯೂರಪ್ಪನವರು ಇದ್ದಾರೆ. ಹೀಗಾಗಿ ಲಿಂಗಾಯಿತರ ಭಾರದಿಂದ ಸಂಪುಟ ನೆಲಕಚ್ಚದಿರಬೇಕಾದರೆ ಯಾವುದೋ ರೀತಿಯ ಬ್ಯಾಲೆನ್ಸಿಂಗ್ ಕೆಲಸ ಆಗುತ್ತದೆ.

ಹಿಂದಿನ ಸಾರಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಬ್ಬರನ್ನೂ ತೆಗೆದುಕೊಂಡಿರಲಿಲ್ಲ; ಜೊತೆಗೆ ದಲಿತ ಬಲಗೈ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡಲು ಹಿರಿಯ ಶಾಸಕ ಸುಳ್ಯದ ಅಂಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ತಮ್ಮ ನೀಲಿ ಕಣ್ಣಿನ ಹುಡುಗ ಲಿಂಬಾವಳಿಯನ್ನೂ ಬೋವಿ ಕೋಟಾದಲ್ಲಿ ತೆಗೆದುಕೊಳ್ಳಬೇಕೆಂದು ನಿಶ್ಚಯಿಸಿದ್ದಾರೆ. ಆದರೆ, ಅದಕ್ಕೆ ಸಿಡಿಗಳು ಹೊರಬೀಳುವ ಗುಮ್ಮ ತೋರಿಸಿ ಅಡ್ಡಿ ಮಾಡಬಹುದು ಎಂಬ ಸಂತೋಷವೂ ಕೆಲವರಲ್ಲಿ ಮನೆ ಮಾಡಿದೆ.

ಏನೇ ಇದ್ದರೂ ಅಂತಿಮವಾಗಿ 2-3 ಸೀಟುಗಳನ್ನು ಖಾಲಿ ಇಟ್ಟುಕೊಳ್ಳುವುದಂತೂ ಕಾಯಂ. ಒಂದೆಡೆ ಅತೃಪ್ತರಿಗೆ ಕ್ಯಾರೆಟ್ ತೋರಿಸಲು ಅನುಕೂಲ; ಇನ್ನೊಂದೆಡೆ ‘ಈ ಸರ್ಕಾರ ಬರಲು ಕಾರಣರಾದ ಯಾರನ್ನೂ ಯಡಿಯೂರಪ್ಪನವರು ಕೈಬಿಡಲಿಲ್ಲ’ವೆಂಬ ಖ್ಯಾತಿ ಉಳಿದುಕೊಳ್ಳಬೇಕು. ಹಾಗಾಗಿ ಎಂ.ಟಿ.ಬಿ.ನಾಗರಾಜ್ ಮತ್ತು ಆರ್.ಶಂಕರ್ ಇಬ್ಬರಿಗೂ ಸಚಿವ ಸ್ಥಾನ ಕಲ್ಪಿಸುವ ಅಗತ್ಯವಿದೆ. ರಿಜ್ವಾನ್ ಅರ್ಷದ್‍ರ ಎಂಎಲ್‍ಸಿ ಸೀಟು ಖಾಲಿಯಾದಾಗ ಅಲ್ಲಿ ಇಬ್ಬರಲ್ಲೊಬ್ಬರನ್ನು ಕೂರಿಸಿ ಮಂತ್ರಿ ಮಾಡಬಹುದು. ಆದರೆ, ಆಗಲೂ ಇರುವುದು ಒಂದೇ ಸೀಟು ಎಂಬ ಚಿಂತೆ ಈ ಎಲ್ಲರಲ್ಲೂ ಇದೆ. ಶರತ್ ಬಚ್ಚೇಗೌಡರ ಮೇಲೆ ಯಡಿಯೂರಪ್ಪನವರ ಸಿಟ್ಟು ಇನ್ನೂ ಮುಂದುವರೆದಿರುವುದನ್ನು ಶಾಸಕರ ಪ್ರಮಾಣ ಸ್ವೀಕಾರ ಸಂದರ್ಭದಲ್ಲಿ ವ್ಯಕ್ತವಾದುದನ್ನು ನೋಡಿದರೆ ಎಂ.ಟಿ.ಬಿ ಪರವಾಗಿ ಯಡ್ಡಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದ್ದೇ ಇದೆ.

ಆದರೆ, ಅದೇ ಎಂ.ಎಲ್.ಸಿ ಸ್ಥಾನದ ಮೇಲೆ ಕಣ್ಣಿಟ್ಟ ಇನ್ನೂ ಇಬ್ಬರಿದ್ದಾರೆ. ಒಬ್ಬರು ಡಿಸಿಎಂ ಸವದಿ. ಅವರ ಡಿಸಿಎಂ ಪಟ್ಟ ಮುಂದುವರೆಯಲು ಈಗ ಬೇರೆ ಯಾವ ದಾರಿಯೂ ಇಲ್ಲ. ಹಾಗೆಯೇ ತನ್ನಂತಹ ‘ಮುತ್ಸದ್ದಿ’ಗೆ ಸ್ಥಾನ ಕಲ್ಪಿಸದಿದ್ದರೆ ಹೇಗೆ ಎಂಬ ವಾದ ಎಚ್.ವಿಶ್ವನಾಥ್‍ರದ್ದೂ ಇರುತ್ತದೆ. ಅಂತಿಮವಾಗಿ ಸಂಪುಟ ರಚನೆಯಲ್ಲಿ ಯಡಿಯೂರಪ್ಪನವರಿಗೆ ಒಂದಷ್ಟು ಬಿಟ್ಟುಕೊಟ್ಟು ಎಂಎಲ್‍ಸಿ ಸೀಟು ಸವದಿ ಪಾಲಾಗಿ ಉಳಿದವರಿಗೆ ಫಲವತ್ತಾದ ನಿಗಮ ಮಂಡಳಿಗಳ ತುಪ್ಪ ಸವರುವ ಸಾಧ್ಯತೆಯೇ ಎದ್ದು ಕಾಣುತ್ತಿದೆ.
ಅದೇನೇ ಇದ್ದರೂ ಬಿಜೆಪಿಯೊಳಗೆ ಇನ್ನೊಂದು ಸುತ್ತು ಯಡಿಯೂರಪ್ಪ ವರ್ಸಸ್ ತ್ರೈಕಮಾಂಡ್‍ನ ಮುಸುಕಿನ ಗುದ್ದಾಟ ನಡೆಯುವುದಂತೂ ಖಾಯಂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...