Homeಕರ್ನಾಟಕಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

- Advertisement -
- Advertisement -

ಯಾದಗಿರಿಯ ಸರಕಾರಿ ಮೆಟ್ರಿಕ್ ನಂತರದ (ವೃತಿಪರ) ಬಾಲಕಿಯರ ವಸತಿ ನಿಲಯದಲ್ಲಿ, ದಲಿತ ಬಾಲಕಿರ ಮೇಲೆ ಹಾಸ್ಟೆಲ್ ವಾರ್ಡನ್‌‌‌ ನಡೆಸುತ್ತಿರುವ ದಬ್ಬಾಳಿಕೆ ವಿರುದ್ಧ ನೂರಾರು ವಿದ್ಯಾರ್ಥಿನಿಯರು ಶನಿವಾರ ಪ್ರತಿಭಟನೆ ನಡೆಸಿದ್ದು, ವಾರ್ಡನ್‌‌‌‌‌ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಹಾಸ್ಟೆಲ್ ವಾರ್ಡನ್‌ ಶಾಂತಾಬಾಯಿ ಅವರು ವಿಧ್ಯಾರ್ಥಿನಿಯರ ಮೇಲೆ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ವಸತಿ ನಿಲಯದ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಸ್ಟೆಲ್‌‌ನಲ್ಲಿ ಬಾಲಕಿಯರಿಗೆ ಸರಿಯಾದ ಸೌಲಭ್ಯ ನೀಡದೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಸರಿಯಾದ ರೀತಿಯ ಬೆಳಗಿನ ಉಪಹಾರ, ಊಟ, ಕಂಪ್ಯೂಟರ್, ಪುಸ್ತಕ, ಶೌಚಾಲಯ, ಫ್ಯಾನು, ಹಾಸಿಗೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಇಲ್ಲದೆ ಬಾಲಕಿಯರು ಕಾಲ ಕಳೆಯುತ್ತಿದ್ದಾರೆ” ಎಂದು ಜೈ ಭೀಮ್ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಅಧ್ಯಕ್ಷರಾಗಿರುವ ರಾಹುಲ್ ಕೊಲ್ಲೂರ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ವಾರ್ಡನ್‌‌ ಅನ್ನು ತಕ್ಷಣವೆ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿನಿಯರು ಶನಿವಾರ ಬೆಳಿಗ್ಗೆ ಯಾದಗಿರಿ ಜಿಲ್ಲಾ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಗಾರ ವಿದ್ಯಾರ್ಥಿನಿಯರೊಂದಿಗೆ ಜಿಲ್ಲಾಧಿಕಾರಿ ಅವರು ಸಂಜೆ ಆರು ಗಂಟೆಗೆ ಹಾಸ್ಟೆಲ್‌ಗೆ ಬಂದು ಭೇಟಿಯಾಗುವುದಾಗಿ ಹೇಳಿದ್ದರು. ಅವರ ಮಾತಿನಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ಕೈಬಿಟ್ಟು ತೆರಳಿದ್ದರು.

ಆದರೆ ಸಂಜೆ ವೇಳೆ ಜಿಲ್ಲಾಧಿಕಾರಿ ಹಾಸ್ಟೆಲ್‌ಗೆ ಬರದೆ ಇರುವುದರಿಂದ ವಿದ್ಯಾರ್ಥಿನಿರು ತಹಶೀಲ್ದಾರ್‌ ಕಚೇರಿ ಮುಂದೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ ನಂತರ ರಾತ್ರಿ 8:45ಕ್ಕೆ ವಸತಿ ನಿಲಯಕ್ಕೆ ತೆರಳಿ ಬಾಲಕಿಯರ ಬೇಡಿಕೆ ಈಡೇರಿಸುವುದಾಗಿ ಹೇಳಿ ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ.

“ತಮ್ಮ ವಸತಿ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರು ಈ ಹಿಂದೆಯೆ ‘ತಾಲೂಕಿನ ಸಮಾಜ ಕಲ್ಯಾಣ ಇಲಾಖೆ’ ತೆರಳಿ ಮನವಿಯನ್ನು ನೀಡಿದ್ದರು. ಆದರೆ ಅಧಿಕಾರಿಗಳು ಅವರ ಮನವಿ ಪತ್ರವನ್ನು ವಿದ್ಯಾರ್ಥಿಗಳ ಮುಂದೆಯೇ ಹರಿದು ಹಾಕಿ ದರ್ಪ ಮರೆದಿದ್ದರು ಎಂದು ವಿಧ್ಯಾರ್ಥಿಗಳು ತಿಳಿಸಿದ್ದಾಗಿ” ರಾಹುಲ್ ಕೊಲ್ಲೂರ್‌ ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಹಾಸ್ಟೆಲ್ ವಾರ್ಡನ್‌ ಅಮಾನತಿನ ಬಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಮಾತನಾಡಿ, “ಜಿಲ್ಲಾಧಿಕಾರಿ ಅವರು ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಅಧೀಕೃತ ಆದೇಶ ಪತ್ರ ಹೊರಡಿಸಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಅವರಿಗೆ ಕರೆ ಮಾಡಿತ್ತಾದರೂ ಅವರು ಕರೆಯನ್ನು ಸ್ವೀಕರಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....