Homeಕರ್ನಾಟಕಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

- Advertisement -
- Advertisement -

ಯಾದಗಿರಿಯ ಸರಕಾರಿ ಮೆಟ್ರಿಕ್ ನಂತರದ (ವೃತಿಪರ) ಬಾಲಕಿಯರ ವಸತಿ ನಿಲಯದಲ್ಲಿ, ದಲಿತ ಬಾಲಕಿರ ಮೇಲೆ ಹಾಸ್ಟೆಲ್ ವಾರ್ಡನ್‌‌‌ ನಡೆಸುತ್ತಿರುವ ದಬ್ಬಾಳಿಕೆ ವಿರುದ್ಧ ನೂರಾರು ವಿದ್ಯಾರ್ಥಿನಿಯರು ಶನಿವಾರ ಪ್ರತಿಭಟನೆ ನಡೆಸಿದ್ದು, ವಾರ್ಡನ್‌‌‌‌‌ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಹಾಸ್ಟೆಲ್ ವಾರ್ಡನ್‌ ಶಾಂತಾಬಾಯಿ ಅವರು ವಿಧ್ಯಾರ್ಥಿನಿಯರ ಮೇಲೆ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ವಸತಿ ನಿಲಯದ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಸ್ಟೆಲ್‌‌ನಲ್ಲಿ ಬಾಲಕಿಯರಿಗೆ ಸರಿಯಾದ ಸೌಲಭ್ಯ ನೀಡದೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಸರಿಯಾದ ರೀತಿಯ ಬೆಳಗಿನ ಉಪಹಾರ, ಊಟ, ಕಂಪ್ಯೂಟರ್, ಪುಸ್ತಕ, ಶೌಚಾಲಯ, ಫ್ಯಾನು, ಹಾಸಿಗೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಇಲ್ಲದೆ ಬಾಲಕಿಯರು ಕಾಲ ಕಳೆಯುತ್ತಿದ್ದಾರೆ” ಎಂದು ಜೈ ಭೀಮ್ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಅಧ್ಯಕ್ಷರಾಗಿರುವ ರಾಹುಲ್ ಕೊಲ್ಲೂರ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ವಾರ್ಡನ್‌‌ ಅನ್ನು ತಕ್ಷಣವೆ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿನಿಯರು ಶನಿವಾರ ಬೆಳಿಗ್ಗೆ ಯಾದಗಿರಿ ಜಿಲ್ಲಾ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಗಾರ ವಿದ್ಯಾರ್ಥಿನಿಯರೊಂದಿಗೆ ಜಿಲ್ಲಾಧಿಕಾರಿ ಅವರು ಸಂಜೆ ಆರು ಗಂಟೆಗೆ ಹಾಸ್ಟೆಲ್‌ಗೆ ಬಂದು ಭೇಟಿಯಾಗುವುದಾಗಿ ಹೇಳಿದ್ದರು. ಅವರ ಮಾತಿನಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ಕೈಬಿಟ್ಟು ತೆರಳಿದ್ದರು.

ಆದರೆ ಸಂಜೆ ವೇಳೆ ಜಿಲ್ಲಾಧಿಕಾರಿ ಹಾಸ್ಟೆಲ್‌ಗೆ ಬರದೆ ಇರುವುದರಿಂದ ವಿದ್ಯಾರ್ಥಿನಿರು ತಹಶೀಲ್ದಾರ್‌ ಕಚೇರಿ ಮುಂದೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ ನಂತರ ರಾತ್ರಿ 8:45ಕ್ಕೆ ವಸತಿ ನಿಲಯಕ್ಕೆ ತೆರಳಿ ಬಾಲಕಿಯರ ಬೇಡಿಕೆ ಈಡೇರಿಸುವುದಾಗಿ ಹೇಳಿ ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ.

“ತಮ್ಮ ವಸತಿ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರು ಈ ಹಿಂದೆಯೆ ‘ತಾಲೂಕಿನ ಸಮಾಜ ಕಲ್ಯಾಣ ಇಲಾಖೆ’ ತೆರಳಿ ಮನವಿಯನ್ನು ನೀಡಿದ್ದರು. ಆದರೆ ಅಧಿಕಾರಿಗಳು ಅವರ ಮನವಿ ಪತ್ರವನ್ನು ವಿದ್ಯಾರ್ಥಿಗಳ ಮುಂದೆಯೇ ಹರಿದು ಹಾಕಿ ದರ್ಪ ಮರೆದಿದ್ದರು ಎಂದು ವಿಧ್ಯಾರ್ಥಿಗಳು ತಿಳಿಸಿದ್ದಾಗಿ” ರಾಹುಲ್ ಕೊಲ್ಲೂರ್‌ ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಹಾಸ್ಟೆಲ್ ವಾರ್ಡನ್‌ ಅಮಾನತಿನ ಬಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಮಾತನಾಡಿ, “ಜಿಲ್ಲಾಧಿಕಾರಿ ಅವರು ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಅಧೀಕೃತ ಆದೇಶ ಪತ್ರ ಹೊರಡಿಸಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಅವರಿಗೆ ಕರೆ ಮಾಡಿತ್ತಾದರೂ ಅವರು ಕರೆಯನ್ನು ಸ್ವೀಕರಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...