Homeಕರ್ನಾಟಕಯಾದಗಿರಿ | ರಸ್ತೆಯ ಮಧ್ಯೆ ಅಡ್ಡಗಟ್ಟಿ ದಲಿತ ಯುವಕರಿಗೆ ಥಳಿತ; ಜಾತಿ ನಿಂದನೆ

ಯಾದಗಿರಿ | ರಸ್ತೆಯ ಮಧ್ಯೆ ಅಡ್ಡಗಟ್ಟಿ ದಲಿತ ಯುವಕರಿಗೆ ಥಳಿತ; ಜಾತಿ ನಿಂದನೆ

- Advertisement -
- Advertisement -

ದಲಿತ ಯುವಕರಿಬ್ಬರನ್ನು ರಸ್ತೆಯ ಮಧ್ಯೆ ಅಡ್ಡಗಟ್ಟಿ ಜಾತಿ ನಿಂದನೆ ಮಾಡಿರುವ ಘಟನೆ ಯಾದರಿಗಿ ಜಿಲ್ಲೆಯ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 17ರ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ. ಅಲ್ಲದೆ, ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಯಾದಗಿರಿ | ರಸ್ತೆಯ ಮಧ್ಯೆ

ವೈರಲ್ ವಿಡಿಯೊದಲ್ಲಿ ದುಷ್ಕರ್ಮಿಗಳು ದಲಿತ ಯುವಕರಿಬ್ಬರನ್ನು ಅಡ್ಡಗಟ್ಟಿ, “ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್ (ಮಾದಿಗ) ಹೌದೋ, ಅಲ್ವೋ? ನಾವು ಕುರುಬರು” ಎಂದು ಹೇಳುವುದು ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ದಾಖಲಾದ ಎಫ್‌ಐಅರ್ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಆರೋಪಿಗಳನ್ನು ಕುರುಬ ಸಮುದಾಯದ ಮಲ್ಲಯ್ಯ ಮತ್ತು ಅರ್ಜಿನ ಎಂದು ಎಫ್‌ಐಆರ್‌ನಲ್ಲಿ ಗುರುತಿಸಲಾಗಿದೆ.

ಏನಿದು ಘಟನೆ?

ವೃತ್ತಿಯಲ್ಲಿ ವಕೀಲರಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ದುರ್ಗಪ್ಪ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಸುರಪುರ ತಾಲ್ಲೂಕಿನ ನಾಗರಾಳ ಗ್ರಾಮದ ನಿವಾಸಿಯಾದ ದುರ್ಗಪ್ಪ ಅವರು 17ನೇ ತಾರೀಖಿನಂದು ತಮ್ಮ ಗ್ರಾಮಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದುರ್ಗಪ್ಪ ಅವರ ಜೊತೆಗೆ ಅವರ ಮಾವ ವಿಜಯಕುಮಾರ್‌ ಕೂಡಾ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಲಾಗಿದೆ. “ಊರಿನ ಕ್ರಾಸ್ ಹತ್ತಿರದಲ್ಲಿನ ಬಲಭೀಮ ಎಂಬವರ ಅಂಗಡಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಕುರುಬ ಜಾತಿಗೆ ಸೇರಿದ ಮಲ್ಲಯ್ಯ ಮತ್ತು ಅರ್ಜುನ್ ಎಂಬವರು ತಮ್ಮನ್ನು ಕಂಡ ಕೂಡಲೇ ದಾರಿಗೆ ಅಡ್ಡಗಟ್ಟಿ ನಿಂತು ಜಾತಿ ನಿಂದನೆ ಮಾಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಯು, “ನಮ್ಮ ಎದುರಿಗೆ ಹೋಗುವುದಕ್ಕೆ ಎಷ್ಟು ಸೊಕ್ಕು? …. ಮಕ್ಕಳೇ ಇಲ್ಲಿ ತಿರುಗಾಡಿದರೆ ನಿಮ್ಮ ಕಾಲು ಕಡಿಯುತ್ತೇವೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ದುರ್ಗಪ್ಪ ಅವರು ಹೇಳಿದ್ದಾರೆ.

ಅಲ್ಲದೆ, ಆರೋಪಿ ಅರ್ಜುನ, ನನ್ನ ಶರ್ಟ್ ಹಿಡಿದು ದೈಹಿಕ ಹಲ್ಲೆ ಕೂಡಾ ಮಾಡಿದ್ದು, ಮತ್ತೊಬ್ಬ ಆರೋಪಿ ಮಲ್ಲಯ್ಯ ತನ್ನ ಎಡಗಾಲಿನ ಚಪ್ಪಲಿ ಬಿಚ್ಚಿ ತಲೆಗೆ ಹೊಡೆದಿದ್ದಾರೆ ಎಂದು ದುರ್ಗಪ್ಪ ಅವರು ಹೇಳಿದ್ದಾರೆ. ದುರ್ಗಪ್ಪ ಅವರ ಜೊತೆಯಲ್ಲಿದ್ದ ವಿಜಯಕುಮಾರ್ ಅವರು ಬಿಡಿಸಲು ಹೋದಾಗ, ಮಲ್ಲಯ್ಯ ಅವರು ವಿಜಯಕುಮಾರ್ ಅವರ ಶರ್ಟ್ ಹಿಡಿದು ಹರಿದು ಹಾಕಿದ್ದಾರೆ ಎಂದು ದುರ್ಗಪ್ಪ ಅವರು ದೂರಿದ್ದಾರೆ.

ಘಟನೆ ಬಳಿಕ ಸಂತ್ರಸ್ತರು ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಸಿಕೊಂಡ ನಂತರ ಸುರಪುರ ಠಾಣೆಗೆ ಹಾಜರಾಗಿ ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2), 118(1), 126(2), 133, 352, 351(2), 3(5) ಮತ್ತು ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)(s), 3(2)(v-a) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

“ಇನ್ನೂ ಜಾತಿ ವೈಷಮ್ಯಗಳು ಭಾರತದಲ್ಲಿ ಜೀವಂತವಾಗಿವೆ ಎಂಬುದನ್ನು ಇಂತಹ ಘಟನೆಗಳು ತೋರಿಸುತ್ತವೆ. ಸರ್ಕಾರ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮತ್ತಷ್ಟು ಬಿಗಿಯಾದ ಕಾನೂನನ್ನು ತರಬೇಕು. ವಕೀಲನಾದ ನನಗೆಯೇ ಈ ರೀತಿ ಆಗುತ್ತಿದೆ ಅಂದರೆ, ಜನಸಾಮಾನ್ಯರ ಗತಿ ಏನಾಗಬಹುದು?” ಎಂದು ಸಂತ್ರಸ್ತ ದುರ್ಗಪ್ಪ ಹೇಳಿರುವುದಾಗಿ ‘ಈ ದಿನ ಡಾಟ್ ಕಾಮ್’ ವರದಿ ಮಾಡಿದೆ.

“ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಈ ಅಸ್ಪೃಶ್ಯತೆಯನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು. ಆರೋಪಿಗಳನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂಬ ಮಾಹಿತಿಯೂ ಇದೆ” ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ. ಯಾದಗಿರಿ | ರಸ್ತೆಯ ಮಧ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...