Homeಕರ್ನಾಟಕಯಾದಗಿರಿ | ಪಿಎಸ್‌ಐ ಪರಶುರಾಮ್ ಹಠಾತ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಹಠಾತ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ ಪತ್ನಿ

- Advertisement -
- Advertisement -

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದ್ದು, ಆದರೆ ಅವರ ಪತ್ನಿ ಈ ಸಂಬಂಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಪರಶುರಾಮ ಅವರು ಸೈಬರ್ ಕ್ರೈಂ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟ್ರಸ್‌ನ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆದರೆ, ಈ ಪ್ರಕರಣವು ಈಗ ರಾಜ್ಯದ ಗಮನ ಸೆಳೆಯುತ್ತಿದ್ದು, ಹೊಸ ತಿರುವು ಪಡೆದುಕೊಂಡಿದೆ. “ನನ್ನ ಪತಿ, ಪಿಎಸ್‌ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇ ಗೌಡ ಕಾರಣ” ಎಂದು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರಿಗೆ ದೂರು ಸಲ್ಲಿಸಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

“ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಬೇಡಿಕೆ ಇಟ್ಟಿದ್ದರು. ಬಳಿಕ ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದ ಪರಶುರಾಮ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಅವರಿಗೆ ಹೃದಯಾಘಾತವಾಗಿದೆ. ಶಾಸಕರು ಮತ್ತು ಅವರ ಮಗ ವರ್ಗಾವಣೆಗೆ 30-40 ಲಕ್ಷ ರೂ. ಕೇಳಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಜಾತಿ ಮತ್ತು ಹಣಕ್ಕಾಗಿ ನಿಯತ್ತಿನ ಅಧಿಕಾರಿಯ ಸಾವಿಗೆ ಕಾರಣರಾಗಿದ್ದಾರೆ” ಎಂದು ಪತ್ನಿ ಶ್ವೇತಾ ಆರೋಪಿಸಿದ್ದಾರೆ.

“ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಪರಶುರಾಮ 30 ಲಕ್ಷ ರೂ. ನೀಡಿ ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅವರು ಒತ್ತಡಕ್ಕೆ ಒಳಗಾಗಿದ್ದರು. ಸಾಲದ ಸುಳಿಗೆ ಸಿಲುಕಿದ್ದರು. ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್‌ನಲ್ಲಿ ಮಾತನಾಡಿದ್ದರು” ಎಂದು ಕುಟುಂಬಸ್ಥರು ಹೇಳಿದ್ದಾರೆ.

ದಲಿತ ಸಂಘಟನೆಗಳಿಂದ ಪ್ರತಿಭಟನೆ

ತಪ್ಪಿತಸ್ಥ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇಗೌಡರನ್ನು ಕೂಡಲೇ ಬಂಧಿಸುವಂತೆ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಸ್ಥರು ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್‌ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಘಟನೆ ನಡೆದು 16 ಗಂಟೆಯಾದರೂ ಪ್ರಕರಣ ದಾಖಲಿಸಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದಿರುವ ಪ್ರತಿಭಟನಾಕಾರರು, ಖಾಸಗಿ ಆಸ್ಪತ್ರೆಯಿಂದ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸುವಾಗ ಆ್ಯಂಬುಲೆನ್ಸ್‌ ತಡೆದಿದ್ದಾರೆ.

ತನಿಖೆಗೆ ಸೂಚಿಸಿದ್ದೇನೆ : ಗೃಹ ಸಚಿವ ಪರಮೇಶ್ವರ್

ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, “ಈ ಬಗ್ಗೆ ನಾನು ತನಿಖೆಗೆ ಸೂಚನೆ ನೀಡಿದ್ದೇನೆ. ಪರಶುರಾಮ ಅವರು ಸಹಜವಾಗಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಗಳು ಬರುತ್ತಿವೆ. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾವುದೇ ಡೆತ್‌ನೋಟ್ ಕೂಡ ಪತ್ತೆಯಾಗಿಲ್ಲ. ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಕಾರಣ ಕೊಟ್ಟಿದ್ದಾರೆ. ಇವೆಲ್ಲದರ ಬಗ್ಗೆ ತನಿಖೆ ಮಾಡುವಂತೆ ನಾನು ಸೂಚನೆ ಕೊಟ್ಟಿದ್ದೇನೆ. ಏನು ವರದಿ ಬರುತ್ತದೆ ನೋಡೋಣ. ಪತ್ನಿಯ ಆರೋಪಗಳನ್ನೂ ಪರಿಗಣಿಸುತ್ತೇವೆ. ಆ ನಿಟ್ಟಿನಲ್ಲಿಯೂ ತನಿಖೆ ಮಾಡುವಂತೆ ಸೂಚಿಸಿದ್ದೇನೆ” ಎಂದಿದ್ದಾರೆ.

ಎಫ್‌ಐಆರ್ ದಾಖಲಿಸಿಲ್ಲ ಎಂಬ ಬಗ್ಗೆ ಕೇಳಿದ್ದಕ್ಕೆ “ಪೊಲೀಸರು ಎಫ್‌ಐಆರ್ ದಾಖಲಿಸುತ್ತಾರೆ. ಪ್ರಾಥಮಿಕವಾಗಿ ಒಂದಿಷ್ಟು ಸಾಕ್ಷ್ಯಗಳು, ಮಾಹಿತಿಗಳು ಸಂಗ್ರಹಿಸಬೇಕಾಗಿದೆ. ಅದನ್ನು ಮಾಡಿದ ಬಳಿಕ ಎಫ್‌ಐರ್‌ ದಾಖಲಿಸುತ್ತಾರೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಶಾಸಕರಿಗೆ ವರ್ಗಾವಣೆಗೆ 30 ಲಕ್ಷ ರೂಪಾಯಿ ಕೊಟ್ಟಿದ್ದಾರೆ ಎಂಬುವುದಾಗಿ ಅವರ ಪತ್ನಿ ಆರೋಪಿಸಿದ್ದಾರೆ ಎಂದು ಕೇಳಿದ್ದಕ್ಕೆ ” ಆರೋಪವಷ್ಟೇ ಮಾಡಿದ್ದಾರೆ. ಆರೋಪ ಮಾಡಿದಾಕ್ಷಣ ಅದೇ ಸರಿ, ಇಲ್ಲ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಆ ಬಗ್ಗೆ ತನಿಖೆ ಮಾಡಬೇಕಿದೆ. ಶಾಸಕರ ಹೆಸರಿದ್ದರೂ ಕೂಡ ಎಫ್‌ಐಅರ್‌ ದಾಖಲಿಸಲು ನಾನು ಸೂಚನೆ ಕೊಟ್ಟಿದ್ದೇನೆ, ಮಾಡ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಯನಾಡ್ ಭೂಕುಸಿತ : ಅಮಿತ್ ಶಾ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...