Homeಕರ್ನಾಟಕಯಾದಗಿರಿ | ಪಿಎಸ್‌ಐ ಪರಶುರಾಮ್ ಹಠಾತ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಹಠಾತ್ ಸಾವು : ಶಾಸಕ ಚನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ ಪತ್ನಿ

- Advertisement -
- Advertisement -

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದ್ದು, ಆದರೆ ಅವರ ಪತ್ನಿ ಈ ಸಂಬಂಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಪರಶುರಾಮ ಅವರು ಸೈಬರ್ ಕ್ರೈಂ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟ್ರಸ್‌ನ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆದರೆ, ಈ ಪ್ರಕರಣವು ಈಗ ರಾಜ್ಯದ ಗಮನ ಸೆಳೆಯುತ್ತಿದ್ದು, ಹೊಸ ತಿರುವು ಪಡೆದುಕೊಂಡಿದೆ. “ನನ್ನ ಪತಿ, ಪಿಎಸ್‌ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇ ಗೌಡ ಕಾರಣ” ಎಂದು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರಿಗೆ ದೂರು ಸಲ್ಲಿಸಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

“ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಬೇಡಿಕೆ ಇಟ್ಟಿದ್ದರು. ಬಳಿಕ ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದ ಪರಶುರಾಮ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಅವರಿಗೆ ಹೃದಯಾಘಾತವಾಗಿದೆ. ಶಾಸಕರು ಮತ್ತು ಅವರ ಮಗ ವರ್ಗಾವಣೆಗೆ 30-40 ಲಕ್ಷ ರೂ. ಕೇಳಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಜಾತಿ ಮತ್ತು ಹಣಕ್ಕಾಗಿ ನಿಯತ್ತಿನ ಅಧಿಕಾರಿಯ ಸಾವಿಗೆ ಕಾರಣರಾಗಿದ್ದಾರೆ” ಎಂದು ಪತ್ನಿ ಶ್ವೇತಾ ಆರೋಪಿಸಿದ್ದಾರೆ.

“ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಪರಶುರಾಮ 30 ಲಕ್ಷ ರೂ. ನೀಡಿ ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅವರು ಒತ್ತಡಕ್ಕೆ ಒಳಗಾಗಿದ್ದರು. ಸಾಲದ ಸುಳಿಗೆ ಸಿಲುಕಿದ್ದರು. ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್‌ನಲ್ಲಿ ಮಾತನಾಡಿದ್ದರು” ಎಂದು ಕುಟುಂಬಸ್ಥರು ಹೇಳಿದ್ದಾರೆ.

ದಲಿತ ಸಂಘಟನೆಗಳಿಂದ ಪ್ರತಿಭಟನೆ

ತಪ್ಪಿತಸ್ಥ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇಗೌಡರನ್ನು ಕೂಡಲೇ ಬಂಧಿಸುವಂತೆ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಸ್ಥರು ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್‌ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಘಟನೆ ನಡೆದು 16 ಗಂಟೆಯಾದರೂ ಪ್ರಕರಣ ದಾಖಲಿಸಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದಿರುವ ಪ್ರತಿಭಟನಾಕಾರರು, ಖಾಸಗಿ ಆಸ್ಪತ್ರೆಯಿಂದ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸುವಾಗ ಆ್ಯಂಬುಲೆನ್ಸ್‌ ತಡೆದಿದ್ದಾರೆ.

ತನಿಖೆಗೆ ಸೂಚಿಸಿದ್ದೇನೆ : ಗೃಹ ಸಚಿವ ಪರಮೇಶ್ವರ್

ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, “ಈ ಬಗ್ಗೆ ನಾನು ತನಿಖೆಗೆ ಸೂಚನೆ ನೀಡಿದ್ದೇನೆ. ಪರಶುರಾಮ ಅವರು ಸಹಜವಾಗಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಗಳು ಬರುತ್ತಿವೆ. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾವುದೇ ಡೆತ್‌ನೋಟ್ ಕೂಡ ಪತ್ತೆಯಾಗಿಲ್ಲ. ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಕಾರಣ ಕೊಟ್ಟಿದ್ದಾರೆ. ಇವೆಲ್ಲದರ ಬಗ್ಗೆ ತನಿಖೆ ಮಾಡುವಂತೆ ನಾನು ಸೂಚನೆ ಕೊಟ್ಟಿದ್ದೇನೆ. ಏನು ವರದಿ ಬರುತ್ತದೆ ನೋಡೋಣ. ಪತ್ನಿಯ ಆರೋಪಗಳನ್ನೂ ಪರಿಗಣಿಸುತ್ತೇವೆ. ಆ ನಿಟ್ಟಿನಲ್ಲಿಯೂ ತನಿಖೆ ಮಾಡುವಂತೆ ಸೂಚಿಸಿದ್ದೇನೆ” ಎಂದಿದ್ದಾರೆ.

ಎಫ್‌ಐಆರ್ ದಾಖಲಿಸಿಲ್ಲ ಎಂಬ ಬಗ್ಗೆ ಕೇಳಿದ್ದಕ್ಕೆ “ಪೊಲೀಸರು ಎಫ್‌ಐಆರ್ ದಾಖಲಿಸುತ್ತಾರೆ. ಪ್ರಾಥಮಿಕವಾಗಿ ಒಂದಿಷ್ಟು ಸಾಕ್ಷ್ಯಗಳು, ಮಾಹಿತಿಗಳು ಸಂಗ್ರಹಿಸಬೇಕಾಗಿದೆ. ಅದನ್ನು ಮಾಡಿದ ಬಳಿಕ ಎಫ್‌ಐರ್‌ ದಾಖಲಿಸುತ್ತಾರೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಶಾಸಕರಿಗೆ ವರ್ಗಾವಣೆಗೆ 30 ಲಕ್ಷ ರೂಪಾಯಿ ಕೊಟ್ಟಿದ್ದಾರೆ ಎಂಬುವುದಾಗಿ ಅವರ ಪತ್ನಿ ಆರೋಪಿಸಿದ್ದಾರೆ ಎಂದು ಕೇಳಿದ್ದಕ್ಕೆ ” ಆರೋಪವಷ್ಟೇ ಮಾಡಿದ್ದಾರೆ. ಆರೋಪ ಮಾಡಿದಾಕ್ಷಣ ಅದೇ ಸರಿ, ಇಲ್ಲ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಆ ಬಗ್ಗೆ ತನಿಖೆ ಮಾಡಬೇಕಿದೆ. ಶಾಸಕರ ಹೆಸರಿದ್ದರೂ ಕೂಡ ಎಫ್‌ಐಅರ್‌ ದಾಖಲಿಸಲು ನಾನು ಸೂಚನೆ ಕೊಟ್ಟಿದ್ದೇನೆ, ಮಾಡ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಯನಾಡ್ ಭೂಕುಸಿತ : ಅಮಿತ್ ಶಾ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...