Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...