Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....