Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...