Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...