Homeರಾಜಕೀಯಸೋಲಲು ಸಿದ್ಧವಾಗಿರುವ ಅಪ್ಪ-ಮಗನನ್ನು ಸೋಲಿಸಲು ಎದುರಾಳಿಗಳೇ ಇಲ್ಲ!

ಸೋಲಲು ಸಿದ್ಧವಾಗಿರುವ ಅಪ್ಪ-ಮಗನನ್ನು ಸೋಲಿಸಲು ಎದುರಾಳಿಗಳೇ ಇಲ್ಲ!

- Advertisement -
- Advertisement -

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರ ಮೇಲೆ ವಿನಾಕಾರಣ ಚುನಾವಣೆ ಹೇರಿದ ಯಡಿಯೂರಪ್ಪ ಮತ್ತವರ ಪುತ್ರ ಬಸ್ಟಾಂಡ್ ರಾಘು, ಊರೂರು ಸುತ್ತಿ ಓಟು ಕೇಳುತ್ತಿದ್ದರೆ ಸ್ಪರ್ಧೆಗೆ ಅಭ್ಯರ್ಥಿಗಳೇ ಸಿಗದ ದುಸ್ಥಿತಿಯಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಗಾಂಪರಗುಂಪು ತಡಬಡಾಯಿಸುತ್ತ ಜನರಿಗೆ ಮನರಂಜನೆ ನೀಡುತ್ತಿದೆ. ಅನಗತ್ಯವಾಗಿ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಿಗೆ ಮೇಲೆ ಚುನಾವಣಾ ಆಯೋಗ ಚುನಾವಣೆ ಹೇರಿದ್ದರ ಕುರಿತಾಗಿ ಆಗಬೇಕಿದ್ದ ಚರ್ಚೆ ನಡೆಯದೇ ಇರುವುದು ನಾಡಿನ ಪ್ರಜ್ಞಾವಂತ ಸಮೂಹದ ನಿಷ್ಕ್ರಿಯತೆಗೆ ಕನ್ನಡಿಯಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಸುಪುತ್ರ ಬಿ.ವೈ.ರಾಘವೇಂದ್ರನನ್ನ ಕಣಕ್ಕಿಳಿಸಿ ಸಾರೆಕೊಪ್ಪ ಬಂಗಾರಪ್ಪ ಶಾಶ್ವತವಾಗಿ ಮೂಲೆಗುಂಪಾಗುವಂತೆ ಮಾಡಿದರು. ಬಂಗಾರಪ್ಪನವರಿಗೆ ಅದೇ ಕೊನೆಯ ಚುನಾವಣೆಯಾಯಿತು ಹಾಗೂ ಅವರ ರಾಜಕಾರಣವೂ ಕೊನೆಗೊಂಡಿತ್ತು. ಅವತ್ತು ಮಗನಿಗೆ ಬಿಜೆಪಿ ಟಿಕೆಟ್ ಕೊಡಲು ಯಡ್ಡಿ ಆಡಿದ ಆಟ ಒಂದೆರೆಡಲ್ಲ. ದೇವರಾಣೆಗೂ ಮಗನಿಗೆ ಟಿಕೆಟ್ ಕೊಡಲ್ಲ ಎಂದಿದ್ದ ಯಡ್ಡಿ ನಂತರ ರಾಘುವನ್ನು ಕಣಕ್ಕಿಳಿಸಿ ನೂರಾರು ಕೋಟಿ ಹಣ ಖರ್ಚು ಮಾಡಿ ಗೆಲ್ಲಿಸಿದ್ದರು. ಇದೀಗ ವಿರೋಧ ಪಕ್ಷದ ನಾಯಕನಾಗಿರುವ ಸಂದರ್ಭದಲ್ಲಿ ಮತ್ತೆ ಮಗನನ್ನು ಕಣಕ್ಕಿಳಿಸಿ ಮತ್ತೆ ಕೋಟಿ ಕೋಟಿ ಹಣ ಖರ್ಚು ಮಾಡುವ ಲೆಕ್ಕಾಚಾರದಲ್ಲಿದ್ದಾರೆ.
2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಗ್ಯಾಂಗಿಗೆ ಒಂದೊಂದು ಸೀಟೂ ಮುಖ್ಯವಾಗಿತ್ತು. ಯಡ್ಡಿಯನ್ನು ಕೇಂದ್ರ ಕೃಷಿ ಸಚಿವ ಮಾಡುತ್ತೇವೆ ಎಂಬುದಾಗಿ ರಾಜ್ಯದ ಲಿಂಗಾಯಿತರ ಮೂಗಿಗೆ ತುಪ್ಪ ಸವರಿ ಯಡ್ಡಿಯನ್ನು ಗೆಲ್ಲಿಸಲಾಗಿತ್ತು. 3 ಲಕ್ಷ ಮತಗಳ ಅಂತರದಿಂದ ಪರಮಭ್ರಷ್ಟ ಯಡ್ಡಿ ಮೋದಿ ಅಲೆಯನ್ನೂ ಬಳಸಿಕೊಂಡು ಗೆದ್ದು ಬಂದಿದ್ದಾಗಿತ್ತು. ನಂತರ ಕೇಸುಗಳ ನೆವ ಹೇಳಿ ಯಡ್ಡಿಗೆ ಕೇಂದ್ರ ಸಚಿವ ಸ್ಥಾನವನ್ನು ನೀಡದೆ ಸತಾಯಿಸಲಾಗಿತ್ತು. ಮತ್ತೆ ಮುಖ್ಯಮಂತ್ರಿಯ ಕನಸು ಹೊತ್ತು 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಯಡ್ಡಿಗೆ ಮತ್ತೆ ನಿರಾಶೆಯೇ ಗತಿಯಾಯಿತು. ಇದೆಲ್ಲ ಬೆಳವಣಿಗೆನಂತರ ಇದೀಗ ಅನವಶ್ಯಕ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಲೆಕೊಡುವಂತಾಗಿದೆ.
ತಮ್ಮ ಐಲುತನ, ಸ್ವಾರ್ಥದಿಂದಾಗಿ ಶಿವಮೊಗ್ಗ ಜನರ ಮೇಲೆ ಚುನಾವಣೆ ಹೇರುವಂತಾಯಿತು ಎಂಬ ಕನಿಷ್ಟ ಪಾಪಪ್ರಜ್ಞೆಯೂ ಇಲ್ಲದೆ ಯಡ್ಡಿ-ರಾಘು ಜೋಡಿ ಶಿವಮೊಗ್ಗದ ಬೀದಿಗಳಲ್ಲಿ ಓಟು ಕೇಳುತ್ತಾ ಹೊರಟಿದೆ. 2019 ಲೋಕಸಭಾ ಚುನಾವಣೆಯಲ್ಲಿ ರಾಘುವಿಗೆ ಟಿಕೇಟ್ ತಪ್ಪಿಸುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ಈಶ್ವರಪ್ಪ ಮತ್ತೊಂದೆರೆಡು ಹೆಸರುಗಳನ್ನು ತೇಲಿಬಿಟ್ಟು ತಮಾಷೆ ನೋಡುತ್ತಿರುವಾಗಲೇ ಚುನಾವಣೆ ಘೋಷಣೆಯಾಗಿ ರಾಘು ಅಭ್ಯರ್ಥಿಯಾಗುವಂತಾಯಿತು. 6 ತಿಂಗಳ ಅಧಿಕಾರಾವಧಿಗೆ ಸಂಸದರಾಗಲು ಬಿಜೆಪಿಯಲ್ಲೂ ಯಾರೂ ಇಲ್ಲವಾಗಿರುವುದರಿಂದ ಸಂಘ ಪರಿವಾರವೂ ಬೇರೆ ಆಟಕಟ್ಟಲು ಹೋಗಲಿಲ್ಲ. ಇದೀಗ ಈಶ್ವರಪ್ಪ ರಾಘವೇಂದ್ರನನ್ನೂ ಯಾರಿಂದಲೂ ಸೋಲಿಸಲಾಗುವುದಿಲ್ಲ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ.
ರಾಘವೇಂದ್ರನೇ ಗೆಲ್ಲುವ ಅಭ್ಯರ್ಥಿ ಅಂತ ಬಿಜೆಪಿ ಠೇಂಕಾರದಿಂದ ಚುನಾವಣೆಗೆ ಹೊರಟಿದ್ದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ನಡೆಸುತ್ತಿರುವ ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಸ್ಮಶಾನಮೌನ ಮನೆ ಮಾಡಿದೆ. ಎರಡೂ ಪಕ್ಷಗಳಲ್ಲಿ ಸ್ಪರ್ಧೆಗಿಳಿಯಲು ಯಾರೂ ತಯಾರಿಲ.್ಲ ಕೆಲವು ಡಮ್ಮಿ ಹೆಸರುಗಳು ಚಾಲ್ತಿಯಲ್ಲಿ ಇದ್ದಾವಾದರೂ ನಾಮಪತ್ರ ಸಲ್ಲಿಕೆ ಆರಂಭವಾದ ನಂತರವೂ ಮೈತ್ರಿಕೂಟದ ಅಭ್ಯರ್ಥಿಯಾರೆಂಬುದು ಖಚಿತವಾಗಿಲ್ಲ. ಸ್ವಯಂಕೃತಾಪರಾಧದಿಂದಲೇ ಸೋತು ಕುಳಿತಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕಿಮ್ಮನೆ ರತ್ನಾಕರ್ ಸ್ಪರ್ಧೆಗಿಳಿಯಲು ಆಸಕ್ತಿ ತೋರಿದ್ದರಾದರೂ ಅವರು ಹಿಂದೆ ಸರಿದಿದ್ದಾರೆ. ಕಿಮ್ಮನೆ ರತ್ನಾಕರ್ ಕಣಕ್ಕಿಳಿದಿದ್ದರೆ ಚುನಾವಣೆಗೊಂದು ನೈತಿಕ ಆಯಾಮವಾದರೂ ಸಿಗುತ್ತಿತ್ತು. ಪರಮಭ್ರಷ್ಟ ಅಪ್ಪ ಮಗನನ್ನು ಧಿಕ್ಕರಿಸಲು, ಪ್ರಶ್ನಿಸಲು ಮತದಾರರಿಗೆ ಪ್ರಾಮಾಣಿಕ ಅಭ್ಯರ್ಥಿಯೊಬ್ಬರ ಸಿಕ್ಕಿದಂತಾಗುತ್ತಿತ್ತು. ಅದೂ ಆಗಲಿಲ್ಲ. ಮೊದಲಿಂದಲೂ ಕೇಳಿಬರುತ್ತಿರುವ ಹೆಸರು ಜೆಡಿಎಸ್‍ನ ಮಧುಬಂಗಾರಪ್ಪರದ್ದು. ಚುನಾವಣೆ ಘೋಷಣೆಯಾದದ್ದೇ ತಡ ಅವರು ಕುಟುಂಬ ಸಮೇತ ಯೂರೋಪ ಪ್ರವಾಸ ಹೊರಟುಬಿಟ್ಟರು. ಬೇಳೂರು ಗೋಪಾಲಕೃಷ್ಟ ಸ್ಪರ್ಧಿಸುವ ಹುಮ್ಮಸ್ಸಿನಲ್ಲಿದ್ದಾರಾದರೂ ಅವರನ್ನೂ ಕಾಂಗ್ರೆಸ್‍ಗೆ ಕರೆತಂದಿದ್ದ ಕಾಗೋಡು ತಿಮ್ಮಪ್ಪರೇ ಅಡ್ಡಿಯಾಗಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ 2019ರ ಲೋಕಸಭಾ ಚುನಾವಣೆ ಎದುರಿಸಲು ತೀರ್ಮಾನ ಮಾಡಿದ್ದಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಬೇಕೆಂಬ ಕುರಿತು ಚರ್ಚೆ ನಡೆದಿತ್ತು. ಇದೀಗ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿಗಳೆಲ್ಲ ಹಿಂದೆ ಸರಿಯುತ್ತಿರುವುದರಿಂದಾಗಿ ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ ಬಿಟ್ಟು ಕೊಡಲು ಮಾತುಕತೆ ನಡೆದಿದೆ.
ಸೊರಬದಲ್ಲಿ ಸೋತನಂತರ ಮಧುಬಂಗಾರಪ್ಪ ಜಿಲ್ಲೆಗೂ ಬರುತ್ತಿಲ್ಲ, ಸೊರಬ ಕ್ಷೇತ್ರದಲ್ಲೂ ಕಾಣಿಸಿಕೊಂಡಿಲ್ಲ. ಗೆದ್ದುಮೈತ್ರಿ ಸರ್ಕಾರದಲ್ಲಿ ಸಚಿವರಾಗುವ ಆತುರದಲ್ಲಿದ್ದ ಮಧುಬಂಗಾರಪ್ಪ ಸೋತನಂತರ ಎಂಎಲ್‍ಸಿಯಾಗಲು, ರಾಜಕೀಯ ಕಾರ್ಯದರ್ಶಿಯಂತಹ ಸ್ಥಾನಮಾನ ಪಡೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಗೂಟದ ಕಾರಿನಲ್ಲಿ ಸೊರಬ ಕ್ಷೇತ್ರಕ್ಕೆ ಕಾಲಿಡುತ್ತೇನೆ ಎಂದು ಸೋತ ನಂತರವೂ ಹೇಳಿಕೊಂಡಿದ್ದ ಮಧುಬಂಗಾರಪ್ಪ ಜೆಡಿಎಸ್‍ನ ಅಪ್ಪ-ಮಗನ ವಿರುದ್ದ ಮುನಿಸಿಕೊಂಡಿದ್ದಾರೆ. ಈಗ ಕಾಗೋಡು ತಿಮ್ಮಪ್ಪ ಸಿದ್ದರಾಮಯ್ಯ ಇಬ್ಬರೂ ಸೇರಿ ಮಧುವನ್ನೂ ಜೆಡಿಎಸ್‍ನಿಂದಲಾದರೂ ಸ್ವರ್ಧಿಸು, ಕಾಂಗ್ರೆಸ್‍ನಿಂದಲಾದರೂ ಸ್ಪರ್ಧೆಗೆ ಇಳಿಯುವಂತೆ ಮನವೊಲಿಸುತ್ತಿದ್ದಾರೆ. ಚುನಾವಣೆ ಖರ್ಚಿಗೆ 25ಕೋಟಿ ಕೊಡುವುದಾದರೆ ಸ್ಪರ್ಧಿಸುವುದಾಗಿ ಮಧುಬಂಗಾರಪ್ಪ ಷರತ್ತು ಹಾಕಿದ್ದಾರೆ. ವಿದೇಶಿ ಪ್ರವಾಸ ಮೊಟಕುಗೊಳಿಸಿ ಮಧು ವಾಪಸ್ಸಾದ ನಂತರವಷ್ಟೇ ಅವರ ಸ್ಪರ್ಧೆ ಕುರಿತು ಅಂತಿಮ ತೀರ್ಮಾನ ಪ್ರಕಟವಾಗಲಿದೆ. ಹೀಗಾಗಿ ಮಧು ಸ್ಪರ್ಧೆಗೆ ಒಪ್ಪದಿದ್ದರೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಲಗೋಡು ರತ್ನಾಕರ್‍ರನ್ನೂ ಕಣಕ್ಕಿಳಿಸಲು ಕಾಂಗ್ರೆಸ್ ವರಿಷ್ಟರು ತಯಾರಿ ನಡೆಸಿದ್ದಾರೆ. ಒಟ್ಟಾರೆ ಈಡಿಗ ಸಮುದಾಯಕ್ಕೆ ಟಿಕೆಟ್ ನೀಡುವ ತೀರ್ಮಾನವಾಗಿದೆ.
ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ 6,06,216ಮತ ಪಡೆದು ಗೆದ್ದಿದ್ದರು. ಆಗ ಮೋದಿ ಹವಾ ಜೋರಾಗಿತ್ತು. ಕಾಂಗ್ರೆಸ್‍ನ ಮಂಜುನಾಥ ಭಂಡಾರಿ 2,42,911 ಮತ, ಗೀತಾ ಶಿವರಾಜ್ ಕುಮಾರ್ 2,40,636 ಮತ ಪಡೆದಿದ್ದರು. 2014ರ ಚುನಾವಣೆಯಲ್ಲಿ ಬಂಗಾರಪ್ಪ ಸ್ಪರ್ಧಿಸಿ ಸೋತಾಗ ರಾಘವೇಂದ್ರ ಗೆದ್ದದ್ದು 52 ಸಾವಿರ ಮತಗಳ ಅಂತರದಿಂದ. ಕಾಂಗ್ರೆಸ್‍ನ ಈಡಿಗ ಸಮುದಾಯದ ಓಟ್ ಬ್ಯಾಂಕ್ ಅನ್ನು ಯಡ್ಡಿ ವ್ಯವಸ್ಥಿತವಾಗಿ ಒಡೆದು ಹಾಕಿದ್ದೇ ಜಿಲ್ಲೆಯಲ್ಲಿ ಬಿಜೆಪಿ ಬೆಳೆಯಲು ಕಾರಣವಾಗಿತ್ತು.
ಎಷ್ಟು ಕೋಟಿ ಖರ್ಚಾದರೂ ಸರಿ ಗೆಲ್ಲುತ್ತೇವೆ ಎಂಬ ಠೇಂಕಾರದಲ್ಲಿ ಯಡ್ಡಿ-ರಾಘು ಜೋಡಿ ಹೊರಟಿದೆ. ಚುನಾವಣೆಗೆ ಮೊದಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸೋಲೊಪ್ಪಿದೆ. ಆದರೆ ಜಿಲ್ಲೆಯ ಜನ ಮಾತ್ರ ಬಿಜೆಪಿಯನ್ನೇ ಗೆಲ್ಲಿಸುವ ಹಠದಲ್ಲಿ ಇಲ್ಲ. ಆದರೆ ಚುನಾವಣೆಗೆ ಮೊದಲೇ ಸೋಲೋಪ್ಪಿಕೊಳ್ಳುವವರನ್ನು ಯಾರು ತಾನೆ ಬಚಾವು ಮಾಡಲು ಸಾಧ್ಯ. ಇದು ಸದÀ್ಯದ ಶಿವಮೊಗ್ಗ ಲೋಕಸಭಾ ಚುನಾವಣಾ ಚಿತ್ರಣ.

– ಈಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...