Homeರಾಜಕೀಯಸೋಲಲು ಸಿದ್ಧವಾಗಿರುವ ಅಪ್ಪ-ಮಗನನ್ನು ಸೋಲಿಸಲು ಎದುರಾಳಿಗಳೇ ಇಲ್ಲ!

ಸೋಲಲು ಸಿದ್ಧವಾಗಿರುವ ಅಪ್ಪ-ಮಗನನ್ನು ಸೋಲಿಸಲು ಎದುರಾಳಿಗಳೇ ಇಲ್ಲ!

- Advertisement -
- Advertisement -

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರ ಮೇಲೆ ವಿನಾಕಾರಣ ಚುನಾವಣೆ ಹೇರಿದ ಯಡಿಯೂರಪ್ಪ ಮತ್ತವರ ಪುತ್ರ ಬಸ್ಟಾಂಡ್ ರಾಘು, ಊರೂರು ಸುತ್ತಿ ಓಟು ಕೇಳುತ್ತಿದ್ದರೆ ಸ್ಪರ್ಧೆಗೆ ಅಭ್ಯರ್ಥಿಗಳೇ ಸಿಗದ ದುಸ್ಥಿತಿಯಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಗಾಂಪರಗುಂಪು ತಡಬಡಾಯಿಸುತ್ತ ಜನರಿಗೆ ಮನರಂಜನೆ ನೀಡುತ್ತಿದೆ. ಅನಗತ್ಯವಾಗಿ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಿಗೆ ಮೇಲೆ ಚುನಾವಣಾ ಆಯೋಗ ಚುನಾವಣೆ ಹೇರಿದ್ದರ ಕುರಿತಾಗಿ ಆಗಬೇಕಿದ್ದ ಚರ್ಚೆ ನಡೆಯದೇ ಇರುವುದು ನಾಡಿನ ಪ್ರಜ್ಞಾವಂತ ಸಮೂಹದ ನಿಷ್ಕ್ರಿಯತೆಗೆ ಕನ್ನಡಿಯಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಸುಪುತ್ರ ಬಿ.ವೈ.ರಾಘವೇಂದ್ರನನ್ನ ಕಣಕ್ಕಿಳಿಸಿ ಸಾರೆಕೊಪ್ಪ ಬಂಗಾರಪ್ಪ ಶಾಶ್ವತವಾಗಿ ಮೂಲೆಗುಂಪಾಗುವಂತೆ ಮಾಡಿದರು. ಬಂಗಾರಪ್ಪನವರಿಗೆ ಅದೇ ಕೊನೆಯ ಚುನಾವಣೆಯಾಯಿತು ಹಾಗೂ ಅವರ ರಾಜಕಾರಣವೂ ಕೊನೆಗೊಂಡಿತ್ತು. ಅವತ್ತು ಮಗನಿಗೆ ಬಿಜೆಪಿ ಟಿಕೆಟ್ ಕೊಡಲು ಯಡ್ಡಿ ಆಡಿದ ಆಟ ಒಂದೆರೆಡಲ್ಲ. ದೇವರಾಣೆಗೂ ಮಗನಿಗೆ ಟಿಕೆಟ್ ಕೊಡಲ್ಲ ಎಂದಿದ್ದ ಯಡ್ಡಿ ನಂತರ ರಾಘುವನ್ನು ಕಣಕ್ಕಿಳಿಸಿ ನೂರಾರು ಕೋಟಿ ಹಣ ಖರ್ಚು ಮಾಡಿ ಗೆಲ್ಲಿಸಿದ್ದರು. ಇದೀಗ ವಿರೋಧ ಪಕ್ಷದ ನಾಯಕನಾಗಿರುವ ಸಂದರ್ಭದಲ್ಲಿ ಮತ್ತೆ ಮಗನನ್ನು ಕಣಕ್ಕಿಳಿಸಿ ಮತ್ತೆ ಕೋಟಿ ಕೋಟಿ ಹಣ ಖರ್ಚು ಮಾಡುವ ಲೆಕ್ಕಾಚಾರದಲ್ಲಿದ್ದಾರೆ.
2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಗ್ಯಾಂಗಿಗೆ ಒಂದೊಂದು ಸೀಟೂ ಮುಖ್ಯವಾಗಿತ್ತು. ಯಡ್ಡಿಯನ್ನು ಕೇಂದ್ರ ಕೃಷಿ ಸಚಿವ ಮಾಡುತ್ತೇವೆ ಎಂಬುದಾಗಿ ರಾಜ್ಯದ ಲಿಂಗಾಯಿತರ ಮೂಗಿಗೆ ತುಪ್ಪ ಸವರಿ ಯಡ್ಡಿಯನ್ನು ಗೆಲ್ಲಿಸಲಾಗಿತ್ತು. 3 ಲಕ್ಷ ಮತಗಳ ಅಂತರದಿಂದ ಪರಮಭ್ರಷ್ಟ ಯಡ್ಡಿ ಮೋದಿ ಅಲೆಯನ್ನೂ ಬಳಸಿಕೊಂಡು ಗೆದ್ದು ಬಂದಿದ್ದಾಗಿತ್ತು. ನಂತರ ಕೇಸುಗಳ ನೆವ ಹೇಳಿ ಯಡ್ಡಿಗೆ ಕೇಂದ್ರ ಸಚಿವ ಸ್ಥಾನವನ್ನು ನೀಡದೆ ಸತಾಯಿಸಲಾಗಿತ್ತು. ಮತ್ತೆ ಮುಖ್ಯಮಂತ್ರಿಯ ಕನಸು ಹೊತ್ತು 2018ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಯಡ್ಡಿಗೆ ಮತ್ತೆ ನಿರಾಶೆಯೇ ಗತಿಯಾಯಿತು. ಇದೆಲ್ಲ ಬೆಳವಣಿಗೆನಂತರ ಇದೀಗ ಅನವಶ್ಯಕ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಲೆಕೊಡುವಂತಾಗಿದೆ.
ತಮ್ಮ ಐಲುತನ, ಸ್ವಾರ್ಥದಿಂದಾಗಿ ಶಿವಮೊಗ್ಗ ಜನರ ಮೇಲೆ ಚುನಾವಣೆ ಹೇರುವಂತಾಯಿತು ಎಂಬ ಕನಿಷ್ಟ ಪಾಪಪ್ರಜ್ಞೆಯೂ ಇಲ್ಲದೆ ಯಡ್ಡಿ-ರಾಘು ಜೋಡಿ ಶಿವಮೊಗ್ಗದ ಬೀದಿಗಳಲ್ಲಿ ಓಟು ಕೇಳುತ್ತಾ ಹೊರಟಿದೆ. 2019 ಲೋಕಸಭಾ ಚುನಾವಣೆಯಲ್ಲಿ ರಾಘುವಿಗೆ ಟಿಕೇಟ್ ತಪ್ಪಿಸುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ಈಶ್ವರಪ್ಪ ಮತ್ತೊಂದೆರೆಡು ಹೆಸರುಗಳನ್ನು ತೇಲಿಬಿಟ್ಟು ತಮಾಷೆ ನೋಡುತ್ತಿರುವಾಗಲೇ ಚುನಾವಣೆ ಘೋಷಣೆಯಾಗಿ ರಾಘು ಅಭ್ಯರ್ಥಿಯಾಗುವಂತಾಯಿತು. 6 ತಿಂಗಳ ಅಧಿಕಾರಾವಧಿಗೆ ಸಂಸದರಾಗಲು ಬಿಜೆಪಿಯಲ್ಲೂ ಯಾರೂ ಇಲ್ಲವಾಗಿರುವುದರಿಂದ ಸಂಘ ಪರಿವಾರವೂ ಬೇರೆ ಆಟಕಟ್ಟಲು ಹೋಗಲಿಲ್ಲ. ಇದೀಗ ಈಶ್ವರಪ್ಪ ರಾಘವೇಂದ್ರನನ್ನೂ ಯಾರಿಂದಲೂ ಸೋಲಿಸಲಾಗುವುದಿಲ್ಲ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ.
ರಾಘವೇಂದ್ರನೇ ಗೆಲ್ಲುವ ಅಭ್ಯರ್ಥಿ ಅಂತ ಬಿಜೆಪಿ ಠೇಂಕಾರದಿಂದ ಚುನಾವಣೆಗೆ ಹೊರಟಿದ್ದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ನಡೆಸುತ್ತಿರುವ ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಸ್ಮಶಾನಮೌನ ಮನೆ ಮಾಡಿದೆ. ಎರಡೂ ಪಕ್ಷಗಳಲ್ಲಿ ಸ್ಪರ್ಧೆಗಿಳಿಯಲು ಯಾರೂ ತಯಾರಿಲ.್ಲ ಕೆಲವು ಡಮ್ಮಿ ಹೆಸರುಗಳು ಚಾಲ್ತಿಯಲ್ಲಿ ಇದ್ದಾವಾದರೂ ನಾಮಪತ್ರ ಸಲ್ಲಿಕೆ ಆರಂಭವಾದ ನಂತರವೂ ಮೈತ್ರಿಕೂಟದ ಅಭ್ಯರ್ಥಿಯಾರೆಂಬುದು ಖಚಿತವಾಗಿಲ್ಲ. ಸ್ವಯಂಕೃತಾಪರಾಧದಿಂದಲೇ ಸೋತು ಕುಳಿತಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕಿಮ್ಮನೆ ರತ್ನಾಕರ್ ಸ್ಪರ್ಧೆಗಿಳಿಯಲು ಆಸಕ್ತಿ ತೋರಿದ್ದರಾದರೂ ಅವರು ಹಿಂದೆ ಸರಿದಿದ್ದಾರೆ. ಕಿಮ್ಮನೆ ರತ್ನಾಕರ್ ಕಣಕ್ಕಿಳಿದಿದ್ದರೆ ಚುನಾವಣೆಗೊಂದು ನೈತಿಕ ಆಯಾಮವಾದರೂ ಸಿಗುತ್ತಿತ್ತು. ಪರಮಭ್ರಷ್ಟ ಅಪ್ಪ ಮಗನನ್ನು ಧಿಕ್ಕರಿಸಲು, ಪ್ರಶ್ನಿಸಲು ಮತದಾರರಿಗೆ ಪ್ರಾಮಾಣಿಕ ಅಭ್ಯರ್ಥಿಯೊಬ್ಬರ ಸಿಕ್ಕಿದಂತಾಗುತ್ತಿತ್ತು. ಅದೂ ಆಗಲಿಲ್ಲ. ಮೊದಲಿಂದಲೂ ಕೇಳಿಬರುತ್ತಿರುವ ಹೆಸರು ಜೆಡಿಎಸ್‍ನ ಮಧುಬಂಗಾರಪ್ಪರದ್ದು. ಚುನಾವಣೆ ಘೋಷಣೆಯಾದದ್ದೇ ತಡ ಅವರು ಕುಟುಂಬ ಸಮೇತ ಯೂರೋಪ ಪ್ರವಾಸ ಹೊರಟುಬಿಟ್ಟರು. ಬೇಳೂರು ಗೋಪಾಲಕೃಷ್ಟ ಸ್ಪರ್ಧಿಸುವ ಹುಮ್ಮಸ್ಸಿನಲ್ಲಿದ್ದಾರಾದರೂ ಅವರನ್ನೂ ಕಾಂಗ್ರೆಸ್‍ಗೆ ಕರೆತಂದಿದ್ದ ಕಾಗೋಡು ತಿಮ್ಮಪ್ಪರೇ ಅಡ್ಡಿಯಾಗಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ 2019ರ ಲೋಕಸಭಾ ಚುನಾವಣೆ ಎದುರಿಸಲು ತೀರ್ಮಾನ ಮಾಡಿದ್ದಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಬೇಕೆಂಬ ಕುರಿತು ಚರ್ಚೆ ನಡೆದಿತ್ತು. ಇದೀಗ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿಗಳೆಲ್ಲ ಹಿಂದೆ ಸರಿಯುತ್ತಿರುವುದರಿಂದಾಗಿ ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ ಬಿಟ್ಟು ಕೊಡಲು ಮಾತುಕತೆ ನಡೆದಿದೆ.
ಸೊರಬದಲ್ಲಿ ಸೋತನಂತರ ಮಧುಬಂಗಾರಪ್ಪ ಜಿಲ್ಲೆಗೂ ಬರುತ್ತಿಲ್ಲ, ಸೊರಬ ಕ್ಷೇತ್ರದಲ್ಲೂ ಕಾಣಿಸಿಕೊಂಡಿಲ್ಲ. ಗೆದ್ದುಮೈತ್ರಿ ಸರ್ಕಾರದಲ್ಲಿ ಸಚಿವರಾಗುವ ಆತುರದಲ್ಲಿದ್ದ ಮಧುಬಂಗಾರಪ್ಪ ಸೋತನಂತರ ಎಂಎಲ್‍ಸಿಯಾಗಲು, ರಾಜಕೀಯ ಕಾರ್ಯದರ್ಶಿಯಂತಹ ಸ್ಥಾನಮಾನ ಪಡೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಗೂಟದ ಕಾರಿನಲ್ಲಿ ಸೊರಬ ಕ್ಷೇತ್ರಕ್ಕೆ ಕಾಲಿಡುತ್ತೇನೆ ಎಂದು ಸೋತ ನಂತರವೂ ಹೇಳಿಕೊಂಡಿದ್ದ ಮಧುಬಂಗಾರಪ್ಪ ಜೆಡಿಎಸ್‍ನ ಅಪ್ಪ-ಮಗನ ವಿರುದ್ದ ಮುನಿಸಿಕೊಂಡಿದ್ದಾರೆ. ಈಗ ಕಾಗೋಡು ತಿಮ್ಮಪ್ಪ ಸಿದ್ದರಾಮಯ್ಯ ಇಬ್ಬರೂ ಸೇರಿ ಮಧುವನ್ನೂ ಜೆಡಿಎಸ್‍ನಿಂದಲಾದರೂ ಸ್ವರ್ಧಿಸು, ಕಾಂಗ್ರೆಸ್‍ನಿಂದಲಾದರೂ ಸ್ಪರ್ಧೆಗೆ ಇಳಿಯುವಂತೆ ಮನವೊಲಿಸುತ್ತಿದ್ದಾರೆ. ಚುನಾವಣೆ ಖರ್ಚಿಗೆ 25ಕೋಟಿ ಕೊಡುವುದಾದರೆ ಸ್ಪರ್ಧಿಸುವುದಾಗಿ ಮಧುಬಂಗಾರಪ್ಪ ಷರತ್ತು ಹಾಕಿದ್ದಾರೆ. ವಿದೇಶಿ ಪ್ರವಾಸ ಮೊಟಕುಗೊಳಿಸಿ ಮಧು ವಾಪಸ್ಸಾದ ನಂತರವಷ್ಟೇ ಅವರ ಸ್ಪರ್ಧೆ ಕುರಿತು ಅಂತಿಮ ತೀರ್ಮಾನ ಪ್ರಕಟವಾಗಲಿದೆ. ಹೀಗಾಗಿ ಮಧು ಸ್ಪರ್ಧೆಗೆ ಒಪ್ಪದಿದ್ದರೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಲಗೋಡು ರತ್ನಾಕರ್‍ರನ್ನೂ ಕಣಕ್ಕಿಳಿಸಲು ಕಾಂಗ್ರೆಸ್ ವರಿಷ್ಟರು ತಯಾರಿ ನಡೆಸಿದ್ದಾರೆ. ಒಟ್ಟಾರೆ ಈಡಿಗ ಸಮುದಾಯಕ್ಕೆ ಟಿಕೆಟ್ ನೀಡುವ ತೀರ್ಮಾನವಾಗಿದೆ.
ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ 6,06,216ಮತ ಪಡೆದು ಗೆದ್ದಿದ್ದರು. ಆಗ ಮೋದಿ ಹವಾ ಜೋರಾಗಿತ್ತು. ಕಾಂಗ್ರೆಸ್‍ನ ಮಂಜುನಾಥ ಭಂಡಾರಿ 2,42,911 ಮತ, ಗೀತಾ ಶಿವರಾಜ್ ಕುಮಾರ್ 2,40,636 ಮತ ಪಡೆದಿದ್ದರು. 2014ರ ಚುನಾವಣೆಯಲ್ಲಿ ಬಂಗಾರಪ್ಪ ಸ್ಪರ್ಧಿಸಿ ಸೋತಾಗ ರಾಘವೇಂದ್ರ ಗೆದ್ದದ್ದು 52 ಸಾವಿರ ಮತಗಳ ಅಂತರದಿಂದ. ಕಾಂಗ್ರೆಸ್‍ನ ಈಡಿಗ ಸಮುದಾಯದ ಓಟ್ ಬ್ಯಾಂಕ್ ಅನ್ನು ಯಡ್ಡಿ ವ್ಯವಸ್ಥಿತವಾಗಿ ಒಡೆದು ಹಾಕಿದ್ದೇ ಜಿಲ್ಲೆಯಲ್ಲಿ ಬಿಜೆಪಿ ಬೆಳೆಯಲು ಕಾರಣವಾಗಿತ್ತು.
ಎಷ್ಟು ಕೋಟಿ ಖರ್ಚಾದರೂ ಸರಿ ಗೆಲ್ಲುತ್ತೇವೆ ಎಂಬ ಠೇಂಕಾರದಲ್ಲಿ ಯಡ್ಡಿ-ರಾಘು ಜೋಡಿ ಹೊರಟಿದೆ. ಚುನಾವಣೆಗೆ ಮೊದಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸೋಲೊಪ್ಪಿದೆ. ಆದರೆ ಜಿಲ್ಲೆಯ ಜನ ಮಾತ್ರ ಬಿಜೆಪಿಯನ್ನೇ ಗೆಲ್ಲಿಸುವ ಹಠದಲ್ಲಿ ಇಲ್ಲ. ಆದರೆ ಚುನಾವಣೆಗೆ ಮೊದಲೇ ಸೋಲೋಪ್ಪಿಕೊಳ್ಳುವವರನ್ನು ಯಾರು ತಾನೆ ಬಚಾವು ಮಾಡಲು ಸಾಧ್ಯ. ಇದು ಸದÀ್ಯದ ಶಿವಮೊಗ್ಗ ಲೋಕಸಭಾ ಚುನಾವಣಾ ಚಿತ್ರಣ.

– ಈಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...