Homeಕರ್ನಾಟಕಯಡ್ಯೂರಪ್ಪಗೆ ರಾಜ್ಯಪಾಲ ಹುದ್ದೆ!? ಸಿಎಂ ಗಾದಿಯಿಂದ ಕೆಳಗಿಳಿಸಲು ನಡೆದಿದೆಯಾ ಹೊಸ ಮಸಲತ್ತು...

ಯಡ್ಯೂರಪ್ಪಗೆ ರಾಜ್ಯಪಾಲ ಹುದ್ದೆ!? ಸಿಎಂ ಗಾದಿಯಿಂದ ಕೆಳಗಿಳಿಸಲು ನಡೆದಿದೆಯಾ ಹೊಸ ಮಸಲತ್ತು…

ಪ್ರಮಾಣ ವಚನದ ವಿಳಂಬ ಇರಬಹುದು, ಸಂಪುಟ ರಚನೆಗೆ ಕೊಕ್ಕೆ ಹಾಕಿದ್ದಿರಬಹುದು, ಮೂವರು ಡಿಸಿಎಂ ನೇಮಕ, ರಾಜ್ಯಾಧ್ಯಕ್ಷರ ಶಾಕಿಂಗ್ ನೇಮಕ, ಮೇಯರ್ ಆಯ್ಕೆ, ನೆರೆ ಪರಿಹಾರದ ನಿರ್ಲಕ್ಷ್ಯ ಹೀಗೆ ಸಿಎಂ ಆದ ನಂತರದಲ್ಲಿ ಯಡ್ಯೂರಪ್ಪನವರು ತಮ್ಮದೇ ಪಕ್ಷದಿಂದ ಅನುಭವಿಸುತ್ತಿರುವ ಅವಮಾನಗಳು ಒಂದೆರಡಲ್ಲ..

- Advertisement -
- Advertisement -

ಯಡ್ಯೂರಪ್ಪರನ್ನು ರಾಜ್ಯ ರಾಜಕಾರಣದಲ್ಲಿ ಮೂಲೆಗುಂಪು ಮಾಡಲು ಸಕಲ ತಯಾರಿ ನಡೆಸಿರುವ ಬಿಜೆಪಿ ಹೈಕಮಾಂಡ್, ಅದಕ್ಕಾಗಿ ಅವರನ್ನು ಯಾವುದಾದರೊಂದು ರಾಜ್ಯಕ್ಕೆ ಗೌರ್ನರ್ ಆಗಿ ನೇಮಿಸುವ ಯೋಜನೆ ಹಾಕಿಕೊಂಡಿದೆಯಾ? ಇಂತದ್ದೊಂದು ಚರ್ಚೆ ಮಲ್ಲೇಶ್ವರಂನಲ್ಲಿರುವ ಬಿಜೆಪಿಯ ರಾಜ್ಯ ಕಚೇರಿ ಜಗನ್ನಾಥ್ ಭವನದ ಆಸುಪಾಸಿನಲ್ಲಿ ಹರಿದಾಡುತ್ತಿದೆ.

ಹೌದು, ಈಗ ಕೇಳಿಬರುತ್ತಿರುವ ವರ್ತಮಾನ ನಿಜವೇ ಆದಲ್ಲಿ ಯಡ್ಯೂರಪ್ಪನವರನ್ನು ಗೋವಾ ಅಥವಾ ಜಾರ್ಖಂಡ್, ಈ ಎರಡರಲ್ಲಿ ಯಾವುದಾದರು ಒಂದು ರಾಜ್ಯಕ್ಕೆ ಗೌರ್ನರ್ ಆಗಿ ಆಯ್ಕೆ ಮಾಡಲು ತಯಾರಿಗಳು ನಡೆದಿವೆ. ಬಿಜೆಪಿ ಹೈಕಮಾಂಡ್‌ಗೆ, ಕರ್ನಾಟಕದ ಯಡ್ಯೂರಪ್ಪನವರ ಸರ್ಕಾರ ಬೇಡದ ಕೂಸು. ಅದಕ್ಕಾಗಿ ಎಷ್ಟೆಲ್ಲ ನಿರ್ಲಕ್ಷ್ಯ ತೋರಲು ಸಾಧ್ಯವೋ ಅಷ್ಟೂ ನಿರ್ಲಕ್ಷ್ಯದೊಂದಿಗೆ ಯಡ್ಯೂರಪ್ಪನವರಿಗೆ ನಿರಂತರವಾಗಿ ಅವಮಾನ ಮಾಡಲಾಗುತ್ತಿದೆ. ಪ್ರಮಾಣ ವಚನದ ವಿಳಂಬ ಇರಬಹುದು, ಸಂಪುಟ ರಚನೆಗೆ ಕೊಕ್ಕೆ ಹಾಕಿದ್ದಿರಬಹುದು, ಮೂವರು ಡಿಸಿಎಂ ನೇಮಕ, ರಾಜ್ಯಾಧ್ಯಕ್ಷರ ಶಾಕಿಂಗ್ ನೇಮಕ, ಮೇಯರ್ ಆಯ್ಕೆ, ನೆರೆ ಪರಿಹಾರದ ನಿರ್ಲಕ್ಷ್ಯ ಹೀಗೆ ಸಿಎಂ ಆದ ನಂತರದಲ್ಲಿ ಯಡ್ಯೂರಪ್ಪನವರು ತಮ್ಮದೇ ಪಕ್ಷದಿಂದ ಅನುಭವಿಸುತ್ತಿರುವ ಅವಮಾನಗಳು ಒಂದೆರಡಲ್ಲ. ಅದಕ್ಕೆಲ್ಲ ಕಾರಣ ಬಿ.ಎಲ್.ಸಂತೋಷ್ ಎಂಬ ಆರೆಸ್ಸೆಸ್ ತಂತ್ರಗಾರ!

ಬಹಳ ದಿನಗಳಿಂದಲೇ ಕರ್ನಾಟಕ ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಈ ಸಂತೋಷ್ ಹಂತಹಂತವಾಗಿ ರಾಜ್ಯ ಬಿಜೆಪಿಯನ್ನು ತನ್ನ ಕಬ್ಜಾಕ್ಕೆ ತೆಗೆದುಕೊಳ್ಳುತ್ತಾ ಬರುತ್ತಿದ್ದಾರೆ. ಯಡ್ಯೂರಪ್ಪ ಸಿಎಂ ಆಗುವುದು ನಿಕ್ಕಿಯಾಗುವುದಕ್ಕು ಕೆಲ ದಿನಗಳ ಮೊದಲಷ್ಟೇ ತಾನು ಬಿಜೆಪಿ ‘ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ’ಯಂತಹ ಪವರ್‌ಫುಲ್ ಹುದ್ದೆಗೆ ನೇಮಕವಾಗುವಂತೆ ನೋಡಿಕೊಂಡ ಸಂತೋಷ್, ಯಡ್ಯೂರಪ್ಪರನ್ನು ನಿಯಂತ್ರಿಸಲು ಬೇಕಾದ ಶಸ್ತ್ರಗಳನ್ನು ತನ್ನ ಬತ್ತಳಿಕೆಗೆ ಸೇರ್ಪಡೆ ಮಾಡಿಕೊಂಡಿದ್ದರು. ‘ಬ್ರಾಹ್ಮಣ’ ಜಾತಿಯ ಜೊತೆಗೆ ಸಂಘ ಪರಿವಾರದ ಪವರ್‌ಫುಲ್ ಬ್ಯಾಕ್‌ಅಪ್ ಇರುವ ಸಂತೋಷ್‌ರನ್ನು ಕರ್ನಾಟಕದಲ್ಲಿ ಸಿಎಂ ಮಾಡಿ, ಆ ಮೂಲಕ ಲಿಂಗಾಯತ ಜಾತಿಯ ಹಂಗೇ ಇಲ್ಲದೆ ಹಿಂದೂತ್ವದ ಅಜೆಂಡಾದಲ್ಲಿ ಕರ್ನಾಟಕವನ್ನು ಕಬ್ಜಾ ಮಾಡಿಕೊಳ್ಳಬೇಕೆನ್ನುವುದು ನಾಗ್ಪುರ ಹೆಡ್‌ಕ್ವಾರ್ಟರ್‌ನ ಲೆಕ್ಕಾಚಾರ.

ಹಾಗಂತ, ಯಡ್ಯೂರಪ್ಪನವರನ್ನು ಏಕಾಏಕಿ ಮೂಲೆಗುಂಪು ಮಾಡಿದರೆ ಕರ್ನಾಟಕದ ಮಟ್ಟಿಗೆ ತನ್ನ ಸುಭದ್ರ ಓಟ್‌ಬ್ಯಾಂಕ್ ಆದ ಲಿಂಗಾಯತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತೆ ಅನ್ನೋದು ಬಿಜೆಪಿಗೆ ಗೊತ್ತಿಲ್ಲದ ಸಂಗತಿಯೇನಲ್ಲ. ವೀರೇಂದ್ರ ಪಾಟೀಲರ ವಿಚಾರದಲ್ಲಿ ಇಂಥಾ ತಪ್ಪು ಮಾಡಿದ ಕಾಂಗ್ರೆಸ್, ಲಿಂಗಾಯತರ ಒಲವು ಕಳೆದುಕೊಂಡ ಇತಿಹಾಸ ಕರ್ನಾಟಕದ ರಾಜಕೀಯ ಪುಟಗಳಲ್ಲಿದೆ. ಈಗಾಗಲೇ ಕೆಲ ಲಿಂಗಾಯತ ಸ್ವಾಮೀಜಿಗಳು ಮತ್ತು ಬಿಜೆಪಿ ಯುವ ಮೋರ್ಚಾದ ಉಪಾಧ್ಯಕರಂತಹ ಜಾತ್ಯಸ್ಥ ಅಭಿಮಾನಿಗಳು ಬಹಿರಂಗವಾಗಿಯೇ `ಯಡ್ಯೂರಪ್ಪನವರಿಗೆ ತೊಂದ್ರೆ ಕೊಟ್ಟರೆ ಸುಮ್ಮನಿರಲ್ಲ’ ಎಂಬ ಸಂದೇಶಗಳನ್ನು ದಾಟಿಸುತ್ತಿದ್ದಾರೆ.  ಹಾಗಾಗಿ ಅವರನ್ನು ಬೇರೊಂದು ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಕಳಿಸಿಬಿಟ್ಟರೆ, ಗೌರವಯುತವಾಗೇ ಅವರ ರಾಜಕೀಯವನ್ನು ಸಮಾಧಿ ಮಾಡಬಹುದು, ಜೊತೆಗೆ ಲಿಂಗಾಯತರ ವಿರೋಧವೂ ಬರುವುದಿಲ್ಲ ಅನ್ನೋದು ಬಿಜೆಪಿಯ ಲೇಟೆಸ್ಟ್ ಲೆಕ್ಕಾಚಾರ.

ಸಾಮಾನ್ಯವಾಗಿ ರಾಜ್ಯಪಾಲರ ಅಧಿಕಾರಾವಧಿ ಐದು ವರ್ಷಗಳು. ಕೆಲವೊಮ್ಮೆ, ಅವರ ಅಧಿಕಾರಾವಧಿ ಮುಗಿದರು ರಾಷ್ಟ್ರಪತಿಗಳು (ಕೇಂದ್ರ ಸರ್ಕಾರದ ಶಿಫಾರಸ್ಸಿನ ಅನ್ವಯ) ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸುವವರೆಗೆ ಅವರೇ ಮುಂದುವರೆಯುತ್ತಾರೆ. ಸದ್ಯ ಗೋವಾದ ಮೃದುಲಾ ಸಿನ್ಹಾ ಅವರ ಅಧಿಕಾರಾವದಿ ಮುಗಿದು ಒಂದೂವರೆ ತಿಂಗಳಾಗಿದ್ದರು ಹೊಸ ರಾಜ್ಯಪಾಲರನ್ನು ಇನ್ನೂ ನೇಮಕ ಮಾಡಿಲ್ಲ. ಅದೇ ರೀತಿ ಜಾರ್ಖಂಡ್‌ನ ದ್ರೌಪದಿ ಮುರ್ಮು ಅವರ ಅವಧಿ ಇನ್ನು ಆರು ತಿಂಗಳಲ್ಲಿ ಮುಗಿಯಲಿದೆ. ಯಡ್ಯೂರಪ್ಪನವರನ್ನು ಆದಷ್ಟು ಬೇಗ ಇವರೆಡರಲ್ಲಿ ಒಂದು ಸ್ಥಾನಕ್ಕೆ ನಿಯೋಜಿಸಲು ಯೋಜನೆ ಸಿದ್ಧವಾಗಿದೆ ಎನ್ನಲಾಗುತ್ತಿದೆ.

ರಾಜ್ಯಪಾಲರಾಗಬೇಕೆಂದರೆ, ಆ ವ್ಯಕ್ತಿ ಸಂಸತ್ತು ಅಥವಾ ರಾಜ್ಯ ವಿಧಾನಸಭೆಗಳ ಸದಸ್ಯನಾಗಿರಬಾರದು. ಆದರೆ ಯಡ್ಯೂರಪ್ಪ ಸದ್ಯ ಎಂಎಲ್‌ಎ. ಹೇಗೂ ಮುಂದಿನ ಜನವರಿ ಅಥವಾ ಮಾರ್ಚ್‌ನೊಳಗೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವ ತಯಾರಿಯಲ್ಲಿ ಬಿಜೆಪಿ ಹೈಕಮಾಂಡ್ ಇರೋದ್ರಿಂದ ಯಡ್ಯೂರಪ್ಪನವರು ಸಹಜವಾಗಿಯೇ ತಮ್ಮ ಎಂಎಲ್‌ಎ ಸ್ಥಾನದಿಂದ ತೆರವುಗೊಳ್ಳುತ್ತಾರೆ. ಆಗ ಅವರನ್ನು ರಾಜ್ಯಪಾಲರನ್ನಾಗಿ ಬೀಳ್ಕೊಟ್ಟು ಮೋದಿ-ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸಬಹುದು. ಆಗೊಮ್ಮೆ ಬಹುಮತ ದೊರಕಿದರೆ ಆರೆಸ್ಸೆಸ್ ಆಣತಿಯಂತೆ ಸಂತೋಷ್‌ರನ್ನು ಸಿಎಂ ಮಾಡಬಹುದು ಅನ್ನೋದು ಇಡೀ ಲೆಕ್ಕಾಚಾರದ ಹಿಂದಿರುವ ಅಂಕಗಣಿತ!

ರಾಜಕಾರಣದಲ್ಲಿ ಅಸ್ತಿತ್ವದಲ್ಲಿರುವ ರೂಢಿಯ ಪ್ರಕಾರ, ಸಾಮಾನ್ಯವಾಗಿ ರಾಜ್ಯಪಾಲರ ಹುದ್ದೆ ಅನ್ನೋದು ಒಬ್ಬ ರಾಜಕಾರಣಿಯ ಸಕ್ರಿಯ ರಾಜಕಾರಣಕ್ಕೆ ಮಂಗಳ ಹಾಡಿದಂತೆ. ಹಿಂದೆ ೨೦೦೩ರಲ್ಲಿ ಎಸ್.ಎಂ.ಕೃಷ್ಣ ವಿರುದ್ಧ ದೇವೇಗೌಡರು ಇಂತದ್ದೇ ದಾಳ ಉರುಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡುವ ಸಂದರ್ಭ ಎದುರಾದಾಗ ತಮ್ಮ ಒಕ್ಕಲಿಗ ಜಾತಿ ರಾಜಕಾರಣಕ್ಕೆ ಮುಳ್ಳಾಗುತ್ತಾರೆನ್ನುವ ಕಾರಣಕ್ಕೆ ದೇವೇಗೌಡರು ಕಾಂಗ್ರೆಸ್‌ನ ಮುಂದೆ ಎಸ್.ಎಂ.ಕೃಷ್ಣರನ್ನು ರಾಜ್ಯ ರಾಜಕಾರಣದಿಂದ ದೂರ ಇಡಬೇಕೆನ್ನುವ ‘ಭೀಷ್ಮ’ ಷರತ್ತು ವಿಧಿಸಿದ್ದರು. ಅದೇ ಕಾರಣಕ್ಕೆ ಅಂದಿನ ಯುಪಿಎ ಸರ್ಕಾರ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಅದಾದ ಮೇಲೆ ಕರ್ನಾಟಕದ ರಾಜಕಾರಣದಲ್ಲಿ ಕೃಷ್ಣರ ಗಾರುಡಿ ಮತ್ತೆ ಗರಿಬಿಚ್ಚಲೇ ಇಲ್ಲ.

ಯಡ್ಯೂರಪ್ಪನವರು ಗೌರ್ನರ್ ಆಫರ್‌ಗೆ ಅಷ್ಟು ಸುಲಭಕ್ಕೆ ಒಪ್ಪಲಾರರು ಎಂಬುದು ಎಷ್ಟು ಸತ್ಯವೋ ಸಿಬಿಐ, ಇಡಿಗಳ ಕರಾಮತ್ತಿನ ಮುಂದೆ ಯಡ್ಯೂರಪ್ಪನವರಿಗೆ ಬೇರೆ ಆಯ್ಕೆಗಳೇ ಇರುವುದಿಲ್ಲ ಅನ್ನೋದೂ ಅಷ್ಟೇ ಸತ್ಯ. ಕಡೇಪಕ್ಷ ತಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದಾದರು ಯಡ್ಯೂರಪ್ಪನವರು ಒಪ್ಪಿಕೊಳ್ಳಲೇಬೇಕಾಗುತ್ತೆ. ಈಗಾಗಲೇ ತನ್ನ ಬ್ಯುಸಿನೆಸ್ ಪಾರ್ಟ್ನರ್ ಡಿ.ಕೆ.ಶಿವಕುಮಾರ್‌ಗೆ ಬಂದಿರುವ ಗತಿ ಕಂಡಿರುವ ಯಡ್ಯೂರಪ್ಪನವರು ೨೦೧೩ರಲ್ಲಿ ಬಂಡಾಯವೆದ್ದಂತೆ ಕೆಜೆಪಿಯನ್ನೋ, ಮತ್ತೊಂದನ್ನೋ ಕಟ್ಟಲಾರರು ಅನ್ನೋದು ಸಂತೋಷ್‌ರ ತಂಡಕ್ಕೆ ಸ್ಪಷ್ಟವಾಗಿ ಗೊತ್ತು.

ಬಿಜೆಪಿಯೊಳಗೆ ಯಡ್ಯೂರಪ್ಪನವರ ವಿರುದ್ಧ ಇಂಥಾ ಚಿತಾವಣೆಗಳು ನಡೆಯುತ್ತಿರೋದ್ರಿಂದಲೇ ಅವರನ್ನು ನಂಬಿ ತಮ್ಮತಮ್ಮ ಪಕ್ಷಗಳಿಗೆ ‘ಕೈ’ಕೊಟ್ಟು, ಅನರ್ಹತೆಯ ತೂಗುಗತ್ತಿಯಲ್ಲಿ ಹೊಯ್ದಾಡುತ್ತಿರುವ ರೆಬೆಲ್ ಶಾಸಕರಲ್ಲಿ ಒಂದಷ್ಟು ಜನ ವಾಪಾಸ್ ಮಾತೃಪಕ್ಷಗಳ ಕದ ತಟ್ಟುವ ಆಲೋಚನೆಯಲ್ಲಿರೋದು ಎನ್ನಲಾಗುತ್ತಿದೆ. ಅದೇನೆ ಆಗಲಿ, ಯಡ್ಯೂರಪ್ಪನವರನ್ನು ಗೌರವಯುತವಾಗಿಯೋ, ಜಬರ್‌ದಸ್ತಿಯಿಂದಲೋ, ಬೆದರಿಸಿಯೋ ‘ಮಾರ್ಗದರ್ಶಕ ಮಂಡಳಿ’ಯ ‘ಗೃಹಪ್ರವೇಶ’ ಮಾಡಿಸುವ ಲಕ್ಷಣಗಳು ಬಿಜೆಪಿ ಪಾಳೆಯದಲ್ಲಿ ದಿನದಿಂದ ದಿನಕ್ಕೆ ದಟ್ಟವಾಗುತ್ತಲೇ ಬರುತ್ತಿವೆ. ಹಾಗಾಗಿ ‘ಗೌರ್ನರ್’ ತರದ ಗಾಳಿಸುದ್ದಿಗಳೂ ವಿಪರೀತ ಕುತೂಹಲ ಕೆರಳಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...