Homeಕರ್ನಾಟಕಯಡ್ಯೂರಪ್ಪಗೆ ರಾಜ್ಯಪಾಲ ಹುದ್ದೆ!? ಸಿಎಂ ಗಾದಿಯಿಂದ ಕೆಳಗಿಳಿಸಲು ನಡೆದಿದೆಯಾ ಹೊಸ ಮಸಲತ್ತು...

ಯಡ್ಯೂರಪ್ಪಗೆ ರಾಜ್ಯಪಾಲ ಹುದ್ದೆ!? ಸಿಎಂ ಗಾದಿಯಿಂದ ಕೆಳಗಿಳಿಸಲು ನಡೆದಿದೆಯಾ ಹೊಸ ಮಸಲತ್ತು…

ಪ್ರಮಾಣ ವಚನದ ವಿಳಂಬ ಇರಬಹುದು, ಸಂಪುಟ ರಚನೆಗೆ ಕೊಕ್ಕೆ ಹಾಕಿದ್ದಿರಬಹುದು, ಮೂವರು ಡಿಸಿಎಂ ನೇಮಕ, ರಾಜ್ಯಾಧ್ಯಕ್ಷರ ಶಾಕಿಂಗ್ ನೇಮಕ, ಮೇಯರ್ ಆಯ್ಕೆ, ನೆರೆ ಪರಿಹಾರದ ನಿರ್ಲಕ್ಷ್ಯ ಹೀಗೆ ಸಿಎಂ ಆದ ನಂತರದಲ್ಲಿ ಯಡ್ಯೂರಪ್ಪನವರು ತಮ್ಮದೇ ಪಕ್ಷದಿಂದ ಅನುಭವಿಸುತ್ತಿರುವ ಅವಮಾನಗಳು ಒಂದೆರಡಲ್ಲ..

- Advertisement -
- Advertisement -

ಯಡ್ಯೂರಪ್ಪರನ್ನು ರಾಜ್ಯ ರಾಜಕಾರಣದಲ್ಲಿ ಮೂಲೆಗುಂಪು ಮಾಡಲು ಸಕಲ ತಯಾರಿ ನಡೆಸಿರುವ ಬಿಜೆಪಿ ಹೈಕಮಾಂಡ್, ಅದಕ್ಕಾಗಿ ಅವರನ್ನು ಯಾವುದಾದರೊಂದು ರಾಜ್ಯಕ್ಕೆ ಗೌರ್ನರ್ ಆಗಿ ನೇಮಿಸುವ ಯೋಜನೆ ಹಾಕಿಕೊಂಡಿದೆಯಾ? ಇಂತದ್ದೊಂದು ಚರ್ಚೆ ಮಲ್ಲೇಶ್ವರಂನಲ್ಲಿರುವ ಬಿಜೆಪಿಯ ರಾಜ್ಯ ಕಚೇರಿ ಜಗನ್ನಾಥ್ ಭವನದ ಆಸುಪಾಸಿನಲ್ಲಿ ಹರಿದಾಡುತ್ತಿದೆ.

ಹೌದು, ಈಗ ಕೇಳಿಬರುತ್ತಿರುವ ವರ್ತಮಾನ ನಿಜವೇ ಆದಲ್ಲಿ ಯಡ್ಯೂರಪ್ಪನವರನ್ನು ಗೋವಾ ಅಥವಾ ಜಾರ್ಖಂಡ್, ಈ ಎರಡರಲ್ಲಿ ಯಾವುದಾದರು ಒಂದು ರಾಜ್ಯಕ್ಕೆ ಗೌರ್ನರ್ ಆಗಿ ಆಯ್ಕೆ ಮಾಡಲು ತಯಾರಿಗಳು ನಡೆದಿವೆ. ಬಿಜೆಪಿ ಹೈಕಮಾಂಡ್‌ಗೆ, ಕರ್ನಾಟಕದ ಯಡ್ಯೂರಪ್ಪನವರ ಸರ್ಕಾರ ಬೇಡದ ಕೂಸು. ಅದಕ್ಕಾಗಿ ಎಷ್ಟೆಲ್ಲ ನಿರ್ಲಕ್ಷ್ಯ ತೋರಲು ಸಾಧ್ಯವೋ ಅಷ್ಟೂ ನಿರ್ಲಕ್ಷ್ಯದೊಂದಿಗೆ ಯಡ್ಯೂರಪ್ಪನವರಿಗೆ ನಿರಂತರವಾಗಿ ಅವಮಾನ ಮಾಡಲಾಗುತ್ತಿದೆ. ಪ್ರಮಾಣ ವಚನದ ವಿಳಂಬ ಇರಬಹುದು, ಸಂಪುಟ ರಚನೆಗೆ ಕೊಕ್ಕೆ ಹಾಕಿದ್ದಿರಬಹುದು, ಮೂವರು ಡಿಸಿಎಂ ನೇಮಕ, ರಾಜ್ಯಾಧ್ಯಕ್ಷರ ಶಾಕಿಂಗ್ ನೇಮಕ, ಮೇಯರ್ ಆಯ್ಕೆ, ನೆರೆ ಪರಿಹಾರದ ನಿರ್ಲಕ್ಷ್ಯ ಹೀಗೆ ಸಿಎಂ ಆದ ನಂತರದಲ್ಲಿ ಯಡ್ಯೂರಪ್ಪನವರು ತಮ್ಮದೇ ಪಕ್ಷದಿಂದ ಅನುಭವಿಸುತ್ತಿರುವ ಅವಮಾನಗಳು ಒಂದೆರಡಲ್ಲ. ಅದಕ್ಕೆಲ್ಲ ಕಾರಣ ಬಿ.ಎಲ್.ಸಂತೋಷ್ ಎಂಬ ಆರೆಸ್ಸೆಸ್ ತಂತ್ರಗಾರ!

ಬಹಳ ದಿನಗಳಿಂದಲೇ ಕರ್ನಾಟಕ ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಈ ಸಂತೋಷ್ ಹಂತಹಂತವಾಗಿ ರಾಜ್ಯ ಬಿಜೆಪಿಯನ್ನು ತನ್ನ ಕಬ್ಜಾಕ್ಕೆ ತೆಗೆದುಕೊಳ್ಳುತ್ತಾ ಬರುತ್ತಿದ್ದಾರೆ. ಯಡ್ಯೂರಪ್ಪ ಸಿಎಂ ಆಗುವುದು ನಿಕ್ಕಿಯಾಗುವುದಕ್ಕು ಕೆಲ ದಿನಗಳ ಮೊದಲಷ್ಟೇ ತಾನು ಬಿಜೆಪಿ ‘ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ’ಯಂತಹ ಪವರ್‌ಫುಲ್ ಹುದ್ದೆಗೆ ನೇಮಕವಾಗುವಂತೆ ನೋಡಿಕೊಂಡ ಸಂತೋಷ್, ಯಡ್ಯೂರಪ್ಪರನ್ನು ನಿಯಂತ್ರಿಸಲು ಬೇಕಾದ ಶಸ್ತ್ರಗಳನ್ನು ತನ್ನ ಬತ್ತಳಿಕೆಗೆ ಸೇರ್ಪಡೆ ಮಾಡಿಕೊಂಡಿದ್ದರು. ‘ಬ್ರಾಹ್ಮಣ’ ಜಾತಿಯ ಜೊತೆಗೆ ಸಂಘ ಪರಿವಾರದ ಪವರ್‌ಫುಲ್ ಬ್ಯಾಕ್‌ಅಪ್ ಇರುವ ಸಂತೋಷ್‌ರನ್ನು ಕರ್ನಾಟಕದಲ್ಲಿ ಸಿಎಂ ಮಾಡಿ, ಆ ಮೂಲಕ ಲಿಂಗಾಯತ ಜಾತಿಯ ಹಂಗೇ ಇಲ್ಲದೆ ಹಿಂದೂತ್ವದ ಅಜೆಂಡಾದಲ್ಲಿ ಕರ್ನಾಟಕವನ್ನು ಕಬ್ಜಾ ಮಾಡಿಕೊಳ್ಳಬೇಕೆನ್ನುವುದು ನಾಗ್ಪುರ ಹೆಡ್‌ಕ್ವಾರ್ಟರ್‌ನ ಲೆಕ್ಕಾಚಾರ.

ಹಾಗಂತ, ಯಡ್ಯೂರಪ್ಪನವರನ್ನು ಏಕಾಏಕಿ ಮೂಲೆಗುಂಪು ಮಾಡಿದರೆ ಕರ್ನಾಟಕದ ಮಟ್ಟಿಗೆ ತನ್ನ ಸುಭದ್ರ ಓಟ್‌ಬ್ಯಾಂಕ್ ಆದ ಲಿಂಗಾಯತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತೆ ಅನ್ನೋದು ಬಿಜೆಪಿಗೆ ಗೊತ್ತಿಲ್ಲದ ಸಂಗತಿಯೇನಲ್ಲ. ವೀರೇಂದ್ರ ಪಾಟೀಲರ ವಿಚಾರದಲ್ಲಿ ಇಂಥಾ ತಪ್ಪು ಮಾಡಿದ ಕಾಂಗ್ರೆಸ್, ಲಿಂಗಾಯತರ ಒಲವು ಕಳೆದುಕೊಂಡ ಇತಿಹಾಸ ಕರ್ನಾಟಕದ ರಾಜಕೀಯ ಪುಟಗಳಲ್ಲಿದೆ. ಈಗಾಗಲೇ ಕೆಲ ಲಿಂಗಾಯತ ಸ್ವಾಮೀಜಿಗಳು ಮತ್ತು ಬಿಜೆಪಿ ಯುವ ಮೋರ್ಚಾದ ಉಪಾಧ್ಯಕರಂತಹ ಜಾತ್ಯಸ್ಥ ಅಭಿಮಾನಿಗಳು ಬಹಿರಂಗವಾಗಿಯೇ `ಯಡ್ಯೂರಪ್ಪನವರಿಗೆ ತೊಂದ್ರೆ ಕೊಟ್ಟರೆ ಸುಮ್ಮನಿರಲ್ಲ’ ಎಂಬ ಸಂದೇಶಗಳನ್ನು ದಾಟಿಸುತ್ತಿದ್ದಾರೆ.  ಹಾಗಾಗಿ ಅವರನ್ನು ಬೇರೊಂದು ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಕಳಿಸಿಬಿಟ್ಟರೆ, ಗೌರವಯುತವಾಗೇ ಅವರ ರಾಜಕೀಯವನ್ನು ಸಮಾಧಿ ಮಾಡಬಹುದು, ಜೊತೆಗೆ ಲಿಂಗಾಯತರ ವಿರೋಧವೂ ಬರುವುದಿಲ್ಲ ಅನ್ನೋದು ಬಿಜೆಪಿಯ ಲೇಟೆಸ್ಟ್ ಲೆಕ್ಕಾಚಾರ.

ಸಾಮಾನ್ಯವಾಗಿ ರಾಜ್ಯಪಾಲರ ಅಧಿಕಾರಾವಧಿ ಐದು ವರ್ಷಗಳು. ಕೆಲವೊಮ್ಮೆ, ಅವರ ಅಧಿಕಾರಾವಧಿ ಮುಗಿದರು ರಾಷ್ಟ್ರಪತಿಗಳು (ಕೇಂದ್ರ ಸರ್ಕಾರದ ಶಿಫಾರಸ್ಸಿನ ಅನ್ವಯ) ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸುವವರೆಗೆ ಅವರೇ ಮುಂದುವರೆಯುತ್ತಾರೆ. ಸದ್ಯ ಗೋವಾದ ಮೃದುಲಾ ಸಿನ್ಹಾ ಅವರ ಅಧಿಕಾರಾವದಿ ಮುಗಿದು ಒಂದೂವರೆ ತಿಂಗಳಾಗಿದ್ದರು ಹೊಸ ರಾಜ್ಯಪಾಲರನ್ನು ಇನ್ನೂ ನೇಮಕ ಮಾಡಿಲ್ಲ. ಅದೇ ರೀತಿ ಜಾರ್ಖಂಡ್‌ನ ದ್ರೌಪದಿ ಮುರ್ಮು ಅವರ ಅವಧಿ ಇನ್ನು ಆರು ತಿಂಗಳಲ್ಲಿ ಮುಗಿಯಲಿದೆ. ಯಡ್ಯೂರಪ್ಪನವರನ್ನು ಆದಷ್ಟು ಬೇಗ ಇವರೆಡರಲ್ಲಿ ಒಂದು ಸ್ಥಾನಕ್ಕೆ ನಿಯೋಜಿಸಲು ಯೋಜನೆ ಸಿದ್ಧವಾಗಿದೆ ಎನ್ನಲಾಗುತ್ತಿದೆ.

ರಾಜ್ಯಪಾಲರಾಗಬೇಕೆಂದರೆ, ಆ ವ್ಯಕ್ತಿ ಸಂಸತ್ತು ಅಥವಾ ರಾಜ್ಯ ವಿಧಾನಸಭೆಗಳ ಸದಸ್ಯನಾಗಿರಬಾರದು. ಆದರೆ ಯಡ್ಯೂರಪ್ಪ ಸದ್ಯ ಎಂಎಲ್‌ಎ. ಹೇಗೂ ಮುಂದಿನ ಜನವರಿ ಅಥವಾ ಮಾರ್ಚ್‌ನೊಳಗೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವ ತಯಾರಿಯಲ್ಲಿ ಬಿಜೆಪಿ ಹೈಕಮಾಂಡ್ ಇರೋದ್ರಿಂದ ಯಡ್ಯೂರಪ್ಪನವರು ಸಹಜವಾಗಿಯೇ ತಮ್ಮ ಎಂಎಲ್‌ಎ ಸ್ಥಾನದಿಂದ ತೆರವುಗೊಳ್ಳುತ್ತಾರೆ. ಆಗ ಅವರನ್ನು ರಾಜ್ಯಪಾಲರನ್ನಾಗಿ ಬೀಳ್ಕೊಟ್ಟು ಮೋದಿ-ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸಬಹುದು. ಆಗೊಮ್ಮೆ ಬಹುಮತ ದೊರಕಿದರೆ ಆರೆಸ್ಸೆಸ್ ಆಣತಿಯಂತೆ ಸಂತೋಷ್‌ರನ್ನು ಸಿಎಂ ಮಾಡಬಹುದು ಅನ್ನೋದು ಇಡೀ ಲೆಕ್ಕಾಚಾರದ ಹಿಂದಿರುವ ಅಂಕಗಣಿತ!

ರಾಜಕಾರಣದಲ್ಲಿ ಅಸ್ತಿತ್ವದಲ್ಲಿರುವ ರೂಢಿಯ ಪ್ರಕಾರ, ಸಾಮಾನ್ಯವಾಗಿ ರಾಜ್ಯಪಾಲರ ಹುದ್ದೆ ಅನ್ನೋದು ಒಬ್ಬ ರಾಜಕಾರಣಿಯ ಸಕ್ರಿಯ ರಾಜಕಾರಣಕ್ಕೆ ಮಂಗಳ ಹಾಡಿದಂತೆ. ಹಿಂದೆ ೨೦೦೩ರಲ್ಲಿ ಎಸ್.ಎಂ.ಕೃಷ್ಣ ವಿರುದ್ಧ ದೇವೇಗೌಡರು ಇಂತದ್ದೇ ದಾಳ ಉರುಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡುವ ಸಂದರ್ಭ ಎದುರಾದಾಗ ತಮ್ಮ ಒಕ್ಕಲಿಗ ಜಾತಿ ರಾಜಕಾರಣಕ್ಕೆ ಮುಳ್ಳಾಗುತ್ತಾರೆನ್ನುವ ಕಾರಣಕ್ಕೆ ದೇವೇಗೌಡರು ಕಾಂಗ್ರೆಸ್‌ನ ಮುಂದೆ ಎಸ್.ಎಂ.ಕೃಷ್ಣರನ್ನು ರಾಜ್ಯ ರಾಜಕಾರಣದಿಂದ ದೂರ ಇಡಬೇಕೆನ್ನುವ ‘ಭೀಷ್ಮ’ ಷರತ್ತು ವಿಧಿಸಿದ್ದರು. ಅದೇ ಕಾರಣಕ್ಕೆ ಅಂದಿನ ಯುಪಿಎ ಸರ್ಕಾರ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಅದಾದ ಮೇಲೆ ಕರ್ನಾಟಕದ ರಾಜಕಾರಣದಲ್ಲಿ ಕೃಷ್ಣರ ಗಾರುಡಿ ಮತ್ತೆ ಗರಿಬಿಚ್ಚಲೇ ಇಲ್ಲ.

ಯಡ್ಯೂರಪ್ಪನವರು ಗೌರ್ನರ್ ಆಫರ್‌ಗೆ ಅಷ್ಟು ಸುಲಭಕ್ಕೆ ಒಪ್ಪಲಾರರು ಎಂಬುದು ಎಷ್ಟು ಸತ್ಯವೋ ಸಿಬಿಐ, ಇಡಿಗಳ ಕರಾಮತ್ತಿನ ಮುಂದೆ ಯಡ್ಯೂರಪ್ಪನವರಿಗೆ ಬೇರೆ ಆಯ್ಕೆಗಳೇ ಇರುವುದಿಲ್ಲ ಅನ್ನೋದೂ ಅಷ್ಟೇ ಸತ್ಯ. ಕಡೇಪಕ್ಷ ತಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದಾದರು ಯಡ್ಯೂರಪ್ಪನವರು ಒಪ್ಪಿಕೊಳ್ಳಲೇಬೇಕಾಗುತ್ತೆ. ಈಗಾಗಲೇ ತನ್ನ ಬ್ಯುಸಿನೆಸ್ ಪಾರ್ಟ್ನರ್ ಡಿ.ಕೆ.ಶಿವಕುಮಾರ್‌ಗೆ ಬಂದಿರುವ ಗತಿ ಕಂಡಿರುವ ಯಡ್ಯೂರಪ್ಪನವರು ೨೦೧೩ರಲ್ಲಿ ಬಂಡಾಯವೆದ್ದಂತೆ ಕೆಜೆಪಿಯನ್ನೋ, ಮತ್ತೊಂದನ್ನೋ ಕಟ್ಟಲಾರರು ಅನ್ನೋದು ಸಂತೋಷ್‌ರ ತಂಡಕ್ಕೆ ಸ್ಪಷ್ಟವಾಗಿ ಗೊತ್ತು.

ಬಿಜೆಪಿಯೊಳಗೆ ಯಡ್ಯೂರಪ್ಪನವರ ವಿರುದ್ಧ ಇಂಥಾ ಚಿತಾವಣೆಗಳು ನಡೆಯುತ್ತಿರೋದ್ರಿಂದಲೇ ಅವರನ್ನು ನಂಬಿ ತಮ್ಮತಮ್ಮ ಪಕ್ಷಗಳಿಗೆ ‘ಕೈ’ಕೊಟ್ಟು, ಅನರ್ಹತೆಯ ತೂಗುಗತ್ತಿಯಲ್ಲಿ ಹೊಯ್ದಾಡುತ್ತಿರುವ ರೆಬೆಲ್ ಶಾಸಕರಲ್ಲಿ ಒಂದಷ್ಟು ಜನ ವಾಪಾಸ್ ಮಾತೃಪಕ್ಷಗಳ ಕದ ತಟ್ಟುವ ಆಲೋಚನೆಯಲ್ಲಿರೋದು ಎನ್ನಲಾಗುತ್ತಿದೆ. ಅದೇನೆ ಆಗಲಿ, ಯಡ್ಯೂರಪ್ಪನವರನ್ನು ಗೌರವಯುತವಾಗಿಯೋ, ಜಬರ್‌ದಸ್ತಿಯಿಂದಲೋ, ಬೆದರಿಸಿಯೋ ‘ಮಾರ್ಗದರ್ಶಕ ಮಂಡಳಿ’ಯ ‘ಗೃಹಪ್ರವೇಶ’ ಮಾಡಿಸುವ ಲಕ್ಷಣಗಳು ಬಿಜೆಪಿ ಪಾಳೆಯದಲ್ಲಿ ದಿನದಿಂದ ದಿನಕ್ಕೆ ದಟ್ಟವಾಗುತ್ತಲೇ ಬರುತ್ತಿವೆ. ಹಾಗಾಗಿ ‘ಗೌರ್ನರ್’ ತರದ ಗಾಳಿಸುದ್ದಿಗಳೂ ವಿಪರೀತ ಕುತೂಹಲ ಕೆರಳಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...