Homeಕರ್ನಾಟಕತುಮಕೂರಿಗೆ ಮೋದಿ: ಕೆಲವೇ ನಿಮಿಷದಲ್ಲಿ ಪತ್ರಿಕಾಗೋಷ್ಟಿ ಮುಗಿಸಿದ ಯಡಿಯೂರಪ್ಪ...

ತುಮಕೂರಿಗೆ ಮೋದಿ: ಕೆಲವೇ ನಿಮಿಷದಲ್ಲಿ ಪತ್ರಿಕಾಗೋಷ್ಟಿ ಮುಗಿಸಿದ ಯಡಿಯೂರಪ್ಪ…

- Advertisement -
- Advertisement -

ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ವೇದಿಕೆಯ ಸ್ಥಳದಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಸರ್ಪಗಾವಲು ಹಾಕಿದ್ದು ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡಯುವ ಸ್ಥಳಕ್ಕೆ ಯಾರನ್ನೂ ಬಿಡುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುಮಕೂರಿಗೆ ಬಂದರೂ ಅವರನ್ನೂ ಕೂಡ ಕಾಲೇಜು ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಿಲ್ಲ.

ನಗರಕ್ಕೆ 10 ಗಂಟೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಸ್ಥಳೀಯ ಮುಖಂಡರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು. ಸಚಿವರಾದ ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಸ್. ಬಸವರಾಜು ಮತ್ತು ಬಿಜೆಪಿ ಶಾಸಕರೊಂದಿಗೆ ಚರ್ಚೆ ನಡೆಸಿದರು. ಆನಂತರ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿ ನಡೆಸಲಾಯಿತು. ಸುಮಾರು 20 ನಿಮಿಷ ನಡೆದ ಪತ್ರಿಕಾಗೋಷ್ಟಿಯಲ್ಲಿ ಮುಖ್ಯಮಂತ್ರಿ ಮಾತನಾಡಿದ್ದು ಕೇವಲ 6 ನಿಮಿಷ ಮಾತ್ರ. ಅದೂ 1.5 ಲಕ್ಷ ಜನ ರೈತರು ಕಾರ್ಯಕ್ರಮಕ್ಕೆ ಬರುತ್ತಾರೆ. ಮಧ್ಯಾಹ್ನ 2.15ಕ್ಕೆ ಪ್ರಧಾನಿ ಮಠಕ್ಕೆ ಆಗಮಿಸುತ್ತಾರೆ. ಮಕ್ಕಳೊಂದಿಗೆ 10 ನಿಮಿಷ ಮಾತುಕತೆ ಮಾಡುತ್ತಾರೆ. ವಾಹನ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಸಮಾವೇಶ ನಡೆಯಲಿದೆ ಎಂದಷ್ಟೇ ಹೇಳಿ ಪತ್ರಿಕಾಗೋಷ್ಟಿಯಿಂದ ಹೊರಟರು.

ಎಂದಿನ ಯಡಿಯೂರಪ್ಪನವರ ಗತ್ತು ಇಂದು ಮರೆಯಾಗಿತ್ತು. ನಿಧಾನದ ಧ್ವನಿಯಲ್ಲಿ ಮಾತನಾಡಿದರು. ಮುಖದಲ್ಲಿ ಗೆಲುವು ಕಂಡುಬರಲಿಲ್ಲ. ಜೋರಾಗಿ ಮಾತನಾಡಿ ಎಂದು ಪತ್ರಕರ್ತರು ಹೇಳಿದಾಗ ಒಂದೆರಡು ಮಾತುಗಳನ್ನು ಧ್ವನಿ ಎತ್ತರಿಸಿ ಮಾತನಾಡಿದರು. ಆದರೆ ಆ ಮಾತುಗಳು ತುಂಬ ಪೇಲವವಾಗಿ ಕಂಡುಬಂದವು.

ತುಮಕೂರಿನಲ್ಲಿ ರಾಜ್ಯಮಟ್ಟದ ರೈತರ ಸಮಾವೇಶ ನಡೆಯುತ್ತಿದೆ. ಆಪ್ತ ಇಬ್ಬರು ಸ್ವಜಾತಿಯ ಸಚಿವರನ್ನು ಬಿಟ್ಟರೆ, ಸರ್ಕಾರ ಪ್ರಮುಖ ಖಾತೆಗಳನ್ನು ಹೊಂದಿರುವ ಯಾವ ಸಚಿವರೂ ಕೂಡ ಯಡಿಯೂರಪ್ಪ ಅವರ ಜೊತೆಗೆ ಇಲ್ಲದಿರುವುದು ಕಂಡು ಬಂತು. ಹೀಗಾಗಿಯೇ ಅವರ ಮುಖದಲ್ಲಿ ಬೇಸರದ ಛಾಯೆ ಎದ್ದು ಕಾಣುತ್ತಿತ್ತು.

ಬಿಜೆಪಿ ಶಾಸಕರಾದ ಬಿ.ಸಿ.ನಾಗೇಶ್, ಮಸಾಲಾ ಜಯರಾಂ ಒಂದಿಬ್ಬರು ಶಾಸಕರನ್ನು ಬಿಟ್ಟರೆ ಹಿಂದೆ ಇರುತ್ತಿದ್ದಂತೆ ಗುಂಪು ಇರಲಿಲ್ಲ. ಪತ್ರಿಕಾಗೋಷ್ಠಿಯುದ್ದಕ್ಕೂ ಹೆಚ್ಚು ಮೌನಕ್ಕೆ ಶರಣಾಗಿದ್ದರು. ಪತ್ರಕರ್ತರು ಏನೋ ಪ್ರಶ್ನೆಗಳನ್ನು ಕೇಳಲು ಮುಂದಾದರು. ಆದರೆ ಉತ್ತರಿಸದೆ ಸ್ವಲ್ಪ ಹೊತ್ತೂ ತಡಮಾಡದೆ ಹೊರಟೇ ಹೊದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...