Homeಕರ್ನಾಟಕತುಮಕೂರಿಗೆ ಮೋದಿ: ಕೆಲವೇ ನಿಮಿಷದಲ್ಲಿ ಪತ್ರಿಕಾಗೋಷ್ಟಿ ಮುಗಿಸಿದ ಯಡಿಯೂರಪ್ಪ...

ತುಮಕೂರಿಗೆ ಮೋದಿ: ಕೆಲವೇ ನಿಮಿಷದಲ್ಲಿ ಪತ್ರಿಕಾಗೋಷ್ಟಿ ಮುಗಿಸಿದ ಯಡಿಯೂರಪ್ಪ…

- Advertisement -
- Advertisement -

ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ವೇದಿಕೆಯ ಸ್ಥಳದಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಸರ್ಪಗಾವಲು ಹಾಕಿದ್ದು ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡಯುವ ಸ್ಥಳಕ್ಕೆ ಯಾರನ್ನೂ ಬಿಡುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುಮಕೂರಿಗೆ ಬಂದರೂ ಅವರನ್ನೂ ಕೂಡ ಕಾಲೇಜು ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಿಲ್ಲ.

ನಗರಕ್ಕೆ 10 ಗಂಟೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಸ್ಥಳೀಯ ಮುಖಂಡರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು. ಸಚಿವರಾದ ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಸ್. ಬಸವರಾಜು ಮತ್ತು ಬಿಜೆಪಿ ಶಾಸಕರೊಂದಿಗೆ ಚರ್ಚೆ ನಡೆಸಿದರು. ಆನಂತರ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿ ನಡೆಸಲಾಯಿತು. ಸುಮಾರು 20 ನಿಮಿಷ ನಡೆದ ಪತ್ರಿಕಾಗೋಷ್ಟಿಯಲ್ಲಿ ಮುಖ್ಯಮಂತ್ರಿ ಮಾತನಾಡಿದ್ದು ಕೇವಲ 6 ನಿಮಿಷ ಮಾತ್ರ. ಅದೂ 1.5 ಲಕ್ಷ ಜನ ರೈತರು ಕಾರ್ಯಕ್ರಮಕ್ಕೆ ಬರುತ್ತಾರೆ. ಮಧ್ಯಾಹ್ನ 2.15ಕ್ಕೆ ಪ್ರಧಾನಿ ಮಠಕ್ಕೆ ಆಗಮಿಸುತ್ತಾರೆ. ಮಕ್ಕಳೊಂದಿಗೆ 10 ನಿಮಿಷ ಮಾತುಕತೆ ಮಾಡುತ್ತಾರೆ. ವಾಹನ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಸಮಾವೇಶ ನಡೆಯಲಿದೆ ಎಂದಷ್ಟೇ ಹೇಳಿ ಪತ್ರಿಕಾಗೋಷ್ಟಿಯಿಂದ ಹೊರಟರು.

ಎಂದಿನ ಯಡಿಯೂರಪ್ಪನವರ ಗತ್ತು ಇಂದು ಮರೆಯಾಗಿತ್ತು. ನಿಧಾನದ ಧ್ವನಿಯಲ್ಲಿ ಮಾತನಾಡಿದರು. ಮುಖದಲ್ಲಿ ಗೆಲುವು ಕಂಡುಬರಲಿಲ್ಲ. ಜೋರಾಗಿ ಮಾತನಾಡಿ ಎಂದು ಪತ್ರಕರ್ತರು ಹೇಳಿದಾಗ ಒಂದೆರಡು ಮಾತುಗಳನ್ನು ಧ್ವನಿ ಎತ್ತರಿಸಿ ಮಾತನಾಡಿದರು. ಆದರೆ ಆ ಮಾತುಗಳು ತುಂಬ ಪೇಲವವಾಗಿ ಕಂಡುಬಂದವು.

ತುಮಕೂರಿನಲ್ಲಿ ರಾಜ್ಯಮಟ್ಟದ ರೈತರ ಸಮಾವೇಶ ನಡೆಯುತ್ತಿದೆ. ಆಪ್ತ ಇಬ್ಬರು ಸ್ವಜಾತಿಯ ಸಚಿವರನ್ನು ಬಿಟ್ಟರೆ, ಸರ್ಕಾರ ಪ್ರಮುಖ ಖಾತೆಗಳನ್ನು ಹೊಂದಿರುವ ಯಾವ ಸಚಿವರೂ ಕೂಡ ಯಡಿಯೂರಪ್ಪ ಅವರ ಜೊತೆಗೆ ಇಲ್ಲದಿರುವುದು ಕಂಡು ಬಂತು. ಹೀಗಾಗಿಯೇ ಅವರ ಮುಖದಲ್ಲಿ ಬೇಸರದ ಛಾಯೆ ಎದ್ದು ಕಾಣುತ್ತಿತ್ತು.

ಬಿಜೆಪಿ ಶಾಸಕರಾದ ಬಿ.ಸಿ.ನಾಗೇಶ್, ಮಸಾಲಾ ಜಯರಾಂ ಒಂದಿಬ್ಬರು ಶಾಸಕರನ್ನು ಬಿಟ್ಟರೆ ಹಿಂದೆ ಇರುತ್ತಿದ್ದಂತೆ ಗುಂಪು ಇರಲಿಲ್ಲ. ಪತ್ರಿಕಾಗೋಷ್ಠಿಯುದ್ದಕ್ಕೂ ಹೆಚ್ಚು ಮೌನಕ್ಕೆ ಶರಣಾಗಿದ್ದರು. ಪತ್ರಕರ್ತರು ಏನೋ ಪ್ರಶ್ನೆಗಳನ್ನು ಕೇಳಲು ಮುಂದಾದರು. ಆದರೆ ಉತ್ತರಿಸದೆ ಸ್ವಲ್ಪ ಹೊತ್ತೂ ತಡಮಾಡದೆ ಹೊರಟೇ ಹೊದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...