Homeಕರ್ನಾಟಕತುಮಕೂರಿಗೆ ಮೋದಿ: ಕೆಲವೇ ನಿಮಿಷದಲ್ಲಿ ಪತ್ರಿಕಾಗೋಷ್ಟಿ ಮುಗಿಸಿದ ಯಡಿಯೂರಪ್ಪ...

ತುಮಕೂರಿಗೆ ಮೋದಿ: ಕೆಲವೇ ನಿಮಿಷದಲ್ಲಿ ಪತ್ರಿಕಾಗೋಷ್ಟಿ ಮುಗಿಸಿದ ಯಡಿಯೂರಪ್ಪ…

- Advertisement -
- Advertisement -

ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ವೇದಿಕೆಯ ಸ್ಥಳದಲ್ಲಿ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಸರ್ಪಗಾವಲು ಹಾಕಿದ್ದು ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡಯುವ ಸ್ಥಳಕ್ಕೆ ಯಾರನ್ನೂ ಬಿಡುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುಮಕೂರಿಗೆ ಬಂದರೂ ಅವರನ್ನೂ ಕೂಡ ಕಾಲೇಜು ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಿಲ್ಲ.

ನಗರಕ್ಕೆ 10 ಗಂಟೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಸ್ಥಳೀಯ ಮುಖಂಡರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು. ಸಚಿವರಾದ ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಸ್. ಬಸವರಾಜು ಮತ್ತು ಬಿಜೆಪಿ ಶಾಸಕರೊಂದಿಗೆ ಚರ್ಚೆ ನಡೆಸಿದರು. ಆನಂತರ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿ ನಡೆಸಲಾಯಿತು. ಸುಮಾರು 20 ನಿಮಿಷ ನಡೆದ ಪತ್ರಿಕಾಗೋಷ್ಟಿಯಲ್ಲಿ ಮುಖ್ಯಮಂತ್ರಿ ಮಾತನಾಡಿದ್ದು ಕೇವಲ 6 ನಿಮಿಷ ಮಾತ್ರ. ಅದೂ 1.5 ಲಕ್ಷ ಜನ ರೈತರು ಕಾರ್ಯಕ್ರಮಕ್ಕೆ ಬರುತ್ತಾರೆ. ಮಧ್ಯಾಹ್ನ 2.15ಕ್ಕೆ ಪ್ರಧಾನಿ ಮಠಕ್ಕೆ ಆಗಮಿಸುತ್ತಾರೆ. ಮಕ್ಕಳೊಂದಿಗೆ 10 ನಿಮಿಷ ಮಾತುಕತೆ ಮಾಡುತ್ತಾರೆ. ವಾಹನ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಸಮಾವೇಶ ನಡೆಯಲಿದೆ ಎಂದಷ್ಟೇ ಹೇಳಿ ಪತ್ರಿಕಾಗೋಷ್ಟಿಯಿಂದ ಹೊರಟರು.

ಎಂದಿನ ಯಡಿಯೂರಪ್ಪನವರ ಗತ್ತು ಇಂದು ಮರೆಯಾಗಿತ್ತು. ನಿಧಾನದ ಧ್ವನಿಯಲ್ಲಿ ಮಾತನಾಡಿದರು. ಮುಖದಲ್ಲಿ ಗೆಲುವು ಕಂಡುಬರಲಿಲ್ಲ. ಜೋರಾಗಿ ಮಾತನಾಡಿ ಎಂದು ಪತ್ರಕರ್ತರು ಹೇಳಿದಾಗ ಒಂದೆರಡು ಮಾತುಗಳನ್ನು ಧ್ವನಿ ಎತ್ತರಿಸಿ ಮಾತನಾಡಿದರು. ಆದರೆ ಆ ಮಾತುಗಳು ತುಂಬ ಪೇಲವವಾಗಿ ಕಂಡುಬಂದವು.

ತುಮಕೂರಿನಲ್ಲಿ ರಾಜ್ಯಮಟ್ಟದ ರೈತರ ಸಮಾವೇಶ ನಡೆಯುತ್ತಿದೆ. ಆಪ್ತ ಇಬ್ಬರು ಸ್ವಜಾತಿಯ ಸಚಿವರನ್ನು ಬಿಟ್ಟರೆ, ಸರ್ಕಾರ ಪ್ರಮುಖ ಖಾತೆಗಳನ್ನು ಹೊಂದಿರುವ ಯಾವ ಸಚಿವರೂ ಕೂಡ ಯಡಿಯೂರಪ್ಪ ಅವರ ಜೊತೆಗೆ ಇಲ್ಲದಿರುವುದು ಕಂಡು ಬಂತು. ಹೀಗಾಗಿಯೇ ಅವರ ಮುಖದಲ್ಲಿ ಬೇಸರದ ಛಾಯೆ ಎದ್ದು ಕಾಣುತ್ತಿತ್ತು.

ಬಿಜೆಪಿ ಶಾಸಕರಾದ ಬಿ.ಸಿ.ನಾಗೇಶ್, ಮಸಾಲಾ ಜಯರಾಂ ಒಂದಿಬ್ಬರು ಶಾಸಕರನ್ನು ಬಿಟ್ಟರೆ ಹಿಂದೆ ಇರುತ್ತಿದ್ದಂತೆ ಗುಂಪು ಇರಲಿಲ್ಲ. ಪತ್ರಿಕಾಗೋಷ್ಠಿಯುದ್ದಕ್ಕೂ ಹೆಚ್ಚು ಮೌನಕ್ಕೆ ಶರಣಾಗಿದ್ದರು. ಪತ್ರಕರ್ತರು ಏನೋ ಪ್ರಶ್ನೆಗಳನ್ನು ಕೇಳಲು ಮುಂದಾದರು. ಆದರೆ ಉತ್ತರಿಸದೆ ಸ್ವಲ್ಪ ಹೊತ್ತೂ ತಡಮಾಡದೆ ಹೊರಟೇ ಹೊದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...