Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...