Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...