Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...