Homeಕರ್ನಾಟಕ'ಆಕ್ಟ್-1978' ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

‘ಆಕ್ಟ್-1978’ ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

ಸರ್ಕಾರಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನ ಸಾಮಾನ್ಯರು ಒಂದು ಸರ್ಕಾರಿ ಕಚೇರಿಯನ್ನು ಹೈಜಾಕ್ ಮಾಡೋ ದೃಶ್ಯಗಳೊಂದಿಗೆ, ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಲಿದೆ ಎಂಬುದನ್ನು ಟ್ರೇಲರ್‌ ತೋರಿಸಿಕೊಟ್ಟಿದೆ.

- Advertisement -
- Advertisement -

ಪೋಸ್ಟರ್‌ಗಳು ಮತ್ತು ಥೀಮ್‌ ಸಾಂಗ್‌ ಮೂಲಕ ಜನರ ಮನ ಗೆದ್ದಿರುವ ಮಂಸೋರೆ ನಿರ್ದೇಶನದ ಬಹುನಿರೀಕ್ಷಿತ ಆಕ್ಟ್-1978 ಚಿತ್ರ, ಸದ್ಯ ಟ್ರೇಲರ್‌ ಮೂಲಕ ಧೂಳೆಬ್ಬಿಸುತ್ತಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರ ದಕ್ಕಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾವಾಗುವ ನಿರೀಕ್ಷೆಯಲ್ಲಿದೆ ಚಿತ್ರತಂಡ.

ಕೊರೊನಾ ಕಾರಣದಿಂದಾಗಿ ಮುಚ್ಚಿದ್ದ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್​ಗಳು ರೀಒಪನ್‌ ಆಗಿವೆ. ಆದರೆ ಜನ ಚಿತ್ರಮಂದಿರಗಳೊಗೆ ಬರುತ್ತಿರುವುದು ತೀರಾ ಕಡಿಮೆ. ಈ ನಿಟ್ಟಿನಲ್ಲಿ ಚಿತ್ರತಂಡಗಳು ಹಳೆಯ ಚಿತ್ರಗಳನ್ನೇ  ರಿರಿಲೀಸ್​ ಮಾಡುತ್ತಿವೆ. ಆದರೆ ಆಕ್ಟ್-1978 ಚಿತ್ರತಂಡ ಮಾತ್ರ ಒಳ್ಳೆಯ ಸಿನಿಮಾ ಕೊಟ್ಟರೇ ಜನ ಚಿತ್ರಮಂದಿರಗಳಿಗೆ ಬಂದೇ ಬರುತ್ತಾರೆ ಎಂಬ ಭರವಸೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ.

ಪುನೀತ್ ರಾಜ್ ಕುಮಾರ್ ಅವರ ’ಪಿಆರ್‌ಕೆ ಆಡಿಯೋ’ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿರುವ ಟ್ರೇಲರ್‌, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಿರ್ದೇಶಕ ಮಂಸೋರೆ ಮೊದಲೇ ಹೇಳಿದಂತೆ ಇದೊಂದು ಮಹಿಳಾ ಕೇಂದ್ರಿತ ಚಿತ್ರವಾಗಿದ್ದು, ನಟಿ ಯಜ್ಞಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ACT 1978
ಆಕ್ಟ್-1978 ಚಿತ್ರದಲ್ಲಿ ಯಜ್ಞಾ ಶೆಟ್ಟಿ

ಟ್ರೇಲರ್‌ನಲ್ಲಿ ಕಾಣಿಸಿಕೊಂಡಂತೆ ತುಂಬ ಗರ್ಭಿಣಿಯಾಗಿರುವ ಯಜ್ಞಾ ಶೆಟ್ಟಿ, ಹೊಟ್ಟೆಗೆ ಬಾಂಬ್‌ ಕಟ್ಟಿಕೊಂಡು ಸರ್ಕಾರಿ ಕಚೇರಿಗೆ ನುಗ್ಗುವ ದೃಶ್ಯ ರೋಚಕವಾಗಿದೆ. ಸರ್ಕಾರಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನ ಸಾಮಾನ್ಯರು ಒಂದು ಸರ್ಕಾರಿ ಕಚೇರಿಯನ್ನು ಹೈಜಾಕ್ ಮಾಡೋ ದೃಶ್ಯಗಳೊಂದಿಗೆ, ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಲಿದೆ ಎಂಬುದನ್ನು ಟ್ರೇಲರ್‌ ತೋರಿಸಿಕೊಟ್ಟಿದೆ. ಶೀಘ್ರದಲ್ಲೇ ಸಿನಿಮಾ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿದ್ದ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದರು.

ಟ್ರೇಲರ್ ನೋಡಿ.

ಈ ಹಿಂದೆ ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ಮಂಸೋರೆ ನಿರ್ದೇಶನದ ಆಕ್ಟ್-‌ 1978 ಚಿತ್ರಕ್ಕೆ, ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್‌, ಶ್ರುತಿ, ಪ್ರಮೋದ್‌ ಶೆಟ್ಟಿ, ಅಚ್ಯುತ್‌ ಕುಮಾರ್‌, ದತ್ತಣ್ಣ, ಸಂಚಾರಿ ವಿಜಯ್‌, ಶೋಭರಾಜ್‌, ಅವಿನಾಶ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...