Homeಕರ್ನಾಟಕ'ಆಕ್ಟ್-1978' ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

‘ಆಕ್ಟ್-1978’ ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

ಸರ್ಕಾರಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನ ಸಾಮಾನ್ಯರು ಒಂದು ಸರ್ಕಾರಿ ಕಚೇರಿಯನ್ನು ಹೈಜಾಕ್ ಮಾಡೋ ದೃಶ್ಯಗಳೊಂದಿಗೆ, ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಲಿದೆ ಎಂಬುದನ್ನು ಟ್ರೇಲರ್‌ ತೋರಿಸಿಕೊಟ್ಟಿದೆ.

- Advertisement -
- Advertisement -

ಪೋಸ್ಟರ್‌ಗಳು ಮತ್ತು ಥೀಮ್‌ ಸಾಂಗ್‌ ಮೂಲಕ ಜನರ ಮನ ಗೆದ್ದಿರುವ ಮಂಸೋರೆ ನಿರ್ದೇಶನದ ಬಹುನಿರೀಕ್ಷಿತ ಆಕ್ಟ್-1978 ಚಿತ್ರ, ಸದ್ಯ ಟ್ರೇಲರ್‌ ಮೂಲಕ ಧೂಳೆಬ್ಬಿಸುತ್ತಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರ ದಕ್ಕಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾವಾಗುವ ನಿರೀಕ್ಷೆಯಲ್ಲಿದೆ ಚಿತ್ರತಂಡ.

ಕೊರೊನಾ ಕಾರಣದಿಂದಾಗಿ ಮುಚ್ಚಿದ್ದ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್​ಗಳು ರೀಒಪನ್‌ ಆಗಿವೆ. ಆದರೆ ಜನ ಚಿತ್ರಮಂದಿರಗಳೊಗೆ ಬರುತ್ತಿರುವುದು ತೀರಾ ಕಡಿಮೆ. ಈ ನಿಟ್ಟಿನಲ್ಲಿ ಚಿತ್ರತಂಡಗಳು ಹಳೆಯ ಚಿತ್ರಗಳನ್ನೇ  ರಿರಿಲೀಸ್​ ಮಾಡುತ್ತಿವೆ. ಆದರೆ ಆಕ್ಟ್-1978 ಚಿತ್ರತಂಡ ಮಾತ್ರ ಒಳ್ಳೆಯ ಸಿನಿಮಾ ಕೊಟ್ಟರೇ ಜನ ಚಿತ್ರಮಂದಿರಗಳಿಗೆ ಬಂದೇ ಬರುತ್ತಾರೆ ಎಂಬ ಭರವಸೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ.

ಪುನೀತ್ ರಾಜ್ ಕುಮಾರ್ ಅವರ ’ಪಿಆರ್‌ಕೆ ಆಡಿಯೋ’ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿರುವ ಟ್ರೇಲರ್‌, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಿರ್ದೇಶಕ ಮಂಸೋರೆ ಮೊದಲೇ ಹೇಳಿದಂತೆ ಇದೊಂದು ಮಹಿಳಾ ಕೇಂದ್ರಿತ ಚಿತ್ರವಾಗಿದ್ದು, ನಟಿ ಯಜ್ಞಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ACT 1978
ಆಕ್ಟ್-1978 ಚಿತ್ರದಲ್ಲಿ ಯಜ್ಞಾ ಶೆಟ್ಟಿ

ಟ್ರೇಲರ್‌ನಲ್ಲಿ ಕಾಣಿಸಿಕೊಂಡಂತೆ ತುಂಬ ಗರ್ಭಿಣಿಯಾಗಿರುವ ಯಜ್ಞಾ ಶೆಟ್ಟಿ, ಹೊಟ್ಟೆಗೆ ಬಾಂಬ್‌ ಕಟ್ಟಿಕೊಂಡು ಸರ್ಕಾರಿ ಕಚೇರಿಗೆ ನುಗ್ಗುವ ದೃಶ್ಯ ರೋಚಕವಾಗಿದೆ. ಸರ್ಕಾರಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನ ಸಾಮಾನ್ಯರು ಒಂದು ಸರ್ಕಾರಿ ಕಚೇರಿಯನ್ನು ಹೈಜಾಕ್ ಮಾಡೋ ದೃಶ್ಯಗಳೊಂದಿಗೆ, ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಲಿದೆ ಎಂಬುದನ್ನು ಟ್ರೇಲರ್‌ ತೋರಿಸಿಕೊಟ್ಟಿದೆ. ಶೀಘ್ರದಲ್ಲೇ ಸಿನಿಮಾ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿದ್ದ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದರು.

ಟ್ರೇಲರ್ ನೋಡಿ.

ಈ ಹಿಂದೆ ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ಮಂಸೋರೆ ನಿರ್ದೇಶನದ ಆಕ್ಟ್-‌ 1978 ಚಿತ್ರಕ್ಕೆ, ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್‌, ಶ್ರುತಿ, ಪ್ರಮೋದ್‌ ಶೆಟ್ಟಿ, ಅಚ್ಯುತ್‌ ಕುಮಾರ್‌, ದತ್ತಣ್ಣ, ಸಂಚಾರಿ ವಿಜಯ್‌, ಶೋಭರಾಜ್‌, ಅವಿನಾಶ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...