Homeಕರ್ನಾಟಕ'ಆಕ್ಟ್-1978' ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

‘ಆಕ್ಟ್-1978’ ಟ್ರೇಲರ್ ಮೂಲಕ ಕುತೂಹಲದ ಬಾಂಬಿಟ್ಟ ಮಂಸೋರೆ, ಯಜ್ಞಾ ಶೆಟ್ಟಿ!

ಸರ್ಕಾರಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನ ಸಾಮಾನ್ಯರು ಒಂದು ಸರ್ಕಾರಿ ಕಚೇರಿಯನ್ನು ಹೈಜಾಕ್ ಮಾಡೋ ದೃಶ್ಯಗಳೊಂದಿಗೆ, ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಲಿದೆ ಎಂಬುದನ್ನು ಟ್ರೇಲರ್‌ ತೋರಿಸಿಕೊಟ್ಟಿದೆ.

- Advertisement -
- Advertisement -

ಪೋಸ್ಟರ್‌ಗಳು ಮತ್ತು ಥೀಮ್‌ ಸಾಂಗ್‌ ಮೂಲಕ ಜನರ ಮನ ಗೆದ್ದಿರುವ ಮಂಸೋರೆ ನಿರ್ದೇಶನದ ಬಹುನಿರೀಕ್ಷಿತ ಆಕ್ಟ್-1978 ಚಿತ್ರ, ಸದ್ಯ ಟ್ರೇಲರ್‌ ಮೂಲಕ ಧೂಳೆಬ್ಬಿಸುತ್ತಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರ ದಕ್ಕಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾವಾಗುವ ನಿರೀಕ್ಷೆಯಲ್ಲಿದೆ ಚಿತ್ರತಂಡ.

ಕೊರೊನಾ ಕಾರಣದಿಂದಾಗಿ ಮುಚ್ಚಿದ್ದ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್​ಗಳು ರೀಒಪನ್‌ ಆಗಿವೆ. ಆದರೆ ಜನ ಚಿತ್ರಮಂದಿರಗಳೊಗೆ ಬರುತ್ತಿರುವುದು ತೀರಾ ಕಡಿಮೆ. ಈ ನಿಟ್ಟಿನಲ್ಲಿ ಚಿತ್ರತಂಡಗಳು ಹಳೆಯ ಚಿತ್ರಗಳನ್ನೇ  ರಿರಿಲೀಸ್​ ಮಾಡುತ್ತಿವೆ. ಆದರೆ ಆಕ್ಟ್-1978 ಚಿತ್ರತಂಡ ಮಾತ್ರ ಒಳ್ಳೆಯ ಸಿನಿಮಾ ಕೊಟ್ಟರೇ ಜನ ಚಿತ್ರಮಂದಿರಗಳಿಗೆ ಬಂದೇ ಬರುತ್ತಾರೆ ಎಂಬ ಭರವಸೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ.

ಪುನೀತ್ ರಾಜ್ ಕುಮಾರ್ ಅವರ ’ಪಿಆರ್‌ಕೆ ಆಡಿಯೋ’ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿರುವ ಟ್ರೇಲರ್‌, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಿರ್ದೇಶಕ ಮಂಸೋರೆ ಮೊದಲೇ ಹೇಳಿದಂತೆ ಇದೊಂದು ಮಹಿಳಾ ಕೇಂದ್ರಿತ ಚಿತ್ರವಾಗಿದ್ದು, ನಟಿ ಯಜ್ಞಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ACT 1978
ಆಕ್ಟ್-1978 ಚಿತ್ರದಲ್ಲಿ ಯಜ್ಞಾ ಶೆಟ್ಟಿ

ಟ್ರೇಲರ್‌ನಲ್ಲಿ ಕಾಣಿಸಿಕೊಂಡಂತೆ ತುಂಬ ಗರ್ಭಿಣಿಯಾಗಿರುವ ಯಜ್ಞಾ ಶೆಟ್ಟಿ, ಹೊಟ್ಟೆಗೆ ಬಾಂಬ್‌ ಕಟ್ಟಿಕೊಂಡು ಸರ್ಕಾರಿ ಕಚೇರಿಗೆ ನುಗ್ಗುವ ದೃಶ್ಯ ರೋಚಕವಾಗಿದೆ. ಸರ್ಕಾರಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಜನ ಸಾಮಾನ್ಯರು ಒಂದು ಸರ್ಕಾರಿ ಕಚೇರಿಯನ್ನು ಹೈಜಾಕ್ ಮಾಡೋ ದೃಶ್ಯಗಳೊಂದಿಗೆ, ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ಈ ಸಿನಿಮಾ ಬೆಳಕು ಚೆಲ್ಲಲಿದೆ ಎಂಬುದನ್ನು ಟ್ರೇಲರ್‌ ತೋರಿಸಿಕೊಟ್ಟಿದೆ. ಶೀಘ್ರದಲ್ಲೇ ಸಿನಿಮಾ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿದ್ದ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದರು.

ಟ್ರೇಲರ್ ನೋಡಿ.

ಈ ಹಿಂದೆ ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ಮಂಸೋರೆ ನಿರ್ದೇಶನದ ಆಕ್ಟ್-‌ 1978 ಚಿತ್ರಕ್ಕೆ, ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್‌, ಶ್ರುತಿ, ಪ್ರಮೋದ್‌ ಶೆಟ್ಟಿ, ಅಚ್ಯುತ್‌ ಕುಮಾರ್‌, ದತ್ತಣ್ಣ, ಸಂಚಾರಿ ವಿಜಯ್‌, ಶೋಭರಾಜ್‌, ಅವಿನಾಶ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...