Homeಅಂಕಣಗಳುಥೂತ್ತೇರಿ | ಯಾಹೂಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

ಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

- Advertisement -
- Advertisement -

ಭಾರತದ ಪಾರ್ಲಿಮೆಂಟಿಗೆ ಪರ್ಯಾಯವಾಗಿ, ಆಗಾಗ್ಗೆ ಉಡುಪಿಯಲ್ಲಿ ಸೇರುವ ಅಷ್ಟ ಮಠಾಧಿಪತಿಗಳ ಧರ್ಮ, ಸಂಸತ್ ಈಚೆಗೆ ಸಾರ್ವಜನಿಕರು ಕತ್ತೆ, ನಾಯಿ, ಹಂದಿ, ಮಾಂಸ ತಿನ್ನುವಂತೆ ಉಪದೇಶ ಮಾಡಿರುವ ಬಗ್ಗೆ. ವಯೋವೃದ್ಧರು, ಜ್ಞಾನವೃದ್ಧರು ಹಾಗೂ ಪ್ರಾಬ್ಲಂ ವೃದ್ಧರೂ ಆದ ಪೇಜಾವರ ಶ್ರೀಗಳನ್ನ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ ‘ಕೃಷ್ಣಾ… ನೀ ಬೇಗನೆ ಬಾರೋ, ಬೇಗನೆ ಬಂದು ಮುಖವನು ತೋರೊ.

“ಹಲೋ ಯಾರು”
“ಸ್ವಾಮೀಜಿ ನಾನು ನಿಮ್ಮ ಭಕ್ತ ಯಾಹೂ.”
“ಹಿಂದೆ ನೀವು ಫೋನ್ ಮಾಡಿದ್ದಿರಲ್ಲವೆ.”
“ಹೌದು ಸ್ವಾಮೀಜಿ, ತಮ್ಮ ದನಿ ಕೇಳಬೇಕು ಅನ್ನಿಸಿದಾಗೆಲ್ಲ ಮಾತನಾಡ್ತಿನಿ.”
“ಈಗ ಯಂತಕ್ಕೆ ಫೋನ್ ಮಾಡಿದ್ದು.”
“ಉಷಾರಾಗಿದೀರ ಸ್ವಾಮೀಜಿ.”
“ನನಗೆಂತ ಆಗಿಲ್ಲ.”
‘ಅಲ್ಲ ನಿಮ್ಮ ದನಿ ಹಾಳುಬಾವಿಯಿಂದ ಕೇಳಿದಂಗೆ ಕೇಳತಾಯಿತ್ತು. ಅದಕ್ಕೆ ಮೊನ್ನೆ ಬಂದಿದ್ರಲ್ಲಾ ಸ್ವಾಮಿ ಅವುರಿದ್ದಾರ?”
“ಆ ಇವುನು ಸ್ವಾಮಿ. ಪೊಲೀಸರಿಂದ ತಪ್ಪಿಸಿಗಳಕ್ಕೆ ಚೂಡಿದಾರ ಇಕ್ಕಂಡು ಪರಾರಿಯಾಗಿದ್ದರಲ್ಲ?”
‘ಅಂತವರಾರು ಇಲ್ಲಿ ಬಂದಿರಲಿಲ್ಲ.’
“ಆ ಇವುನು ಸ್ವಾಮೀಜಿ ಮೈದಾನದಲ್ಲಿ ಕೂತಗಂಡು ಮೈನ್ಯಲ್ಲ ಮುರುದು ಮಟ್ಟಿಕಟ್ಟತನೆ, ಸೊಟ್ಟಬಾಯಿ ಗೊತ್ತಾಗಬಾರ್ದು ಅಂತ ಗಡ್ಡಬಿಟ್ಟವನೆ.”
“ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ.”
“ಸಹಿಸಿಕೋಬೇಕಾಗುತ್ತೆ ಸ್ವಾಮಿ.’
“ಯಂತಕ್ಕೆ.”
“ಮಾಂಸಾಹಾರಿಗಳಿಗೆ ಆತ, ಕತ್ತೆ ನಾಯಿ ಹಂದಿ ತಿನ್ನಿ ಅಂದವುನೆ.”
“ಗೋಮಾಂಸದ ಬದಲು ತಿನ್ನಿ ಅಂತ ಹೇಳಿದ್ದು.”
“ಅದವುರ ಅನುಭವದ ಮಾತ ಸಾಮೀಜಿ?”
“ಅನುಭವ ಆಗಲೇಬೇಕು ಅಂತ ಇಲ.”
“ಶಂಕರಾಚಾರ್ಯರು ಅನುಭವ ಪಡದು ಉಪದೇಶ ಮಾಡಿದ್ರಂತೆ.”
“ಅದು ಬೇರೆ ಇದು ಬೇರೆ.”
“ಎರಡೂ ಒಂದೆ ಬಾಬಾ ರಾಮದೇವ ಆಯುರ್ವೇದ ಪಂಡಿತರು ಯೋಗಪಟು ದೇಹದ ಅಂಗಾಂಗವೃದ್ಧಿಗೆ ಕೆಲವು ಪದಾರ್ಥನೂ ಮಾರ್ತರೆ. ಆ ಮಹಾಮಹಿಮರು ಕತ್ತೆ, ನಾಯಿ ಹಂದಿ, ತಿನ್ನಿ ಅನ್ನಬೇಕಾದ್ರೆ ಸುಮ್ಮಸುಮ್ಮನೆ ಹೇಳಿಲ್ಲ ಸ್ವಾಮಿ”
‘ಗೋವನ್ನು ಉಳಿಸಬೇಕಾದರೆ ಹಾಗೆ ಮಾಡಿ ಅಂತ ಹೇಳಿದ್ದು ‘ಅದರಿಂದ ಜಾಗತಿಕ ತಾಪಮಾನ ಕಡಮೆಯಾಗುತ್ತ?”
“ಹೌದು ಅವರು ಹಾಗೆ ಹೇಳಿದ್ದು.”
“ನಮ್ಮ ಜನ ಈಗಾಗ್ಲೆ ಕತ್ತೆ ನಾಯಿ ಹಂದಿ ತಿಂತಾಯಿದಾರೆ ಸ್ವಾಮಿ.”
“ಕತ್ತೆ ತಿನ್ನುವುದುಂಟ!?”
“ಮಲೆನಾಡು ಭಾಗದಲ್ಲಿ ಒಬ್ಬ ಹೋಟ್ಳು ಮಾಡಿಕೊಂಡು ಕಡವೆ ಮಾಂಸ ಅಂತ ಹೇಳಿ ಕತ್ತೆ ಮಾಂಸ ತಿನ್ನುಸ್ತಿದ್ದ. ಕತ್ತೆ ಖಾಲಿಯಾದ ಮೇಲೆ ಸಿಕ್ಕಿದ ಸ್ವಾಮಿ.”
“ಹಾಗಾದರೆ ಅವನು ಕೆಟ್ಟವನು.“
“ಮತ್ತೆ ರಾಮದೇವ ಕತ್ತೆ ತಿನ್ನಿ ಅಂದರೆ ನೀವು ಕೆಟ್ಟವನು ಅಂತಿರಿ?”
“ಪ್ರಾಣಿಗಳಿಗೆ ನಿಮ್ಮಷ್ಟೇ ಬದುಕುವ ಹಕ್ಕುಂಟು.”
“ಇದ್ಯಾವ ಸೀಮೆ ಮಾತು ಸ್ವಾಮಿ, ತಿನ್ನಿ ಅನ್ನಾರು ನೀವೆಯ, ಪ್ರಾಣಿಗಳು ನಿಮ್ಮಂಗೆ ಬದುಕಬೇಕು ಅನ್ನೋರು ನೀವೆಯ, ನಾಯಿ ತಿನ್ನಿ ಅಂತ ರಾಮದೇವ ಹೇಳಬೇಕಾದ್ರೆ ಅವುರು ತಿಂದಿದ್ದರೆ ಸ್ವಾಮಿ.”
“ಮಾತಿಗೆ ಹೇಳಿದ್ದನ್ನ ನೀವು ನಿಜ ಅಂತ ಹೇಳುವುದೆ?”
“ಸ್ವಾಮೀಜಿ. ನಮ್ಮ ಜನ ಆಗ್ಗೆ ನಾಯಿ ತಿಂತಾ ಅವುರೆ. ಬೆಂಗಳೂರಲ್ಲಿ ತಿಂತರೆ. ತಮುಳು ನಾಡಲ್ಲಯ ನಾಯಿ ಮಾಂಸ ರಪ್ತು ಮಾಡುವಾಗ್ಲೆ ಸಿಕ್ಕಿ ಬಿದ್ರು”
“ಜನಗಳು ಇಷ್ಟೊಂದು ಕೆಟ್ಟುಹೋಗಿದ್ದಾರೆ ಒಹ್ ದೇವರೇ”
“ಹೌದು ಸ್ವಾಮಿ ಜಾಸ್ತಿ ಮಾತಾಡಿದ್ರೇ, ಸ್ವಾಮಿಗಳನೂ ಬಲೆಹಾಕಿ ನರಿ ಹಿಡದಂಗೆ ಹಿಡಿದು ಕುಯ್ಕೊಂಡು ತಿಂತಾರೆ. ಹುಶಾರು ಒಬ್ಬೊಬ್ಬರೆ ತಿರುಗಾಡುಬೇಡಿ.”
“ನೀವು ಮಾಂಸಾಹಾರಿಗಳ?’
“ಹೌದು, ನನಗೆ ಹಂದಿ ತುಂಬ ಪ್ರಿಯವಾದ ಪ್ರಾಣಿ. ಅದನುಕಂಡ್ರೆ ನಡೆದಾಡೋ ಕೇಕ್ ತರ ಕಾಣುತ್ತೆ ಸ್ವಾಮಿ.”
“ಅಸಹ್ಯವಾಗಿ ಮಾತನಾಡಬೇಡಿ.”
“ಕೃಷ್ಣನ ವರಾಹವತಾರಕ್ಕೆ ನೀವು ಗೌರವಕೊಡ್ತಿರಿ ತಾನೆ?”
“ಹೌದು, ಪರಮಾತ್ಮನ ಆ ಅವತಾರದಿಂದಲೇ ಈ ಭೂಮಿ ಉಳಿದದ್ದು.”
“ಪರಮಾತ್ಮ ವರಾಹ ಅವತಾರ ಎತ್ತಿದ ಕಾರಣಕ್ಕೆ ವರಾಹದ ಮಾಂಸಕ್ಕೆ ಅಷ್ಟೊಂದು ರುಚಿ ಬಂದಿದ್ದು. ನನಗನ್ನಿಸಿದಂಗೆ ಈ ಜಗತ್ತಿನಲ್ಲಿ ಯಾವ ಪ್ರಾಣಿ ಮಾಂಸನೂ ಹಂದಿ ಮಾಂಸದಷ್ಟು ರುಚಿಯಾಗಿಲ್ಲ, ಯಾಕೆ ಅಂದ್ರೆ ಅದು ಕೃಷ್ಣಪರಮಾತ್ಮನ ಅವತಾರ.”
“ಅವತಾರವನ್ನು ಗೌರವಿಸಿ ಪೂಜೆ ಮಾಡಬೇಕು, ಅದನ್ನು ತಿನ್ನಲಿಕ್ಕೆ ಹೋಗಬಾರ್ದು”
“ಸ್ವಾಮೀಜಿ, ಕೃಷ್ಣ ಪರಮಾತ್ಮ ವರಾಹ ಅವತಾರ ತಾಳಿದ್ದ ಕಾರಣಕ್ಕೆ ಹಂದಿ ಮಾಂಸದಲ್ಲಿ ಯಾವುದೇ ಪ್ರಾಣಿ ಮಾಂಸದಲ್ಲಿ ಇರದೆ ಇರುವ ಥೈಮನ್ ಅಂತ ಒಂದಂಶ ಇದೆ. ಇದಕ್ಕೆ ಔಷಧಿ ಗುಣ ಇದೆ. ಮಲೆನಾಡು ಜನ ಕಡ್ಡಾಯವಾಗಿ ತಿಂತರೆ. ಬಯಲುಸೀಮೆ ಜನ ಗೊತ್ತಿಲ್ದೆ ತಿಂತಾರೆ. ಒಂದು ಕೆ.ಜಿ ತಿಂದ್ರೂ ಏನೂ ಆಗಲ್ಲ. ಈಚೆಗೆ ನಾನು ಎರಡು ಕೆ.ಜಿ ತಿಂದಿದ್ದೆ, ಆದ್ರೂ ಆರಾಮಾಗಿದ್ದೆ. ನಿದ್ರೆ ವಿಷಯದಲ್ಲಿ ಸ್ವಲ್ಪ ಹಂದಿ ನಡವಳಿಕೆ ಇರುತ್ತೆ ಅಷ್ಟೇ, ನೀವು ಗೋವುಗಳನ್ನ ಮಾಂಸಾಹಾರಿಗಳಿಂದ ಕಾಪಾಡಬೇಕಾದ್ರೆ, ವರಾಹ ಫಾರಂ ಮಾಡಿ, ಇಲ್ಲಿಂದ್ಲೆ ವಿತರಿಸಿದರೆ ಗೋ ಸಂತತಿ ವೃದ್ಧಿಯಾಗುತ್ತೆ.”
“ಯಂತ ಹೇಳುವುದು ನೀವು, ನಾವು ಹಂದಿ ಸಾಕುವುದ?”
“ಕೃಷ್ಣನ್ನೆ ಸಾಕ್ತಾಯಿದ್ದಿರಿ. ಅವನ ಅವತಾರ ಸಾಕಕ್ಕಾಗಲ್ಲವೆ. ಇದು ಕೂಡ ಗೋರಕ್ಷಣೆಯ ಒಂದು ಚಳವಳಿ. ವರಾಹ ಚಳವಳಿ.”
“ಗೋ ರಕ್ಷಣೆಗೆ, ಯಂತ ಚಳವಳಿ ಮಾಡಬೇಕು ಅಂತ ನಮಗೆ ಗೊತ್ತುಂಟು. ನೀವು ಹೇಯವಾದ ಸಲಹೆಗಳನ್ನು ಕೊಡುವುದು ಬೇಡ.”
“ಸ್ವಾಮೀಜಿ ಇನ್ನೊಂದು ವಿಷಯ. ನಿಮ್ಮ ಶಿಷ್ಯನಂತಿರೊ ಮೋದಿ ಈಗಾಗ್ಲೆ ಎರಡನೇ ಅವಧಿಗೆ ಪ್ರಧಾನಿಯಾಗವುರೆ. ಅವುರಿಂದ್ಲೆ ಗೋಹತ್ಯೆ ನಿಷೇಧ ಸಾಧ್ಯವಾಗಿಲ್ಲ. ಯಾಕಂದ್ರೆ ಗೋಮಾಂಸ ರಪ್ತಿನ ವರ್ತಕರೆಲ್ಲಾ ಬಿ.ಜೆ.ಪಿಗಳಂತೆ.”
“ಅದು ನಮಗೆ ಬೇಡ. ಗೋಹತ್ಯೆ ನಿಲ್ಲಬೇಕಷ್ಟೆ.”
“ಆಮೇಲೆ, ಗಂಗೆ ಶುದ್ಧೀಕರಣದ ಮಾತಾಡ್ತಿರಿ. ಮೋದಿ ಮೊದಲ ಬಾರಿಗೆ ಬಂದಾಗ್ಲಿಂದ ಇಲ್ಲಿವರಿಗೂ ಶುದ್ಧಿ ಮಾಡಕ್ಕಾಗಿಲ್ಲ. ಆಗದೆಯಿರೊ ಕೆಲಸ ಹೇಳ್ತಿರಿ. ಆಮೇಲೆ ಇನ್ನೊಂದು ವಿಷಯ ನಿಮ್ಮ ಧರ್ಮನೂ ಮುಸ್ಲಿಮ್ ಧರ್ಮನೂ ಒಂದೇ ಮಾಡಕ್ಕೊಂಟಿದ್ದಿರಂತಲ್ಲಾ?”
“ಯಾರು ಹೇಳಿದ್ದು?”
“ನೀವೇ ಹೇಳಿದ್ದಿರಿ. ಮಸೀದಿಗೆ ಹೇಗೆ ಮಹಿಳೆ ಪ್ರವೇಶ ಇಲ್ಲವೊ ಹಾಗೆ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆ ಹೋಗುವುದು ಬೇಡ ಅಂತೆ. ಅಂತೂ ಮುಸ್ಲಿಂ ಧರ್ಮ ನಿಮಗೆ ಆದರ್ಶ ಆಯ್ತು. ಯಾ ಹಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...