Homeಅಂಕಣಗಳುಥೂತ್ತೇರಿ | ಯಾಹೂಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

ಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

- Advertisement -
- Advertisement -

ಭಾರತದ ಪಾರ್ಲಿಮೆಂಟಿಗೆ ಪರ್ಯಾಯವಾಗಿ, ಆಗಾಗ್ಗೆ ಉಡುಪಿಯಲ್ಲಿ ಸೇರುವ ಅಷ್ಟ ಮಠಾಧಿಪತಿಗಳ ಧರ್ಮ, ಸಂಸತ್ ಈಚೆಗೆ ಸಾರ್ವಜನಿಕರು ಕತ್ತೆ, ನಾಯಿ, ಹಂದಿ, ಮಾಂಸ ತಿನ್ನುವಂತೆ ಉಪದೇಶ ಮಾಡಿರುವ ಬಗ್ಗೆ. ವಯೋವೃದ್ಧರು, ಜ್ಞಾನವೃದ್ಧರು ಹಾಗೂ ಪ್ರಾಬ್ಲಂ ವೃದ್ಧರೂ ಆದ ಪೇಜಾವರ ಶ್ರೀಗಳನ್ನ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ ‘ಕೃಷ್ಣಾ… ನೀ ಬೇಗನೆ ಬಾರೋ, ಬೇಗನೆ ಬಂದು ಮುಖವನು ತೋರೊ.

“ಹಲೋ ಯಾರು”
“ಸ್ವಾಮೀಜಿ ನಾನು ನಿಮ್ಮ ಭಕ್ತ ಯಾಹೂ.”
“ಹಿಂದೆ ನೀವು ಫೋನ್ ಮಾಡಿದ್ದಿರಲ್ಲವೆ.”
“ಹೌದು ಸ್ವಾಮೀಜಿ, ತಮ್ಮ ದನಿ ಕೇಳಬೇಕು ಅನ್ನಿಸಿದಾಗೆಲ್ಲ ಮಾತನಾಡ್ತಿನಿ.”
“ಈಗ ಯಂತಕ್ಕೆ ಫೋನ್ ಮಾಡಿದ್ದು.”
“ಉಷಾರಾಗಿದೀರ ಸ್ವಾಮೀಜಿ.”
“ನನಗೆಂತ ಆಗಿಲ್ಲ.”
‘ಅಲ್ಲ ನಿಮ್ಮ ದನಿ ಹಾಳುಬಾವಿಯಿಂದ ಕೇಳಿದಂಗೆ ಕೇಳತಾಯಿತ್ತು. ಅದಕ್ಕೆ ಮೊನ್ನೆ ಬಂದಿದ್ರಲ್ಲಾ ಸ್ವಾಮಿ ಅವುರಿದ್ದಾರ?”
“ಆ ಇವುನು ಸ್ವಾಮಿ. ಪೊಲೀಸರಿಂದ ತಪ್ಪಿಸಿಗಳಕ್ಕೆ ಚೂಡಿದಾರ ಇಕ್ಕಂಡು ಪರಾರಿಯಾಗಿದ್ದರಲ್ಲ?”
‘ಅಂತವರಾರು ಇಲ್ಲಿ ಬಂದಿರಲಿಲ್ಲ.’
“ಆ ಇವುನು ಸ್ವಾಮೀಜಿ ಮೈದಾನದಲ್ಲಿ ಕೂತಗಂಡು ಮೈನ್ಯಲ್ಲ ಮುರುದು ಮಟ್ಟಿಕಟ್ಟತನೆ, ಸೊಟ್ಟಬಾಯಿ ಗೊತ್ತಾಗಬಾರ್ದು ಅಂತ ಗಡ್ಡಬಿಟ್ಟವನೆ.”
“ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ.”
“ಸಹಿಸಿಕೋಬೇಕಾಗುತ್ತೆ ಸ್ವಾಮಿ.’
“ಯಂತಕ್ಕೆ.”
“ಮಾಂಸಾಹಾರಿಗಳಿಗೆ ಆತ, ಕತ್ತೆ ನಾಯಿ ಹಂದಿ ತಿನ್ನಿ ಅಂದವುನೆ.”
“ಗೋಮಾಂಸದ ಬದಲು ತಿನ್ನಿ ಅಂತ ಹೇಳಿದ್ದು.”
“ಅದವುರ ಅನುಭವದ ಮಾತ ಸಾಮೀಜಿ?”
“ಅನುಭವ ಆಗಲೇಬೇಕು ಅಂತ ಇಲ.”
“ಶಂಕರಾಚಾರ್ಯರು ಅನುಭವ ಪಡದು ಉಪದೇಶ ಮಾಡಿದ್ರಂತೆ.”
“ಅದು ಬೇರೆ ಇದು ಬೇರೆ.”
“ಎರಡೂ ಒಂದೆ ಬಾಬಾ ರಾಮದೇವ ಆಯುರ್ವೇದ ಪಂಡಿತರು ಯೋಗಪಟು ದೇಹದ ಅಂಗಾಂಗವೃದ್ಧಿಗೆ ಕೆಲವು ಪದಾರ್ಥನೂ ಮಾರ್ತರೆ. ಆ ಮಹಾಮಹಿಮರು ಕತ್ತೆ, ನಾಯಿ ಹಂದಿ, ತಿನ್ನಿ ಅನ್ನಬೇಕಾದ್ರೆ ಸುಮ್ಮಸುಮ್ಮನೆ ಹೇಳಿಲ್ಲ ಸ್ವಾಮಿ”
‘ಗೋವನ್ನು ಉಳಿಸಬೇಕಾದರೆ ಹಾಗೆ ಮಾಡಿ ಅಂತ ಹೇಳಿದ್ದು ‘ಅದರಿಂದ ಜಾಗತಿಕ ತಾಪಮಾನ ಕಡಮೆಯಾಗುತ್ತ?”
“ಹೌದು ಅವರು ಹಾಗೆ ಹೇಳಿದ್ದು.”
“ನಮ್ಮ ಜನ ಈಗಾಗ್ಲೆ ಕತ್ತೆ ನಾಯಿ ಹಂದಿ ತಿಂತಾಯಿದಾರೆ ಸ್ವಾಮಿ.”
“ಕತ್ತೆ ತಿನ್ನುವುದುಂಟ!?”
“ಮಲೆನಾಡು ಭಾಗದಲ್ಲಿ ಒಬ್ಬ ಹೋಟ್ಳು ಮಾಡಿಕೊಂಡು ಕಡವೆ ಮಾಂಸ ಅಂತ ಹೇಳಿ ಕತ್ತೆ ಮಾಂಸ ತಿನ್ನುಸ್ತಿದ್ದ. ಕತ್ತೆ ಖಾಲಿಯಾದ ಮೇಲೆ ಸಿಕ್ಕಿದ ಸ್ವಾಮಿ.”
“ಹಾಗಾದರೆ ಅವನು ಕೆಟ್ಟವನು.“
“ಮತ್ತೆ ರಾಮದೇವ ಕತ್ತೆ ತಿನ್ನಿ ಅಂದರೆ ನೀವು ಕೆಟ್ಟವನು ಅಂತಿರಿ?”
“ಪ್ರಾಣಿಗಳಿಗೆ ನಿಮ್ಮಷ್ಟೇ ಬದುಕುವ ಹಕ್ಕುಂಟು.”
“ಇದ್ಯಾವ ಸೀಮೆ ಮಾತು ಸ್ವಾಮಿ, ತಿನ್ನಿ ಅನ್ನಾರು ನೀವೆಯ, ಪ್ರಾಣಿಗಳು ನಿಮ್ಮಂಗೆ ಬದುಕಬೇಕು ಅನ್ನೋರು ನೀವೆಯ, ನಾಯಿ ತಿನ್ನಿ ಅಂತ ರಾಮದೇವ ಹೇಳಬೇಕಾದ್ರೆ ಅವುರು ತಿಂದಿದ್ದರೆ ಸ್ವಾಮಿ.”
“ಮಾತಿಗೆ ಹೇಳಿದ್ದನ್ನ ನೀವು ನಿಜ ಅಂತ ಹೇಳುವುದೆ?”
“ಸ್ವಾಮೀಜಿ. ನಮ್ಮ ಜನ ಆಗ್ಗೆ ನಾಯಿ ತಿಂತಾ ಅವುರೆ. ಬೆಂಗಳೂರಲ್ಲಿ ತಿಂತರೆ. ತಮುಳು ನಾಡಲ್ಲಯ ನಾಯಿ ಮಾಂಸ ರಪ್ತು ಮಾಡುವಾಗ್ಲೆ ಸಿಕ್ಕಿ ಬಿದ್ರು”
“ಜನಗಳು ಇಷ್ಟೊಂದು ಕೆಟ್ಟುಹೋಗಿದ್ದಾರೆ ಒಹ್ ದೇವರೇ”
“ಹೌದು ಸ್ವಾಮಿ ಜಾಸ್ತಿ ಮಾತಾಡಿದ್ರೇ, ಸ್ವಾಮಿಗಳನೂ ಬಲೆಹಾಕಿ ನರಿ ಹಿಡದಂಗೆ ಹಿಡಿದು ಕುಯ್ಕೊಂಡು ತಿಂತಾರೆ. ಹುಶಾರು ಒಬ್ಬೊಬ್ಬರೆ ತಿರುಗಾಡುಬೇಡಿ.”
“ನೀವು ಮಾಂಸಾಹಾರಿಗಳ?’
“ಹೌದು, ನನಗೆ ಹಂದಿ ತುಂಬ ಪ್ರಿಯವಾದ ಪ್ರಾಣಿ. ಅದನುಕಂಡ್ರೆ ನಡೆದಾಡೋ ಕೇಕ್ ತರ ಕಾಣುತ್ತೆ ಸ್ವಾಮಿ.”
“ಅಸಹ್ಯವಾಗಿ ಮಾತನಾಡಬೇಡಿ.”
“ಕೃಷ್ಣನ ವರಾಹವತಾರಕ್ಕೆ ನೀವು ಗೌರವಕೊಡ್ತಿರಿ ತಾನೆ?”
“ಹೌದು, ಪರಮಾತ್ಮನ ಆ ಅವತಾರದಿಂದಲೇ ಈ ಭೂಮಿ ಉಳಿದದ್ದು.”
“ಪರಮಾತ್ಮ ವರಾಹ ಅವತಾರ ಎತ್ತಿದ ಕಾರಣಕ್ಕೆ ವರಾಹದ ಮಾಂಸಕ್ಕೆ ಅಷ್ಟೊಂದು ರುಚಿ ಬಂದಿದ್ದು. ನನಗನ್ನಿಸಿದಂಗೆ ಈ ಜಗತ್ತಿನಲ್ಲಿ ಯಾವ ಪ್ರಾಣಿ ಮಾಂಸನೂ ಹಂದಿ ಮಾಂಸದಷ್ಟು ರುಚಿಯಾಗಿಲ್ಲ, ಯಾಕೆ ಅಂದ್ರೆ ಅದು ಕೃಷ್ಣಪರಮಾತ್ಮನ ಅವತಾರ.”
“ಅವತಾರವನ್ನು ಗೌರವಿಸಿ ಪೂಜೆ ಮಾಡಬೇಕು, ಅದನ್ನು ತಿನ್ನಲಿಕ್ಕೆ ಹೋಗಬಾರ್ದು”
“ಸ್ವಾಮೀಜಿ, ಕೃಷ್ಣ ಪರಮಾತ್ಮ ವರಾಹ ಅವತಾರ ತಾಳಿದ್ದ ಕಾರಣಕ್ಕೆ ಹಂದಿ ಮಾಂಸದಲ್ಲಿ ಯಾವುದೇ ಪ್ರಾಣಿ ಮಾಂಸದಲ್ಲಿ ಇರದೆ ಇರುವ ಥೈಮನ್ ಅಂತ ಒಂದಂಶ ಇದೆ. ಇದಕ್ಕೆ ಔಷಧಿ ಗುಣ ಇದೆ. ಮಲೆನಾಡು ಜನ ಕಡ್ಡಾಯವಾಗಿ ತಿಂತರೆ. ಬಯಲುಸೀಮೆ ಜನ ಗೊತ್ತಿಲ್ದೆ ತಿಂತಾರೆ. ಒಂದು ಕೆ.ಜಿ ತಿಂದ್ರೂ ಏನೂ ಆಗಲ್ಲ. ಈಚೆಗೆ ನಾನು ಎರಡು ಕೆ.ಜಿ ತಿಂದಿದ್ದೆ, ಆದ್ರೂ ಆರಾಮಾಗಿದ್ದೆ. ನಿದ್ರೆ ವಿಷಯದಲ್ಲಿ ಸ್ವಲ್ಪ ಹಂದಿ ನಡವಳಿಕೆ ಇರುತ್ತೆ ಅಷ್ಟೇ, ನೀವು ಗೋವುಗಳನ್ನ ಮಾಂಸಾಹಾರಿಗಳಿಂದ ಕಾಪಾಡಬೇಕಾದ್ರೆ, ವರಾಹ ಫಾರಂ ಮಾಡಿ, ಇಲ್ಲಿಂದ್ಲೆ ವಿತರಿಸಿದರೆ ಗೋ ಸಂತತಿ ವೃದ್ಧಿಯಾಗುತ್ತೆ.”
“ಯಂತ ಹೇಳುವುದು ನೀವು, ನಾವು ಹಂದಿ ಸಾಕುವುದ?”
“ಕೃಷ್ಣನ್ನೆ ಸಾಕ್ತಾಯಿದ್ದಿರಿ. ಅವನ ಅವತಾರ ಸಾಕಕ್ಕಾಗಲ್ಲವೆ. ಇದು ಕೂಡ ಗೋರಕ್ಷಣೆಯ ಒಂದು ಚಳವಳಿ. ವರಾಹ ಚಳವಳಿ.”
“ಗೋ ರಕ್ಷಣೆಗೆ, ಯಂತ ಚಳವಳಿ ಮಾಡಬೇಕು ಅಂತ ನಮಗೆ ಗೊತ್ತುಂಟು. ನೀವು ಹೇಯವಾದ ಸಲಹೆಗಳನ್ನು ಕೊಡುವುದು ಬೇಡ.”
“ಸ್ವಾಮೀಜಿ ಇನ್ನೊಂದು ವಿಷಯ. ನಿಮ್ಮ ಶಿಷ್ಯನಂತಿರೊ ಮೋದಿ ಈಗಾಗ್ಲೆ ಎರಡನೇ ಅವಧಿಗೆ ಪ್ರಧಾನಿಯಾಗವುರೆ. ಅವುರಿಂದ್ಲೆ ಗೋಹತ್ಯೆ ನಿಷೇಧ ಸಾಧ್ಯವಾಗಿಲ್ಲ. ಯಾಕಂದ್ರೆ ಗೋಮಾಂಸ ರಪ್ತಿನ ವರ್ತಕರೆಲ್ಲಾ ಬಿ.ಜೆ.ಪಿಗಳಂತೆ.”
“ಅದು ನಮಗೆ ಬೇಡ. ಗೋಹತ್ಯೆ ನಿಲ್ಲಬೇಕಷ್ಟೆ.”
“ಆಮೇಲೆ, ಗಂಗೆ ಶುದ್ಧೀಕರಣದ ಮಾತಾಡ್ತಿರಿ. ಮೋದಿ ಮೊದಲ ಬಾರಿಗೆ ಬಂದಾಗ್ಲಿಂದ ಇಲ್ಲಿವರಿಗೂ ಶುದ್ಧಿ ಮಾಡಕ್ಕಾಗಿಲ್ಲ. ಆಗದೆಯಿರೊ ಕೆಲಸ ಹೇಳ್ತಿರಿ. ಆಮೇಲೆ ಇನ್ನೊಂದು ವಿಷಯ ನಿಮ್ಮ ಧರ್ಮನೂ ಮುಸ್ಲಿಮ್ ಧರ್ಮನೂ ಒಂದೇ ಮಾಡಕ್ಕೊಂಟಿದ್ದಿರಂತಲ್ಲಾ?”
“ಯಾರು ಹೇಳಿದ್ದು?”
“ನೀವೇ ಹೇಳಿದ್ದಿರಿ. ಮಸೀದಿಗೆ ಹೇಗೆ ಮಹಿಳೆ ಪ್ರವೇಶ ಇಲ್ಲವೊ ಹಾಗೆ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆ ಹೋಗುವುದು ಬೇಡ ಅಂತೆ. ಅಂತೂ ಮುಸ್ಲಿಂ ಧರ್ಮ ನಿಮಗೆ ಆದರ್ಶ ಆಯ್ತು. ಯಾ ಹಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...