Homeಅಂಕಣಗಳುಥೂತ್ತೇರಿ | ಯಾಹೂಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

ಬಲೆ ಹಾಕಿ ನರಿ ಹಿಡದಂಗೆ ಹಿಡಿತರೆ ಹುಶಾರು : ಯಾಹೂ

- Advertisement -
- Advertisement -

ಭಾರತದ ಪಾರ್ಲಿಮೆಂಟಿಗೆ ಪರ್ಯಾಯವಾಗಿ, ಆಗಾಗ್ಗೆ ಉಡುಪಿಯಲ್ಲಿ ಸೇರುವ ಅಷ್ಟ ಮಠಾಧಿಪತಿಗಳ ಧರ್ಮ, ಸಂಸತ್ ಈಚೆಗೆ ಸಾರ್ವಜನಿಕರು ಕತ್ತೆ, ನಾಯಿ, ಹಂದಿ, ಮಾಂಸ ತಿನ್ನುವಂತೆ ಉಪದೇಶ ಮಾಡಿರುವ ಬಗ್ಗೆ. ವಯೋವೃದ್ಧರು, ಜ್ಞಾನವೃದ್ಧರು ಹಾಗೂ ಪ್ರಾಬ್ಲಂ ವೃದ್ಧರೂ ಆದ ಪೇಜಾವರ ಶ್ರೀಗಳನ್ನ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ ‘ಕೃಷ್ಣಾ… ನೀ ಬೇಗನೆ ಬಾರೋ, ಬೇಗನೆ ಬಂದು ಮುಖವನು ತೋರೊ.

“ಹಲೋ ಯಾರು”
“ಸ್ವಾಮೀಜಿ ನಾನು ನಿಮ್ಮ ಭಕ್ತ ಯಾಹೂ.”
“ಹಿಂದೆ ನೀವು ಫೋನ್ ಮಾಡಿದ್ದಿರಲ್ಲವೆ.”
“ಹೌದು ಸ್ವಾಮೀಜಿ, ತಮ್ಮ ದನಿ ಕೇಳಬೇಕು ಅನ್ನಿಸಿದಾಗೆಲ್ಲ ಮಾತನಾಡ್ತಿನಿ.”
“ಈಗ ಯಂತಕ್ಕೆ ಫೋನ್ ಮಾಡಿದ್ದು.”
“ಉಷಾರಾಗಿದೀರ ಸ್ವಾಮೀಜಿ.”
“ನನಗೆಂತ ಆಗಿಲ್ಲ.”
‘ಅಲ್ಲ ನಿಮ್ಮ ದನಿ ಹಾಳುಬಾವಿಯಿಂದ ಕೇಳಿದಂಗೆ ಕೇಳತಾಯಿತ್ತು. ಅದಕ್ಕೆ ಮೊನ್ನೆ ಬಂದಿದ್ರಲ್ಲಾ ಸ್ವಾಮಿ ಅವುರಿದ್ದಾರ?”
“ಆ ಇವುನು ಸ್ವಾಮಿ. ಪೊಲೀಸರಿಂದ ತಪ್ಪಿಸಿಗಳಕ್ಕೆ ಚೂಡಿದಾರ ಇಕ್ಕಂಡು ಪರಾರಿಯಾಗಿದ್ದರಲ್ಲ?”
‘ಅಂತವರಾರು ಇಲ್ಲಿ ಬಂದಿರಲಿಲ್ಲ.’
“ಆ ಇವುನು ಸ್ವಾಮೀಜಿ ಮೈದಾನದಲ್ಲಿ ಕೂತಗಂಡು ಮೈನ್ಯಲ್ಲ ಮುರುದು ಮಟ್ಟಿಕಟ್ಟತನೆ, ಸೊಟ್ಟಬಾಯಿ ಗೊತ್ತಾಗಬಾರ್ದು ಅಂತ ಗಡ್ಡಬಿಟ್ಟವನೆ.”
“ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ.”
“ಸಹಿಸಿಕೋಬೇಕಾಗುತ್ತೆ ಸ್ವಾಮಿ.’
“ಯಂತಕ್ಕೆ.”
“ಮಾಂಸಾಹಾರಿಗಳಿಗೆ ಆತ, ಕತ್ತೆ ನಾಯಿ ಹಂದಿ ತಿನ್ನಿ ಅಂದವುನೆ.”
“ಗೋಮಾಂಸದ ಬದಲು ತಿನ್ನಿ ಅಂತ ಹೇಳಿದ್ದು.”
“ಅದವುರ ಅನುಭವದ ಮಾತ ಸಾಮೀಜಿ?”
“ಅನುಭವ ಆಗಲೇಬೇಕು ಅಂತ ಇಲ.”
“ಶಂಕರಾಚಾರ್ಯರು ಅನುಭವ ಪಡದು ಉಪದೇಶ ಮಾಡಿದ್ರಂತೆ.”
“ಅದು ಬೇರೆ ಇದು ಬೇರೆ.”
“ಎರಡೂ ಒಂದೆ ಬಾಬಾ ರಾಮದೇವ ಆಯುರ್ವೇದ ಪಂಡಿತರು ಯೋಗಪಟು ದೇಹದ ಅಂಗಾಂಗವೃದ್ಧಿಗೆ ಕೆಲವು ಪದಾರ್ಥನೂ ಮಾರ್ತರೆ. ಆ ಮಹಾಮಹಿಮರು ಕತ್ತೆ, ನಾಯಿ ಹಂದಿ, ತಿನ್ನಿ ಅನ್ನಬೇಕಾದ್ರೆ ಸುಮ್ಮಸುಮ್ಮನೆ ಹೇಳಿಲ್ಲ ಸ್ವಾಮಿ”
‘ಗೋವನ್ನು ಉಳಿಸಬೇಕಾದರೆ ಹಾಗೆ ಮಾಡಿ ಅಂತ ಹೇಳಿದ್ದು ‘ಅದರಿಂದ ಜಾಗತಿಕ ತಾಪಮಾನ ಕಡಮೆಯಾಗುತ್ತ?”
“ಹೌದು ಅವರು ಹಾಗೆ ಹೇಳಿದ್ದು.”
“ನಮ್ಮ ಜನ ಈಗಾಗ್ಲೆ ಕತ್ತೆ ನಾಯಿ ಹಂದಿ ತಿಂತಾಯಿದಾರೆ ಸ್ವಾಮಿ.”
“ಕತ್ತೆ ತಿನ್ನುವುದುಂಟ!?”
“ಮಲೆನಾಡು ಭಾಗದಲ್ಲಿ ಒಬ್ಬ ಹೋಟ್ಳು ಮಾಡಿಕೊಂಡು ಕಡವೆ ಮಾಂಸ ಅಂತ ಹೇಳಿ ಕತ್ತೆ ಮಾಂಸ ತಿನ್ನುಸ್ತಿದ್ದ. ಕತ್ತೆ ಖಾಲಿಯಾದ ಮೇಲೆ ಸಿಕ್ಕಿದ ಸ್ವಾಮಿ.”
“ಹಾಗಾದರೆ ಅವನು ಕೆಟ್ಟವನು.“
“ಮತ್ತೆ ರಾಮದೇವ ಕತ್ತೆ ತಿನ್ನಿ ಅಂದರೆ ನೀವು ಕೆಟ್ಟವನು ಅಂತಿರಿ?”
“ಪ್ರಾಣಿಗಳಿಗೆ ನಿಮ್ಮಷ್ಟೇ ಬದುಕುವ ಹಕ್ಕುಂಟು.”
“ಇದ್ಯಾವ ಸೀಮೆ ಮಾತು ಸ್ವಾಮಿ, ತಿನ್ನಿ ಅನ್ನಾರು ನೀವೆಯ, ಪ್ರಾಣಿಗಳು ನಿಮ್ಮಂಗೆ ಬದುಕಬೇಕು ಅನ್ನೋರು ನೀವೆಯ, ನಾಯಿ ತಿನ್ನಿ ಅಂತ ರಾಮದೇವ ಹೇಳಬೇಕಾದ್ರೆ ಅವುರು ತಿಂದಿದ್ದರೆ ಸ್ವಾಮಿ.”
“ಮಾತಿಗೆ ಹೇಳಿದ್ದನ್ನ ನೀವು ನಿಜ ಅಂತ ಹೇಳುವುದೆ?”
“ಸ್ವಾಮೀಜಿ. ನಮ್ಮ ಜನ ಆಗ್ಗೆ ನಾಯಿ ತಿಂತಾ ಅವುರೆ. ಬೆಂಗಳೂರಲ್ಲಿ ತಿಂತರೆ. ತಮುಳು ನಾಡಲ್ಲಯ ನಾಯಿ ಮಾಂಸ ರಪ್ತು ಮಾಡುವಾಗ್ಲೆ ಸಿಕ್ಕಿ ಬಿದ್ರು”
“ಜನಗಳು ಇಷ್ಟೊಂದು ಕೆಟ್ಟುಹೋಗಿದ್ದಾರೆ ಒಹ್ ದೇವರೇ”
“ಹೌದು ಸ್ವಾಮಿ ಜಾಸ್ತಿ ಮಾತಾಡಿದ್ರೇ, ಸ್ವಾಮಿಗಳನೂ ಬಲೆಹಾಕಿ ನರಿ ಹಿಡದಂಗೆ ಹಿಡಿದು ಕುಯ್ಕೊಂಡು ತಿಂತಾರೆ. ಹುಶಾರು ಒಬ್ಬೊಬ್ಬರೆ ತಿರುಗಾಡುಬೇಡಿ.”
“ನೀವು ಮಾಂಸಾಹಾರಿಗಳ?’
“ಹೌದು, ನನಗೆ ಹಂದಿ ತುಂಬ ಪ್ರಿಯವಾದ ಪ್ರಾಣಿ. ಅದನುಕಂಡ್ರೆ ನಡೆದಾಡೋ ಕೇಕ್ ತರ ಕಾಣುತ್ತೆ ಸ್ವಾಮಿ.”
“ಅಸಹ್ಯವಾಗಿ ಮಾತನಾಡಬೇಡಿ.”
“ಕೃಷ್ಣನ ವರಾಹವತಾರಕ್ಕೆ ನೀವು ಗೌರವಕೊಡ್ತಿರಿ ತಾನೆ?”
“ಹೌದು, ಪರಮಾತ್ಮನ ಆ ಅವತಾರದಿಂದಲೇ ಈ ಭೂಮಿ ಉಳಿದದ್ದು.”
“ಪರಮಾತ್ಮ ವರಾಹ ಅವತಾರ ಎತ್ತಿದ ಕಾರಣಕ್ಕೆ ವರಾಹದ ಮಾಂಸಕ್ಕೆ ಅಷ್ಟೊಂದು ರುಚಿ ಬಂದಿದ್ದು. ನನಗನ್ನಿಸಿದಂಗೆ ಈ ಜಗತ್ತಿನಲ್ಲಿ ಯಾವ ಪ್ರಾಣಿ ಮಾಂಸನೂ ಹಂದಿ ಮಾಂಸದಷ್ಟು ರುಚಿಯಾಗಿಲ್ಲ, ಯಾಕೆ ಅಂದ್ರೆ ಅದು ಕೃಷ್ಣಪರಮಾತ್ಮನ ಅವತಾರ.”
“ಅವತಾರವನ್ನು ಗೌರವಿಸಿ ಪೂಜೆ ಮಾಡಬೇಕು, ಅದನ್ನು ತಿನ್ನಲಿಕ್ಕೆ ಹೋಗಬಾರ್ದು”
“ಸ್ವಾಮೀಜಿ, ಕೃಷ್ಣ ಪರಮಾತ್ಮ ವರಾಹ ಅವತಾರ ತಾಳಿದ್ದ ಕಾರಣಕ್ಕೆ ಹಂದಿ ಮಾಂಸದಲ್ಲಿ ಯಾವುದೇ ಪ್ರಾಣಿ ಮಾಂಸದಲ್ಲಿ ಇರದೆ ಇರುವ ಥೈಮನ್ ಅಂತ ಒಂದಂಶ ಇದೆ. ಇದಕ್ಕೆ ಔಷಧಿ ಗುಣ ಇದೆ. ಮಲೆನಾಡು ಜನ ಕಡ್ಡಾಯವಾಗಿ ತಿಂತರೆ. ಬಯಲುಸೀಮೆ ಜನ ಗೊತ್ತಿಲ್ದೆ ತಿಂತಾರೆ. ಒಂದು ಕೆ.ಜಿ ತಿಂದ್ರೂ ಏನೂ ಆಗಲ್ಲ. ಈಚೆಗೆ ನಾನು ಎರಡು ಕೆ.ಜಿ ತಿಂದಿದ್ದೆ, ಆದ್ರೂ ಆರಾಮಾಗಿದ್ದೆ. ನಿದ್ರೆ ವಿಷಯದಲ್ಲಿ ಸ್ವಲ್ಪ ಹಂದಿ ನಡವಳಿಕೆ ಇರುತ್ತೆ ಅಷ್ಟೇ, ನೀವು ಗೋವುಗಳನ್ನ ಮಾಂಸಾಹಾರಿಗಳಿಂದ ಕಾಪಾಡಬೇಕಾದ್ರೆ, ವರಾಹ ಫಾರಂ ಮಾಡಿ, ಇಲ್ಲಿಂದ್ಲೆ ವಿತರಿಸಿದರೆ ಗೋ ಸಂತತಿ ವೃದ್ಧಿಯಾಗುತ್ತೆ.”
“ಯಂತ ಹೇಳುವುದು ನೀವು, ನಾವು ಹಂದಿ ಸಾಕುವುದ?”
“ಕೃಷ್ಣನ್ನೆ ಸಾಕ್ತಾಯಿದ್ದಿರಿ. ಅವನ ಅವತಾರ ಸಾಕಕ್ಕಾಗಲ್ಲವೆ. ಇದು ಕೂಡ ಗೋರಕ್ಷಣೆಯ ಒಂದು ಚಳವಳಿ. ವರಾಹ ಚಳವಳಿ.”
“ಗೋ ರಕ್ಷಣೆಗೆ, ಯಂತ ಚಳವಳಿ ಮಾಡಬೇಕು ಅಂತ ನಮಗೆ ಗೊತ್ತುಂಟು. ನೀವು ಹೇಯವಾದ ಸಲಹೆಗಳನ್ನು ಕೊಡುವುದು ಬೇಡ.”
“ಸ್ವಾಮೀಜಿ ಇನ್ನೊಂದು ವಿಷಯ. ನಿಮ್ಮ ಶಿಷ್ಯನಂತಿರೊ ಮೋದಿ ಈಗಾಗ್ಲೆ ಎರಡನೇ ಅವಧಿಗೆ ಪ್ರಧಾನಿಯಾಗವುರೆ. ಅವುರಿಂದ್ಲೆ ಗೋಹತ್ಯೆ ನಿಷೇಧ ಸಾಧ್ಯವಾಗಿಲ್ಲ. ಯಾಕಂದ್ರೆ ಗೋಮಾಂಸ ರಪ್ತಿನ ವರ್ತಕರೆಲ್ಲಾ ಬಿ.ಜೆ.ಪಿಗಳಂತೆ.”
“ಅದು ನಮಗೆ ಬೇಡ. ಗೋಹತ್ಯೆ ನಿಲ್ಲಬೇಕಷ್ಟೆ.”
“ಆಮೇಲೆ, ಗಂಗೆ ಶುದ್ಧೀಕರಣದ ಮಾತಾಡ್ತಿರಿ. ಮೋದಿ ಮೊದಲ ಬಾರಿಗೆ ಬಂದಾಗ್ಲಿಂದ ಇಲ್ಲಿವರಿಗೂ ಶುದ್ಧಿ ಮಾಡಕ್ಕಾಗಿಲ್ಲ. ಆಗದೆಯಿರೊ ಕೆಲಸ ಹೇಳ್ತಿರಿ. ಆಮೇಲೆ ಇನ್ನೊಂದು ವಿಷಯ ನಿಮ್ಮ ಧರ್ಮನೂ ಮುಸ್ಲಿಮ್ ಧರ್ಮನೂ ಒಂದೇ ಮಾಡಕ್ಕೊಂಟಿದ್ದಿರಂತಲ್ಲಾ?”
“ಯಾರು ಹೇಳಿದ್ದು?”
“ನೀವೇ ಹೇಳಿದ್ದಿರಿ. ಮಸೀದಿಗೆ ಹೇಗೆ ಮಹಿಳೆ ಪ್ರವೇಶ ಇಲ್ಲವೊ ಹಾಗೆ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆ ಹೋಗುವುದು ಬೇಡ ಅಂತೆ. ಅಂತೂ ಮುಸ್ಲಿಂ ಧರ್ಮ ನಿಮಗೆ ಆದರ್ಶ ಆಯ್ತು. ಯಾ ಹಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...