Homeಅಂಕಣಗಳು"ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ"

“ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

- Advertisement -
- Advertisement -

ನಾವು ಇದುವರೆಗೂ ಹೆಡಗೇವಾರ್‌ರನ್ನ, ಹೆಡಗೇವಾರ್ ಎಂದು ಭಾವಿಸಿದ್ದರೆ, ಎಸ್. ಎಲ್. ಭೈರಪ್ಪನವರು ಪರಮಪೂಜ್ಯ ಹೆಡಗೇವಾರ್ ಎಂದು ಕರೆದು ಈ ನಾಡಿಗೇ ಅಚ್ಚರಿ ಮೂಡಿಸಿದ್ದಾರಲ್ಲಾ. ನಾವು ತಿಳಿದಂತೆ ಭೈರಪ್ಪನ ಪೂಜ್ಯರು ಸಂತೇಶಿವರದ ಚನ್ನಿಗ ರಾಯ ಅಂತೆ. ಅಥವ ಆ ಹೆಸರಿನ ಆಸುಪಾಸಿನವರು. ಆದರೀಗ
ಭೈರಪ್ಪ ನಮ್ಮ ಪರಮಪೂಜ್ಯರು ಎನ್ನಲಾಗಿ, ಪರಮಪೂಜ್ಯ ಎಂದರೆ ಪಿತಾಮಹರ ಸಮಾನ ಎಂಬ ಅರ್ಥವು ಬರುವುದರಿಂದ ಸದರಿ ಹೆಡೆಗೆವಾರ್ ಭೈರಪ್ಪನವರಿಗೆ ಪಿತಾಮಹನ ಸಮನಾಗಿರುವ ಪ್ರಯುಕ್ತ ಅವರು ಪಠ್ಯದಲ್ಲಿ ಇದ್ದರೆ ತಪ್ಪೇನು ಎನ್ನುವ ವಾದವೂಂದು ಮುಗ್ಧ ಜನರಿಂದ ಶುರುವಾಗಿದೆಯಂತಲ್ಲಾ. ಈ ಸಂಚನ್ನ ಅರಿತೇ ಭೈರಪ್ಪ ಅಳೆದು ತೂಗಿ ಪರಮಪೂಜ್ಯ ಪದ ಎಸೆದಿದ್ದಾರಂತಲ್ಲಾ.

ಸದರಿ ಭೈರಪ್ಪರನ್ನ ಸಂತೆಶಿವರದ ಒಕ್ಕಲಿಗರು ಕುರುಬರು ಅಕ್ಕಿ ರಾಗಿ ಕಾಯಿ ಕಸಿ ಕೊಟ್ಟು ಸಾಕಿದರು. ಓದಲು ಸಹಾಯ ಮಾಡಿದರು. ಅದರೆ ಭೈರಪ್ಪ ಬೆಳೆದು ದೂಡ್ಡವರಾಗಿ ವಿದ್ವಾಂಸನಾಗಿ ಆರೆಸ್ಸೆಸ್ ಪ್ರೋಫೆಸರ್‌ರಾದರೂ ಸಂತೇಶಿವರದ ಜನಕ್ಕೆ ಮಹಾದ್ರೋಹವಾಗಿ ಕಂಡೇ ಇಲ್ಲವಂತಲ್ಲಾ. ಸದ್ಯ ಪಠ್ಯ ಪರಿಷ್ಕರಣವಷ್ಟೇ ಅಲ್ಲ. ಈ ಸಾಹಿತಿಗಳು ಜಗಳಗಂಟರು, ಕಳೆದ ಅರವತ್ತು ವರ್ಷದಿಂದ ನನ್ನ ವಿರುಧ್ಧ ಜಗಳವಾಡಿದ್ದಾರೆ, ಈಗಲೂ ಅವರ ಮುಂದುವರೆದ ಸಂತತಿ ಈ ಎಲ್ಲದಕ್ಕೂ ಜಗಳ ಕಾಯುತ್ತಿದೆ ಎಂದರಂತಲ್ಲಾ. ಹೀಗಿರುವಾಗ ಈ ಭೈರಪ್ಪನ ಪಾದಗೋಚರಿಸಿದ ಕೂಡಲೇ ಡೈ ಹೊಡೆಯುವ ಜ್ಞಾನಪೀಠಿ ಕಂಬಾರರು ಈವರೆಗೆ ಬಾಯನ್ನೆ ಬಿಡದಿರುವುದು ಯಾರಿಗೂ ಆಶ್ಚರ್ಯ ತಂದಿಲ್ಲವಂತಲ್ಲಾ ಥೂತ್ತೇರಿ

******

ಇದ್ದಕ್ಕಿದ್ದಂತೆ ಆಮ್‌ಆದ್ಮಿ ಪಕ್ಷ ಈಶ್ವರಪ್ಪನ ಮೇಲೆ ಕಾರ್ಯಕ್ರಮ ಹಾಕಿಕೊಂಡು, ಅಂದು ಕಾಡುಗಳ್ಳ ವೀರಪ್ಪ ಇಂದು ಶಿವಮೊಗ್ಗ ಕಳ್ಳ ಈಶ್ವರಪ್ಪ ಎಂಬ ಪ್ಲೆಕ್ಸ್‌ಗಳನ್ನು ಹಿಡಿದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ಬಗ್ಗೆ ಕುತೂಹಲಗೊಂಡು, ಈ ಬಗ್ಗೆ ಈಶ್ವರಪ್ಪನವರಿಗೆ ಪೋನ್ ಮಾಡಿ ತಿಳಿದುಕೊಳ್ಳಬೇಕೆನಿಸಿದ ಕೂಡಲೇ, ಯಡೂರಪ್ಪನವರ ಕಡೆಯಿಂದ ಪೋನ್ ನಂಬರ್ ಪಡೆದು ಪೋನ್ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ ’ನಮಸ್ತೇ ಸದಾವತ್ಸಲೇ ಮಾತೃಭೂಮಿ’.

“ಹಲೊ ಹಲೊ ನಾನು ಸರ್ ಯಾಹೂ”.

“ಏನ್ರಿ ಯಾಹೂ ಭಾಳ ದಿನದ ಮ್ಯಾಲೆ ಫೋನ್ ಮಾಡಿದ್ದೀರಿ”.

“ಒಂದಿಷ್ಟು ಮಾತಾಡಬೇಕು ಸಾರ್”.

“ಬನ್ರಿ ಮನಿಗೆ ಆರಾಮಾಗಿದ್ದಿನಿ ಮಾತಾಡನ”.

“ಬರ್ತಿನಿ ಸಾರ್ ಯಾವಾಗ್ಲಾರ ಬಿಡುವು ಮಾಡಿಕೊಂಡು. ಮಾತಾಡನ. ಈಗೊಂದೆರಡು ಪ್ರಶ್ನೆ ಸಾರ್”.

“ಕೇಳಿ, ಅದಕೆ ಅಲವ ನೀವು ಪೋನ್ ಮಾಡಿದ್ದು. ನಿಮ್ಮ ಪತ್ರಕರ್ತರ ಚಾಳಿ ನಂಗೊತ್ತಿಲ್ವ”.

“ಸಿದ್ದರಾಮಯ್ಯ ಆರೆಸ್ಸೆಸ್ ಬಗ್ಗೆ ಭಯ ಅಂದವುರಲ್ಲ ಸಾರ್”.

“ಭಯನೆ ಮತ್ತೆ. ಅರೆಸ್ಸೆಸ್‌ಗೆ ಸಿದ್ದರಾಮಯ್ಯನೂ ಹೆದರಬೇಕು, ಮತ್ತೊಬ್ಬನೂ ಹೆದರಬೇಕು”.

“ನಿಜ ಸಾರ್ ಅಂತ ಗಾಂಧಿನೆ ಕೊಂದಾಕಿದ ಗೋಡ್ಸೆ ಪ್ರಕರಣದಲ್ಲಿ ಆರೋಪಿತನಾಗಿ ಜಯಿಸಿಗಂಡ ಸಂಘಟನೆ ಅದು. ಇನ್ನ ಸಿದ್ದರಾಮಯ್ಯ ಯಾವ ಲೆಕ್ಕ ಅಲ್ವೆ”.

“ರಿ ಗಾಂಧಿ ಕೊಂದಿದ್ದು ಅರೆಸ್ಸೆಸ್ ಅಲ್‌ಕಂಡ್ರಿ. ಅಲ್ಲಿ ಬೇರೆ ಕಡಿಂದ ಒಂದು ಗುಂಡು ಬಂತು. ಅದನ್ನ ಯಾರು ತನಿಖೆ ಮಾಡಲಿಲ್ಲ”.

“ಪಾಕಿಸ್ತಾನದ ಕಡಿಂದ ಬಂದಿರಬೇಕಲ್ಲವ ಸಾರ್”.

“ಇನ್ನೇನ್ರಿ ಮತ್ತೆ, ಆ ಬಗ್ಗೆ ತನಿಖೆನೆ ಮಾಡಲಿಲ್ಲ”.

“ಅರೆಸ್ಸೆಸ್ ವಿಷಯಕ್ಕೆ ಬಂದ್ರೆ ಉರುದೋಯ್ತಿರಿ ಅಂತ ಸಿದ್ದರಾಮಯ್ಯನ್ನ ಹೆಸರಿಸಿದಿರಿ. ಯಾಕ್ ಸಾರ್”.

“ಅರೆಸ್ಸೆಸ್ ಒಂದು ದೇಶಭಕ್ತಿ ಸಂಘಟನೆ ಕಂಡ್ರಿ. ಪಾಪ ಅವುರು ಮನೆಮಠದ ಯೋಚನೆ ಬಿಟ್ಟು, ಸಂಸಾರದ ಸುಖ ಬಿಟ್ಟು ಯಾವಾಗ್ಲೂ ದೇಶದ ಬಗ್ಗೆ ಯೋಚನೆ ಮಾಡ್ತರೆ”.

“ಹುಡುಗರಿಗೆ ದೇಶಭಕ್ತಿ ಕಲುಸ್ತರೆ. ಹುಡುಗರನ್ನ ಜೊತೆಲೆ ಇಟ್ಟುಕೊಂಡು ದೇಶಭಕ್ತಿ ಅಂದ್ರೇನು, ನಮ್ಮ ಸಂಸ್ಕೃತಿ ಅಂದ್ರೇನು ಅಂತ ಹೇಳಿಕೊಡ್ತಾರೆ”.

“ನೀವು ಆರೆಸ್ಸೆಸ್‌ನಲ್ಲಿ ಇದ್ರಲ್ಲವ ಸಾರ್?”

“ಈಗ್ಲು ಇದ್ದಿನಿ”.

“ಮತ್ತೆ ಸಂಸಾರಸ್ಥರಾಗಿದಿರಿ. ಕೋಟ್ಯಾನು ಕೋಟಿ ಆಸ್ತಿ ಮಾಡಿದಿರಿ. ಭ್ರಷ್ಟಾಚಾರ ಮಾಡದು ದೇಶದ್ರೋಹದ ಕೆಲಸವಂತೆ. ಅಂತ ಕೆಲಸ ಮಾಡಿ ಮಂತ್ರಿಗಿರಿ ಕಳಕೊಂಡು ಮನೆಲಿದಿರಿ. ಮತ್ತೆ ಆರೆಸ್ಸೆಸ್ಸು ಅಂತ ಹೇಳ್ತಿರಿ. ಇದ್ಯಾರಿಗೆ ಸಾರ್?”

“ರೀ ಯಾಹು ತಲೆಹರಟೆ ಪ್ರಶ್ನೆ ಬೇಡಿ. ಆರೆಸ್ಸೆಸ್ ಬಗ್ಗೆ ಕೇಳಿ”.

“ಹೇಳಿ ಸರ್”.

“ಆರೆಸ್ಸೆಸ್ ಒಂದು ಸುಸಂಸ್ಕೃತ ಸಂಸ್ಥೆ. ಅದು ಒಳ್ಳೆ ಸಂಸ್ಕೃತಿ ಕಲಸತ್ತೆ. ಒಳ್ಳೆ ಭಾಷೆ ಕಲಸತ್ತೆ”.

“ಅಂಗಾದ್ರೆ ನೀವು ಅವೆರಡನ್ನೂ ಕಲೀಲ್ಲವಾ ಸಾರ್”.

“ಯಾಕ್ರಿ ಅಂಗಂತಿರಿ”.

“ದನ ತಿಂದರೆ ಗಂಟಲು ಸೀಳಬೇಕು, ಕೈ ಕಡಿಬೇಕು ಅಂತಿರಿ. ಸಿದ್ದರಾಮಯ್ಯನ್ನ ಹುಚ್ಚ ಅಂತಿರಿ. ಹೆಣ್ಣು ಮಕ್ಕಳ ಬೈತಿರಿ. ನೀವಷ್ಟೇ ಅಲ್ಲ. ಅವನ್ಯಾರೊ ಸಿ.ಟಿ. ರವಿ, ಪ್ರತಾಪ, ನಿಮ್ಮ ಕಟೀಲ ಇವುರ ಮಾತಲ್ಲಿ ನಾನು ಸಂಸ್ಕೃತಿನೂ ನೋಡಲಿಲ್ಲ, ಭಾಷೆನೂ ನೋಡಲಿಲ್ಲ”.

“ಸಿಟ್ಟು ಬಂದ್ರೆ ಏನು ಮಾಡಕ್ಕಾಯ್ತದ್ರೀ?”

“ಸಂಸ್ಕೃತಿ ಅಂದ್ರೆ ಸಿಟ್ಟು ಗೆಲ್ಲೋದೆ ಅಲವಾ ಸಾರ್”.

“ಈ ಸಾಬರು ಮಾಡೋ ಗೂಂಡಾ ಕೆಲಸ, ಕ್ರಿಶ್ಚಿಯನ್ರು ಮಾಡೋ ಮತಾಂತರ ನೋಡಿಕಂಡು ಸುಮ್ಮನಿರಬೇಕೇನ್ರಿ?”

“ಸಾರ್ ಸಾಬರು ಗೂಂಡಾಗಳಾದ್ರೆ ಅವರನ್ನ ವಿಚಾರಿಸಿಕೊಳ್ಳೋಕೆ ಪೋಲಿಸ್ ಅದೆ. ಇನ್ನ ಕ್ರಿಶ್ಚಿಯನ್ರು ಮತಾಂತರ ಮಾಡ್ತರೆ ಅಂದ್ರೆ, ಅವರ್‍ನ ಕರೆದು ನೀವೆ ಕುರುಬರನ್ನಾಗಿ ಮತಾಂತರ ಮಾಡಿ ಸಾರ್”.

“ಯಾರು ಕುರುಬರಾಗಕ್ಕೆ ಬರ್‍ತಾರ್ರೀ”.

“ಬತ್ತರೆ ಸಾರ್, ಗುಡಿಸಲ್ಲಿರೋ ದಕ್ಕಲಿಗರು, ಕೊರಮರು, ಕೊರಚರು ಇವ್ರರತ್ರ ಹೋಗಿ ತಲಾ ಒಂದು ಲಕ್ಷಕೊಟ್ಟು ಕುರುಬರ ಮಾಡಿದ್ರೆ. ಅವರ ಲೀಡ್ರಾಗಿ. ನೀವು ಅಹಿಂದಾ ಸಿದ್ದರಾಮಯ್ಯನ್ನೆ ತೆಗೆದು ವರುಣಾ ನಾಲೆಗೆ ಯಸಿಬಹುದು”.

“ಅಂಗೆ ಮಾಡಕ್ಕೆ ಆರೆಸ್ಸೆಸ್ಸಿನವುರು ಬುಡಲ್ಲ ಕಂಡ್ರಿ”.

“ಯಾಕೆ ಸಾರ್”.

“ನಮ್ಮ ಹಿಂದೂ ಜನ ಏನಾಗಿದ್ದೆವೋ, ಅವುರು ಅಂಗೇಯಿದ್ದು, ನಮಿಗೆ ಸಪೋರ್ಟು ಮಾಡಬೇಕು ಅನ್ನದು ನಮ್ಮ ಸಿದ್ದಾಂತ”.

“ನಿಜ ಸಾರ್. ಇಲ್ದೆಯಿದ್ರೆ ನೀವು ಕುರುಬರ ಜಾತಿ ಬುಟ್ಟು ಮಾಧ್ವರಾಯ್ತಿದ್ರಿ ಅಲ್ವ”.

“ಇಲ್ಲ ಆಯ್ತಿರಲಿಲ್ಲ. ನಾವು ನಮ್ಮನಮ್ಮ ಜಾತಿಲಿ ಗಟ್ಟಿಯಾಗಿ ನಿಂತು ಹಿಂದೂ ಧರ್ಮನ ಕಾಪಾಡಬೇಕು”.

“ಕಾಪಾಡಕ್ಕೆ ಅದೇನು ಪ್ರಾಣಿನೋ, ಪಕ್ಷಿನೋ ಅಥವಾ ನಿಮ್ಮ ಗೋಮಾತೆನೊ”?

“ಗೋ ಮಾತೆನೆ ಅನ್‌ಕಳಿ”.

“ಸಾರ್ ನಿಮ್ಮ ಗೋಮಾತೆ ಕಾಳಜಿ ನನಿಗೆ ಗೊತ್ತು. ಯಾವ ಬಿ.ಜೆ.ಪಿ. ಆರೆಸ್ಸೆಸ್‌ನವರ ಮನೆಲೂ ಈ ಗೋವುಗಳಿಲ್ಲ. ಗೋಹತ್ಯೆ ನಿಷೇಧ ಮಾಡಿದ್ರಿ. ಗೋಶಾಲೆ ಮಾಡಲಿಲ್ಲ. ದನಗಳ ಜೊತೆಗೆ ರೈತನೂ ಬಡಕಲಾದ. ನಿಮ್ಮ ಹಿಂದೂ ಧರ್ಮದ ರಕ್ಷಣೆ ನನಿಗ್ಯಾಕೊ ಗೋರಕ್ಷಣೆ ತರ ಕಾಣ್ತಾ ಅದೆ”.

“ಅದಕ್ಯಲ್ಲ ಟೈಂ ಬೇಕು ಕಂಡ್ರಿ”.

“ಗೋವುಗಳೆಲ್ಲ ಸತ್ತಮ್ಯಾಲೆ ಅನ್ನಿ. ಈಗ್ ನೋಡಿದ್ರೆ ಯಲ್ಲಾನು ಬಿಟ್ಟು ಮಸೀದಿಗೆ ನುಗ್ಗಕೋಯ್ತಿರಿ. ಇದು ಮುಂದೆ ನಿಮಗೇ ತಿರುಗುಬಾಣಾಗಿ ಜೈನ ಮಂದಿರ ಬೌದ್ಧ ಸ್ತೂಪ ಯಲ್ಲಾ ಸದ್ದು ಮಾಡ್ತವೆ. ದೇಶ ಕಟ್ಟೋರಿಗೆ ವಿವೇಕಾನಂದರು ಒಂದು ಮಾತೇಳಿದ್ರು ಗೊತ್ತಾ ಸಾರ್?

“ನನಗೇಳಿಲ್ಲ”.

“ಈ ದೇಶನ ಮುಸ್ಲಿಂ ದೇಹಶಕ್ತಿ ಹಿಂದೂ ಬುದ್ಧಿ ಶಕ್ತಿಯಿಂದ ಕಟ್ಟಿ ಅಂದವುರೆ”.

“ಅದ್ಯಂಗಾಯ್ತದರಿ”?

“ಆಗುತ್ತೆ ಸಾರ್. ಮುಸ್ಲಿಮರು ದೈಹಿಕವಾಗಿ ಶಕ್ತಿಶಾಲಿ ಜನ, ಆ ಶಕ್ತಿನ ದೇಶಕಟ್ಟಕ್ಕೆ ಬಳಸಬೇಕು. ಹಾಗೆ ಬ್ರಾಹ್ಮಣರ ಬುದ್ಧಿಶಕ್ತಿನ್ನ ಬಳಸಿದ್ರೆ ದೇಶ ಬಲಿಷ್ಟ ಆಗುತ್ತೆ”.

“ಆಗ ನಾವೇನು ಮಾಡದ್ರಿ?”

“ಆರೆಸ್ಸೆಸ್ ಸಿದ್ಧಾಂತದ ಪ್ರಕಾರ ನೀವು ನೂರಾರು ಕುರಿ ಸಾಕಿ, ದೈಹಿಕ ಶಕ್ತಿಗಾಗಿ ಜನಕ್ಕೆ ಮಾಂಸ ಒದಗಿಸಿ. ಚಳಿ ತಡೆಯಕ್ಕೆ ಜನರಿಗೆ ಕಂಬಳಿ ಒದಗಿಸಬೇಕು ಸಾರ್”.

“ಏನ್ರಿ ಹೇಳ್ತಿರಿ”.

“ಸಾರ್ ಒಂದು ವಿಷಯ ಕೇಳದ್ನೆ ಮರತೆ. ಅಮ್‌ಆದ್ಮಿ ಜನ ಅಂದು ವೀರಪ್ಪ ಇಂದು ಈಶ್ವರಪ್ಪ ಅಂತ ಶಿವಮೊಗ್ಗಕ್ಕೆ ಬಂದಿದ್ರು ಸಾರ್”.

“ಬರ್ಲಿ ಬುಡ್ರಿ ಒಂದು ಕಾಲದಲ್ಲಿ ನಾವು ಇಂತ ಪ್ರತಿಭಟನೆನ ಬೇಕಾದಷ್ಟು ಮಾಡಿದೀವಿ. ಶಿವಮೊಗ್ಗದಿಂದ ಬೆಂಗಳೂರುವರೆಗೂ ನಡೆದಿದ್ವಿ ಗೊತ್ತಾ”?

ಥೂತ್ತೇರಿ..


ಇದನ್ನೂ ಓದಿ: “ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...