Homeಅಂಕಣಗಳು"ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ"

“ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

- Advertisement -
- Advertisement -

ನಾವು ಇದುವರೆಗೂ ಹೆಡಗೇವಾರ್‌ರನ್ನ, ಹೆಡಗೇವಾರ್ ಎಂದು ಭಾವಿಸಿದ್ದರೆ, ಎಸ್. ಎಲ್. ಭೈರಪ್ಪನವರು ಪರಮಪೂಜ್ಯ ಹೆಡಗೇವಾರ್ ಎಂದು ಕರೆದು ಈ ನಾಡಿಗೇ ಅಚ್ಚರಿ ಮೂಡಿಸಿದ್ದಾರಲ್ಲಾ. ನಾವು ತಿಳಿದಂತೆ ಭೈರಪ್ಪನ ಪೂಜ್ಯರು ಸಂತೇಶಿವರದ ಚನ್ನಿಗ ರಾಯ ಅಂತೆ. ಅಥವ ಆ ಹೆಸರಿನ ಆಸುಪಾಸಿನವರು. ಆದರೀಗ
ಭೈರಪ್ಪ ನಮ್ಮ ಪರಮಪೂಜ್ಯರು ಎನ್ನಲಾಗಿ, ಪರಮಪೂಜ್ಯ ಎಂದರೆ ಪಿತಾಮಹರ ಸಮಾನ ಎಂಬ ಅರ್ಥವು ಬರುವುದರಿಂದ ಸದರಿ ಹೆಡೆಗೆವಾರ್ ಭೈರಪ್ಪನವರಿಗೆ ಪಿತಾಮಹನ ಸಮನಾಗಿರುವ ಪ್ರಯುಕ್ತ ಅವರು ಪಠ್ಯದಲ್ಲಿ ಇದ್ದರೆ ತಪ್ಪೇನು ಎನ್ನುವ ವಾದವೂಂದು ಮುಗ್ಧ ಜನರಿಂದ ಶುರುವಾಗಿದೆಯಂತಲ್ಲಾ. ಈ ಸಂಚನ್ನ ಅರಿತೇ ಭೈರಪ್ಪ ಅಳೆದು ತೂಗಿ ಪರಮಪೂಜ್ಯ ಪದ ಎಸೆದಿದ್ದಾರಂತಲ್ಲಾ.

ಸದರಿ ಭೈರಪ್ಪರನ್ನ ಸಂತೆಶಿವರದ ಒಕ್ಕಲಿಗರು ಕುರುಬರು ಅಕ್ಕಿ ರಾಗಿ ಕಾಯಿ ಕಸಿ ಕೊಟ್ಟು ಸಾಕಿದರು. ಓದಲು ಸಹಾಯ ಮಾಡಿದರು. ಅದರೆ ಭೈರಪ್ಪ ಬೆಳೆದು ದೂಡ್ಡವರಾಗಿ ವಿದ್ವಾಂಸನಾಗಿ ಆರೆಸ್ಸೆಸ್ ಪ್ರೋಫೆಸರ್‌ರಾದರೂ ಸಂತೇಶಿವರದ ಜನಕ್ಕೆ ಮಹಾದ್ರೋಹವಾಗಿ ಕಂಡೇ ಇಲ್ಲವಂತಲ್ಲಾ. ಸದ್ಯ ಪಠ್ಯ ಪರಿಷ್ಕರಣವಷ್ಟೇ ಅಲ್ಲ. ಈ ಸಾಹಿತಿಗಳು ಜಗಳಗಂಟರು, ಕಳೆದ ಅರವತ್ತು ವರ್ಷದಿಂದ ನನ್ನ ವಿರುಧ್ಧ ಜಗಳವಾಡಿದ್ದಾರೆ, ಈಗಲೂ ಅವರ ಮುಂದುವರೆದ ಸಂತತಿ ಈ ಎಲ್ಲದಕ್ಕೂ ಜಗಳ ಕಾಯುತ್ತಿದೆ ಎಂದರಂತಲ್ಲಾ. ಹೀಗಿರುವಾಗ ಈ ಭೈರಪ್ಪನ ಪಾದಗೋಚರಿಸಿದ ಕೂಡಲೇ ಡೈ ಹೊಡೆಯುವ ಜ್ಞಾನಪೀಠಿ ಕಂಬಾರರು ಈವರೆಗೆ ಬಾಯನ್ನೆ ಬಿಡದಿರುವುದು ಯಾರಿಗೂ ಆಶ್ಚರ್ಯ ತಂದಿಲ್ಲವಂತಲ್ಲಾ ಥೂತ್ತೇರಿ

******

ಇದ್ದಕ್ಕಿದ್ದಂತೆ ಆಮ್‌ಆದ್ಮಿ ಪಕ್ಷ ಈಶ್ವರಪ್ಪನ ಮೇಲೆ ಕಾರ್ಯಕ್ರಮ ಹಾಕಿಕೊಂಡು, ಅಂದು ಕಾಡುಗಳ್ಳ ವೀರಪ್ಪ ಇಂದು ಶಿವಮೊಗ್ಗ ಕಳ್ಳ ಈಶ್ವರಪ್ಪ ಎಂಬ ಪ್ಲೆಕ್ಸ್‌ಗಳನ್ನು ಹಿಡಿದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ಬಗ್ಗೆ ಕುತೂಹಲಗೊಂಡು, ಈ ಬಗ್ಗೆ ಈಶ್ವರಪ್ಪನವರಿಗೆ ಪೋನ್ ಮಾಡಿ ತಿಳಿದುಕೊಳ್ಳಬೇಕೆನಿಸಿದ ಕೂಡಲೇ, ಯಡೂರಪ್ಪನವರ ಕಡೆಯಿಂದ ಪೋನ್ ನಂಬರ್ ಪಡೆದು ಪೋನ್ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ ’ನಮಸ್ತೇ ಸದಾವತ್ಸಲೇ ಮಾತೃಭೂಮಿ’.

“ಹಲೊ ಹಲೊ ನಾನು ಸರ್ ಯಾಹೂ”.

“ಏನ್ರಿ ಯಾಹೂ ಭಾಳ ದಿನದ ಮ್ಯಾಲೆ ಫೋನ್ ಮಾಡಿದ್ದೀರಿ”.

“ಒಂದಿಷ್ಟು ಮಾತಾಡಬೇಕು ಸಾರ್”.

“ಬನ್ರಿ ಮನಿಗೆ ಆರಾಮಾಗಿದ್ದಿನಿ ಮಾತಾಡನ”.

“ಬರ್ತಿನಿ ಸಾರ್ ಯಾವಾಗ್ಲಾರ ಬಿಡುವು ಮಾಡಿಕೊಂಡು. ಮಾತಾಡನ. ಈಗೊಂದೆರಡು ಪ್ರಶ್ನೆ ಸಾರ್”.

“ಕೇಳಿ, ಅದಕೆ ಅಲವ ನೀವು ಪೋನ್ ಮಾಡಿದ್ದು. ನಿಮ್ಮ ಪತ್ರಕರ್ತರ ಚಾಳಿ ನಂಗೊತ್ತಿಲ್ವ”.

“ಸಿದ್ದರಾಮಯ್ಯ ಆರೆಸ್ಸೆಸ್ ಬಗ್ಗೆ ಭಯ ಅಂದವುರಲ್ಲ ಸಾರ್”.

“ಭಯನೆ ಮತ್ತೆ. ಅರೆಸ್ಸೆಸ್‌ಗೆ ಸಿದ್ದರಾಮಯ್ಯನೂ ಹೆದರಬೇಕು, ಮತ್ತೊಬ್ಬನೂ ಹೆದರಬೇಕು”.

“ನಿಜ ಸಾರ್ ಅಂತ ಗಾಂಧಿನೆ ಕೊಂದಾಕಿದ ಗೋಡ್ಸೆ ಪ್ರಕರಣದಲ್ಲಿ ಆರೋಪಿತನಾಗಿ ಜಯಿಸಿಗಂಡ ಸಂಘಟನೆ ಅದು. ಇನ್ನ ಸಿದ್ದರಾಮಯ್ಯ ಯಾವ ಲೆಕ್ಕ ಅಲ್ವೆ”.

“ರಿ ಗಾಂಧಿ ಕೊಂದಿದ್ದು ಅರೆಸ್ಸೆಸ್ ಅಲ್‌ಕಂಡ್ರಿ. ಅಲ್ಲಿ ಬೇರೆ ಕಡಿಂದ ಒಂದು ಗುಂಡು ಬಂತು. ಅದನ್ನ ಯಾರು ತನಿಖೆ ಮಾಡಲಿಲ್ಲ”.

“ಪಾಕಿಸ್ತಾನದ ಕಡಿಂದ ಬಂದಿರಬೇಕಲ್ಲವ ಸಾರ್”.

“ಇನ್ನೇನ್ರಿ ಮತ್ತೆ, ಆ ಬಗ್ಗೆ ತನಿಖೆನೆ ಮಾಡಲಿಲ್ಲ”.

“ಅರೆಸ್ಸೆಸ್ ವಿಷಯಕ್ಕೆ ಬಂದ್ರೆ ಉರುದೋಯ್ತಿರಿ ಅಂತ ಸಿದ್ದರಾಮಯ್ಯನ್ನ ಹೆಸರಿಸಿದಿರಿ. ಯಾಕ್ ಸಾರ್”.

“ಅರೆಸ್ಸೆಸ್ ಒಂದು ದೇಶಭಕ್ತಿ ಸಂಘಟನೆ ಕಂಡ್ರಿ. ಪಾಪ ಅವುರು ಮನೆಮಠದ ಯೋಚನೆ ಬಿಟ್ಟು, ಸಂಸಾರದ ಸುಖ ಬಿಟ್ಟು ಯಾವಾಗ್ಲೂ ದೇಶದ ಬಗ್ಗೆ ಯೋಚನೆ ಮಾಡ್ತರೆ”.

“ಹುಡುಗರಿಗೆ ದೇಶಭಕ್ತಿ ಕಲುಸ್ತರೆ. ಹುಡುಗರನ್ನ ಜೊತೆಲೆ ಇಟ್ಟುಕೊಂಡು ದೇಶಭಕ್ತಿ ಅಂದ್ರೇನು, ನಮ್ಮ ಸಂಸ್ಕೃತಿ ಅಂದ್ರೇನು ಅಂತ ಹೇಳಿಕೊಡ್ತಾರೆ”.

“ನೀವು ಆರೆಸ್ಸೆಸ್‌ನಲ್ಲಿ ಇದ್ರಲ್ಲವ ಸಾರ್?”

“ಈಗ್ಲು ಇದ್ದಿನಿ”.

“ಮತ್ತೆ ಸಂಸಾರಸ್ಥರಾಗಿದಿರಿ. ಕೋಟ್ಯಾನು ಕೋಟಿ ಆಸ್ತಿ ಮಾಡಿದಿರಿ. ಭ್ರಷ್ಟಾಚಾರ ಮಾಡದು ದೇಶದ್ರೋಹದ ಕೆಲಸವಂತೆ. ಅಂತ ಕೆಲಸ ಮಾಡಿ ಮಂತ್ರಿಗಿರಿ ಕಳಕೊಂಡು ಮನೆಲಿದಿರಿ. ಮತ್ತೆ ಆರೆಸ್ಸೆಸ್ಸು ಅಂತ ಹೇಳ್ತಿರಿ. ಇದ್ಯಾರಿಗೆ ಸಾರ್?”

“ರೀ ಯಾಹು ತಲೆಹರಟೆ ಪ್ರಶ್ನೆ ಬೇಡಿ. ಆರೆಸ್ಸೆಸ್ ಬಗ್ಗೆ ಕೇಳಿ”.

“ಹೇಳಿ ಸರ್”.

“ಆರೆಸ್ಸೆಸ್ ಒಂದು ಸುಸಂಸ್ಕೃತ ಸಂಸ್ಥೆ. ಅದು ಒಳ್ಳೆ ಸಂಸ್ಕೃತಿ ಕಲಸತ್ತೆ. ಒಳ್ಳೆ ಭಾಷೆ ಕಲಸತ್ತೆ”.

“ಅಂಗಾದ್ರೆ ನೀವು ಅವೆರಡನ್ನೂ ಕಲೀಲ್ಲವಾ ಸಾರ್”.

“ಯಾಕ್ರಿ ಅಂಗಂತಿರಿ”.

“ದನ ತಿಂದರೆ ಗಂಟಲು ಸೀಳಬೇಕು, ಕೈ ಕಡಿಬೇಕು ಅಂತಿರಿ. ಸಿದ್ದರಾಮಯ್ಯನ್ನ ಹುಚ್ಚ ಅಂತಿರಿ. ಹೆಣ್ಣು ಮಕ್ಕಳ ಬೈತಿರಿ. ನೀವಷ್ಟೇ ಅಲ್ಲ. ಅವನ್ಯಾರೊ ಸಿ.ಟಿ. ರವಿ, ಪ್ರತಾಪ, ನಿಮ್ಮ ಕಟೀಲ ಇವುರ ಮಾತಲ್ಲಿ ನಾನು ಸಂಸ್ಕೃತಿನೂ ನೋಡಲಿಲ್ಲ, ಭಾಷೆನೂ ನೋಡಲಿಲ್ಲ”.

“ಸಿಟ್ಟು ಬಂದ್ರೆ ಏನು ಮಾಡಕ್ಕಾಯ್ತದ್ರೀ?”

“ಸಂಸ್ಕೃತಿ ಅಂದ್ರೆ ಸಿಟ್ಟು ಗೆಲ್ಲೋದೆ ಅಲವಾ ಸಾರ್”.

“ಈ ಸಾಬರು ಮಾಡೋ ಗೂಂಡಾ ಕೆಲಸ, ಕ್ರಿಶ್ಚಿಯನ್ರು ಮಾಡೋ ಮತಾಂತರ ನೋಡಿಕಂಡು ಸುಮ್ಮನಿರಬೇಕೇನ್ರಿ?”

“ಸಾರ್ ಸಾಬರು ಗೂಂಡಾಗಳಾದ್ರೆ ಅವರನ್ನ ವಿಚಾರಿಸಿಕೊಳ್ಳೋಕೆ ಪೋಲಿಸ್ ಅದೆ. ಇನ್ನ ಕ್ರಿಶ್ಚಿಯನ್ರು ಮತಾಂತರ ಮಾಡ್ತರೆ ಅಂದ್ರೆ, ಅವರ್‍ನ ಕರೆದು ನೀವೆ ಕುರುಬರನ್ನಾಗಿ ಮತಾಂತರ ಮಾಡಿ ಸಾರ್”.

“ಯಾರು ಕುರುಬರಾಗಕ್ಕೆ ಬರ್‍ತಾರ್ರೀ”.

“ಬತ್ತರೆ ಸಾರ್, ಗುಡಿಸಲ್ಲಿರೋ ದಕ್ಕಲಿಗರು, ಕೊರಮರು, ಕೊರಚರು ಇವ್ರರತ್ರ ಹೋಗಿ ತಲಾ ಒಂದು ಲಕ್ಷಕೊಟ್ಟು ಕುರುಬರ ಮಾಡಿದ್ರೆ. ಅವರ ಲೀಡ್ರಾಗಿ. ನೀವು ಅಹಿಂದಾ ಸಿದ್ದರಾಮಯ್ಯನ್ನೆ ತೆಗೆದು ವರುಣಾ ನಾಲೆಗೆ ಯಸಿಬಹುದು”.

“ಅಂಗೆ ಮಾಡಕ್ಕೆ ಆರೆಸ್ಸೆಸ್ಸಿನವುರು ಬುಡಲ್ಲ ಕಂಡ್ರಿ”.

“ಯಾಕೆ ಸಾರ್”.

“ನಮ್ಮ ಹಿಂದೂ ಜನ ಏನಾಗಿದ್ದೆವೋ, ಅವುರು ಅಂಗೇಯಿದ್ದು, ನಮಿಗೆ ಸಪೋರ್ಟು ಮಾಡಬೇಕು ಅನ್ನದು ನಮ್ಮ ಸಿದ್ದಾಂತ”.

“ನಿಜ ಸಾರ್. ಇಲ್ದೆಯಿದ್ರೆ ನೀವು ಕುರುಬರ ಜಾತಿ ಬುಟ್ಟು ಮಾಧ್ವರಾಯ್ತಿದ್ರಿ ಅಲ್ವ”.

“ಇಲ್ಲ ಆಯ್ತಿರಲಿಲ್ಲ. ನಾವು ನಮ್ಮನಮ್ಮ ಜಾತಿಲಿ ಗಟ್ಟಿಯಾಗಿ ನಿಂತು ಹಿಂದೂ ಧರ್ಮನ ಕಾಪಾಡಬೇಕು”.

“ಕಾಪಾಡಕ್ಕೆ ಅದೇನು ಪ್ರಾಣಿನೋ, ಪಕ್ಷಿನೋ ಅಥವಾ ನಿಮ್ಮ ಗೋಮಾತೆನೊ”?

“ಗೋ ಮಾತೆನೆ ಅನ್‌ಕಳಿ”.

“ಸಾರ್ ನಿಮ್ಮ ಗೋಮಾತೆ ಕಾಳಜಿ ನನಿಗೆ ಗೊತ್ತು. ಯಾವ ಬಿ.ಜೆ.ಪಿ. ಆರೆಸ್ಸೆಸ್‌ನವರ ಮನೆಲೂ ಈ ಗೋವುಗಳಿಲ್ಲ. ಗೋಹತ್ಯೆ ನಿಷೇಧ ಮಾಡಿದ್ರಿ. ಗೋಶಾಲೆ ಮಾಡಲಿಲ್ಲ. ದನಗಳ ಜೊತೆಗೆ ರೈತನೂ ಬಡಕಲಾದ. ನಿಮ್ಮ ಹಿಂದೂ ಧರ್ಮದ ರಕ್ಷಣೆ ನನಿಗ್ಯಾಕೊ ಗೋರಕ್ಷಣೆ ತರ ಕಾಣ್ತಾ ಅದೆ”.

“ಅದಕ್ಯಲ್ಲ ಟೈಂ ಬೇಕು ಕಂಡ್ರಿ”.

“ಗೋವುಗಳೆಲ್ಲ ಸತ್ತಮ್ಯಾಲೆ ಅನ್ನಿ. ಈಗ್ ನೋಡಿದ್ರೆ ಯಲ್ಲಾನು ಬಿಟ್ಟು ಮಸೀದಿಗೆ ನುಗ್ಗಕೋಯ್ತಿರಿ. ಇದು ಮುಂದೆ ನಿಮಗೇ ತಿರುಗುಬಾಣಾಗಿ ಜೈನ ಮಂದಿರ ಬೌದ್ಧ ಸ್ತೂಪ ಯಲ್ಲಾ ಸದ್ದು ಮಾಡ್ತವೆ. ದೇಶ ಕಟ್ಟೋರಿಗೆ ವಿವೇಕಾನಂದರು ಒಂದು ಮಾತೇಳಿದ್ರು ಗೊತ್ತಾ ಸಾರ್?

“ನನಗೇಳಿಲ್ಲ”.

“ಈ ದೇಶನ ಮುಸ್ಲಿಂ ದೇಹಶಕ್ತಿ ಹಿಂದೂ ಬುದ್ಧಿ ಶಕ್ತಿಯಿಂದ ಕಟ್ಟಿ ಅಂದವುರೆ”.

“ಅದ್ಯಂಗಾಯ್ತದರಿ”?

“ಆಗುತ್ತೆ ಸಾರ್. ಮುಸ್ಲಿಮರು ದೈಹಿಕವಾಗಿ ಶಕ್ತಿಶಾಲಿ ಜನ, ಆ ಶಕ್ತಿನ ದೇಶಕಟ್ಟಕ್ಕೆ ಬಳಸಬೇಕು. ಹಾಗೆ ಬ್ರಾಹ್ಮಣರ ಬುದ್ಧಿಶಕ್ತಿನ್ನ ಬಳಸಿದ್ರೆ ದೇಶ ಬಲಿಷ್ಟ ಆಗುತ್ತೆ”.

“ಆಗ ನಾವೇನು ಮಾಡದ್ರಿ?”

“ಆರೆಸ್ಸೆಸ್ ಸಿದ್ಧಾಂತದ ಪ್ರಕಾರ ನೀವು ನೂರಾರು ಕುರಿ ಸಾಕಿ, ದೈಹಿಕ ಶಕ್ತಿಗಾಗಿ ಜನಕ್ಕೆ ಮಾಂಸ ಒದಗಿಸಿ. ಚಳಿ ತಡೆಯಕ್ಕೆ ಜನರಿಗೆ ಕಂಬಳಿ ಒದಗಿಸಬೇಕು ಸಾರ್”.

“ಏನ್ರಿ ಹೇಳ್ತಿರಿ”.

“ಸಾರ್ ಒಂದು ವಿಷಯ ಕೇಳದ್ನೆ ಮರತೆ. ಅಮ್‌ಆದ್ಮಿ ಜನ ಅಂದು ವೀರಪ್ಪ ಇಂದು ಈಶ್ವರಪ್ಪ ಅಂತ ಶಿವಮೊಗ್ಗಕ್ಕೆ ಬಂದಿದ್ರು ಸಾರ್”.

“ಬರ್ಲಿ ಬುಡ್ರಿ ಒಂದು ಕಾಲದಲ್ಲಿ ನಾವು ಇಂತ ಪ್ರತಿಭಟನೆನ ಬೇಕಾದಷ್ಟು ಮಾಡಿದೀವಿ. ಶಿವಮೊಗ್ಗದಿಂದ ಬೆಂಗಳೂರುವರೆಗೂ ನಡೆದಿದ್ವಿ ಗೊತ್ತಾ”?

ಥೂತ್ತೇರಿ..


ಇದನ್ನೂ ಓದಿ: “ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...