Homeಅಂಕಣಗಳುಥೂತ್ತೇರಿ | ಯಾಹೂಮೂರು ದಿನದ ರಾಜಕಾರಣಿ ಪರವಾಗಿ ನಿಂತು ಸಾಹಿತ್ಯ ಪರಿಷತ್ ಮಾನವನ್ನೇ ಹರಾಜು ಹಾಕಿದ ಮನು ಬಳಿಗಾರ್‌...

ಮೂರು ದಿನದ ರಾಜಕಾರಣಿ ಪರವಾಗಿ ನಿಂತು ಸಾಹಿತ್ಯ ಪರಿಷತ್ ಮಾನವನ್ನೇ ಹರಾಜು ಹಾಕಿದ ಮನು ಬಳಿಗಾರ್‌ – ಯಾಹೂ

- Advertisement -
- Advertisement -

ಈ ದೇಶದಲ್ಲಿರುವ ಜಾತ್ಯತೀತ ವೇದಿಕೆ ಎಂದರೆ ಅದು ಸಾಹಿತ್ಯ ಪರಿಷತ್. ವ್ಯಕ್ತಿ ಏನೇ ಆಗಿರಲಿ, ಆ ವೇದಿಕೆ ಹತ್ತಿದ ಮೇಲೆ ಜಾತಿ ಸೋಂಕಿನಿಂದ ದೂರವಿರಬೇಕು. ಏಕೆಂದರೆ, ಅದೊಂದು ಸರ್ವ ಜನಾಂಗದ ಶಾಂತಿಯ ತೋಟದ ತಾಣ. ಈಗ ಹಾಲಿ ಇರುವ ಮನುಬಳಿಗಾರ್ ಎಂಬ ವ್ಯಕ್ತಿ ಸರಕಾರದಲ್ಲಿ ನಡುಬಗ್ಗಿಸುವ ಕರ್ಮಚಾರಿಯಾಗಿದ್ದವನು. ಈಗಲೂ ಅದೇ ಕೆಲಸ ಮಾಡುತ್ತಿರುವುದಲ್ಲದೆ, ಸ್ವಜಾತಿ ಜನಗಳನ್ನ ಸಾಹಿತ್ಯ ಸಮ್ಮೇಳನಕ್ಕೆ ಕರೆದು “ವಸತಿವ್ಯವಸ್ಥೆ ಮಾಡುತ್ತೇನೆ ಬನ್ನಿ ಎನ್ನುತ್ತಿದ್ದಾನೆ”.

ಮನು ಬಳಿಗಾರ್‌

ಇದೆಲ್ಲಾ ಹಾಳುಬಿದ್ದು ಹೋಗಲಿ, ಶೃಂಗೇರಿಯಲ್ಲಿನ ಘಟನೆಗೆ ಪರೋಕ್ಷ ಕಾರಣನಾಗಿದ್ದಾನೆ. ಈತ ನಿಲ್ಲಬೇಕಾದದ್ದು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷನ ಪರವಾಗಿ. ಆದರೆ ಮೂರು ದಿನದ ರಾಜಕಾರಣಿ ಪರವಾಗಿ ನಿಂತು ಸಾಹಿತ್ಯ ಪರಿಷತ್ ಮಾನವನ್ನೇ ಹರಾಜು ಹಾಕಿದ್ದಾನೆ. ಇನ್ನ ಈತನ ಟೀಮು ಆರಿಸಿರುವ ವೆಂಕಟೇಶಮೂರ್ತಿ ಎಂಬಾತ ಶೃಂಗೇರಿಯಲ್ಲಿನ ಘಟನೆ ಬಗ್ಗೆ ಏನು ಹೇಳುತ್ತೀರಿ ಎಂದರೆ, ಅದೆಲ್ಲೋ ದೂರದಲ್ಲಿ ನಡೆದ ವಿಷಯ. ಆ ಬಗ್ಗೆ ತಲೆಕೆಡಿಸಿಕೊಳ್ಳಲು ನನಗೆ ಪುರುಸೊತ್ತಿಲ್ಲ ಎಂದಿದ್ದಾರೆ. ಯಾಕೆಂದರೆ ಬೆಂಗಳೂರು ಬ್ರಾಹ್ಮಣರು ಮಾಡಿದ ಸನ್ಮಾನ ತೆಗೆದುಕೊಳ್ಳುವುದರಲ್ಲೇ ಮುಳುಗಿದ್ದ ಇವರು ಇನ್ನೇನು ತಾನೆ ಹೇಳಿಯಾರು ಥೂತ್ತೇರಿ..

* * *

ಕನ್ನಡನಾಡಿನಲ್ಲಿ ಹಿಂದೆಂದೂ ಸಂಭವಿಸದ ಪ್ರವಾಹ ಅನಾಹುತ ಸಂಭವಿಸಿದೆ. ಬದುಕನ್ನು ಕಳೆದುಕೊಂಡವರ ಗೋಳನ್ನ ತೋರದೆ ಸರಕಾರದ ಮರ‍್ಯಾದೆ ಕಾಪಾಡುವುದರಲ್ಲಿ ಮಗ್ನರಾಗಿರುವ ಮಾಧ್ಯಮದವರ ಹೊಟ್ಟೆಪಾಡು ಪ್ರವಾಹದವರಿಗಿಂತಲೂ ಭೀಕರವಾದದ್ದು. ಪ್ರವಾಹ ಸಂತ್ರಸ್ತರ ಕತೆಯೇನು ಎಂಬುದನ್ನು ಈ ನಾಡಿಗೆ ತೋರದೆ ಸಾಹಿತ್ಯ ಸಮ್ಮೇಳನ ಬಿತ್ತರಿಸಲು ತಯಾರಾಗಿರುವ ಮಾಧ್ಯಮದವರಿಗೂ, ಈ ಮನುಬಳಿಗಾರ್‌ಗೂ ಬಂಧುವಿದ್ದಂತೆ. ಅದಕ್ಕಾಗಿ ನಾಡು ಕೊಚ್ಚಿಹೋದರೇನು ಸಾಹಿತ್ಯ ಸಮ್ಮೇಳನ ಜರುಗದಿದ್ದರೆ ಅನಾವೃಷ್ಟಿ ಗ್ಯಾರಂಟಿ ಎಂಬಂತಾಡಿದ ಆತ ಸರಕಾರದಿಂದ ತನಗೆ ಬೇಕಿದ್ದಷ್ಟು ಹಣವನ್ನ ಬಿಡುಗಡೆ ಮಾಡಿಸಿಕೊಂಡಿದ್ದಾನೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಕನ್ನಡನಾಡಿನಲ್ಲಿ ಸಾಹಿತ್ಯ ಪರಿಷತ್ ಉದ್ಭವವಾದಾಗಿನಿಂದಲೂ ಸ್ವಾಯತ್ತ ಸಂಸ್ಥೆಯಾಗಿ ಬೆಳೆದು ಕನ್ನಡನಾಡಿನ ಸಾಹಿತಿಗಳ ಘನತೆಯನ್ನು ಎತ್ತಿ ಹಿಡಿಯುತ್ತ ಬಂದ ಈ ಸಂಸ್ಥೆಯ ಮಾನವನ್ನೇ ಹರಾಜುಹಾಕಿ ಮೌನವಾಗಿ ತಾನು ಮಾಡುವುದನ್ನೇ ಮಾಡುತ್ತಾ ಕನ್ನಡದ ಅಸಂಖ್ಯಾತ ಕವಿಗಳಲ್ಲಿ ಒಬ್ಬರಾದ ವೆಂಕಟೇಶ್‌ಮೂರ್ತಿಯನ್ನು ಮೆರೆಸಲು ಹೊರಟ ಮನುಬಳಿಗಾರ ಮುಂದೆ ಇನ್ನು ಸಮಸ್ಯೆಯಾಗುವುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೇರಿ.

* * *

ವೆಂಕಟೇಶ್‌ಮೂರ್ತಿಯಂತಹ ಸಾಧಾರಣ ಕವಿಯನ್ನು ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಂಡು ಹತ್ತದಿನೈದು ಕೋಟಿಯನ್ನ ಉಡಾಯಿಸಲು ಹೊರಟಿರುವ ಕನ್ನಡಾಭಿವೃದ್ಧಿ ವಿಷಯವಾಗಿ ಸತ್ತಂತಿರುವ ಸಾಹಿತ್ಯ ಪರಿಷತ್ತಿನ ಹಟ ಹಾಳುಬಿದ್ದೋಗಲಿ ನಮ್ಮ ಸಂತೆ ಶಿವರದ ಭೈರಣ್ಣನ ಕಡೆಯಿಂದ ಸಂತೋಷಕರ ಸುದ್ದಿಯೊಂದು ಹೊರಬಿದ್ದಿದೆಯಲ್ಲಾ. ಅದೇನೆಂದರೆ ಅವರಿನ್ನು ಏನೂ ಬರೆಯುವುದಿಲ್ಲವಂತೆ. ಹಾಗೇ ಇದ್ದು ಸತ್ತು ಹೋಗುತ್ತಾರಂತೆ.

ಹಾಗೆ ನೋಡಿದರೆ ಭೈರಣ್ಣನ ಬರವಣಿಗೆ ಶ್ರಮ ಸಾರ್ಥಕವಾಗಿದೆ. ಅವರ ಆರಂಭದ ಕಾದಂಬರಿ ಧರ್ಮಶ್ರೀ ಈಗ ದೇಶದಲ್ಲೆಲ್ಲಾ ತನ್ನ ಅಜೆಂಡಾ ಮೆರೆಸಿಕೊಂಡು ಸಂಭ್ರಮಪಡುತ್ತಿದೆ. ಅದರ ಬಹುಮುಖ್ಯ ಕಾಳಜಿಯಾದ ರಾಮಮಂದಿರ ತಲೆ ಎತ್ತಲಿದೆ. ಹಿಂದೆ ಅವರ ನಿದ್ದೆ ಹಾಳು ಮಾಡಿದ್ದ ಬಾಬರಿ ಮಸೀದಿ ಇದ್ದ ಗುರುತು ನಾಶವಾಗಿದೆ. ಕಾಶ್ಮೀರಕ್ಕೆ ಕೊಳ್ಳಿ ಇಡಲಾಗಿದೆ. ಜೆಎನ್‌ಯು ವಿದ್ಯಾರ್ಥಿಗಳನ್ನ ಚಚ್ಚಿ ತಹಬಂದಿಗೆ ತರಲಾಗಿದೆ. ದೇಶದ ಪಠ್ಯಪುಸ್ತಕದೊಳಕ್ಕೆ ಪುರೋಹಿತಶಾಹಿ ಅಜೆಂಡಾಗಳನ್ನ ತುರುಕಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಸಿಎಎ ತರಲಾಗಿದೆ. ಈ ಸಂಗತಿ ಹಳೇ ಭೈರಪ್ಪನ ಬರವಣಿಗೆ ಬದುಕನ್ನ ಸಾರ್ಥಕಗೊಳಿಸಿವೆಯಂತಲ್ಲಾ ಥೂತ್ತೇರಿ.

* * *

ಸಾಹಿತಿಯಾದವನು ಚಳವಳಿಗಳಿಂದ ದೂರ ಇರಬೇಕು. ಚಳವಳಿಗಳ ಕಾಲಘಟ್ಟ ಕೃತಿ ರಚನೆಗೆ ಪ್ರೇರಕವಾಗಬಾರದು ಸಾಹಿತಿ ಯಾವುದಕ್ಕೂ ಗಂಟುಬೀಳಬಾರದೆಂದು ಹೇಳುವ ಭೈರಪ್ಪ ಸರಿಯಾಗಿ ಗಂಟುಬಿದ್ದದ್ದು ಜನಿವಾರಕ್ಕೆ. ಇವರ ದಾಟು ಕೃತಿಯಲ್ಲಿ ದಲಿತರ ಹುಡುಗಿಗೆ ಜನಿವಾರ ಬಿಗಿಯುತ್ತಾರೆ. ದಲಿತರು ದೇವಸ್ಥಾನಕ್ಕೆ ನುಗ್ಗಿದ್ದಕ್ಕೆ ಮೂರ್ಛೆ ಬೀಳಿಸುತ್ತಾರೆ. ವಿಧವೆ ಮರುಮದುವೆಯಾದರೆ ಬರೀ ಅಬಾಷನ್ ಎದುರಿಸಬೇಕಾಗುತ್ತದೆ ಇತ್ಯಾದಿ ಪುರೋಹಿತಶಾಹಿ ಅಜೆಂಡಾಗಳನ್ನ ತನ್ನ ಕೃತಿಗಳಲ್ಲಿ ತುರುಕಿರುವ ಭೈರಪ್ಪ, ಬರವಣಿಗೆ ಸಮಯದಲ್ಲಿ ಭೀಕರವಾಗಿ ಎದುರಿಸಿದ್ದು ನವ್ಯ ಲೇಖಕರನ್ನ. ಮತ್ತವರ ಟೀಕೆಯನ್ನ. ನವ್ಯರಿಗೆ ವಿರುದ್ಧ ದಿಕ್ಕಿನಲ್ಲಿ ಕಗ್ಗಹೊಸೆಯುತ್ತಿದ್ದ ಭೈರಪ್ಪ, ಗಮನಿಸಿದರೂ ಮರೆಮಾಚುವ ಸಂಗತಿ ಯಾವುದೆಂದರೆ ನವ್ಯರ ಕೃತಿಗಳನ್ನು ಈಗಲೂ ಉತ್ಸಾಹದಿಂದ ಓದಬಹುದು. ಬರುಬರುತ್ತಾ ಭೈರಪ್ಪ ಆವರಣದಂತಹ ಕೃತಿ ರಚಿಸಿದಾಗ ಪೂರ್ಣಚಂದ್ರ ತೇಜಸ್ವಿಯವರು “ಹೊಟ್ಟೆಗೆ ಅನ್ನ ತಿನ್ನುವ ನರಮನುಷ್ಯರಾರು ಇಂತಹ ಕೃತಿ ಹೇಳಿದ ಮಾತುಗಳು ತಮ್ಮನ್ನೇ ಆವರಿಸಿ ಬರೆಸಿಕೊಂಡು ಉಗಿಸಿದ್ದು ಇತಿಹಾಸ; ಇರಲಿ, 87 ವರ್ಷದ ಭೈರಣ್ಣನ ಕಡೆಯ ಕೃತಿ ಉತ್ತರ ಕಾಂಡ ಓದಿ ಒಂದು ನಮಸ್ಕಾರ ಹೊಡೆಯಬಹುದಲ್ಲಾ ಥೂತ್ತೇರಿ.

* * *

ವ್ಯಕ್ತಿ ಸತ್ಯ ಹೇಳುವಾಗ ಸದೃಢನಾಗಿರುತ್ತಾನೆ. ಆ ಸಮಯವೂ ಕಡಿಮೆ ಇರುತ್ತದೆ. ಅದೇ ಸುಳ್ಳು ಹೇಳುವಾಗ ಕಂಪಿಸುತ್ತಾನೆ. ಏಕೆಂದರೆ ಸುಳ್ಳುಗಳ ಸರಮಾಲೆಗೆ ಸದೃಢತೆ ಬರುವುದಿಲ್ಲ. ನಮ್ಮ ಅಂತಾರಾಷ್ಟ್ರೀಯ ಮಟ್ಟದ ಅರ್ಥಶಾಸ್ತ್ರಜ್ಞೆಯಾದ ಸಚಿವೆ ನಿರ್ಮಲ ಮೋದಿ ಟೀಮು ತಯಾರಿಸಿದ ಸುಳ್ಳು ಬಜೆಟ್ ಓದಿ ಓದಿ ಬಳಲಿ ಬೆಂಡಾಗಿಹೋದಳಲ್ಲಾ. ಆಕೆಯ ಬಳಲಿಕೆಗೆ ತಿರುವಳ್ಳುವರ್ ಕವಿತೆ ತಿಲಮಾತ್ರವೂ ಸ್ಫೂರ್ತಿ ನೀಡದಿದ್ದುದು ವಿಶೇಷ. ಏಕೆಂದರೆ ಕವಿತೆ ಸಾಲುಗಳು ಸುಳ್ಳನ್ನು ವಿಜೃಂಭಿಸಲಾರವು.

ಬಿಜೆಪಿಯಲ್ಲಿ ಭಾರತದ ಹಣಕಾಸಿನ ಸುಧಾರಣಾ ಪ್ರತಿಭೆಗಳೇ ಇಲ್ಲ. ತಲೆಗೆ ಮತದ ಅಮಲೇರಿದಾಗ ಪ್ರತಿಭೆ ಅಲ್ಲಿಂದ ಕಾಲ್ಕೀಳುತ್ತದೆ. ಅಡ್ಡಕಸುಬಿಗಳ ಕೈಗೆ ದೇಶಸಿಕ್ಕಾಗ ಕಸುಬುದಾರ ಕುಬೇರರು ದೇಶ ಕಬಳಿಸಲು ಸಂಚು ಹೂಡುತ್ತಾರೆ. ಅದರಂತೆ ಭಾರತದ ಸರಕಾರದ ಸಂಪತ್ತಿನ ಮೇಲೆ ಕಣ್ಣಿಟ್ಟ ಕುಬೇರರ ಸಂಚನ್ನ ಅರಿತ ಮೋದಿ ಎಲೈಸಿಯನ್ನ ಮಾರುವ ತೀರ್ಮಾನ ಮಾಡಿದ್ದಾನಂತಲ್ಲಾ. ಅಂತೂ ಜೀವವಿಮೆಗೂ ಸಂಚಕಾರ ತಂದ ಮೋದಿ ಇನ್ನೇನನ್ನ ಉಳಿಸಲಾರ ಎಂಬುದನ್ನು ಸಾಬೀತು ಮಾಡಿದ್ದಾನಲ್ಲಾ ಥೂತ್ತೇರಿ.

* * *

ನಮ್ಮ ಸುಂದರವಾದ ಕಡಲತೀರದಲ್ಲಿ ವಿಕೃತವಾಗಿ ಉದ್ಭವಿಸಿಬಂದಂತಿರುವ ಪುರೋಹಿತಶಾಹಿ ಪಿಂಡವೊಂದು, ಮತ್ತೆ ತನ್ನ ವಟಾರದಿಂದ ಗಾಂಧೀಜಿ ವಿರುದ್ಧ ವಿಕಾರವಾಗಿ ಕೂಡಿಕೊಂಡಿದೆ. ಇದರ ಅರಚಾಟ ನೋಡಿ ಬೇಸತ್ತಿದ್ದ ಮೋದಿ ಮಹಾತ್ಮ ಸಮಯ ಕಾದಿದ್ದು, ಇದಕ್ಕೆ ತಕ್ಕ ಶಾಸ್ತಿ ಎಂದರೆ ಮಂತ್ರಿಮಾಡದೆ ಇರುವುದು ಎಂದುಕೊಂಡು. ಅದರಂತೆ ಮಂತ್ರಿಗಿರಿ ಇಲ್ಲದೆ ಮನಗೆ ಕಳಿಸಿದಾಗಿನಿಂದಲೂ ಹೆಚ್ಚು ವಿಕೃತವಾಗಿ ಕೂಗಿದರೆ ಅದು ನಾಗಪುರಕ್ಕೆ ತಲುಪಿ, ಅಲ್ಲಿಂದ ಏನಾದರೂ ಸಂದೇಶ ಚೆಡ್ಡಿಗಳ ಹೈಕಮಾಂಡು ತಲುಪಿ, ಯಾವುದಾದರೂ ಕಿತ್ತುಹೋದ ಖಾತೆ ಸಿಗಬಹುದೆಂದು ಕೂಗುತ್ತಿದೆಯಂತಲ್ಲಾ.

ಇದರ ಹುನ್ನಾರಕ್ಕೆ ಪ್ರತಿಯಾಗಿ, ಬಸನಗೌಡ ಯತ್ನಾಳ್ ಎಂಬ ಎಮ್ಮೆ ಮುಕಳಿ ಕೊಳೆದು ಸುಸ್ತಾಗಿರುವ ವ್ಯಕ್ತಿಯ ಜೊತೆಗೆ ತೀಟೆ ರವಿ, ರೇಣುಕಾದೇವಿ ಭಕ್ತನಾದ ರೇಣುಕಾಚಾರಿ ಇವರೆಲ್ಲಾ ಸೇರಿಕೊಂಡಿದ್ದಾರಂತಲ್ಲಾ ಮುಖ್ಯವಾಗಿ ಇವರ ಉದ್ದೇಶ ಇಷ್ಟೆ. ಎಲ್ಲರನ್ನ ಮೀರಿಸಿ ಮತಾಂಧತೆಯಿಂದ ಒರಲುವುದು. ಆ ನಂತರ ಮೆಂಟಲಾಸ್ಪಿಟಲ್ ಸೇರುವುದೇ ಗುರಿಯಾಗಿದೆಯಂತಲ್ಲಾ ಥೂತ್ತೇರಿ

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....