Homeಕರ್ನಾಟಕಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

ಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಹಳ್ಳಿಯ ಯಾನಾಗುಂದಿ ಮಾಣಿಕಮ್ಮನ ಆರೋಗ್ಯಕ್ಕಾಗಿ ಕೋರ್ಟ ನಿರ್ದೇಶನದಂತೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಇದೆಲ್ಲ ಒಂದು ರೀತಿ ಸರಿ ಇರಬಹುದು. ಆದರೆ ಈ ಮಾಣಿಕಮ್ಮ ಊಟ ಉಪಚಾರವನ್ನೆ ಮಾಡದೆ ಇಲ್ಲಿಯವರೆಗೂ ಹಾಗೆಯೇ ಜೀವಿಸುತ್ತಿದ್ದಾಳೆ ಎಂಬ ಸಂಗತಿ ತುಂಬಾ ಮಹತ್ವದ್ದು. ಈ ಪವಾಡದ ಘಟನೆಗಾಗಿಯೆ ಕರ್ನಾಟಕ, ಆಂದ್ರ ಹಾಗೂ ಮಹಾರಾಷ್ಟ್ರದಾದ್ಯಂತ ಈಕೆಗೆ ಭಕ್ತರು ಹುಟ್ಟಿಕೊಂಡರು. ಮುಸುರೆಗೆ ನೊಣ ಮುತ್ತಿಕೊಂಡಂತೆ ರಾಜಕಾರಣಿಗಳೂ ಸಹ ಜನ ಸಾಮಾನ್ಯರು ಸೇರುವ ಕಡೆಗೆ ಅವರೂ ಸೇರಿ ಯಾನಾಗುಂದಿಯನ್ನು ನೋಡ ನೋಡುತ್ತಲೆ ಯಾತ್ರಾಕ್ಷೇತ್ರವಾಗಿ ಪರಿವರ್ತನೆಗೊಳಿಸಿದ್ದಾರೆ.

ವರ್ಷಕ್ಕೆ ಒಂದೆ ಒಂದು ಬಾರಿ ಅಂದರೆ ಶಿವರಾತ್ರಿಯ ದಿನ ಮಾಣಿಕೇಶ್ವರಿ ತನ್ನ ಭಕ್ತಾದಿಗಳಿಗೆ ದರ್ಶನ ಭಾಗ್ಯ ಕರುಣಿಸಿ ಮತ್ತೆ ವರ್ಷದುದ್ದಕ್ಕೂ ತನ್ನ ನೆಲ ಮಹಡಿಯನ್ನು ಸೇರಿ ಬಿಡುತ್ತಾಳೆ. ಮಾಣಿಕಮ್ಮ ಮಾಣಿಕೇಶ್ವರಿ ಆಗುವುದಕ್ಕಿಂತ ಪೂರ್ವದಲ್ಲಿ ಸೇಡಂ ತಾಲೂಕಿನ ಮಲ್ಲಾಬಾದ ಗ್ರಾಮದ ಬುಗ್ಗಮ್ಮ ಆಶಪ್ಪ ದಂಪತಿಗಳ ನಾಲ್ಕನೆಯ ಮಗಳು. ಬಡತನಕ್ಕೆ ಕಷ್ಟಗಳು ಜಾಸ್ತಿ ಎನ್ನುವಂತೆ ಅನ್ನ ನೀರಿಲ್ಲದೆ ಬಳಲಿಕೆಯಿಂದ ಮಾಣಿಕಮ್ಮ ಪವಾಡಗಳನ್ನು ಮಾಡುತ್ತಲೆ ಬಂದಳು. ಚಿಕ್ಕಂದಿನಲ್ಲಿ ಈಕೆ ಯಾರೊಂದಿಗೂ ಬೆರೆಯದೆ, ಮಾತಾಡದೆ, ಅರಳಿಯ ಮರದ ಟೊಂಗೆ ಏರಿ ಕುಳಿತುಕೊಳ್ಳುವಳು. ಇದನ್ನು ಕಂಡು ಕಂಗಾಲಾದ ತಂದೆ ತಾಯಿಗಳು ದೇವರಿಗೆ ಹರಕೆ ಹೊತ್ತಿದ್ದಾರೆ. ಸಾಲದೆಂಬಂತೆ ದೆವ್ವ ಬಿಡಿಸುವವರ ಮನೆಗೂ ಎಡತಾಕಿದ್ದಾರೆ. ಕೊನೆಗೆ ಯಾರ ಮಾತೋ ಕೇಳಿ ಮಾಣಿಕಮ್ಮಳಿಗೆ ಹತ್ತನೆ ವರ್ಷದಲ್ಲಿಯೆ ಬಾಲ್ಯ ವಿವಾಹವನ್ನೂ ಮಾಡಿದರು. ಆದರೂ ಆಕೆ ಸರಿ ಹೋಗಲಿಲ್ಲ.

ಗುರುಮಿಠಕಲ್ ಮಠದ ಹಿಂದಿನ ಪೀಠಾಧಿಪತಿಗಳು ತಮ್ಮ ಮಠದಲ್ಲಿಯೆ ಈಕೆಯನ್ನು ಇಟ್ಟುಕೊಂಡು ಔಷದೋಪಚಾರ ಮಾಡಿದ್ದಾರೆ. ಆದರೂ ಅದು ಸರಿ ಹೋಗದೆ ಇದ್ದಾಗ ಮಾಣಿಕಮ್ಮನಿಗೆ ಕಾವಿ ಧರಿಸಿ ಸನ್ಯಾಸಿ ಮಾಡಿದರು ಎಂಬ ಪ್ರತೀತಿ ಇದೆ. ಒಟ್ಟಿನಲ್ಲಿ ತನ್ನಷ್ಟಕ್ಕೆ ತಾನು ಇರುವ ಹರೆಯದ ಹುಡುಗಿ, ಶೂನ್ಯದಲ್ಲಿ ಏನನ್ನೋ ನೋಡುತ್ತ ಕುಳಿತ ಮಾಣಿಕಮ್ಮ ಮೌಢ್ಯ ಭಕ್ತರ ಕಣ್ಣಲ್ಲಿ ಪವಾಡ ಪುರುಷಳಾಗಿ ಗೋಚರವಾಗಿದ್ದಾಳೆ. ಕೆಲವು ಐನಾತಿಗಳಿಗೆ ಇಂಥದ್ದನ್ನು ಕಂಡರೆ ರಸಗವಳ. ಮಾಣಿಕಮ್ಮನನ್ನೆ ಬಂಡವಾಳ ಮಾಡಿಕೊಂಡ ಜನರು ಆಕೆಗಾಗಿ ಯಾನಾಗುಂದಿಯಲ್ಲಿ ಭರ್ಜರಿ ಕಟ್ಟಡವೊಂದನ್ನು ಕಟ್ಟಿ ನೆಲ ಮಹಡಿಯಲ್ಲಿಟ್ಟರು. ಹೇಳಿ ಕೇಳಿ ಆಂದ್ರದ ಜನ ಭಾವನಾತ್ಮಕತೆಯಲ್ಲಿಯೇ ಇರುವವರು.

ಮಾಣಿಕಮ್ಮ ಊಟವನ್ನೇ ಮಾಡದೆ ಜೀವಿಸಿದ್ದಾಳೆ ಎಂಬ ಹರಿಬಿಟ್ಟ ಸಂಗತಿ ಕಿವಿಯಿಂದ ಕಿವಿಗೆ ತಲುಪಿ, ಯಾನಾಗುಂದಿಯಲ್ಲಿ ಜನ ಜಂಗುಳಿಯೆ ಕೂಡಲು ಆರಂಭವಾಯಿತು. ಸಣ್ಣಗೆ ಆರಂಭವಾದ ಧಾರ್ಮಿಕ ವ್ಯಾಪಾರ ಇಂದು ಭರ್ಜರಿಯಾಗಿ ನಡೆಯುತ್ತಿವೆ. ಕಾಯಿ, ಕರ್ಪೂರ, ಹಾರ, ತುರಾಯಿ, ಪ್ರಸಾದ, ದಾಸೋಹ ಸೇವೆ ಕೈಂಕರ್ಯಗಳು ಅವ್ಯಾಹತವಾಗಿ ನಡೆದಿವೆ. ಕುರಿಗಳು ಸಾರ್ ನಾವು ಕುರಿಗಳು ಎಂಬ ಹಾಡಿನಂತೆ ಯೋಚಿಸುವ ಶಕ್ತಿಯನ್ನು ಕಳಕೊಂಡ ಜನತೆ ನಾ ಮುಂದೆ ತಾ ಮುಂದೆ ಎನ್ನುತ್ತಾ ದೌಡಾಯಿಸಿ ಯಾನಾಗುಂದಿಗೆ ಹೋಗಿ ಮಾಣಿಕಮ್ಮನ ದರ್ಶನ ಪಡೆದು ಬಂದರು.

ಆದರೆ ಇದುವರೆಗೂ ಯಾರೊಬ್ಬರೂ ಮಾಣಿಕಮ್ಮ ಊಟ ಮಾಡದೆ, ನೀರು ಕುಡಿಯದೆ ಹೇಗೆ ಜೀವಿಸಬಲ್ಲಳು ? ಎಂಬುದು ಯಾರೂ ಪ್ರಶ್ನಿಸಿಲ್ಲ. ಧಾರ್ಮಿಕ ನಂಬಿಕೆಯನ್ನು ಪ್ರಶ್ನಿಸುವುದು ಅಂದರೆ ಬತ್ತಲೆ ಇದ್ದವರ ರಾಜ್ಯದಲ್ಲಿ ಬಟ್ಟೆ ಉಟ್ಟವನ ಸ್ಥಿತಿಯಂತೆ. ಪುಂಡ ಪುರೋಹಿತರು, ಆಡಳಿತ ವರ್ಗದವರು ಹಬ್ಬಿಸಿದ ಗಾಳಿ ಸುದ್ದಿಗಳು ರೆಕ್ಕೆ ಪುಕ್ಕ ಕಟ್ಟಿಕೊಂಡು ಹಾರಾಡಿದ ಪರಿಣಾಮ ಯಾನಾಗುಂದಿ ಸುಕ್ಷೇತ್ರವಾಯಿತು, ಸುಪ್ರಸಿದ್ಧವಾಯಿತು.

ಜಗತ್ತಿನಾದ್ಯಂತ ಆಹಾರಕ್ಕಾಗಿ ನಡೆದ ಅಲ್ಲೋಲ ಕಲ್ಲೋಲ ಅಷ್ಟಿಷ್ಟಲ್ಲ. ಮನುಷ್ಯನ ಮೋಸ, ತಟವಟ, ವಂಚನೆ, ಭ್ರಷ್ಟಾಚಾರಕ್ಕೆಲ್ಲ ಮೂಲ ಕಾರಣ ಹಸಿವು. ಆ ಹಸಿವಿಗಾಗಿಯೆ ಆತ ಏನೆಲ್ಲ ಸರ್ಕಸ್ ಮಾಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಗಲಾದರೂ ಮಾತೆ ಮಾಣಿಕಮ್ಮ ಊಟ ಮಾಡದೆ , ನೀರು ಕುಡಿಯದೆ ಬದುಕಲು ಹೇಗೆ ಸಾಧ್ಯ ? ಎಂಬ ಸೂತ್ರವನ್ನು ಜಗತ್ತಿಗೆ ನೀಡಿದರೆ ಈ ಜಗತ್ತು ಆಕೆಯನ್ನು ಕೃತಜ್ಞತೆಯಿಂದ ನೆನೆಯುತ್ತದೆ. ಆಹಾರ ಮತ್ತು ನೀರಿಗಾಗಿ ಜಗತ್ತಿನಲ್ಲಿ ನಡೆದಿರುವ ಅಂತಃಕಲಹ ತಪ್ಪುತ್ತದೆ. ಮದ್ದು ಗುಂಡುಗಳು ಸೈನಿಕರು ಯುದ್ದ ವಿಮಾನಗಳು ಅರ್ಥಕಳೆದುಕೊಳ್ಳುತ್ತವೆ.

ವೈಜ್ಞಾನಿಕ ಮನೋಭಾವ ಇರುವ ಕೋರ್ಟ, ಸರಕಾರ ಆಕೆಯ ಆರೋಗ್ಯದ ಜೊತೆ ಜೊತೆಗೆ ಆಹಾರದ ಗುಟ್ಟನ್ನು ಬಯಲು ಮಾಡಿ ಪುಣ್ಯ ಕಟ್ಟಿಕೊಳ್ಳಬೇಕಿದೆ. ಇದೆಲ್ಲ ಇಂದು ಸಾಧ್ಯವೆ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...