Homeಕರ್ನಾಟಕಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

ಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಹಳ್ಳಿಯ ಯಾನಾಗುಂದಿ ಮಾಣಿಕಮ್ಮನ ಆರೋಗ್ಯಕ್ಕಾಗಿ ಕೋರ್ಟ ನಿರ್ದೇಶನದಂತೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಇದೆಲ್ಲ ಒಂದು ರೀತಿ ಸರಿ ಇರಬಹುದು. ಆದರೆ ಈ ಮಾಣಿಕಮ್ಮ ಊಟ ಉಪಚಾರವನ್ನೆ ಮಾಡದೆ ಇಲ್ಲಿಯವರೆಗೂ ಹಾಗೆಯೇ ಜೀವಿಸುತ್ತಿದ್ದಾಳೆ ಎಂಬ ಸಂಗತಿ ತುಂಬಾ ಮಹತ್ವದ್ದು. ಈ ಪವಾಡದ ಘಟನೆಗಾಗಿಯೆ ಕರ್ನಾಟಕ, ಆಂದ್ರ ಹಾಗೂ ಮಹಾರಾಷ್ಟ್ರದಾದ್ಯಂತ ಈಕೆಗೆ ಭಕ್ತರು ಹುಟ್ಟಿಕೊಂಡರು. ಮುಸುರೆಗೆ ನೊಣ ಮುತ್ತಿಕೊಂಡಂತೆ ರಾಜಕಾರಣಿಗಳೂ ಸಹ ಜನ ಸಾಮಾನ್ಯರು ಸೇರುವ ಕಡೆಗೆ ಅವರೂ ಸೇರಿ ಯಾನಾಗುಂದಿಯನ್ನು ನೋಡ ನೋಡುತ್ತಲೆ ಯಾತ್ರಾಕ್ಷೇತ್ರವಾಗಿ ಪರಿವರ್ತನೆಗೊಳಿಸಿದ್ದಾರೆ.

ವರ್ಷಕ್ಕೆ ಒಂದೆ ಒಂದು ಬಾರಿ ಅಂದರೆ ಶಿವರಾತ್ರಿಯ ದಿನ ಮಾಣಿಕೇಶ್ವರಿ ತನ್ನ ಭಕ್ತಾದಿಗಳಿಗೆ ದರ್ಶನ ಭಾಗ್ಯ ಕರುಣಿಸಿ ಮತ್ತೆ ವರ್ಷದುದ್ದಕ್ಕೂ ತನ್ನ ನೆಲ ಮಹಡಿಯನ್ನು ಸೇರಿ ಬಿಡುತ್ತಾಳೆ. ಮಾಣಿಕಮ್ಮ ಮಾಣಿಕೇಶ್ವರಿ ಆಗುವುದಕ್ಕಿಂತ ಪೂರ್ವದಲ್ಲಿ ಸೇಡಂ ತಾಲೂಕಿನ ಮಲ್ಲಾಬಾದ ಗ್ರಾಮದ ಬುಗ್ಗಮ್ಮ ಆಶಪ್ಪ ದಂಪತಿಗಳ ನಾಲ್ಕನೆಯ ಮಗಳು. ಬಡತನಕ್ಕೆ ಕಷ್ಟಗಳು ಜಾಸ್ತಿ ಎನ್ನುವಂತೆ ಅನ್ನ ನೀರಿಲ್ಲದೆ ಬಳಲಿಕೆಯಿಂದ ಮಾಣಿಕಮ್ಮ ಪವಾಡಗಳನ್ನು ಮಾಡುತ್ತಲೆ ಬಂದಳು. ಚಿಕ್ಕಂದಿನಲ್ಲಿ ಈಕೆ ಯಾರೊಂದಿಗೂ ಬೆರೆಯದೆ, ಮಾತಾಡದೆ, ಅರಳಿಯ ಮರದ ಟೊಂಗೆ ಏರಿ ಕುಳಿತುಕೊಳ್ಳುವಳು. ಇದನ್ನು ಕಂಡು ಕಂಗಾಲಾದ ತಂದೆ ತಾಯಿಗಳು ದೇವರಿಗೆ ಹರಕೆ ಹೊತ್ತಿದ್ದಾರೆ. ಸಾಲದೆಂಬಂತೆ ದೆವ್ವ ಬಿಡಿಸುವವರ ಮನೆಗೂ ಎಡತಾಕಿದ್ದಾರೆ. ಕೊನೆಗೆ ಯಾರ ಮಾತೋ ಕೇಳಿ ಮಾಣಿಕಮ್ಮಳಿಗೆ ಹತ್ತನೆ ವರ್ಷದಲ್ಲಿಯೆ ಬಾಲ್ಯ ವಿವಾಹವನ್ನೂ ಮಾಡಿದರು. ಆದರೂ ಆಕೆ ಸರಿ ಹೋಗಲಿಲ್ಲ.

ಗುರುಮಿಠಕಲ್ ಮಠದ ಹಿಂದಿನ ಪೀಠಾಧಿಪತಿಗಳು ತಮ್ಮ ಮಠದಲ್ಲಿಯೆ ಈಕೆಯನ್ನು ಇಟ್ಟುಕೊಂಡು ಔಷದೋಪಚಾರ ಮಾಡಿದ್ದಾರೆ. ಆದರೂ ಅದು ಸರಿ ಹೋಗದೆ ಇದ್ದಾಗ ಮಾಣಿಕಮ್ಮನಿಗೆ ಕಾವಿ ಧರಿಸಿ ಸನ್ಯಾಸಿ ಮಾಡಿದರು ಎಂಬ ಪ್ರತೀತಿ ಇದೆ. ಒಟ್ಟಿನಲ್ಲಿ ತನ್ನಷ್ಟಕ್ಕೆ ತಾನು ಇರುವ ಹರೆಯದ ಹುಡುಗಿ, ಶೂನ್ಯದಲ್ಲಿ ಏನನ್ನೋ ನೋಡುತ್ತ ಕುಳಿತ ಮಾಣಿಕಮ್ಮ ಮೌಢ್ಯ ಭಕ್ತರ ಕಣ್ಣಲ್ಲಿ ಪವಾಡ ಪುರುಷಳಾಗಿ ಗೋಚರವಾಗಿದ್ದಾಳೆ. ಕೆಲವು ಐನಾತಿಗಳಿಗೆ ಇಂಥದ್ದನ್ನು ಕಂಡರೆ ರಸಗವಳ. ಮಾಣಿಕಮ್ಮನನ್ನೆ ಬಂಡವಾಳ ಮಾಡಿಕೊಂಡ ಜನರು ಆಕೆಗಾಗಿ ಯಾನಾಗುಂದಿಯಲ್ಲಿ ಭರ್ಜರಿ ಕಟ್ಟಡವೊಂದನ್ನು ಕಟ್ಟಿ ನೆಲ ಮಹಡಿಯಲ್ಲಿಟ್ಟರು. ಹೇಳಿ ಕೇಳಿ ಆಂದ್ರದ ಜನ ಭಾವನಾತ್ಮಕತೆಯಲ್ಲಿಯೇ ಇರುವವರು.

ಮಾಣಿಕಮ್ಮ ಊಟವನ್ನೇ ಮಾಡದೆ ಜೀವಿಸಿದ್ದಾಳೆ ಎಂಬ ಹರಿಬಿಟ್ಟ ಸಂಗತಿ ಕಿವಿಯಿಂದ ಕಿವಿಗೆ ತಲುಪಿ, ಯಾನಾಗುಂದಿಯಲ್ಲಿ ಜನ ಜಂಗುಳಿಯೆ ಕೂಡಲು ಆರಂಭವಾಯಿತು. ಸಣ್ಣಗೆ ಆರಂಭವಾದ ಧಾರ್ಮಿಕ ವ್ಯಾಪಾರ ಇಂದು ಭರ್ಜರಿಯಾಗಿ ನಡೆಯುತ್ತಿವೆ. ಕಾಯಿ, ಕರ್ಪೂರ, ಹಾರ, ತುರಾಯಿ, ಪ್ರಸಾದ, ದಾಸೋಹ ಸೇವೆ ಕೈಂಕರ್ಯಗಳು ಅವ್ಯಾಹತವಾಗಿ ನಡೆದಿವೆ. ಕುರಿಗಳು ಸಾರ್ ನಾವು ಕುರಿಗಳು ಎಂಬ ಹಾಡಿನಂತೆ ಯೋಚಿಸುವ ಶಕ್ತಿಯನ್ನು ಕಳಕೊಂಡ ಜನತೆ ನಾ ಮುಂದೆ ತಾ ಮುಂದೆ ಎನ್ನುತ್ತಾ ದೌಡಾಯಿಸಿ ಯಾನಾಗುಂದಿಗೆ ಹೋಗಿ ಮಾಣಿಕಮ್ಮನ ದರ್ಶನ ಪಡೆದು ಬಂದರು.

ಆದರೆ ಇದುವರೆಗೂ ಯಾರೊಬ್ಬರೂ ಮಾಣಿಕಮ್ಮ ಊಟ ಮಾಡದೆ, ನೀರು ಕುಡಿಯದೆ ಹೇಗೆ ಜೀವಿಸಬಲ್ಲಳು ? ಎಂಬುದು ಯಾರೂ ಪ್ರಶ್ನಿಸಿಲ್ಲ. ಧಾರ್ಮಿಕ ನಂಬಿಕೆಯನ್ನು ಪ್ರಶ್ನಿಸುವುದು ಅಂದರೆ ಬತ್ತಲೆ ಇದ್ದವರ ರಾಜ್ಯದಲ್ಲಿ ಬಟ್ಟೆ ಉಟ್ಟವನ ಸ್ಥಿತಿಯಂತೆ. ಪುಂಡ ಪುರೋಹಿತರು, ಆಡಳಿತ ವರ್ಗದವರು ಹಬ್ಬಿಸಿದ ಗಾಳಿ ಸುದ್ದಿಗಳು ರೆಕ್ಕೆ ಪುಕ್ಕ ಕಟ್ಟಿಕೊಂಡು ಹಾರಾಡಿದ ಪರಿಣಾಮ ಯಾನಾಗುಂದಿ ಸುಕ್ಷೇತ್ರವಾಯಿತು, ಸುಪ್ರಸಿದ್ಧವಾಯಿತು.

ಜಗತ್ತಿನಾದ್ಯಂತ ಆಹಾರಕ್ಕಾಗಿ ನಡೆದ ಅಲ್ಲೋಲ ಕಲ್ಲೋಲ ಅಷ್ಟಿಷ್ಟಲ್ಲ. ಮನುಷ್ಯನ ಮೋಸ, ತಟವಟ, ವಂಚನೆ, ಭ್ರಷ್ಟಾಚಾರಕ್ಕೆಲ್ಲ ಮೂಲ ಕಾರಣ ಹಸಿವು. ಆ ಹಸಿವಿಗಾಗಿಯೆ ಆತ ಏನೆಲ್ಲ ಸರ್ಕಸ್ ಮಾಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಗಲಾದರೂ ಮಾತೆ ಮಾಣಿಕಮ್ಮ ಊಟ ಮಾಡದೆ , ನೀರು ಕುಡಿಯದೆ ಬದುಕಲು ಹೇಗೆ ಸಾಧ್ಯ ? ಎಂಬ ಸೂತ್ರವನ್ನು ಜಗತ್ತಿಗೆ ನೀಡಿದರೆ ಈ ಜಗತ್ತು ಆಕೆಯನ್ನು ಕೃತಜ್ಞತೆಯಿಂದ ನೆನೆಯುತ್ತದೆ. ಆಹಾರ ಮತ್ತು ನೀರಿಗಾಗಿ ಜಗತ್ತಿನಲ್ಲಿ ನಡೆದಿರುವ ಅಂತಃಕಲಹ ತಪ್ಪುತ್ತದೆ. ಮದ್ದು ಗುಂಡುಗಳು ಸೈನಿಕರು ಯುದ್ದ ವಿಮಾನಗಳು ಅರ್ಥಕಳೆದುಕೊಳ್ಳುತ್ತವೆ.

ವೈಜ್ಞಾನಿಕ ಮನೋಭಾವ ಇರುವ ಕೋರ್ಟ, ಸರಕಾರ ಆಕೆಯ ಆರೋಗ್ಯದ ಜೊತೆ ಜೊತೆಗೆ ಆಹಾರದ ಗುಟ್ಟನ್ನು ಬಯಲು ಮಾಡಿ ಪುಣ್ಯ ಕಟ್ಟಿಕೊಳ್ಳಬೇಕಿದೆ. ಇದೆಲ್ಲ ಇಂದು ಸಾಧ್ಯವೆ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...