Homeಕರ್ನಾಟಕಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

ಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಹಳ್ಳಿಯ ಯಾನಾಗುಂದಿ ಮಾಣಿಕಮ್ಮನ ಆರೋಗ್ಯಕ್ಕಾಗಿ ಕೋರ್ಟ ನಿರ್ದೇಶನದಂತೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಇದೆಲ್ಲ ಒಂದು ರೀತಿ ಸರಿ ಇರಬಹುದು. ಆದರೆ ಈ ಮಾಣಿಕಮ್ಮ ಊಟ ಉಪಚಾರವನ್ನೆ ಮಾಡದೆ ಇಲ್ಲಿಯವರೆಗೂ ಹಾಗೆಯೇ ಜೀವಿಸುತ್ತಿದ್ದಾಳೆ ಎಂಬ ಸಂಗತಿ ತುಂಬಾ ಮಹತ್ವದ್ದು. ಈ ಪವಾಡದ ಘಟನೆಗಾಗಿಯೆ ಕರ್ನಾಟಕ, ಆಂದ್ರ ಹಾಗೂ ಮಹಾರಾಷ್ಟ್ರದಾದ್ಯಂತ ಈಕೆಗೆ ಭಕ್ತರು ಹುಟ್ಟಿಕೊಂಡರು. ಮುಸುರೆಗೆ ನೊಣ ಮುತ್ತಿಕೊಂಡಂತೆ ರಾಜಕಾರಣಿಗಳೂ ಸಹ ಜನ ಸಾಮಾನ್ಯರು ಸೇರುವ ಕಡೆಗೆ ಅವರೂ ಸೇರಿ ಯಾನಾಗುಂದಿಯನ್ನು ನೋಡ ನೋಡುತ್ತಲೆ ಯಾತ್ರಾಕ್ಷೇತ್ರವಾಗಿ ಪರಿವರ್ತನೆಗೊಳಿಸಿದ್ದಾರೆ.

ವರ್ಷಕ್ಕೆ ಒಂದೆ ಒಂದು ಬಾರಿ ಅಂದರೆ ಶಿವರಾತ್ರಿಯ ದಿನ ಮಾಣಿಕೇಶ್ವರಿ ತನ್ನ ಭಕ್ತಾದಿಗಳಿಗೆ ದರ್ಶನ ಭಾಗ್ಯ ಕರುಣಿಸಿ ಮತ್ತೆ ವರ್ಷದುದ್ದಕ್ಕೂ ತನ್ನ ನೆಲ ಮಹಡಿಯನ್ನು ಸೇರಿ ಬಿಡುತ್ತಾಳೆ. ಮಾಣಿಕಮ್ಮ ಮಾಣಿಕೇಶ್ವರಿ ಆಗುವುದಕ್ಕಿಂತ ಪೂರ್ವದಲ್ಲಿ ಸೇಡಂ ತಾಲೂಕಿನ ಮಲ್ಲಾಬಾದ ಗ್ರಾಮದ ಬುಗ್ಗಮ್ಮ ಆಶಪ್ಪ ದಂಪತಿಗಳ ನಾಲ್ಕನೆಯ ಮಗಳು. ಬಡತನಕ್ಕೆ ಕಷ್ಟಗಳು ಜಾಸ್ತಿ ಎನ್ನುವಂತೆ ಅನ್ನ ನೀರಿಲ್ಲದೆ ಬಳಲಿಕೆಯಿಂದ ಮಾಣಿಕಮ್ಮ ಪವಾಡಗಳನ್ನು ಮಾಡುತ್ತಲೆ ಬಂದಳು. ಚಿಕ್ಕಂದಿನಲ್ಲಿ ಈಕೆ ಯಾರೊಂದಿಗೂ ಬೆರೆಯದೆ, ಮಾತಾಡದೆ, ಅರಳಿಯ ಮರದ ಟೊಂಗೆ ಏರಿ ಕುಳಿತುಕೊಳ್ಳುವಳು. ಇದನ್ನು ಕಂಡು ಕಂಗಾಲಾದ ತಂದೆ ತಾಯಿಗಳು ದೇವರಿಗೆ ಹರಕೆ ಹೊತ್ತಿದ್ದಾರೆ. ಸಾಲದೆಂಬಂತೆ ದೆವ್ವ ಬಿಡಿಸುವವರ ಮನೆಗೂ ಎಡತಾಕಿದ್ದಾರೆ. ಕೊನೆಗೆ ಯಾರ ಮಾತೋ ಕೇಳಿ ಮಾಣಿಕಮ್ಮಳಿಗೆ ಹತ್ತನೆ ವರ್ಷದಲ್ಲಿಯೆ ಬಾಲ್ಯ ವಿವಾಹವನ್ನೂ ಮಾಡಿದರು. ಆದರೂ ಆಕೆ ಸರಿ ಹೋಗಲಿಲ್ಲ.

ಗುರುಮಿಠಕಲ್ ಮಠದ ಹಿಂದಿನ ಪೀಠಾಧಿಪತಿಗಳು ತಮ್ಮ ಮಠದಲ್ಲಿಯೆ ಈಕೆಯನ್ನು ಇಟ್ಟುಕೊಂಡು ಔಷದೋಪಚಾರ ಮಾಡಿದ್ದಾರೆ. ಆದರೂ ಅದು ಸರಿ ಹೋಗದೆ ಇದ್ದಾಗ ಮಾಣಿಕಮ್ಮನಿಗೆ ಕಾವಿ ಧರಿಸಿ ಸನ್ಯಾಸಿ ಮಾಡಿದರು ಎಂಬ ಪ್ರತೀತಿ ಇದೆ. ಒಟ್ಟಿನಲ್ಲಿ ತನ್ನಷ್ಟಕ್ಕೆ ತಾನು ಇರುವ ಹರೆಯದ ಹುಡುಗಿ, ಶೂನ್ಯದಲ್ಲಿ ಏನನ್ನೋ ನೋಡುತ್ತ ಕುಳಿತ ಮಾಣಿಕಮ್ಮ ಮೌಢ್ಯ ಭಕ್ತರ ಕಣ್ಣಲ್ಲಿ ಪವಾಡ ಪುರುಷಳಾಗಿ ಗೋಚರವಾಗಿದ್ದಾಳೆ. ಕೆಲವು ಐನಾತಿಗಳಿಗೆ ಇಂಥದ್ದನ್ನು ಕಂಡರೆ ರಸಗವಳ. ಮಾಣಿಕಮ್ಮನನ್ನೆ ಬಂಡವಾಳ ಮಾಡಿಕೊಂಡ ಜನರು ಆಕೆಗಾಗಿ ಯಾನಾಗುಂದಿಯಲ್ಲಿ ಭರ್ಜರಿ ಕಟ್ಟಡವೊಂದನ್ನು ಕಟ್ಟಿ ನೆಲ ಮಹಡಿಯಲ್ಲಿಟ್ಟರು. ಹೇಳಿ ಕೇಳಿ ಆಂದ್ರದ ಜನ ಭಾವನಾತ್ಮಕತೆಯಲ್ಲಿಯೇ ಇರುವವರು.

ಮಾಣಿಕಮ್ಮ ಊಟವನ್ನೇ ಮಾಡದೆ ಜೀವಿಸಿದ್ದಾಳೆ ಎಂಬ ಹರಿಬಿಟ್ಟ ಸಂಗತಿ ಕಿವಿಯಿಂದ ಕಿವಿಗೆ ತಲುಪಿ, ಯಾನಾಗುಂದಿಯಲ್ಲಿ ಜನ ಜಂಗುಳಿಯೆ ಕೂಡಲು ಆರಂಭವಾಯಿತು. ಸಣ್ಣಗೆ ಆರಂಭವಾದ ಧಾರ್ಮಿಕ ವ್ಯಾಪಾರ ಇಂದು ಭರ್ಜರಿಯಾಗಿ ನಡೆಯುತ್ತಿವೆ. ಕಾಯಿ, ಕರ್ಪೂರ, ಹಾರ, ತುರಾಯಿ, ಪ್ರಸಾದ, ದಾಸೋಹ ಸೇವೆ ಕೈಂಕರ್ಯಗಳು ಅವ್ಯಾಹತವಾಗಿ ನಡೆದಿವೆ. ಕುರಿಗಳು ಸಾರ್ ನಾವು ಕುರಿಗಳು ಎಂಬ ಹಾಡಿನಂತೆ ಯೋಚಿಸುವ ಶಕ್ತಿಯನ್ನು ಕಳಕೊಂಡ ಜನತೆ ನಾ ಮುಂದೆ ತಾ ಮುಂದೆ ಎನ್ನುತ್ತಾ ದೌಡಾಯಿಸಿ ಯಾನಾಗುಂದಿಗೆ ಹೋಗಿ ಮಾಣಿಕಮ್ಮನ ದರ್ಶನ ಪಡೆದು ಬಂದರು.

ಆದರೆ ಇದುವರೆಗೂ ಯಾರೊಬ್ಬರೂ ಮಾಣಿಕಮ್ಮ ಊಟ ಮಾಡದೆ, ನೀರು ಕುಡಿಯದೆ ಹೇಗೆ ಜೀವಿಸಬಲ್ಲಳು ? ಎಂಬುದು ಯಾರೂ ಪ್ರಶ್ನಿಸಿಲ್ಲ. ಧಾರ್ಮಿಕ ನಂಬಿಕೆಯನ್ನು ಪ್ರಶ್ನಿಸುವುದು ಅಂದರೆ ಬತ್ತಲೆ ಇದ್ದವರ ರಾಜ್ಯದಲ್ಲಿ ಬಟ್ಟೆ ಉಟ್ಟವನ ಸ್ಥಿತಿಯಂತೆ. ಪುಂಡ ಪುರೋಹಿತರು, ಆಡಳಿತ ವರ್ಗದವರು ಹಬ್ಬಿಸಿದ ಗಾಳಿ ಸುದ್ದಿಗಳು ರೆಕ್ಕೆ ಪುಕ್ಕ ಕಟ್ಟಿಕೊಂಡು ಹಾರಾಡಿದ ಪರಿಣಾಮ ಯಾನಾಗುಂದಿ ಸುಕ್ಷೇತ್ರವಾಯಿತು, ಸುಪ್ರಸಿದ್ಧವಾಯಿತು.

ಜಗತ್ತಿನಾದ್ಯಂತ ಆಹಾರಕ್ಕಾಗಿ ನಡೆದ ಅಲ್ಲೋಲ ಕಲ್ಲೋಲ ಅಷ್ಟಿಷ್ಟಲ್ಲ. ಮನುಷ್ಯನ ಮೋಸ, ತಟವಟ, ವಂಚನೆ, ಭ್ರಷ್ಟಾಚಾರಕ್ಕೆಲ್ಲ ಮೂಲ ಕಾರಣ ಹಸಿವು. ಆ ಹಸಿವಿಗಾಗಿಯೆ ಆತ ಏನೆಲ್ಲ ಸರ್ಕಸ್ ಮಾಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಗಲಾದರೂ ಮಾತೆ ಮಾಣಿಕಮ್ಮ ಊಟ ಮಾಡದೆ , ನೀರು ಕುಡಿಯದೆ ಬದುಕಲು ಹೇಗೆ ಸಾಧ್ಯ ? ಎಂಬ ಸೂತ್ರವನ್ನು ಜಗತ್ತಿಗೆ ನೀಡಿದರೆ ಈ ಜಗತ್ತು ಆಕೆಯನ್ನು ಕೃತಜ್ಞತೆಯಿಂದ ನೆನೆಯುತ್ತದೆ. ಆಹಾರ ಮತ್ತು ನೀರಿಗಾಗಿ ಜಗತ್ತಿನಲ್ಲಿ ನಡೆದಿರುವ ಅಂತಃಕಲಹ ತಪ್ಪುತ್ತದೆ. ಮದ್ದು ಗುಂಡುಗಳು ಸೈನಿಕರು ಯುದ್ದ ವಿಮಾನಗಳು ಅರ್ಥಕಳೆದುಕೊಳ್ಳುತ್ತವೆ.

ವೈಜ್ಞಾನಿಕ ಮನೋಭಾವ ಇರುವ ಕೋರ್ಟ, ಸರಕಾರ ಆಕೆಯ ಆರೋಗ್ಯದ ಜೊತೆ ಜೊತೆಗೆ ಆಹಾರದ ಗುಟ್ಟನ್ನು ಬಯಲು ಮಾಡಿ ಪುಣ್ಯ ಕಟ್ಟಿಕೊಳ್ಳಬೇಕಿದೆ. ಇದೆಲ್ಲ ಇಂದು ಸಾಧ್ಯವೆ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...