Homeಕರ್ನಾಟಕಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

ಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಹಳ್ಳಿಯ ಯಾನಾಗುಂದಿ ಮಾಣಿಕಮ್ಮನ ಆರೋಗ್ಯಕ್ಕಾಗಿ ಕೋರ್ಟ ನಿರ್ದೇಶನದಂತೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಇದೆಲ್ಲ ಒಂದು ರೀತಿ ಸರಿ ಇರಬಹುದು. ಆದರೆ ಈ ಮಾಣಿಕಮ್ಮ ಊಟ ಉಪಚಾರವನ್ನೆ ಮಾಡದೆ ಇಲ್ಲಿಯವರೆಗೂ ಹಾಗೆಯೇ ಜೀವಿಸುತ್ತಿದ್ದಾಳೆ ಎಂಬ ಸಂಗತಿ ತುಂಬಾ ಮಹತ್ವದ್ದು. ಈ ಪವಾಡದ ಘಟನೆಗಾಗಿಯೆ ಕರ್ನಾಟಕ, ಆಂದ್ರ ಹಾಗೂ ಮಹಾರಾಷ್ಟ್ರದಾದ್ಯಂತ ಈಕೆಗೆ ಭಕ್ತರು ಹುಟ್ಟಿಕೊಂಡರು. ಮುಸುರೆಗೆ ನೊಣ ಮುತ್ತಿಕೊಂಡಂತೆ ರಾಜಕಾರಣಿಗಳೂ ಸಹ ಜನ ಸಾಮಾನ್ಯರು ಸೇರುವ ಕಡೆಗೆ ಅವರೂ ಸೇರಿ ಯಾನಾಗುಂದಿಯನ್ನು ನೋಡ ನೋಡುತ್ತಲೆ ಯಾತ್ರಾಕ್ಷೇತ್ರವಾಗಿ ಪರಿವರ್ತನೆಗೊಳಿಸಿದ್ದಾರೆ.

ವರ್ಷಕ್ಕೆ ಒಂದೆ ಒಂದು ಬಾರಿ ಅಂದರೆ ಶಿವರಾತ್ರಿಯ ದಿನ ಮಾಣಿಕೇಶ್ವರಿ ತನ್ನ ಭಕ್ತಾದಿಗಳಿಗೆ ದರ್ಶನ ಭಾಗ್ಯ ಕರುಣಿಸಿ ಮತ್ತೆ ವರ್ಷದುದ್ದಕ್ಕೂ ತನ್ನ ನೆಲ ಮಹಡಿಯನ್ನು ಸೇರಿ ಬಿಡುತ್ತಾಳೆ. ಮಾಣಿಕಮ್ಮ ಮಾಣಿಕೇಶ್ವರಿ ಆಗುವುದಕ್ಕಿಂತ ಪೂರ್ವದಲ್ಲಿ ಸೇಡಂ ತಾಲೂಕಿನ ಮಲ್ಲಾಬಾದ ಗ್ರಾಮದ ಬುಗ್ಗಮ್ಮ ಆಶಪ್ಪ ದಂಪತಿಗಳ ನಾಲ್ಕನೆಯ ಮಗಳು. ಬಡತನಕ್ಕೆ ಕಷ್ಟಗಳು ಜಾಸ್ತಿ ಎನ್ನುವಂತೆ ಅನ್ನ ನೀರಿಲ್ಲದೆ ಬಳಲಿಕೆಯಿಂದ ಮಾಣಿಕಮ್ಮ ಪವಾಡಗಳನ್ನು ಮಾಡುತ್ತಲೆ ಬಂದಳು. ಚಿಕ್ಕಂದಿನಲ್ಲಿ ಈಕೆ ಯಾರೊಂದಿಗೂ ಬೆರೆಯದೆ, ಮಾತಾಡದೆ, ಅರಳಿಯ ಮರದ ಟೊಂಗೆ ಏರಿ ಕುಳಿತುಕೊಳ್ಳುವಳು. ಇದನ್ನು ಕಂಡು ಕಂಗಾಲಾದ ತಂದೆ ತಾಯಿಗಳು ದೇವರಿಗೆ ಹರಕೆ ಹೊತ್ತಿದ್ದಾರೆ. ಸಾಲದೆಂಬಂತೆ ದೆವ್ವ ಬಿಡಿಸುವವರ ಮನೆಗೂ ಎಡತಾಕಿದ್ದಾರೆ. ಕೊನೆಗೆ ಯಾರ ಮಾತೋ ಕೇಳಿ ಮಾಣಿಕಮ್ಮಳಿಗೆ ಹತ್ತನೆ ವರ್ಷದಲ್ಲಿಯೆ ಬಾಲ್ಯ ವಿವಾಹವನ್ನೂ ಮಾಡಿದರು. ಆದರೂ ಆಕೆ ಸರಿ ಹೋಗಲಿಲ್ಲ.

ಗುರುಮಿಠಕಲ್ ಮಠದ ಹಿಂದಿನ ಪೀಠಾಧಿಪತಿಗಳು ತಮ್ಮ ಮಠದಲ್ಲಿಯೆ ಈಕೆಯನ್ನು ಇಟ್ಟುಕೊಂಡು ಔಷದೋಪಚಾರ ಮಾಡಿದ್ದಾರೆ. ಆದರೂ ಅದು ಸರಿ ಹೋಗದೆ ಇದ್ದಾಗ ಮಾಣಿಕಮ್ಮನಿಗೆ ಕಾವಿ ಧರಿಸಿ ಸನ್ಯಾಸಿ ಮಾಡಿದರು ಎಂಬ ಪ್ರತೀತಿ ಇದೆ. ಒಟ್ಟಿನಲ್ಲಿ ತನ್ನಷ್ಟಕ್ಕೆ ತಾನು ಇರುವ ಹರೆಯದ ಹುಡುಗಿ, ಶೂನ್ಯದಲ್ಲಿ ಏನನ್ನೋ ನೋಡುತ್ತ ಕುಳಿತ ಮಾಣಿಕಮ್ಮ ಮೌಢ್ಯ ಭಕ್ತರ ಕಣ್ಣಲ್ಲಿ ಪವಾಡ ಪುರುಷಳಾಗಿ ಗೋಚರವಾಗಿದ್ದಾಳೆ. ಕೆಲವು ಐನಾತಿಗಳಿಗೆ ಇಂಥದ್ದನ್ನು ಕಂಡರೆ ರಸಗವಳ. ಮಾಣಿಕಮ್ಮನನ್ನೆ ಬಂಡವಾಳ ಮಾಡಿಕೊಂಡ ಜನರು ಆಕೆಗಾಗಿ ಯಾನಾಗುಂದಿಯಲ್ಲಿ ಭರ್ಜರಿ ಕಟ್ಟಡವೊಂದನ್ನು ಕಟ್ಟಿ ನೆಲ ಮಹಡಿಯಲ್ಲಿಟ್ಟರು. ಹೇಳಿ ಕೇಳಿ ಆಂದ್ರದ ಜನ ಭಾವನಾತ್ಮಕತೆಯಲ್ಲಿಯೇ ಇರುವವರು.

ಮಾಣಿಕಮ್ಮ ಊಟವನ್ನೇ ಮಾಡದೆ ಜೀವಿಸಿದ್ದಾಳೆ ಎಂಬ ಹರಿಬಿಟ್ಟ ಸಂಗತಿ ಕಿವಿಯಿಂದ ಕಿವಿಗೆ ತಲುಪಿ, ಯಾನಾಗುಂದಿಯಲ್ಲಿ ಜನ ಜಂಗುಳಿಯೆ ಕೂಡಲು ಆರಂಭವಾಯಿತು. ಸಣ್ಣಗೆ ಆರಂಭವಾದ ಧಾರ್ಮಿಕ ವ್ಯಾಪಾರ ಇಂದು ಭರ್ಜರಿಯಾಗಿ ನಡೆಯುತ್ತಿವೆ. ಕಾಯಿ, ಕರ್ಪೂರ, ಹಾರ, ತುರಾಯಿ, ಪ್ರಸಾದ, ದಾಸೋಹ ಸೇವೆ ಕೈಂಕರ್ಯಗಳು ಅವ್ಯಾಹತವಾಗಿ ನಡೆದಿವೆ. ಕುರಿಗಳು ಸಾರ್ ನಾವು ಕುರಿಗಳು ಎಂಬ ಹಾಡಿನಂತೆ ಯೋಚಿಸುವ ಶಕ್ತಿಯನ್ನು ಕಳಕೊಂಡ ಜನತೆ ನಾ ಮುಂದೆ ತಾ ಮುಂದೆ ಎನ್ನುತ್ತಾ ದೌಡಾಯಿಸಿ ಯಾನಾಗುಂದಿಗೆ ಹೋಗಿ ಮಾಣಿಕಮ್ಮನ ದರ್ಶನ ಪಡೆದು ಬಂದರು.

ಆದರೆ ಇದುವರೆಗೂ ಯಾರೊಬ್ಬರೂ ಮಾಣಿಕಮ್ಮ ಊಟ ಮಾಡದೆ, ನೀರು ಕುಡಿಯದೆ ಹೇಗೆ ಜೀವಿಸಬಲ್ಲಳು ? ಎಂಬುದು ಯಾರೂ ಪ್ರಶ್ನಿಸಿಲ್ಲ. ಧಾರ್ಮಿಕ ನಂಬಿಕೆಯನ್ನು ಪ್ರಶ್ನಿಸುವುದು ಅಂದರೆ ಬತ್ತಲೆ ಇದ್ದವರ ರಾಜ್ಯದಲ್ಲಿ ಬಟ್ಟೆ ಉಟ್ಟವನ ಸ್ಥಿತಿಯಂತೆ. ಪುಂಡ ಪುರೋಹಿತರು, ಆಡಳಿತ ವರ್ಗದವರು ಹಬ್ಬಿಸಿದ ಗಾಳಿ ಸುದ್ದಿಗಳು ರೆಕ್ಕೆ ಪುಕ್ಕ ಕಟ್ಟಿಕೊಂಡು ಹಾರಾಡಿದ ಪರಿಣಾಮ ಯಾನಾಗುಂದಿ ಸುಕ್ಷೇತ್ರವಾಯಿತು, ಸುಪ್ರಸಿದ್ಧವಾಯಿತು.

ಜಗತ್ತಿನಾದ್ಯಂತ ಆಹಾರಕ್ಕಾಗಿ ನಡೆದ ಅಲ್ಲೋಲ ಕಲ್ಲೋಲ ಅಷ್ಟಿಷ್ಟಲ್ಲ. ಮನುಷ್ಯನ ಮೋಸ, ತಟವಟ, ವಂಚನೆ, ಭ್ರಷ್ಟಾಚಾರಕ್ಕೆಲ್ಲ ಮೂಲ ಕಾರಣ ಹಸಿವು. ಆ ಹಸಿವಿಗಾಗಿಯೆ ಆತ ಏನೆಲ್ಲ ಸರ್ಕಸ್ ಮಾಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಗಲಾದರೂ ಮಾತೆ ಮಾಣಿಕಮ್ಮ ಊಟ ಮಾಡದೆ , ನೀರು ಕುಡಿಯದೆ ಬದುಕಲು ಹೇಗೆ ಸಾಧ್ಯ ? ಎಂಬ ಸೂತ್ರವನ್ನು ಜಗತ್ತಿಗೆ ನೀಡಿದರೆ ಈ ಜಗತ್ತು ಆಕೆಯನ್ನು ಕೃತಜ್ಞತೆಯಿಂದ ನೆನೆಯುತ್ತದೆ. ಆಹಾರ ಮತ್ತು ನೀರಿಗಾಗಿ ಜಗತ್ತಿನಲ್ಲಿ ನಡೆದಿರುವ ಅಂತಃಕಲಹ ತಪ್ಪುತ್ತದೆ. ಮದ್ದು ಗುಂಡುಗಳು ಸೈನಿಕರು ಯುದ್ದ ವಿಮಾನಗಳು ಅರ್ಥಕಳೆದುಕೊಳ್ಳುತ್ತವೆ.

ವೈಜ್ಞಾನಿಕ ಮನೋಭಾವ ಇರುವ ಕೋರ್ಟ, ಸರಕಾರ ಆಕೆಯ ಆರೋಗ್ಯದ ಜೊತೆ ಜೊತೆಗೆ ಆಹಾರದ ಗುಟ್ಟನ್ನು ಬಯಲು ಮಾಡಿ ಪುಣ್ಯ ಕಟ್ಟಿಕೊಳ್ಳಬೇಕಿದೆ. ಇದೆಲ್ಲ ಇಂದು ಸಾಧ್ಯವೆ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...