Homeಕರ್ನಾಟಕಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

ಯಾನಾಗುಂದಿ ಮಾತೆ ಮಾಣಿಕಮ್ಮನ ಸುತ್ತ ಪವಾಡಗಳ ಹುತ್ತ ?!

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಹಳ್ಳಿಯ ಯಾನಾಗುಂದಿ ಮಾಣಿಕಮ್ಮನ ಆರೋಗ್ಯಕ್ಕಾಗಿ ಕೋರ್ಟ ನಿರ್ದೇಶನದಂತೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಇದೆಲ್ಲ ಒಂದು ರೀತಿ ಸರಿ ಇರಬಹುದು. ಆದರೆ ಈ ಮಾಣಿಕಮ್ಮ ಊಟ ಉಪಚಾರವನ್ನೆ ಮಾಡದೆ ಇಲ್ಲಿಯವರೆಗೂ ಹಾಗೆಯೇ ಜೀವಿಸುತ್ತಿದ್ದಾಳೆ ಎಂಬ ಸಂಗತಿ ತುಂಬಾ ಮಹತ್ವದ್ದು. ಈ ಪವಾಡದ ಘಟನೆಗಾಗಿಯೆ ಕರ್ನಾಟಕ, ಆಂದ್ರ ಹಾಗೂ ಮಹಾರಾಷ್ಟ್ರದಾದ್ಯಂತ ಈಕೆಗೆ ಭಕ್ತರು ಹುಟ್ಟಿಕೊಂಡರು. ಮುಸುರೆಗೆ ನೊಣ ಮುತ್ತಿಕೊಂಡಂತೆ ರಾಜಕಾರಣಿಗಳೂ ಸಹ ಜನ ಸಾಮಾನ್ಯರು ಸೇರುವ ಕಡೆಗೆ ಅವರೂ ಸೇರಿ ಯಾನಾಗುಂದಿಯನ್ನು ನೋಡ ನೋಡುತ್ತಲೆ ಯಾತ್ರಾಕ್ಷೇತ್ರವಾಗಿ ಪರಿವರ್ತನೆಗೊಳಿಸಿದ್ದಾರೆ.

ವರ್ಷಕ್ಕೆ ಒಂದೆ ಒಂದು ಬಾರಿ ಅಂದರೆ ಶಿವರಾತ್ರಿಯ ದಿನ ಮಾಣಿಕೇಶ್ವರಿ ತನ್ನ ಭಕ್ತಾದಿಗಳಿಗೆ ದರ್ಶನ ಭಾಗ್ಯ ಕರುಣಿಸಿ ಮತ್ತೆ ವರ್ಷದುದ್ದಕ್ಕೂ ತನ್ನ ನೆಲ ಮಹಡಿಯನ್ನು ಸೇರಿ ಬಿಡುತ್ತಾಳೆ. ಮಾಣಿಕಮ್ಮ ಮಾಣಿಕೇಶ್ವರಿ ಆಗುವುದಕ್ಕಿಂತ ಪೂರ್ವದಲ್ಲಿ ಸೇಡಂ ತಾಲೂಕಿನ ಮಲ್ಲಾಬಾದ ಗ್ರಾಮದ ಬುಗ್ಗಮ್ಮ ಆಶಪ್ಪ ದಂಪತಿಗಳ ನಾಲ್ಕನೆಯ ಮಗಳು. ಬಡತನಕ್ಕೆ ಕಷ್ಟಗಳು ಜಾಸ್ತಿ ಎನ್ನುವಂತೆ ಅನ್ನ ನೀರಿಲ್ಲದೆ ಬಳಲಿಕೆಯಿಂದ ಮಾಣಿಕಮ್ಮ ಪವಾಡಗಳನ್ನು ಮಾಡುತ್ತಲೆ ಬಂದಳು. ಚಿಕ್ಕಂದಿನಲ್ಲಿ ಈಕೆ ಯಾರೊಂದಿಗೂ ಬೆರೆಯದೆ, ಮಾತಾಡದೆ, ಅರಳಿಯ ಮರದ ಟೊಂಗೆ ಏರಿ ಕುಳಿತುಕೊಳ್ಳುವಳು. ಇದನ್ನು ಕಂಡು ಕಂಗಾಲಾದ ತಂದೆ ತಾಯಿಗಳು ದೇವರಿಗೆ ಹರಕೆ ಹೊತ್ತಿದ್ದಾರೆ. ಸಾಲದೆಂಬಂತೆ ದೆವ್ವ ಬಿಡಿಸುವವರ ಮನೆಗೂ ಎಡತಾಕಿದ್ದಾರೆ. ಕೊನೆಗೆ ಯಾರ ಮಾತೋ ಕೇಳಿ ಮಾಣಿಕಮ್ಮಳಿಗೆ ಹತ್ತನೆ ವರ್ಷದಲ್ಲಿಯೆ ಬಾಲ್ಯ ವಿವಾಹವನ್ನೂ ಮಾಡಿದರು. ಆದರೂ ಆಕೆ ಸರಿ ಹೋಗಲಿಲ್ಲ.

ಗುರುಮಿಠಕಲ್ ಮಠದ ಹಿಂದಿನ ಪೀಠಾಧಿಪತಿಗಳು ತಮ್ಮ ಮಠದಲ್ಲಿಯೆ ಈಕೆಯನ್ನು ಇಟ್ಟುಕೊಂಡು ಔಷದೋಪಚಾರ ಮಾಡಿದ್ದಾರೆ. ಆದರೂ ಅದು ಸರಿ ಹೋಗದೆ ಇದ್ದಾಗ ಮಾಣಿಕಮ್ಮನಿಗೆ ಕಾವಿ ಧರಿಸಿ ಸನ್ಯಾಸಿ ಮಾಡಿದರು ಎಂಬ ಪ್ರತೀತಿ ಇದೆ. ಒಟ್ಟಿನಲ್ಲಿ ತನ್ನಷ್ಟಕ್ಕೆ ತಾನು ಇರುವ ಹರೆಯದ ಹುಡುಗಿ, ಶೂನ್ಯದಲ್ಲಿ ಏನನ್ನೋ ನೋಡುತ್ತ ಕುಳಿತ ಮಾಣಿಕಮ್ಮ ಮೌಢ್ಯ ಭಕ್ತರ ಕಣ್ಣಲ್ಲಿ ಪವಾಡ ಪುರುಷಳಾಗಿ ಗೋಚರವಾಗಿದ್ದಾಳೆ. ಕೆಲವು ಐನಾತಿಗಳಿಗೆ ಇಂಥದ್ದನ್ನು ಕಂಡರೆ ರಸಗವಳ. ಮಾಣಿಕಮ್ಮನನ್ನೆ ಬಂಡವಾಳ ಮಾಡಿಕೊಂಡ ಜನರು ಆಕೆಗಾಗಿ ಯಾನಾಗುಂದಿಯಲ್ಲಿ ಭರ್ಜರಿ ಕಟ್ಟಡವೊಂದನ್ನು ಕಟ್ಟಿ ನೆಲ ಮಹಡಿಯಲ್ಲಿಟ್ಟರು. ಹೇಳಿ ಕೇಳಿ ಆಂದ್ರದ ಜನ ಭಾವನಾತ್ಮಕತೆಯಲ್ಲಿಯೇ ಇರುವವರು.

ಮಾಣಿಕಮ್ಮ ಊಟವನ್ನೇ ಮಾಡದೆ ಜೀವಿಸಿದ್ದಾಳೆ ಎಂಬ ಹರಿಬಿಟ್ಟ ಸಂಗತಿ ಕಿವಿಯಿಂದ ಕಿವಿಗೆ ತಲುಪಿ, ಯಾನಾಗುಂದಿಯಲ್ಲಿ ಜನ ಜಂಗುಳಿಯೆ ಕೂಡಲು ಆರಂಭವಾಯಿತು. ಸಣ್ಣಗೆ ಆರಂಭವಾದ ಧಾರ್ಮಿಕ ವ್ಯಾಪಾರ ಇಂದು ಭರ್ಜರಿಯಾಗಿ ನಡೆಯುತ್ತಿವೆ. ಕಾಯಿ, ಕರ್ಪೂರ, ಹಾರ, ತುರಾಯಿ, ಪ್ರಸಾದ, ದಾಸೋಹ ಸೇವೆ ಕೈಂಕರ್ಯಗಳು ಅವ್ಯಾಹತವಾಗಿ ನಡೆದಿವೆ. ಕುರಿಗಳು ಸಾರ್ ನಾವು ಕುರಿಗಳು ಎಂಬ ಹಾಡಿನಂತೆ ಯೋಚಿಸುವ ಶಕ್ತಿಯನ್ನು ಕಳಕೊಂಡ ಜನತೆ ನಾ ಮುಂದೆ ತಾ ಮುಂದೆ ಎನ್ನುತ್ತಾ ದೌಡಾಯಿಸಿ ಯಾನಾಗುಂದಿಗೆ ಹೋಗಿ ಮಾಣಿಕಮ್ಮನ ದರ್ಶನ ಪಡೆದು ಬಂದರು.

ಆದರೆ ಇದುವರೆಗೂ ಯಾರೊಬ್ಬರೂ ಮಾಣಿಕಮ್ಮ ಊಟ ಮಾಡದೆ, ನೀರು ಕುಡಿಯದೆ ಹೇಗೆ ಜೀವಿಸಬಲ್ಲಳು ? ಎಂಬುದು ಯಾರೂ ಪ್ರಶ್ನಿಸಿಲ್ಲ. ಧಾರ್ಮಿಕ ನಂಬಿಕೆಯನ್ನು ಪ್ರಶ್ನಿಸುವುದು ಅಂದರೆ ಬತ್ತಲೆ ಇದ್ದವರ ರಾಜ್ಯದಲ್ಲಿ ಬಟ್ಟೆ ಉಟ್ಟವನ ಸ್ಥಿತಿಯಂತೆ. ಪುಂಡ ಪುರೋಹಿತರು, ಆಡಳಿತ ವರ್ಗದವರು ಹಬ್ಬಿಸಿದ ಗಾಳಿ ಸುದ್ದಿಗಳು ರೆಕ್ಕೆ ಪುಕ್ಕ ಕಟ್ಟಿಕೊಂಡು ಹಾರಾಡಿದ ಪರಿಣಾಮ ಯಾನಾಗುಂದಿ ಸುಕ್ಷೇತ್ರವಾಯಿತು, ಸುಪ್ರಸಿದ್ಧವಾಯಿತು.

ಜಗತ್ತಿನಾದ್ಯಂತ ಆಹಾರಕ್ಕಾಗಿ ನಡೆದ ಅಲ್ಲೋಲ ಕಲ್ಲೋಲ ಅಷ್ಟಿಷ್ಟಲ್ಲ. ಮನುಷ್ಯನ ಮೋಸ, ತಟವಟ, ವಂಚನೆ, ಭ್ರಷ್ಟಾಚಾರಕ್ಕೆಲ್ಲ ಮೂಲ ಕಾರಣ ಹಸಿವು. ಆ ಹಸಿವಿಗಾಗಿಯೆ ಆತ ಏನೆಲ್ಲ ಸರ್ಕಸ್ ಮಾಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈಗಲಾದರೂ ಮಾತೆ ಮಾಣಿಕಮ್ಮ ಊಟ ಮಾಡದೆ , ನೀರು ಕುಡಿಯದೆ ಬದುಕಲು ಹೇಗೆ ಸಾಧ್ಯ ? ಎಂಬ ಸೂತ್ರವನ್ನು ಜಗತ್ತಿಗೆ ನೀಡಿದರೆ ಈ ಜಗತ್ತು ಆಕೆಯನ್ನು ಕೃತಜ್ಞತೆಯಿಂದ ನೆನೆಯುತ್ತದೆ. ಆಹಾರ ಮತ್ತು ನೀರಿಗಾಗಿ ಜಗತ್ತಿನಲ್ಲಿ ನಡೆದಿರುವ ಅಂತಃಕಲಹ ತಪ್ಪುತ್ತದೆ. ಮದ್ದು ಗುಂಡುಗಳು ಸೈನಿಕರು ಯುದ್ದ ವಿಮಾನಗಳು ಅರ್ಥಕಳೆದುಕೊಳ್ಳುತ್ತವೆ.

ವೈಜ್ಞಾನಿಕ ಮನೋಭಾವ ಇರುವ ಕೋರ್ಟ, ಸರಕಾರ ಆಕೆಯ ಆರೋಗ್ಯದ ಜೊತೆ ಜೊತೆಗೆ ಆಹಾರದ ಗುಟ್ಟನ್ನು ಬಯಲು ಮಾಡಿ ಪುಣ್ಯ ಕಟ್ಟಿಕೊಳ್ಳಬೇಕಿದೆ. ಇದೆಲ್ಲ ಇಂದು ಸಾಧ್ಯವೆ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...