Homeಮುಖಪುಟ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಭಯೋತ್ಪಾದಕರಾದರೆ 1 ಕೋಟಿ ಮತ್ತು ಒಂದು ವರ್ಷದವರೆಗೆ ಅದೇ ಕೆಲಸ ಮಾಡುವುದಾದರೆ 100 ಕೋಟಿ ಸಂಗ್ರಹಿಸಿ ನೀಡುತ್ತೇನೆ ಎಂದಿರುವ ಅವರ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಈ ಯುವಕರು ಒಂದು ವರ್ಷ ಹಾಗೆಯೆ ಮುಂದುವರೆಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗಾಗಿ ಸಂಗ್ರಹಿಸುವುದಾಗಿ ಅವರು ಹೇಳಿದ್ದಾರೆ.

ಇದು ನರಸಿಂಗಾನಂದ ಅವರ ಎರಡನೇ ಧರಂ ಸಂಸದ್ ಆಗಿದ್ದು, ಮೊದಲನೇ ಧರಂ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು ಮತ್ತು ಇದರ ನಂತರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳು ನಡೆದಿದ್ದು. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಶ್ರೀಲಂಕಾ ತಮಿಳರಿಗೆ ಸ್ವತಂತ್ರ ರಾಜ್ಯವನ್ನು ಬಯಸಿ ಅಲ್ಲಿನ ಸರ್ಕಾರದ ವಿರುದ್ದ ಕಟ್ಟಿದ ಸಶಸ್ತ್ರ ಸಂಘಟನೆಯಾದ ಎಲ್‌ಟಿಟಿಇ ಸಂಸ್ಥಾಪಕರಾಗಿದ್ದಾರೆ ವೇಲುಪಿಳ್ಳೈ ಪ್ರಭಾಕರನ್‌. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿಗೆ ಪ್ರಭಾಕರನ್ ಮತ್ತು ಎಲ್‌ಟಿಟಿಇ ಕಾರಣವಾಗಿದೆ. ಈ ಸಂಘಟನೆಯನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ನಿಷೇಧಿಸಲಾಗಿದೆ.

ಹಿಂದೂ ಧರ್ಮದ ‘ರಕ್ಷಣೆ’ಗಾಗಿ ದೊಡ್ಡ ಪ್ರಮಾಣದ ಹಿಂಸಾತ್ಮಕ ಉಗ್ರಗಾಮಿ ಚಳುವಳಿಗೆ ನರಸಿಂಗಾನಂದರ ಕರೆದಿದ್ದಾರೆ. ನರಸಿಂಗಾನಂದ ಅವರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಇದುವೇ ಮೊದಲ ಬಾರಿಯಲ್ಲ. ಆದರೆ, ಶಸ್ತ್ರ ಎತ್ತುವವರಿಗೆ ಬಹಿರಂಗವಾಗಿ ಬಹುಮಾನವನ್ನು ಘೋಷಿಸುತ್ತಿವುದು ಇದು ಮೊದಲ ಬಾರಿಯಾಗಿದೆ.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಅದೇ ಸಮಾರಂಭದಲ್ಲಿ ಅವರು ಮುಸ್ಲಿಂ ವಿರೋಧಿ ಚಾನೆಲ್‌ ಸುದರ್ಶನ್‌ ನ್ಯೂಸ್‌ಗೆ ಸಂದರ್ಶನ ನೀಡಿದ್ದರು. ಇದರಲ್ಲಿ ಧರಂ ಸಂಸದ್‌ನಲ್ಲಿ ಪ್ರಭಾಕರನ್‌ ಅವರ ಹೇಳಿಕೆಯನ್ನು ಚರ್ಚಿಸಿದ ಅವರು, “ನಮ್ಮ ಧರಂ ಸಂಸದ್‌ನಲ್ಲಿ, ಹತ್ ಯೋಗಿಜಿ ಮಹಾರಾಜ್ ನಮಗೆ ಪ್ರಭಾಕರನ ಅವಶ್ಯಕತೆಯಿದೆ ಎಂದು ಹೇಳಿದರು. ನಮಗೆ ಪ್ರಭಾಕರನ್, ಭಿಂದ್ರನ್‌ವಾಲೆ ಮತ್ತು ಜನರಲ್ ಶಾಬೇಗ್ ಸಿಂಗ್ ಅವರ ಅವಶ್ಯಕತೆಯಿದೆ ಎಂದು ನಾನು ಹೇಳುತ್ತೇನೆ. ಪ್ರತಿ ಹಿಂದೂ ಮಂದಿರದಲ್ಲಿ ಒಬ್ಬ ಪ್ರಭಾಕರನ್, ಒಬ್ಬ ಭಿಂದ್ರನ್ವಾಲೆ ಮತ್ತು ಒಬ್ಬ ಶಾಬೇಗ್ ಸಿಂಗ್ ಇರುವವರೆಗೂ ಹಿಂದೂ ಧರ್ಮವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನರಸಿಂಗಾನಂದ ಅವರು ಪ್ರಭಾಕರನ್‌ ಜೊತೆಗೆ ಉಲ್ಲೇಖಿಸಿದ ಭಿಂದ್ರನ್‌ವಾಲೆ ಮತ್ತು ಜನರಲ್‌ ಶಾಬೇಗ್‌ ಸಿಂಗ್‌‌ ಅವರು ತಮಗೆ ಬೇರೆಯೇ ದೇಶ ಬೇಕು ಎಂದು ಹೋರಾಟಡುತ್ತಿರುವ ಖಾಲಿಸ್ತಾನ್ ಭಯೋತ್ಪಾದಕ ಸಂಘಟನೆಯ ನಾಯಕರಾಗಿದ್ದಾರೆ.

ಇಷ್ಟೇ ಅಲ್ಲದೆ ನರಸಿಂಗಾನಂದ ಅವರು ‘ಶಸ್ತ್ರಮೇವ ಜಯತೇ'(ಆಯುಧದಿಂದ ಮಾತ್ರ ವಿಜಯ) ಎಂಬ ಘೋಷಣೆಯನ್ನು ಮುಂದಿಟ್ಟಿದ್ದು, ಹಿಂಸಾಚಾರಕ್ಕೆ ಕರೆನೀಡಿದ್ದಾರೆ

ನರಸಿಂಗಾನಂದ ಅವರು ತಮ್ಮ ಭಾಷಣ ಮತ್ತು ಸಂದರ್ಶನದಲ್ಲಿ ಸ್ಪಷ್ಟವಾಗಿ ಹಿಂದೂ ಯುವಕರಿಗೆ ಭಯೋತ್ಪಾದಕರಾಗಿ ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ‘ಭಯೋತ್ಪಾದನೆ’ ಎಂದು ಪರಿಗಣಿಸಲ್ಪಟ್ಟಿರುವ ಹಿಂಸಾತ್ಮಕ ಕ್ರಮಕ್ಕೆ ಅವರು ಸ್ಪಷ್ಟವಾಗಿ ಕರೆ ನೀಡುತ್ತಿದ್ದರೂ, ಸ್ಥಳೀಯ ಪೋಲೀಸ್ ಅಥವಾ ಯಾವುದೇ ಕೇಂದ್ರ ಕಾನೂನು ಜಾರಿ ಸಂಸ್ಥೆ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ದಿ ವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....