Homeಮುಖಪುಟ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಭಯೋತ್ಪಾದಕರಾದರೆ 1 ಕೋಟಿ ಮತ್ತು ಒಂದು ವರ್ಷದವರೆಗೆ ಅದೇ ಕೆಲಸ ಮಾಡುವುದಾದರೆ 100 ಕೋಟಿ ಸಂಗ್ರಹಿಸಿ ನೀಡುತ್ತೇನೆ ಎಂದಿರುವ ಅವರ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಈ ಯುವಕರು ಒಂದು ವರ್ಷ ಹಾಗೆಯೆ ಮುಂದುವರೆಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗಾಗಿ ಸಂಗ್ರಹಿಸುವುದಾಗಿ ಅವರು ಹೇಳಿದ್ದಾರೆ.

ಇದು ನರಸಿಂಗಾನಂದ ಅವರ ಎರಡನೇ ಧರಂ ಸಂಸದ್ ಆಗಿದ್ದು, ಮೊದಲನೇ ಧರಂ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು ಮತ್ತು ಇದರ ನಂತರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳು ನಡೆದಿದ್ದು. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಶ್ರೀಲಂಕಾ ತಮಿಳರಿಗೆ ಸ್ವತಂತ್ರ ರಾಜ್ಯವನ್ನು ಬಯಸಿ ಅಲ್ಲಿನ ಸರ್ಕಾರದ ವಿರುದ್ದ ಕಟ್ಟಿದ ಸಶಸ್ತ್ರ ಸಂಘಟನೆಯಾದ ಎಲ್‌ಟಿಟಿಇ ಸಂಸ್ಥಾಪಕರಾಗಿದ್ದಾರೆ ವೇಲುಪಿಳ್ಳೈ ಪ್ರಭಾಕರನ್‌. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿಗೆ ಪ್ರಭಾಕರನ್ ಮತ್ತು ಎಲ್‌ಟಿಟಿಇ ಕಾರಣವಾಗಿದೆ. ಈ ಸಂಘಟನೆಯನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ನಿಷೇಧಿಸಲಾಗಿದೆ.

ಹಿಂದೂ ಧರ್ಮದ ‘ರಕ್ಷಣೆ’ಗಾಗಿ ದೊಡ್ಡ ಪ್ರಮಾಣದ ಹಿಂಸಾತ್ಮಕ ಉಗ್ರಗಾಮಿ ಚಳುವಳಿಗೆ ನರಸಿಂಗಾನಂದರ ಕರೆದಿದ್ದಾರೆ. ನರಸಿಂಗಾನಂದ ಅವರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಇದುವೇ ಮೊದಲ ಬಾರಿಯಲ್ಲ. ಆದರೆ, ಶಸ್ತ್ರ ಎತ್ತುವವರಿಗೆ ಬಹಿರಂಗವಾಗಿ ಬಹುಮಾನವನ್ನು ಘೋಷಿಸುತ್ತಿವುದು ಇದು ಮೊದಲ ಬಾರಿಯಾಗಿದೆ.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಅದೇ ಸಮಾರಂಭದಲ್ಲಿ ಅವರು ಮುಸ್ಲಿಂ ವಿರೋಧಿ ಚಾನೆಲ್‌ ಸುದರ್ಶನ್‌ ನ್ಯೂಸ್‌ಗೆ ಸಂದರ್ಶನ ನೀಡಿದ್ದರು. ಇದರಲ್ಲಿ ಧರಂ ಸಂಸದ್‌ನಲ್ಲಿ ಪ್ರಭಾಕರನ್‌ ಅವರ ಹೇಳಿಕೆಯನ್ನು ಚರ್ಚಿಸಿದ ಅವರು, “ನಮ್ಮ ಧರಂ ಸಂಸದ್‌ನಲ್ಲಿ, ಹತ್ ಯೋಗಿಜಿ ಮಹಾರಾಜ್ ನಮಗೆ ಪ್ರಭಾಕರನ ಅವಶ್ಯಕತೆಯಿದೆ ಎಂದು ಹೇಳಿದರು. ನಮಗೆ ಪ್ರಭಾಕರನ್, ಭಿಂದ್ರನ್‌ವಾಲೆ ಮತ್ತು ಜನರಲ್ ಶಾಬೇಗ್ ಸಿಂಗ್ ಅವರ ಅವಶ್ಯಕತೆಯಿದೆ ಎಂದು ನಾನು ಹೇಳುತ್ತೇನೆ. ಪ್ರತಿ ಹಿಂದೂ ಮಂದಿರದಲ್ಲಿ ಒಬ್ಬ ಪ್ರಭಾಕರನ್, ಒಬ್ಬ ಭಿಂದ್ರನ್ವಾಲೆ ಮತ್ತು ಒಬ್ಬ ಶಾಬೇಗ್ ಸಿಂಗ್ ಇರುವವರೆಗೂ ಹಿಂದೂ ಧರ್ಮವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನರಸಿಂಗಾನಂದ ಅವರು ಪ್ರಭಾಕರನ್‌ ಜೊತೆಗೆ ಉಲ್ಲೇಖಿಸಿದ ಭಿಂದ್ರನ್‌ವಾಲೆ ಮತ್ತು ಜನರಲ್‌ ಶಾಬೇಗ್‌ ಸಿಂಗ್‌‌ ಅವರು ತಮಗೆ ಬೇರೆಯೇ ದೇಶ ಬೇಕು ಎಂದು ಹೋರಾಟಡುತ್ತಿರುವ ಖಾಲಿಸ್ತಾನ್ ಭಯೋತ್ಪಾದಕ ಸಂಘಟನೆಯ ನಾಯಕರಾಗಿದ್ದಾರೆ.

ಇಷ್ಟೇ ಅಲ್ಲದೆ ನರಸಿಂಗಾನಂದ ಅವರು ‘ಶಸ್ತ್ರಮೇವ ಜಯತೇ'(ಆಯುಧದಿಂದ ಮಾತ್ರ ವಿಜಯ) ಎಂಬ ಘೋಷಣೆಯನ್ನು ಮುಂದಿಟ್ಟಿದ್ದು, ಹಿಂಸಾಚಾರಕ್ಕೆ ಕರೆನೀಡಿದ್ದಾರೆ

ನರಸಿಂಗಾನಂದ ಅವರು ತಮ್ಮ ಭಾಷಣ ಮತ್ತು ಸಂದರ್ಶನದಲ್ಲಿ ಸ್ಪಷ್ಟವಾಗಿ ಹಿಂದೂ ಯುವಕರಿಗೆ ಭಯೋತ್ಪಾದಕರಾಗಿ ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ‘ಭಯೋತ್ಪಾದನೆ’ ಎಂದು ಪರಿಗಣಿಸಲ್ಪಟ್ಟಿರುವ ಹಿಂಸಾತ್ಮಕ ಕ್ರಮಕ್ಕೆ ಅವರು ಸ್ಪಷ್ಟವಾಗಿ ಕರೆ ನೀಡುತ್ತಿದ್ದರೂ, ಸ್ಥಳೀಯ ಪೋಲೀಸ್ ಅಥವಾ ಯಾವುದೇ ಕೇಂದ್ರ ಕಾನೂನು ಜಾರಿ ಸಂಸ್ಥೆ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ದಿ ವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...