Homeಮುಖಪುಟ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಭಯೋತ್ಪಾದಕರಾದರೆ 1 ಕೋಟಿ ಮತ್ತು ಒಂದು ವರ್ಷದವರೆಗೆ ಅದೇ ಕೆಲಸ ಮಾಡುವುದಾದರೆ 100 ಕೋಟಿ ಸಂಗ್ರಹಿಸಿ ನೀಡುತ್ತೇನೆ ಎಂದಿರುವ ಅವರ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಈ ಯುವಕರು ಒಂದು ವರ್ಷ ಹಾಗೆಯೆ ಮುಂದುವರೆಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗಾಗಿ ಸಂಗ್ರಹಿಸುವುದಾಗಿ ಅವರು ಹೇಳಿದ್ದಾರೆ.

ಇದು ನರಸಿಂಗಾನಂದ ಅವರ ಎರಡನೇ ಧರಂ ಸಂಸದ್ ಆಗಿದ್ದು, ಮೊದಲನೇ ಧರಂ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು ಮತ್ತು ಇದರ ನಂತರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳು ನಡೆದಿದ್ದು. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಶ್ರೀಲಂಕಾ ತಮಿಳರಿಗೆ ಸ್ವತಂತ್ರ ರಾಜ್ಯವನ್ನು ಬಯಸಿ ಅಲ್ಲಿನ ಸರ್ಕಾರದ ವಿರುದ್ದ ಕಟ್ಟಿದ ಸಶಸ್ತ್ರ ಸಂಘಟನೆಯಾದ ಎಲ್‌ಟಿಟಿಇ ಸಂಸ್ಥಾಪಕರಾಗಿದ್ದಾರೆ ವೇಲುಪಿಳ್ಳೈ ಪ್ರಭಾಕರನ್‌. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿಗೆ ಪ್ರಭಾಕರನ್ ಮತ್ತು ಎಲ್‌ಟಿಟಿಇ ಕಾರಣವಾಗಿದೆ. ಈ ಸಂಘಟನೆಯನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ನಿಷೇಧಿಸಲಾಗಿದೆ.

ಹಿಂದೂ ಧರ್ಮದ ‘ರಕ್ಷಣೆ’ಗಾಗಿ ದೊಡ್ಡ ಪ್ರಮಾಣದ ಹಿಂಸಾತ್ಮಕ ಉಗ್ರಗಾಮಿ ಚಳುವಳಿಗೆ ನರಸಿಂಗಾನಂದರ ಕರೆದಿದ್ದಾರೆ. ನರಸಿಂಗಾನಂದ ಅವರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಇದುವೇ ಮೊದಲ ಬಾರಿಯಲ್ಲ. ಆದರೆ, ಶಸ್ತ್ರ ಎತ್ತುವವರಿಗೆ ಬಹಿರಂಗವಾಗಿ ಬಹುಮಾನವನ್ನು ಘೋಷಿಸುತ್ತಿವುದು ಇದು ಮೊದಲ ಬಾರಿಯಾಗಿದೆ.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಅದೇ ಸಮಾರಂಭದಲ್ಲಿ ಅವರು ಮುಸ್ಲಿಂ ವಿರೋಧಿ ಚಾನೆಲ್‌ ಸುದರ್ಶನ್‌ ನ್ಯೂಸ್‌ಗೆ ಸಂದರ್ಶನ ನೀಡಿದ್ದರು. ಇದರಲ್ಲಿ ಧರಂ ಸಂಸದ್‌ನಲ್ಲಿ ಪ್ರಭಾಕರನ್‌ ಅವರ ಹೇಳಿಕೆಯನ್ನು ಚರ್ಚಿಸಿದ ಅವರು, “ನಮ್ಮ ಧರಂ ಸಂಸದ್‌ನಲ್ಲಿ, ಹತ್ ಯೋಗಿಜಿ ಮಹಾರಾಜ್ ನಮಗೆ ಪ್ರಭಾಕರನ ಅವಶ್ಯಕತೆಯಿದೆ ಎಂದು ಹೇಳಿದರು. ನಮಗೆ ಪ್ರಭಾಕರನ್, ಭಿಂದ್ರನ್‌ವಾಲೆ ಮತ್ತು ಜನರಲ್ ಶಾಬೇಗ್ ಸಿಂಗ್ ಅವರ ಅವಶ್ಯಕತೆಯಿದೆ ಎಂದು ನಾನು ಹೇಳುತ್ತೇನೆ. ಪ್ರತಿ ಹಿಂದೂ ಮಂದಿರದಲ್ಲಿ ಒಬ್ಬ ಪ್ರಭಾಕರನ್, ಒಬ್ಬ ಭಿಂದ್ರನ್ವಾಲೆ ಮತ್ತು ಒಬ್ಬ ಶಾಬೇಗ್ ಸಿಂಗ್ ಇರುವವರೆಗೂ ಹಿಂದೂ ಧರ್ಮವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನರಸಿಂಗಾನಂದ ಅವರು ಪ್ರಭಾಕರನ್‌ ಜೊತೆಗೆ ಉಲ್ಲೇಖಿಸಿದ ಭಿಂದ್ರನ್‌ವಾಲೆ ಮತ್ತು ಜನರಲ್‌ ಶಾಬೇಗ್‌ ಸಿಂಗ್‌‌ ಅವರು ತಮಗೆ ಬೇರೆಯೇ ದೇಶ ಬೇಕು ಎಂದು ಹೋರಾಟಡುತ್ತಿರುವ ಖಾಲಿಸ್ತಾನ್ ಭಯೋತ್ಪಾದಕ ಸಂಘಟನೆಯ ನಾಯಕರಾಗಿದ್ದಾರೆ.

ಇಷ್ಟೇ ಅಲ್ಲದೆ ನರಸಿಂಗಾನಂದ ಅವರು ‘ಶಸ್ತ್ರಮೇವ ಜಯತೇ'(ಆಯುಧದಿಂದ ಮಾತ್ರ ವಿಜಯ) ಎಂಬ ಘೋಷಣೆಯನ್ನು ಮುಂದಿಟ್ಟಿದ್ದು, ಹಿಂಸಾಚಾರಕ್ಕೆ ಕರೆನೀಡಿದ್ದಾರೆ

ನರಸಿಂಗಾನಂದ ಅವರು ತಮ್ಮ ಭಾಷಣ ಮತ್ತು ಸಂದರ್ಶನದಲ್ಲಿ ಸ್ಪಷ್ಟವಾಗಿ ಹಿಂದೂ ಯುವಕರಿಗೆ ಭಯೋತ್ಪಾದಕರಾಗಿ ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ‘ಭಯೋತ್ಪಾದನೆ’ ಎಂದು ಪರಿಗಣಿಸಲ್ಪಟ್ಟಿರುವ ಹಿಂಸಾತ್ಮಕ ಕ್ರಮಕ್ಕೆ ಅವರು ಸ್ಪಷ್ಟವಾಗಿ ಕರೆ ನೀಡುತ್ತಿದ್ದರೂ, ಸ್ಥಳೀಯ ಪೋಲೀಸ್ ಅಥವಾ ಯಾವುದೇ ಕೇಂದ್ರ ಕಾನೂನು ಜಾರಿ ಸಂಸ್ಥೆ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ದಿ ವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...