Homeಮುಖಪುಟ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಭಯೋತ್ಪಾದಕರಾದರೆ 1 ಕೋಟಿ ಮತ್ತು ಒಂದು ವರ್ಷದವರೆಗೆ ಅದೇ ಕೆಲಸ ಮಾಡುವುದಾದರೆ 100 ಕೋಟಿ ಸಂಗ್ರಹಿಸಿ ನೀಡುತ್ತೇನೆ ಎಂದಿರುವ ಅವರ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರಗಾಮಿ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಈ ಯುವಕರು ಒಂದು ವರ್ಷ ಹಾಗೆಯೆ ಮುಂದುವರೆಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗಾಗಿ ಸಂಗ್ರಹಿಸುವುದಾಗಿ ಅವರು ಹೇಳಿದ್ದಾರೆ.

ಇದು ನರಸಿಂಗಾನಂದ ಅವರ ಎರಡನೇ ಧರಂ ಸಂಸದ್ ಆಗಿದ್ದು, ಮೊದಲನೇ ಧರಂ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು ಮತ್ತು ಇದರ ನಂತರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳು ನಡೆದಿದ್ದು. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಡಿಸೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ, “ನಮಗೆ ಸಹಾಯ ಬೇಕಾದಾಗ, ಹಿಂದೂ ಸಮುದಾಯವು ನಮಗೆ ಸಹಾಯ ಮಾಡಲಿಲ್ಲ. ಆದರೆ ಯಾವುದೇ ಯುವ ಕಾರ್ಯಕರ್ತ ‘ಹಿಂದೂ ಪ್ರಭಾಕರನ್’ ಆಗಲು ಸಿದ್ಧರಾಗಿದ್ದರೆ, ಬೇರೆಯವರಿಗಿಂತ ಮೊದಲು ನಾನು ಅವನಿಗೆ 1 ಕೋಟಿ ನೀಡುತ್ತೇನೆ…ಯಾರಾದರೂ ‘ಹಿಂದೂಗಳ ಪ್ರಭಾಕರನ್’ ಆಗುವ ಜವಾಬ್ದಾರಿಯನ್ನು ತೆಗೆದುಕೊಂಡರೆ, ನಾನು 1 ಕೋಟಿ ನೀಡುತ್ತೇನೆ ಮತ್ತು ಅವರು ಒಂದು ವರ್ಷ ಹಾಗೆ ಮುಂದುವರಿಯುವುದಾದರೆ ಕನಿಷ್ಠ 100 ಕೋಟಿ ರೂ. ಅವರಿಗೆ ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಶ್ರೀಲಂಕಾ ತಮಿಳರಿಗೆ ಸ್ವತಂತ್ರ ರಾಜ್ಯವನ್ನು ಬಯಸಿ ಅಲ್ಲಿನ ಸರ್ಕಾರದ ವಿರುದ್ದ ಕಟ್ಟಿದ ಸಶಸ್ತ್ರ ಸಂಘಟನೆಯಾದ ಎಲ್‌ಟಿಟಿಇ ಸಂಸ್ಥಾಪಕರಾಗಿದ್ದಾರೆ ವೇಲುಪಿಳ್ಳೈ ಪ್ರಭಾಕರನ್‌. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸಾವಿಗೆ ಪ್ರಭಾಕರನ್ ಮತ್ತು ಎಲ್‌ಟಿಟಿಇ ಕಾರಣವಾಗಿದೆ. ಈ ಸಂಘಟನೆಯನ್ನು ಭಾರತದಲ್ಲಿ ಭಯೋತ್ಪಾದಕ ಸಂಘಟನೆ ಎಂದು ನಿಷೇಧಿಸಲಾಗಿದೆ.

ಹಿಂದೂ ಧರ್ಮದ ‘ರಕ್ಷಣೆ’ಗಾಗಿ ದೊಡ್ಡ ಪ್ರಮಾಣದ ಹಿಂಸಾತ್ಮಕ ಉಗ್ರಗಾಮಿ ಚಳುವಳಿಗೆ ನರಸಿಂಗಾನಂದರ ಕರೆದಿದ್ದಾರೆ. ನರಸಿಂಗಾನಂದ ಅವರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಇದುವೇ ಮೊದಲ ಬಾರಿಯಲ್ಲ. ಆದರೆ, ಶಸ್ತ್ರ ಎತ್ತುವವರಿಗೆ ಬಹಿರಂಗವಾಗಿ ಬಹುಮಾನವನ್ನು ಘೋಷಿಸುತ್ತಿವುದು ಇದು ಮೊದಲ ಬಾರಿಯಾಗಿದೆ.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಅದೇ ಸಮಾರಂಭದಲ್ಲಿ ಅವರು ಮುಸ್ಲಿಂ ವಿರೋಧಿ ಚಾನೆಲ್‌ ಸುದರ್ಶನ್‌ ನ್ಯೂಸ್‌ಗೆ ಸಂದರ್ಶನ ನೀಡಿದ್ದರು. ಇದರಲ್ಲಿ ಧರಂ ಸಂಸದ್‌ನಲ್ಲಿ ಪ್ರಭಾಕರನ್‌ ಅವರ ಹೇಳಿಕೆಯನ್ನು ಚರ್ಚಿಸಿದ ಅವರು, “ನಮ್ಮ ಧರಂ ಸಂಸದ್‌ನಲ್ಲಿ, ಹತ್ ಯೋಗಿಜಿ ಮಹಾರಾಜ್ ನಮಗೆ ಪ್ರಭಾಕರನ ಅವಶ್ಯಕತೆಯಿದೆ ಎಂದು ಹೇಳಿದರು. ನಮಗೆ ಪ್ರಭಾಕರನ್, ಭಿಂದ್ರನ್‌ವಾಲೆ ಮತ್ತು ಜನರಲ್ ಶಾಬೇಗ್ ಸಿಂಗ್ ಅವರ ಅವಶ್ಯಕತೆಯಿದೆ ಎಂದು ನಾನು ಹೇಳುತ್ತೇನೆ. ಪ್ರತಿ ಹಿಂದೂ ಮಂದಿರದಲ್ಲಿ ಒಬ್ಬ ಪ್ರಭಾಕರನ್, ಒಬ್ಬ ಭಿಂದ್ರನ್ವಾಲೆ ಮತ್ತು ಒಬ್ಬ ಶಾಬೇಗ್ ಸಿಂಗ್ ಇರುವವರೆಗೂ ಹಿಂದೂ ಧರ್ಮವನ್ನು ಉಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನರಸಿಂಗಾನಂದ ಅವರು ಪ್ರಭಾಕರನ್‌ ಜೊತೆಗೆ ಉಲ್ಲೇಖಿಸಿದ ಭಿಂದ್ರನ್‌ವಾಲೆ ಮತ್ತು ಜನರಲ್‌ ಶಾಬೇಗ್‌ ಸಿಂಗ್‌‌ ಅವರು ತಮಗೆ ಬೇರೆಯೇ ದೇಶ ಬೇಕು ಎಂದು ಹೋರಾಟಡುತ್ತಿರುವ ಖಾಲಿಸ್ತಾನ್ ಭಯೋತ್ಪಾದಕ ಸಂಘಟನೆಯ ನಾಯಕರಾಗಿದ್ದಾರೆ.

ಇಷ್ಟೇ ಅಲ್ಲದೆ ನರಸಿಂಗಾನಂದ ಅವರು ‘ಶಸ್ತ್ರಮೇವ ಜಯತೇ'(ಆಯುಧದಿಂದ ಮಾತ್ರ ವಿಜಯ) ಎಂಬ ಘೋಷಣೆಯನ್ನು ಮುಂದಿಟ್ಟಿದ್ದು, ಹಿಂಸಾಚಾರಕ್ಕೆ ಕರೆನೀಡಿದ್ದಾರೆ

ನರಸಿಂಗಾನಂದ ಅವರು ತಮ್ಮ ಭಾಷಣ ಮತ್ತು ಸಂದರ್ಶನದಲ್ಲಿ ಸ್ಪಷ್ಟವಾಗಿ ಹಿಂದೂ ಯುವಕರಿಗೆ ಭಯೋತ್ಪಾದಕರಾಗಿ ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ‘ಭಯೋತ್ಪಾದನೆ’ ಎಂದು ಪರಿಗಣಿಸಲ್ಪಟ್ಟಿರುವ ಹಿಂಸಾತ್ಮಕ ಕ್ರಮಕ್ಕೆ ಅವರು ಸ್ಪಷ್ಟವಾಗಿ ಕರೆ ನೀಡುತ್ತಿದ್ದರೂ, ಸ್ಥಳೀಯ ಪೋಲೀಸ್ ಅಥವಾ ಯಾವುದೇ ಕೇಂದ್ರ ಕಾನೂನು ಜಾರಿ ಸಂಸ್ಥೆ ಅವರ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ದಿ ವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...