Homeಕರ್ನಾಟಕಯತ್ನಾಳ್ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಯತ್ನಾಳ್ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

- Advertisement -
- Advertisement -

ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವರದಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ತಳ್ಳಿಹಾಕಿದ್ದು, ಇಂತಹ ಪ್ರಶ್ನೆಯೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಮತ್ತು ಯತ್ನಾಳ್ ಅವರ ಸಿದ್ಧಾಂತ ಒಂದೇ ಆಗಿದ್ದು ಅದು ಕಾಂಗ್ರೆಸ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅವರು ಸುಮಾರು ಒಂದು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯಲ್ಲಿ ಬಿಜೆಪಿಗೆ ಮತ್ತೆ ಮರಳಲಿದ್ದಾರೆ ಎಂದು ಜಾರಕಿಹೊಳಿ ಹೇಳಿದ್ದಾರೆ. ಯತ್ನಾಳ್ ಬಿಜೆಪಿಯಿಂದ ಉಚ್ಚಾಟಿತರಾದ ನಂತರ ಕೆಲವು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿರಬಹುದು, ಆದರೆ ಅಷ್ಟಕ್ಕೆ ಅವರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಅರ್ಥವಲ್ಲ ಎಂದು ಜಾರಕಿಹೊಳಿ ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಹಿಂದೆಯೂ ಯತ್ನಾಳ್ ಬಿಜೆಪಿ ತೊರೆದು ಮತ್ತೆ ಬಿಜೆಪಿ ಸೇರಿದ್ದರು, ಅವರಿಗೆ ಕಾಂಗ್ರೆಸ್ ಸಿದ್ಧಾಂತ ಸರಿಹೊಂದುವುದಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ.

ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಭೆ ನಡೆಸಿದ್ದೆ ಎಂದು ಜಾರಕಿಹೊಳಿ ಹೇಳಿದ್ದಾರೆ. ಈ ವೇಳೆ ಅವರು ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದ ಊಹಾಪೋಹಗಳಿಗೂ ಉತ್ತರಿಸಿದ್ದಾರೆ.

“ಬೆಳಗಾವಿ ಜಿಲ್ಲೆಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೆಗಳನ್ನು ಮಂಜೂರು ಮಾಡುವಂತೆ ವಿನಂತಿಸಲು ನಾನು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದೆ. ಬೆಳಗಾವಿ ಬೆಂಗಳೂರಿನಂತೆಯೇ ಅಭಿವೃದ್ಧಿ ಹೊಂದಬೇಕೆಂದು ನಾವು ಬಯಸುತ್ತೇವೆ. ಕುಮಾರಸ್ವಾಮಿ ಅವರೊಂದಿಗಿನ ಈ ಭೇಟಿಯಲ್ಲಿ ರಾಜಕೀಯದ ಬಗ್ಗೆ ಚರ್ಚಿಸಲಾಗಿಲ್ಲ ಮತ್ತು ದೇವೇಗೌಡರೊಂದಿಗಿನ ಭೇಟಿ ಕಾಕತಾಳೀಯವಾಗಿತ್ತು” ಎಂದು ಅವರು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಭೇಟಿಯು ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಚರ್ಚಿಸಲು ಅಲ್ಲ ಎಂದು ಅವರು ಹೇಳಿದ್ದಾರೆ. “ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟ ವಿಷಯ” ಎಂದು ಜಾರಕಿಹೊಳಿ ಹೇಳಿದ್ದಾರೆ.

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ ಮತ್ತು ಇತರ ತೆರಿಗೆಗಳ ಹೆಚ್ಚಳದ ವಿರುದ್ಧ ಬಿಜೆಪಿ ಪ್ರತಿಭಟನೆ ಘೋಷಿಸಿರುವ ಬಗ್ಗೆ ಉತ್ತರಿಸಿದ ಅವರು, “ಕರ್ನಾಟಕ ಹಾಲು ಒಕ್ಕೂಟದಿಂದ ಪ್ರಸ್ತಾವನೆ ಬಂದ ನಂತರ ಹಾಲಿನ ಬೆಲೆಗಳನ್ನು ಹೆಚ್ಚಿಸಲಾಗಿದೆ. ಜೊತೆಗೆ ಇಂತಹ ಹೆಚ್ಚಳ ಇದು ಮೊದಲ ಬಾರಿಗೆ ಮಾಡಿರುವುದಲ್ಲ. ವಿವಿಧ ಸರ್ಕಾರಗಳ ಅವಧಿಯಲ್ಲಿ, ತೆರಿಗೆಗಳನ್ನು ಹೆಚ್ಚಿಸಲಾಯಿತು ಮತ್ತು ಹಾಲಿನ ಬೆಲೆಗಳನ್ನು ಸಹ ಹೆಚ್ಚಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಈ ಪ್ರತಿಭಟನೆಗಳು ಅನಗತ್ಯವಾಗಿದ್ದು, ಇದನ್ನೆ ಅನ್ವಯಿಸಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿರುವ ಟೋಲ್ ಏರಿಕೆಯ ವಿರುದ್ಧ  ಅವರು ಪ್ರತಿಭಟನೆ ನಡೆಸಬೇಕು ಎಂದು ಜಾರಕಿಹೊಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...