Homeಕರ್ನಾಟಕಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದ ಮುಂದುವರೆದ ಭಾಗವಾಗಿ ನಿನ್ನೆ (ಶುಕ್ರವಾರ) ಶಿಗ್ಗಾಂವಿಯಲ್ಲಿ ಹೋರಾಟಗಾರರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಸಮುದಾಯದ ನಾಯಕರು ವಾಗ್ಧಾಳಿ ನಡೆಸಿದರು.

ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿ, “ಬಸವರಾಜ ಬೊಮ್ಮಾಯಿ ಅವರ ನಿಷ್ಕಾಳಜಿಯಿಂದ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ಅವಕಾಶ ತಪ್ಪಿದೆ. ಈ ಹಿಂದೆ ನಾವು ನಮ್ಮ ಹೋರಾಟ ತೀವ್ರಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದೆವು. ಆಗ ಬೊಮ್ಮಾಯಿಯವರು, ನಿಮಗೆ 2ಎ ಮೀಸಲಾತಿ ಕೊಟ್ಟೇಕೊಡ್ತೀವಿ ಎಂದು ತಾಯಿಯ ಮೇಲೆ ಆಣೆ ಮಾಡಿದ್ದರು. ಆಗ ನಾವು ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದೆವು. ಆದರೆ ದುರ್ದೈವದ ಸಂಗತಿಯೆಂದರೆ ತಾಯಿ ಮೇಲೆ ಆಣೆ ಪ್ರಮಾಣ ಮಾಡಿಯೂ ನೀವು ಮಾತು ತಪ್ಪಿದ್ದೀರಿ. ಈ ಬಾರಿ ನಾವು ಸುಮ್ಮನೆ ಇರಲ್ಲ. ನಿಮ್ಮ ಮೇಲೆ ಯಾವ ನಂಬಿಕೆಯೂ ನಮ್ಮ ಸಮುದಾಯಕ್ಕೆ ಇಲ್ಲ, ನಿಮ್ಮಿಂದ ಅನ್ಯಾಯ ಆಗಿದೆ. ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಮ್ಮ ಬೇಡಿಕೆ ಈಡೇರಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ ಸರ್ಕಾರದ ಮಂತ್ರಿಯೊಬ್ಬರು ಎಂದು ಸಂಬೋಧಿಸಿ ಹೆಸರು ಹೇಳದೇ, “ಪಿಂಪ್ ಮಂತ್ರಿಯೊಬ್ಬ ನನಗೆ ಟಿಕೆಟ್ ಕೊಡದಂತೆ ಮಾಡ್ತೀನಿ ಎಂದು ಹೇಳುತ್ತಾನೆ. ಮೊದಲು ಅವನು ತನ್ನ ಬಗ್ಗೆ ಯೋಚಿಸಲಿ, ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಮುಖ್ಯಮಂತ್ರಿಯವರ ಮೇಲೆ ಒತ್ತಡ ತಂದು ಮಂತ್ರಿಯಾದವನು ಅವನು” ಎಂದು ಹೇಳಿದ್ದರು. ಯತ್ನಾಳ್ ಮತ್ತು ಮುರಗೇಶ್ ನಿರಾಣಿ ನಡುವೆ ಜಿದ್ದಾಜಿದ್ದಿ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದು ನಿರಾಣಿ ಮೇಲೇಯೇ ಎಂಬುದು ಸ್ಪಷ್ಟ.

ಇದಕ್ಕೆ ಪ್ರತಿಯಾಗಿ ಸರ್ಕಾರದ ಭಾಗಿಯಾಗಿರುವ ಲಿಂಗಾಯತ ಸಮುದಾಯದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, “ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡಿರುವುದನ್ನು ನಾವು ಖಂಡಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೂಡಿ ಸ್ವಾಮೀಜಿಗಳು ಹಾಗೂ ಯತ್ನಾಳ ಅವರು ಹೋರಾಟ ನಡೆಸುತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಈ ಸ್ವಾಮೀಜಿಗಳಾಗಲಿ, ಕಾಂಗ್ರೆಸ್‌‌ನಲ್ಲಿರುವ ಪಂಚಮಸಾಲಿ ನಾಯಕರು ಮೀಸಲಾತಿಗೆ ಧ್ವನಿ ಎತ್ತಲಿಲ್ಲ. ಆದರೆ ನಮ್ಮ ಸರ್ಕಾರ 2ಸಿ, 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಹೆಚ್ಚಿಸುವ ನಿರ್ಧಾರಕ್ಕೆ ಬಂದಿತ್ತು. ಆದರೆ ಈ ಹೋರಾಟಗಾರರಿಗೆ ಸಮಾಧಾನವಿಲ್ಲ. ಇವರ ಹೋರಾಟ ಮೀಸಲಾತಿಗಾಗಿ ಎನ್ನುವುದಕ್ಕಿಂತ ಬಿಜೆಪಿ ವಿರುದ್ಧ ಎನ್ನುವಂತಾಗಿದೆ” ಎಂದು ಆರೋಪ ಮಾಡಿದರು.

ಈ ಬಗ್ಗೆ ಸಚಿವ ಮುರಗೇಶ್ ನಿರಾಣಿ ಮಾತನಾಡಿದ್ದು, “ನಮ್ಮ ಸರ್ಕಾರಕ್ಕೆ 2ಎ ಮೀಸಲಾತಿ ಕೊಡುವ ಬಗ್ಗೆ ಯಾವುದೇ ತೊಂದರೆ ಇರಲಿಲ್ಲ. ಆದರೆ ಬೇರೆ ಸಮುದಾಯಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ 2ಸಿ, 2ಡಿ ಪ್ರವರ್ಗ ಸೃಷ್ಟಿ ಮಾಡಿ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡಿದ್ದಾರೆ. ಆದರೂ ಕೂಡ ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರೆ ಇದು ರಾಜಕಾರಣದ ಹೊರತಾಗಿ ಮತ್ತೇನು ಅಲ್ಲ. ಈ ಹೋರಾಟದ ಮುಂಚೂಣಿಯ ನಾಯಕರು ಲಿಂಗಾಯತವನ್ನು ಒಡೆಯುವಂತಹ ಪ್ಲ್ಯಾನ್ ಮಾಡಿದ್ದಾರೆ” ಎಂದು ಆರೋಪಿಸಿದರು.

ನಿರಾಣಿ ಕೂಡ ಹೆಸರು ಹೇಳದೇ ವಿಜಯಪುರದ ನಾಯಕ ಎಂದು ಸಂಬೋಧಿಸಿ, “ಅವನದ್ದು ಎಲುಬಿಲ್ಲದ ನಾಲಿಗೆ, ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ. ಹಾಗಾಗಿ ಆತನ ಮಾತು ಮಿತಿಮೀರುತ್ತಿದೆ. ಆತ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ಆ ರೀತಿಯಲ್ಲಿ ಮಾತಾಡ್ತಿರಲಿಲ್ಲ. ಪಿಂಪ್ ಕೆಲಸ ಅವರೇ ಯಾರಾದ್ರೂ ಮಾಡಿರಬಹುದು. ಅದಕ್ಕೆ ಆ ಪದ ಬಳಸುತ್ತಿದ್ದಾರೆ. ಹೀಗೆ ನೀನು ನಾಲಿಗೆ ಹರಿಬಿಟ್ಟರೆ ನಿನ್ನ ನಾಲಿಗೆ ಕತ್ತರಿಸುವಂತ ಸಮಯ ಬರುತ್ತೆ ಹುಷಾರ್” ಎಂದು ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

“ಅವನೊಬ್ಬ (ಯತ್ನಾಳ) ಢೋಂಗಿ ಮನುಷ್ಯ, ಮುಸ್ಲಿಂ ಸಮುದಾಯದ ಜೊತೆ ಹೋದ್ರೆ ಟೋಪಿ ಹಾಕಿಕೊಂಡು ಟಿಪ್ಪುವನ್ನು ಹೊಗಳುವುದು, ಹಿಂದೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುವುದು- ಇದೇನು ನಾಟಕ ಕಂಪನಿನಾ? ಇಲ್ಲಿಯವರೆಗೂ ನಮ್ಮ ಪಕ್ಷದ ನಾಯಕರು ನಿಮ್ಮ ಬಗ್ಗೆ ಸಹನೆಯಿಂದ ಇದ್ದಾರೆ. ಹೀಗೆ ಮುಂದುವರಿದರೆ ಪರಿಸ್ಥಿತಿ ಬೇರೆಯೇ ಆಗತ್ತದೆ” ಎಂದು ಯತ್ನಾಳ್‌ಗೆ ನಿರಾಣಿ ಎಚ್ಚರಿಕೆ ನೀಡಿದರು.

“ನಮ್ಮ ಪಕ್ಷದ ಮೇಲೆ ನಮ್ಮ ನಾಯಕರ ಮೇಲೆ ನಿನಗೆ ಗೌರವ ಇಲ್ಲ ಎನ್ನುವುದಾದರೆ. ನಮ್ಮ ಪಕ್ಷದಲ್ಲಿ ಯಾಕೆ ಇದ್ದೀಯಾ? ರಾಜೀನಾಮೆ ಕೊಟ್ಟು ಹೊರನಡೆದು ಮಾತನಾಡು” ಎಂದು ನಿರಾಣಿ ಆಕ್ರೋಶ ಹೊರಹಾಕಿದರು.

ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ಬೇಕು ಎಂದು ಕೆಲವು ನಾಯಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರದ ಭಾಗವಾಗಿರುವ ಪಂಚಮಸಾಲಿ ಸಮುದಾಯದ ನಾಯಕರು, ಈ ಹೋರಾಟ ಬಿಜೆಪಿಯ ಹೋರಾಟ ಎಂದು ಬಿಂಬಿಸುತ್ತಿದ್ದಾರೆ. ಅದರಲ್ಲೂ ಯತ್ನಾಳ ಹಾಗೂ ನಿರಾಣಿ ವೈಯಕ್ತಿಕ ದಾಳಿಯಲ್ಲಿ ನಿರತರಾಗಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ಸಮುದಾಯದ ನಾಯಕರಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇದರಿಂದ ಸಮುದಾಯದ ಮೇಲೆ ಯಾವ ಪರಿಣಾಮ ಉಂಟು ಮಾಡಬಹುದೆಂಬುದು ಸದ್ಯದ ಕುತೂಹಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...