Homeಕರ್ನಾಟಕಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದ ಮುಂದುವರೆದ ಭಾಗವಾಗಿ ನಿನ್ನೆ (ಶುಕ್ರವಾರ) ಶಿಗ್ಗಾಂವಿಯಲ್ಲಿ ಹೋರಾಟಗಾರರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಸಮುದಾಯದ ನಾಯಕರು ವಾಗ್ಧಾಳಿ ನಡೆಸಿದರು.

ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿ, “ಬಸವರಾಜ ಬೊಮ್ಮಾಯಿ ಅವರ ನಿಷ್ಕಾಳಜಿಯಿಂದ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ಅವಕಾಶ ತಪ್ಪಿದೆ. ಈ ಹಿಂದೆ ನಾವು ನಮ್ಮ ಹೋರಾಟ ತೀವ್ರಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದೆವು. ಆಗ ಬೊಮ್ಮಾಯಿಯವರು, ನಿಮಗೆ 2ಎ ಮೀಸಲಾತಿ ಕೊಟ್ಟೇಕೊಡ್ತೀವಿ ಎಂದು ತಾಯಿಯ ಮೇಲೆ ಆಣೆ ಮಾಡಿದ್ದರು. ಆಗ ನಾವು ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದೆವು. ಆದರೆ ದುರ್ದೈವದ ಸಂಗತಿಯೆಂದರೆ ತಾಯಿ ಮೇಲೆ ಆಣೆ ಪ್ರಮಾಣ ಮಾಡಿಯೂ ನೀವು ಮಾತು ತಪ್ಪಿದ್ದೀರಿ. ಈ ಬಾರಿ ನಾವು ಸುಮ್ಮನೆ ಇರಲ್ಲ. ನಿಮ್ಮ ಮೇಲೆ ಯಾವ ನಂಬಿಕೆಯೂ ನಮ್ಮ ಸಮುದಾಯಕ್ಕೆ ಇಲ್ಲ, ನಿಮ್ಮಿಂದ ಅನ್ಯಾಯ ಆಗಿದೆ. ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಮ್ಮ ಬೇಡಿಕೆ ಈಡೇರಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ ಸರ್ಕಾರದ ಮಂತ್ರಿಯೊಬ್ಬರು ಎಂದು ಸಂಬೋಧಿಸಿ ಹೆಸರು ಹೇಳದೇ, “ಪಿಂಪ್ ಮಂತ್ರಿಯೊಬ್ಬ ನನಗೆ ಟಿಕೆಟ್ ಕೊಡದಂತೆ ಮಾಡ್ತೀನಿ ಎಂದು ಹೇಳುತ್ತಾನೆ. ಮೊದಲು ಅವನು ತನ್ನ ಬಗ್ಗೆ ಯೋಚಿಸಲಿ, ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಮುಖ್ಯಮಂತ್ರಿಯವರ ಮೇಲೆ ಒತ್ತಡ ತಂದು ಮಂತ್ರಿಯಾದವನು ಅವನು” ಎಂದು ಹೇಳಿದ್ದರು. ಯತ್ನಾಳ್ ಮತ್ತು ಮುರಗೇಶ್ ನಿರಾಣಿ ನಡುವೆ ಜಿದ್ದಾಜಿದ್ದಿ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದು ನಿರಾಣಿ ಮೇಲೇಯೇ ಎಂಬುದು ಸ್ಪಷ್ಟ.

ಇದಕ್ಕೆ ಪ್ರತಿಯಾಗಿ ಸರ್ಕಾರದ ಭಾಗಿಯಾಗಿರುವ ಲಿಂಗಾಯತ ಸಮುದಾಯದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, “ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡಿರುವುದನ್ನು ನಾವು ಖಂಡಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೂಡಿ ಸ್ವಾಮೀಜಿಗಳು ಹಾಗೂ ಯತ್ನಾಳ ಅವರು ಹೋರಾಟ ನಡೆಸುತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಈ ಸ್ವಾಮೀಜಿಗಳಾಗಲಿ, ಕಾಂಗ್ರೆಸ್‌‌ನಲ್ಲಿರುವ ಪಂಚಮಸಾಲಿ ನಾಯಕರು ಮೀಸಲಾತಿಗೆ ಧ್ವನಿ ಎತ್ತಲಿಲ್ಲ. ಆದರೆ ನಮ್ಮ ಸರ್ಕಾರ 2ಸಿ, 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಹೆಚ್ಚಿಸುವ ನಿರ್ಧಾರಕ್ಕೆ ಬಂದಿತ್ತು. ಆದರೆ ಈ ಹೋರಾಟಗಾರರಿಗೆ ಸಮಾಧಾನವಿಲ್ಲ. ಇವರ ಹೋರಾಟ ಮೀಸಲಾತಿಗಾಗಿ ಎನ್ನುವುದಕ್ಕಿಂತ ಬಿಜೆಪಿ ವಿರುದ್ಧ ಎನ್ನುವಂತಾಗಿದೆ” ಎಂದು ಆರೋಪ ಮಾಡಿದರು.

ಈ ಬಗ್ಗೆ ಸಚಿವ ಮುರಗೇಶ್ ನಿರಾಣಿ ಮಾತನಾಡಿದ್ದು, “ನಮ್ಮ ಸರ್ಕಾರಕ್ಕೆ 2ಎ ಮೀಸಲಾತಿ ಕೊಡುವ ಬಗ್ಗೆ ಯಾವುದೇ ತೊಂದರೆ ಇರಲಿಲ್ಲ. ಆದರೆ ಬೇರೆ ಸಮುದಾಯಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ 2ಸಿ, 2ಡಿ ಪ್ರವರ್ಗ ಸೃಷ್ಟಿ ಮಾಡಿ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡಿದ್ದಾರೆ. ಆದರೂ ಕೂಡ ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರೆ ಇದು ರಾಜಕಾರಣದ ಹೊರತಾಗಿ ಮತ್ತೇನು ಅಲ್ಲ. ಈ ಹೋರಾಟದ ಮುಂಚೂಣಿಯ ನಾಯಕರು ಲಿಂಗಾಯತವನ್ನು ಒಡೆಯುವಂತಹ ಪ್ಲ್ಯಾನ್ ಮಾಡಿದ್ದಾರೆ” ಎಂದು ಆರೋಪಿಸಿದರು.

ನಿರಾಣಿ ಕೂಡ ಹೆಸರು ಹೇಳದೇ ವಿಜಯಪುರದ ನಾಯಕ ಎಂದು ಸಂಬೋಧಿಸಿ, “ಅವನದ್ದು ಎಲುಬಿಲ್ಲದ ನಾಲಿಗೆ, ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ. ಹಾಗಾಗಿ ಆತನ ಮಾತು ಮಿತಿಮೀರುತ್ತಿದೆ. ಆತ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ಆ ರೀತಿಯಲ್ಲಿ ಮಾತಾಡ್ತಿರಲಿಲ್ಲ. ಪಿಂಪ್ ಕೆಲಸ ಅವರೇ ಯಾರಾದ್ರೂ ಮಾಡಿರಬಹುದು. ಅದಕ್ಕೆ ಆ ಪದ ಬಳಸುತ್ತಿದ್ದಾರೆ. ಹೀಗೆ ನೀನು ನಾಲಿಗೆ ಹರಿಬಿಟ್ಟರೆ ನಿನ್ನ ನಾಲಿಗೆ ಕತ್ತರಿಸುವಂತ ಸಮಯ ಬರುತ್ತೆ ಹುಷಾರ್” ಎಂದು ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

“ಅವನೊಬ್ಬ (ಯತ್ನಾಳ) ಢೋಂಗಿ ಮನುಷ್ಯ, ಮುಸ್ಲಿಂ ಸಮುದಾಯದ ಜೊತೆ ಹೋದ್ರೆ ಟೋಪಿ ಹಾಕಿಕೊಂಡು ಟಿಪ್ಪುವನ್ನು ಹೊಗಳುವುದು, ಹಿಂದೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುವುದು- ಇದೇನು ನಾಟಕ ಕಂಪನಿನಾ? ಇಲ್ಲಿಯವರೆಗೂ ನಮ್ಮ ಪಕ್ಷದ ನಾಯಕರು ನಿಮ್ಮ ಬಗ್ಗೆ ಸಹನೆಯಿಂದ ಇದ್ದಾರೆ. ಹೀಗೆ ಮುಂದುವರಿದರೆ ಪರಿಸ್ಥಿತಿ ಬೇರೆಯೇ ಆಗತ್ತದೆ” ಎಂದು ಯತ್ನಾಳ್‌ಗೆ ನಿರಾಣಿ ಎಚ್ಚರಿಕೆ ನೀಡಿದರು.

“ನಮ್ಮ ಪಕ್ಷದ ಮೇಲೆ ನಮ್ಮ ನಾಯಕರ ಮೇಲೆ ನಿನಗೆ ಗೌರವ ಇಲ್ಲ ಎನ್ನುವುದಾದರೆ. ನಮ್ಮ ಪಕ್ಷದಲ್ಲಿ ಯಾಕೆ ಇದ್ದೀಯಾ? ರಾಜೀನಾಮೆ ಕೊಟ್ಟು ಹೊರನಡೆದು ಮಾತನಾಡು” ಎಂದು ನಿರಾಣಿ ಆಕ್ರೋಶ ಹೊರಹಾಕಿದರು.

ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ಬೇಕು ಎಂದು ಕೆಲವು ನಾಯಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರದ ಭಾಗವಾಗಿರುವ ಪಂಚಮಸಾಲಿ ಸಮುದಾಯದ ನಾಯಕರು, ಈ ಹೋರಾಟ ಬಿಜೆಪಿಯ ಹೋರಾಟ ಎಂದು ಬಿಂಬಿಸುತ್ತಿದ್ದಾರೆ. ಅದರಲ್ಲೂ ಯತ್ನಾಳ ಹಾಗೂ ನಿರಾಣಿ ವೈಯಕ್ತಿಕ ದಾಳಿಯಲ್ಲಿ ನಿರತರಾಗಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ಸಮುದಾಯದ ನಾಯಕರಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇದರಿಂದ ಸಮುದಾಯದ ಮೇಲೆ ಯಾವ ಪರಿಣಾಮ ಉಂಟು ಮಾಡಬಹುದೆಂಬುದು ಸದ್ಯದ ಕುತೂಹಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...