Homeಕರ್ನಾಟಕಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದ ಮುಂದುವರೆದ ಭಾಗವಾಗಿ ನಿನ್ನೆ (ಶುಕ್ರವಾರ) ಶಿಗ್ಗಾಂವಿಯಲ್ಲಿ ಹೋರಾಟಗಾರರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಸಮುದಾಯದ ನಾಯಕರು ವಾಗ್ಧಾಳಿ ನಡೆಸಿದರು.

ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿ, “ಬಸವರಾಜ ಬೊಮ್ಮಾಯಿ ಅವರ ನಿಷ್ಕಾಳಜಿಯಿಂದ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ಅವಕಾಶ ತಪ್ಪಿದೆ. ಈ ಹಿಂದೆ ನಾವು ನಮ್ಮ ಹೋರಾಟ ತೀವ್ರಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದೆವು. ಆಗ ಬೊಮ್ಮಾಯಿಯವರು, ನಿಮಗೆ 2ಎ ಮೀಸಲಾತಿ ಕೊಟ್ಟೇಕೊಡ್ತೀವಿ ಎಂದು ತಾಯಿಯ ಮೇಲೆ ಆಣೆ ಮಾಡಿದ್ದರು. ಆಗ ನಾವು ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದೆವು. ಆದರೆ ದುರ್ದೈವದ ಸಂಗತಿಯೆಂದರೆ ತಾಯಿ ಮೇಲೆ ಆಣೆ ಪ್ರಮಾಣ ಮಾಡಿಯೂ ನೀವು ಮಾತು ತಪ್ಪಿದ್ದೀರಿ. ಈ ಬಾರಿ ನಾವು ಸುಮ್ಮನೆ ಇರಲ್ಲ. ನಿಮ್ಮ ಮೇಲೆ ಯಾವ ನಂಬಿಕೆಯೂ ನಮ್ಮ ಸಮುದಾಯಕ್ಕೆ ಇಲ್ಲ, ನಿಮ್ಮಿಂದ ಅನ್ಯಾಯ ಆಗಿದೆ. ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಮ್ಮ ಬೇಡಿಕೆ ಈಡೇರಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ ಸರ್ಕಾರದ ಮಂತ್ರಿಯೊಬ್ಬರು ಎಂದು ಸಂಬೋಧಿಸಿ ಹೆಸರು ಹೇಳದೇ, “ಪಿಂಪ್ ಮಂತ್ರಿಯೊಬ್ಬ ನನಗೆ ಟಿಕೆಟ್ ಕೊಡದಂತೆ ಮಾಡ್ತೀನಿ ಎಂದು ಹೇಳುತ್ತಾನೆ. ಮೊದಲು ಅವನು ತನ್ನ ಬಗ್ಗೆ ಯೋಚಿಸಲಿ, ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಮುಖ್ಯಮಂತ್ರಿಯವರ ಮೇಲೆ ಒತ್ತಡ ತಂದು ಮಂತ್ರಿಯಾದವನು ಅವನು” ಎಂದು ಹೇಳಿದ್ದರು. ಯತ್ನಾಳ್ ಮತ್ತು ಮುರಗೇಶ್ ನಿರಾಣಿ ನಡುವೆ ಜಿದ್ದಾಜಿದ್ದಿ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದು ನಿರಾಣಿ ಮೇಲೇಯೇ ಎಂಬುದು ಸ್ಪಷ್ಟ.

ಇದಕ್ಕೆ ಪ್ರತಿಯಾಗಿ ಸರ್ಕಾರದ ಭಾಗಿಯಾಗಿರುವ ಲಿಂಗಾಯತ ಸಮುದಾಯದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, “ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡಿರುವುದನ್ನು ನಾವು ಖಂಡಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೂಡಿ ಸ್ವಾಮೀಜಿಗಳು ಹಾಗೂ ಯತ್ನಾಳ ಅವರು ಹೋರಾಟ ನಡೆಸುತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಈ ಸ್ವಾಮೀಜಿಗಳಾಗಲಿ, ಕಾಂಗ್ರೆಸ್‌‌ನಲ್ಲಿರುವ ಪಂಚಮಸಾಲಿ ನಾಯಕರು ಮೀಸಲಾತಿಗೆ ಧ್ವನಿ ಎತ್ತಲಿಲ್ಲ. ಆದರೆ ನಮ್ಮ ಸರ್ಕಾರ 2ಸಿ, 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಹೆಚ್ಚಿಸುವ ನಿರ್ಧಾರಕ್ಕೆ ಬಂದಿತ್ತು. ಆದರೆ ಈ ಹೋರಾಟಗಾರರಿಗೆ ಸಮಾಧಾನವಿಲ್ಲ. ಇವರ ಹೋರಾಟ ಮೀಸಲಾತಿಗಾಗಿ ಎನ್ನುವುದಕ್ಕಿಂತ ಬಿಜೆಪಿ ವಿರುದ್ಧ ಎನ್ನುವಂತಾಗಿದೆ” ಎಂದು ಆರೋಪ ಮಾಡಿದರು.

ಈ ಬಗ್ಗೆ ಸಚಿವ ಮುರಗೇಶ್ ನಿರಾಣಿ ಮಾತನಾಡಿದ್ದು, “ನಮ್ಮ ಸರ್ಕಾರಕ್ಕೆ 2ಎ ಮೀಸಲಾತಿ ಕೊಡುವ ಬಗ್ಗೆ ಯಾವುದೇ ತೊಂದರೆ ಇರಲಿಲ್ಲ. ಆದರೆ ಬೇರೆ ಸಮುದಾಯಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ 2ಸಿ, 2ಡಿ ಪ್ರವರ್ಗ ಸೃಷ್ಟಿ ಮಾಡಿ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡಿದ್ದಾರೆ. ಆದರೂ ಕೂಡ ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರೆ ಇದು ರಾಜಕಾರಣದ ಹೊರತಾಗಿ ಮತ್ತೇನು ಅಲ್ಲ. ಈ ಹೋರಾಟದ ಮುಂಚೂಣಿಯ ನಾಯಕರು ಲಿಂಗಾಯತವನ್ನು ಒಡೆಯುವಂತಹ ಪ್ಲ್ಯಾನ್ ಮಾಡಿದ್ದಾರೆ” ಎಂದು ಆರೋಪಿಸಿದರು.

ನಿರಾಣಿ ಕೂಡ ಹೆಸರು ಹೇಳದೇ ವಿಜಯಪುರದ ನಾಯಕ ಎಂದು ಸಂಬೋಧಿಸಿ, “ಅವನದ್ದು ಎಲುಬಿಲ್ಲದ ನಾಲಿಗೆ, ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ. ಹಾಗಾಗಿ ಆತನ ಮಾತು ಮಿತಿಮೀರುತ್ತಿದೆ. ಆತ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ಆ ರೀತಿಯಲ್ಲಿ ಮಾತಾಡ್ತಿರಲಿಲ್ಲ. ಪಿಂಪ್ ಕೆಲಸ ಅವರೇ ಯಾರಾದ್ರೂ ಮಾಡಿರಬಹುದು. ಅದಕ್ಕೆ ಆ ಪದ ಬಳಸುತ್ತಿದ್ದಾರೆ. ಹೀಗೆ ನೀನು ನಾಲಿಗೆ ಹರಿಬಿಟ್ಟರೆ ನಿನ್ನ ನಾಲಿಗೆ ಕತ್ತರಿಸುವಂತ ಸಮಯ ಬರುತ್ತೆ ಹುಷಾರ್” ಎಂದು ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

“ಅವನೊಬ್ಬ (ಯತ್ನಾಳ) ಢೋಂಗಿ ಮನುಷ್ಯ, ಮುಸ್ಲಿಂ ಸಮುದಾಯದ ಜೊತೆ ಹೋದ್ರೆ ಟೋಪಿ ಹಾಕಿಕೊಂಡು ಟಿಪ್ಪುವನ್ನು ಹೊಗಳುವುದು, ಹಿಂದೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುವುದು- ಇದೇನು ನಾಟಕ ಕಂಪನಿನಾ? ಇಲ್ಲಿಯವರೆಗೂ ನಮ್ಮ ಪಕ್ಷದ ನಾಯಕರು ನಿಮ್ಮ ಬಗ್ಗೆ ಸಹನೆಯಿಂದ ಇದ್ದಾರೆ. ಹೀಗೆ ಮುಂದುವರಿದರೆ ಪರಿಸ್ಥಿತಿ ಬೇರೆಯೇ ಆಗತ್ತದೆ” ಎಂದು ಯತ್ನಾಳ್‌ಗೆ ನಿರಾಣಿ ಎಚ್ಚರಿಕೆ ನೀಡಿದರು.

“ನಮ್ಮ ಪಕ್ಷದ ಮೇಲೆ ನಮ್ಮ ನಾಯಕರ ಮೇಲೆ ನಿನಗೆ ಗೌರವ ಇಲ್ಲ ಎನ್ನುವುದಾದರೆ. ನಮ್ಮ ಪಕ್ಷದಲ್ಲಿ ಯಾಕೆ ಇದ್ದೀಯಾ? ರಾಜೀನಾಮೆ ಕೊಟ್ಟು ಹೊರನಡೆದು ಮಾತನಾಡು” ಎಂದು ನಿರಾಣಿ ಆಕ್ರೋಶ ಹೊರಹಾಕಿದರು.

ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ಬೇಕು ಎಂದು ಕೆಲವು ನಾಯಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರದ ಭಾಗವಾಗಿರುವ ಪಂಚಮಸಾಲಿ ಸಮುದಾಯದ ನಾಯಕರು, ಈ ಹೋರಾಟ ಬಿಜೆಪಿಯ ಹೋರಾಟ ಎಂದು ಬಿಂಬಿಸುತ್ತಿದ್ದಾರೆ. ಅದರಲ್ಲೂ ಯತ್ನಾಳ ಹಾಗೂ ನಿರಾಣಿ ವೈಯಕ್ತಿಕ ದಾಳಿಯಲ್ಲಿ ನಿರತರಾಗಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ಸಮುದಾಯದ ನಾಯಕರಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇದರಿಂದ ಸಮುದಾಯದ ಮೇಲೆ ಯಾವ ಪರಿಣಾಮ ಉಂಟು ಮಾಡಬಹುದೆಂಬುದು ಸದ್ಯದ ಕುತೂಹಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...