Homeಕರ್ನಾಟಕಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದ ಮುಂದುವರೆದ ಭಾಗವಾಗಿ ನಿನ್ನೆ (ಶುಕ್ರವಾರ) ಶಿಗ್ಗಾಂವಿಯಲ್ಲಿ ಹೋರಾಟಗಾರರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಸಮುದಾಯದ ನಾಯಕರು ವಾಗ್ಧಾಳಿ ನಡೆಸಿದರು.

ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿ, “ಬಸವರಾಜ ಬೊಮ್ಮಾಯಿ ಅವರ ನಿಷ್ಕಾಳಜಿಯಿಂದ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ಅವಕಾಶ ತಪ್ಪಿದೆ. ಈ ಹಿಂದೆ ನಾವು ನಮ್ಮ ಹೋರಾಟ ತೀವ್ರಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದೆವು. ಆಗ ಬೊಮ್ಮಾಯಿಯವರು, ನಿಮಗೆ 2ಎ ಮೀಸಲಾತಿ ಕೊಟ್ಟೇಕೊಡ್ತೀವಿ ಎಂದು ತಾಯಿಯ ಮೇಲೆ ಆಣೆ ಮಾಡಿದ್ದರು. ಆಗ ನಾವು ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದೆವು. ಆದರೆ ದುರ್ದೈವದ ಸಂಗತಿಯೆಂದರೆ ತಾಯಿ ಮೇಲೆ ಆಣೆ ಪ್ರಮಾಣ ಮಾಡಿಯೂ ನೀವು ಮಾತು ತಪ್ಪಿದ್ದೀರಿ. ಈ ಬಾರಿ ನಾವು ಸುಮ್ಮನೆ ಇರಲ್ಲ. ನಿಮ್ಮ ಮೇಲೆ ಯಾವ ನಂಬಿಕೆಯೂ ನಮ್ಮ ಸಮುದಾಯಕ್ಕೆ ಇಲ್ಲ, ನಿಮ್ಮಿಂದ ಅನ್ಯಾಯ ಆಗಿದೆ. ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಮ್ಮ ಬೇಡಿಕೆ ಈಡೇರಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ ಸರ್ಕಾರದ ಮಂತ್ರಿಯೊಬ್ಬರು ಎಂದು ಸಂಬೋಧಿಸಿ ಹೆಸರು ಹೇಳದೇ, “ಪಿಂಪ್ ಮಂತ್ರಿಯೊಬ್ಬ ನನಗೆ ಟಿಕೆಟ್ ಕೊಡದಂತೆ ಮಾಡ್ತೀನಿ ಎಂದು ಹೇಳುತ್ತಾನೆ. ಮೊದಲು ಅವನು ತನ್ನ ಬಗ್ಗೆ ಯೋಚಿಸಲಿ, ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಮುಖ್ಯಮಂತ್ರಿಯವರ ಮೇಲೆ ಒತ್ತಡ ತಂದು ಮಂತ್ರಿಯಾದವನು ಅವನು” ಎಂದು ಹೇಳಿದ್ದರು. ಯತ್ನಾಳ್ ಮತ್ತು ಮುರಗೇಶ್ ನಿರಾಣಿ ನಡುವೆ ಜಿದ್ದಾಜಿದ್ದಿ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದು ನಿರಾಣಿ ಮೇಲೇಯೇ ಎಂಬುದು ಸ್ಪಷ್ಟ.

ಇದಕ್ಕೆ ಪ್ರತಿಯಾಗಿ ಸರ್ಕಾರದ ಭಾಗಿಯಾಗಿರುವ ಲಿಂಗಾಯತ ಸಮುದಾಯದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, “ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡಿರುವುದನ್ನು ನಾವು ಖಂಡಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೂಡಿ ಸ್ವಾಮೀಜಿಗಳು ಹಾಗೂ ಯತ್ನಾಳ ಅವರು ಹೋರಾಟ ನಡೆಸುತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಈ ಸ್ವಾಮೀಜಿಗಳಾಗಲಿ, ಕಾಂಗ್ರೆಸ್‌‌ನಲ್ಲಿರುವ ಪಂಚಮಸಾಲಿ ನಾಯಕರು ಮೀಸಲಾತಿಗೆ ಧ್ವನಿ ಎತ್ತಲಿಲ್ಲ. ಆದರೆ ನಮ್ಮ ಸರ್ಕಾರ 2ಸಿ, 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಹೆಚ್ಚಿಸುವ ನಿರ್ಧಾರಕ್ಕೆ ಬಂದಿತ್ತು. ಆದರೆ ಈ ಹೋರಾಟಗಾರರಿಗೆ ಸಮಾಧಾನವಿಲ್ಲ. ಇವರ ಹೋರಾಟ ಮೀಸಲಾತಿಗಾಗಿ ಎನ್ನುವುದಕ್ಕಿಂತ ಬಿಜೆಪಿ ವಿರುದ್ಧ ಎನ್ನುವಂತಾಗಿದೆ” ಎಂದು ಆರೋಪ ಮಾಡಿದರು.

ಈ ಬಗ್ಗೆ ಸಚಿವ ಮುರಗೇಶ್ ನಿರಾಣಿ ಮಾತನಾಡಿದ್ದು, “ನಮ್ಮ ಸರ್ಕಾರಕ್ಕೆ 2ಎ ಮೀಸಲಾತಿ ಕೊಡುವ ಬಗ್ಗೆ ಯಾವುದೇ ತೊಂದರೆ ಇರಲಿಲ್ಲ. ಆದರೆ ಬೇರೆ ಸಮುದಾಯಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ 2ಸಿ, 2ಡಿ ಪ್ರವರ್ಗ ಸೃಷ್ಟಿ ಮಾಡಿ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡಿದ್ದಾರೆ. ಆದರೂ ಕೂಡ ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರೆ ಇದು ರಾಜಕಾರಣದ ಹೊರತಾಗಿ ಮತ್ತೇನು ಅಲ್ಲ. ಈ ಹೋರಾಟದ ಮುಂಚೂಣಿಯ ನಾಯಕರು ಲಿಂಗಾಯತವನ್ನು ಒಡೆಯುವಂತಹ ಪ್ಲ್ಯಾನ್ ಮಾಡಿದ್ದಾರೆ” ಎಂದು ಆರೋಪಿಸಿದರು.

ನಿರಾಣಿ ಕೂಡ ಹೆಸರು ಹೇಳದೇ ವಿಜಯಪುರದ ನಾಯಕ ಎಂದು ಸಂಬೋಧಿಸಿ, “ಅವನದ್ದು ಎಲುಬಿಲ್ಲದ ನಾಲಿಗೆ, ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ. ಹಾಗಾಗಿ ಆತನ ಮಾತು ಮಿತಿಮೀರುತ್ತಿದೆ. ಆತ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ಆ ರೀತಿಯಲ್ಲಿ ಮಾತಾಡ್ತಿರಲಿಲ್ಲ. ಪಿಂಪ್ ಕೆಲಸ ಅವರೇ ಯಾರಾದ್ರೂ ಮಾಡಿರಬಹುದು. ಅದಕ್ಕೆ ಆ ಪದ ಬಳಸುತ್ತಿದ್ದಾರೆ. ಹೀಗೆ ನೀನು ನಾಲಿಗೆ ಹರಿಬಿಟ್ಟರೆ ನಿನ್ನ ನಾಲಿಗೆ ಕತ್ತರಿಸುವಂತ ಸಮಯ ಬರುತ್ತೆ ಹುಷಾರ್” ಎಂದು ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

“ಅವನೊಬ್ಬ (ಯತ್ನಾಳ) ಢೋಂಗಿ ಮನುಷ್ಯ, ಮುಸ್ಲಿಂ ಸಮುದಾಯದ ಜೊತೆ ಹೋದ್ರೆ ಟೋಪಿ ಹಾಕಿಕೊಂಡು ಟಿಪ್ಪುವನ್ನು ಹೊಗಳುವುದು, ಹಿಂದೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುವುದು- ಇದೇನು ನಾಟಕ ಕಂಪನಿನಾ? ಇಲ್ಲಿಯವರೆಗೂ ನಮ್ಮ ಪಕ್ಷದ ನಾಯಕರು ನಿಮ್ಮ ಬಗ್ಗೆ ಸಹನೆಯಿಂದ ಇದ್ದಾರೆ. ಹೀಗೆ ಮುಂದುವರಿದರೆ ಪರಿಸ್ಥಿತಿ ಬೇರೆಯೇ ಆಗತ್ತದೆ” ಎಂದು ಯತ್ನಾಳ್‌ಗೆ ನಿರಾಣಿ ಎಚ್ಚರಿಕೆ ನೀಡಿದರು.

“ನಮ್ಮ ಪಕ್ಷದ ಮೇಲೆ ನಮ್ಮ ನಾಯಕರ ಮೇಲೆ ನಿನಗೆ ಗೌರವ ಇಲ್ಲ ಎನ್ನುವುದಾದರೆ. ನಮ್ಮ ಪಕ್ಷದಲ್ಲಿ ಯಾಕೆ ಇದ್ದೀಯಾ? ರಾಜೀನಾಮೆ ಕೊಟ್ಟು ಹೊರನಡೆದು ಮಾತನಾಡು” ಎಂದು ನಿರಾಣಿ ಆಕ್ರೋಶ ಹೊರಹಾಕಿದರು.

ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ಬೇಕು ಎಂದು ಕೆಲವು ನಾಯಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರದ ಭಾಗವಾಗಿರುವ ಪಂಚಮಸಾಲಿ ಸಮುದಾಯದ ನಾಯಕರು, ಈ ಹೋರಾಟ ಬಿಜೆಪಿಯ ಹೋರಾಟ ಎಂದು ಬಿಂಬಿಸುತ್ತಿದ್ದಾರೆ. ಅದರಲ್ಲೂ ಯತ್ನಾಳ ಹಾಗೂ ನಿರಾಣಿ ವೈಯಕ್ತಿಕ ದಾಳಿಯಲ್ಲಿ ನಿರತರಾಗಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ಸಮುದಾಯದ ನಾಯಕರಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇದರಿಂದ ಸಮುದಾಯದ ಮೇಲೆ ಯಾವ ಪರಿಣಾಮ ಉಂಟು ಮಾಡಬಹುದೆಂಬುದು ಸದ್ಯದ ಕುತೂಹಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...